Homeಮುಖಪುಟಲಾಠಿ ಹಿಡಿದ ಪ್ರಧಾನಿ ನೆಹರೂ ಹಿಂಸಾನಿರತ ಗುಂಪು ಚದುರಿಸಿದ್ದನ್ನು ಮರೆಯಲಾಗದು: ಅಡ್ಮಿರಲ್ ರಾಮದಾಸ್

ಲಾಠಿ ಹಿಡಿದ ಪ್ರಧಾನಿ ನೆಹರೂ ಹಿಂಸಾನಿರತ ಗುಂಪು ಚದುರಿಸಿದ್ದನ್ನು ಮರೆಯಲಾಗದು: ಅಡ್ಮಿರಲ್ ರಾಮದಾಸ್

ನಿಜವಾದ ನಾಯಕರೆಂದರೆ, ದಾರ್ಶನಿಕತೆ ಮತ್ತು ಧೈರ್ಯ ಹೊಂದಿರುವವರು. ಪಂಡಿತ್‌ಜೀ ಅವರು ಈ ಗುಣಗಳ ಮಾದರಿಯಾಗಿದ್ದಾರೆ.

- Advertisement -
- Advertisement -

ಅಡ್ಮಿರಲ್ ಲಕ್ಷ್ಮೀನಾರಾಯಣ ರಾಮದಾಸ್, ಪಿವಿಎಸ್‌ಎಂ, ಎವಿಎಸ್‌ಎಂ, ವೀರಚಕ್ರ, ವಿಎಸ್‌ಎಂ, ಎಡಿಸಿ ಅವರು ಭಾರತೀಯ ನೌಕಾಸೇನೆಯ ಮಾಜಿ ಮಹಾದಂಡನಾಯಕರಾಗಿದ್ದು, ಮೊದಲ ಪ್ರಧಾನಿ ನೆಹರೂ ಅವರು ಲಾಠಿ ಹಿಡಿದು ಹಿಂಸಾನಿರತ ಗುಂಪನ್ನು ಚದರಿಸಿದ ಘಟನೆಯನ್ನು ಇಲ್ಲಿ ನೆನಪಿಸಿಕೊಂಡಿದ್ದಾರೆ.

***

1947ರಲ್ಲಿ ನಾನು ಹದಿನಾಲ್ಕು ವರ್ಷದ ಹುಡುಗನಾಗಿದ್ದು, ದಿಲ್ಲಿಯಲ್ಲಿ ವಾಸಿಸುತ್ತಿದ್ದೆ. ದೇಶ ವಿಭಜನೆಯ ಯಾತನೆ ಮತ್ತು ಉದ್ವೇಗ ಹಾಗೂ ಸ್ವಾತಂತ್ರ್ಯದ ಭರವಸೆಯಲ್ಲಿ ನಾನಿದ್ದೆ. ನಾನು ನೌಕಾಪಡೆಗೆ ಸೇರಿದ್ದಕ್ಕೆ ಪ್ರೇರಣೆಯೇ ಅದು ದೇಶಸೇವೆಗೆ ಅವಕಾಶ ಒದಗಿಸಿ, ದೇಶ ಕಟ್ಟುವ ಕೆಲಸದಲ್ಲಿ ನೆರವಾಗಬಹುದೆಂಬ ನಿರೀಕ್ಷೆ. ನಾನು ಭಾರತದ ಕೊನೆಯ ವೈಸರಾಯ್ ಮತ್ತು ಮೊದಲ ಗವರ್ನರ್ ಜನರಲ್ ಆಗಿದ್ದ ಬರ್ಮಾದ ಲಾರ್ಡ್ ಲೂಯಿ ಮೌಂಟ್‌ಬ್ಯಾಟನ್ ಅವರ ಸ್ವಚ್ಛ, ಬಿಳಿ ಸಮವಸ್ತ್ರದಿಂದ ಸಂಪೂರ್ಣ ಮಂತ್ರಮುಗ್ಧನಾಗಿದ್ದೆ ಎಂಬುದನ್ನು ಒಪ್ಪಿಕೊಳ್ಳಬೇಕು. ನೆಹರೂ ಅವರನ್ನು ಅವರ ನಿಷ್ಕಳಂಕ ಚೂಡಿದಾರ್- ಕುರ್ತಾ ಮತ್ತು ವಿಶಿಷ್ಟ “ನೆಹರೂ” ಜ್ಯಾಕೆಟ್‌ನಲ್ಲಿ ನೋಡದಿರುವುದು ಸಾಧ್ಯವಿರಲಿಲ್ಲ- ಅದಕ್ಕೆ ಈ ದಿನಗಳಲ್ಲಿ ಬೇರೆಯೇ ಹೆಸರಿದೆ.

ನೆನಪಿನಲ್ಲಿ ಎದ್ದು ಕಾಣುವ ಆ ತಲೆಮಾರಿನ ನಾಯಕರ ಗುಣಗಳ ಕುರಿತು ಹಿಂತಿರುಗಿ ನೋಡಿದಾಗ ಒಂದು ಚಿತ್ರವನ್ನು ಅದೂ ತೀರಾ ಹತ್ತಿರದಿಂದ ನೋಡಿದ ಒಂದು ಚಿತ್ರವನ್ನು ನಾನೆಂದಿಗೂ ಮರೆಯಲಾರೆ. ಅದೆಂದರೆ “ಕಾರ್ಯಾಚರಣೆಯಲ್ಲಿ ನೆಹರೂ”.

ಆ ಭಯಾನಕ ದಿನಗಳ ಮೂರು ಚಿತ್ರಗಳು ನನ್ನ ಮನದಲ್ಲಿ ಅಚ್ಚೊತ್ತಿ ಉಳಿದಿವೆ-

– ನನ್ನ ಕಣ್ಣೆದುರೇ ಅಸಹಾಯಕ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಚೂರಿ ಇರಿತದ ಕ್ರೂರ ಘಟನೆ.

-ನಮ್ಮ ಬಂಗಾಳಿ ಮಾರ್ಕೆಟ್ ಮನೆಯ ಹೊರಗೆ ಉದ್ರಿಕ್ತ ಗುಂಪೊಂದು ನಮ್ಮ ಮನೆಯಲ್ಲಿ ಆಶ್ರಯ ಪಡೆದಿದ್ದ ನನ್ನ ತಂದೆಯವರ ಮಿತ್ರ ಹಾಗೂ ಸಹೋದ್ಯೋಗಿ ಗುಲಾಂ ಮೊಹಮ್ಮದ್ ಅವರನ್ನು ಹೊರಗೆ ಕಳುಹಿಸದಿದ್ದರೆ ತಂದೆಯವರಿಗೆ ಹಿಂಸಾಚಾರದ ಬೆದರಿಕೆ ಒಡ್ಡಿದ್ದು.

– ತನ್ನ ಸ್ವಂತ ಜೀವದ ಬೆದರಿಕೆಯನ್ನೂ ಲೆಕ್ಕಿಸದೆ ಪಂಡಿತ್ ನೆಹರೂ ಅವರು ಹಿಂಸಾನಿರತ ಉದ್ರಿಕ್ತ ಜನರ ಗುಂಪನ್ನು ಚದರಿಸಲು ಲಾಠಿ ಹಿಡಿದು ಧುಮುಕಿದ್ದು.

ಈ ಕೊನೆಯ ಘಟನೆಯನ್ನು ನೆನಪಿಸಿಕೊಳ್ಳಲು ನಾನು ಕೆಲವು ಸೆಕೆಂಡುಗಳನ್ನು ಕಳೆಯುತ್ತೇನೆ.

ನಾನು ಕನ್ನಾಟ್ ಸರ್ಕಸ್‌ನ ಅಗ್ನಿಶಾಮಕ ಠಾಣೆಯ ಎದುರಿದ್ದ ಕಟ್ಟಡವೊಂದರ ಮೊದಲ ಮಹಡಿಯಲ್ಲಿದ್ದ ನ್ಯೂ ಕ್ಯಾಂಬ್ರಿಡ್ಜ್ ಸ್ಕೂಲ್‌ನಿಂದ ಮನೆಗೆ ಮರಳುವ ಹಾದಿಯಲ್ಲಿದ್ದೆ. ಆಗ ಅಲ್ಲಲ್ಲಿ ಉದ್ರಿಕ್ತ ಮತ್ತು ಹಿಂಸಾಚಾರ ನಿರತ ಗುಂಪುಗಳಿರುತ್ತಿದ್ದವು. ಅಂತಹಾ ಒಂದು ಗುಂಪು ದಿಲ್ಲಿಯ ಹಲವಾರು ಜನರಿಗೆ ಪ್ರಿಯ ತಾಣವಾಗಿದ್ದ ಪ್ರಸಿದ್ಧ ಪುಸ್ತಕದಂಗಡಿಯಾಗಿದ್ದ ಎಸ್. ರಿಯಾಜುದ್ದೀನ್ ಎಂಡ್ ಸನ್ಸ್‌ನತ್ತ ಸಾಗುತ್ತಿತ್ತು.

ಏಕಾಏಕಿಯಾಗಿ ಒಂದು ಕೆನೆಬಣ್ಣದ ಅಂಬಾಸಿಡರ್ ಕಾರು ಬಂದು ನಿಂತಿತು, ಅದರ ಬಾಗಿಲು ತೆರೆಯಿತು ಮತ್ತು ನನ್ನನ್ನು ದಂಗುಬಡಿಸುವಂತಹ ಅಚ್ಚರಿಯಲ್ಲಿ ಕೆಡಹುವಂತೆ ಕೆಳಗಿಳಿದ ಜವಾಹರಲಾಲ್ ನೆಹರೂ ಅವರು ತನ್ನ ಕೈಯಲ್ಲಿದ್ದ ಲಾಠಿಯನ್ನು ಝಳಪಿಸುತ್ತಾ, ಹಿಂಸಾಚಾರ ನಿಲ್ಲಿಸುವಂತೆ ಕೂಗುತ್ತಾ ಗುಂಪಿನತ್ತ ಓಡಿದರು. ನಮ್ಮ ಪ್ರಧಾನಿಯವರೇ ಸ್ವಂತ ಭದ್ರತೆಯನ್ನು ಲೆಕ್ಕಿಸದೇ, ಯಾವುದೇ ಭದ್ರತೆ ಇಲ್ಲದೇ ಕಾರ್ಯಾಚರಣೆಗೆ ಧುಮುಕಿದ್ದನ್ನು ನೋಡಿ ದಂಗಾಗಿಹೋದೆ.

ಹೀಗೆ ನಡೆದಂತೆ, ನಾನು ಚಿಕ್ಕದೊಂದು ಭೇಟಿಗಾಗಿ ಮುಂಬಯಿಗೆ ಹೋಗಿದ್ದವನು ಮಹಮ್ಮದಾಲಿ ರಸ್ತೆಯಲ್ಲಿದ್ದಾಗ ದಿಲ್ಲಿಯ ಬಿರ್ಲಾ ಭವನದಲ್ಲಿ ರಾಷ್ಟ್ರಪಿತ ಗಾಂಧೀಜಿಯವರ ಹತ್ಯೆಯಾದ ಸುದ್ದಿ ಬಂತು. ವ್ಯಾಪಾರಿಗಳು ತರಾತುರಿಯಲ್ಲಿ ಅಂಗಡಿ ಬಾಗಿಲುಗಳನ್ನು ಮುಚ್ಚುವುದನ್ನು ಮತ್ತು ಜನರು ಯದ್ವಾತದ್ವಾ ಓಡುವುದನ್ನು ಕಂಡೆ. ಗಾಂಧೀಜಿಯವರನ್ನು ಕೊಂದದ್ದು ಒಬ್ಬ ಹಿಂದೂ ಎಂದು ಆಕಾಶವಾಣಿಯಲ್ಲಿ ಮಾತನಾಡಿದ ಪ್ರಧಾನಿ ನೆಹರೂ ಮತ್ತೆ ಮತ್ತೆ ಹೇಳಿದ್ದನ್ನು ಕೇಳಿ ನಮಗೆಷ್ಟು ಸಮಾಧಾನವಾಯಿತು ಎಂಬುದನ್ನು ನೆನಪಿಸಿಕೊಳ್ಳಬಲ್ಲೆ. ಇದರಿಂದ ಅವರು ಅಲ್ಪಪಸಂಖ್ಯಾತ ಸಮುದಾಯದ ಮೇಲೆ ಕೋಪ ಸ್ಫೋಟಗೊಂಡು ಹಿಂಸಾಚಾರ ನಡೆಯದಂತೆ ಅವರು ಖಾತರಿಪಡಿಸಿದ್ದರು. ಇದಕ್ಕೆ ತೀಕ್ಷ್ಣವಾದ ಪ್ರಸಂಗಾವಧಾನತೆ ಮತ್ತು ನಮ್ಮ ದೇಶದ ಜಾತ್ಯಾತೀತ ಸ್ವರೂಪದ ರಕ್ಷಣೆಯ ಅಗತ್ಯದ ಕುರಿತು ಆಳವಾದ ನಂಬಿಕೆಯ ಅಗತ್ಯವಿತ್ತು.

ನಾನು ವರ್ಷಗಳ ಹಿಂದೆ ಕಣ್ಣುತಿರುಗಿಸಿ ನೋಡಿದಾಗ, ಅದರಲ್ಲೂ ಮುಖ್ಯವಾಗಿ ಈ ವರ್ಷದ ಫೆಬ್ರವರಿಯಲ್ಲಿ ಈಶಾನ್ಯ ದಿಲ್ಲಿಯಲ್ಲಿ ನಡೆದ ಹಿಂಸಾಚಾರ ಗಮನಿಸಿದಾಗ ಅದನ್ನು 1947ರ ಅತ್ಯಂತ ಸ್ಫೋಟಕ ಪರಿಸ್ಥಿತಿಗೆ ಹೋಲಿಸುವುದು ಕಷ್ಟವಲ್ಲ. 2020ರಲ್ಲಿ ಯಾವುದೇ ರಾಜಕೀಯ ನಾಯಕರು ಹಿಂಸಾಚಾರವನ್ನಾಗಲೀ, ನಂತರದಲ್ಲಿ ದೇಶಕ್ಕೆ ಆಳವಾದ ಹಾನಿಯುಂಟುಮಾಡುವ ವಿಭಜನೆಯನ್ನಾಗಲೀ ದೈಹಿಕವಾಗಿ ನಿಯಂತ್ರಿಸಲು ವೈಯಕ್ತಿಕವಾಗಿ ಹಾಜರಿರಲಿಲ್ಲ.

ನಿಜವಾದ ನಾಯಕರೆಂದರೆ, ದಾರ್ಶನಿಕತೆ ಮತ್ತು ಧೈರ್ಯ ಹೊಂದಿರುವವರು. ಪಂಡಿತ್‌ಜೀ ಅವರು ಈ ಗುಣಗಳ ಮಾದರಿಯಾಗಿದ್ದಾರೆ.

ಅನುವಾದ: ನಿಖಿಲ್ ಕೋಲ್ಪೆ


ಇದನ್ನೂ ಓದಿ: ವಿಚ್ಛಿದ್ರಕಾರಿ ಅಜೆಂಡಾ ತಡೆಯಲು ಮುಂದಾಗಿ: ಮೋದಿಗೆ ನೌಕಾಪಡೆ ಮಾಜಿ ಮುಖ್ಯಸ್ಥ ಎಲ್. ರಾಮದಾಸ್ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...