Homeಮುಖಪುಟಲಾಠಿ ಹಿಡಿದ ಪ್ರಧಾನಿ ನೆಹರೂ ಹಿಂಸಾನಿರತ ಗುಂಪು ಚದುರಿಸಿದ್ದನ್ನು ಮರೆಯಲಾಗದು: ಅಡ್ಮಿರಲ್ ರಾಮದಾಸ್

ಲಾಠಿ ಹಿಡಿದ ಪ್ರಧಾನಿ ನೆಹರೂ ಹಿಂಸಾನಿರತ ಗುಂಪು ಚದುರಿಸಿದ್ದನ್ನು ಮರೆಯಲಾಗದು: ಅಡ್ಮಿರಲ್ ರಾಮದಾಸ್

ನಿಜವಾದ ನಾಯಕರೆಂದರೆ, ದಾರ್ಶನಿಕತೆ ಮತ್ತು ಧೈರ್ಯ ಹೊಂದಿರುವವರು. ಪಂಡಿತ್‌ಜೀ ಅವರು ಈ ಗುಣಗಳ ಮಾದರಿಯಾಗಿದ್ದಾರೆ.

- Advertisement -
- Advertisement -

ಅಡ್ಮಿರಲ್ ಲಕ್ಷ್ಮೀನಾರಾಯಣ ರಾಮದಾಸ್, ಪಿವಿಎಸ್‌ಎಂ, ಎವಿಎಸ್‌ಎಂ, ವೀರಚಕ್ರ, ವಿಎಸ್‌ಎಂ, ಎಡಿಸಿ ಅವರು ಭಾರತೀಯ ನೌಕಾಸೇನೆಯ ಮಾಜಿ ಮಹಾದಂಡನಾಯಕರಾಗಿದ್ದು, ಮೊದಲ ಪ್ರಧಾನಿ ನೆಹರೂ ಅವರು ಲಾಠಿ ಹಿಡಿದು ಹಿಂಸಾನಿರತ ಗುಂಪನ್ನು ಚದರಿಸಿದ ಘಟನೆಯನ್ನು ಇಲ್ಲಿ ನೆನಪಿಸಿಕೊಂಡಿದ್ದಾರೆ.

***

1947ರಲ್ಲಿ ನಾನು ಹದಿನಾಲ್ಕು ವರ್ಷದ ಹುಡುಗನಾಗಿದ್ದು, ದಿಲ್ಲಿಯಲ್ಲಿ ವಾಸಿಸುತ್ತಿದ್ದೆ. ದೇಶ ವಿಭಜನೆಯ ಯಾತನೆ ಮತ್ತು ಉದ್ವೇಗ ಹಾಗೂ ಸ್ವಾತಂತ್ರ್ಯದ ಭರವಸೆಯಲ್ಲಿ ನಾನಿದ್ದೆ. ನಾನು ನೌಕಾಪಡೆಗೆ ಸೇರಿದ್ದಕ್ಕೆ ಪ್ರೇರಣೆಯೇ ಅದು ದೇಶಸೇವೆಗೆ ಅವಕಾಶ ಒದಗಿಸಿ, ದೇಶ ಕಟ್ಟುವ ಕೆಲಸದಲ್ಲಿ ನೆರವಾಗಬಹುದೆಂಬ ನಿರೀಕ್ಷೆ. ನಾನು ಭಾರತದ ಕೊನೆಯ ವೈಸರಾಯ್ ಮತ್ತು ಮೊದಲ ಗವರ್ನರ್ ಜನರಲ್ ಆಗಿದ್ದ ಬರ್ಮಾದ ಲಾರ್ಡ್ ಲೂಯಿ ಮೌಂಟ್‌ಬ್ಯಾಟನ್ ಅವರ ಸ್ವಚ್ಛ, ಬಿಳಿ ಸಮವಸ್ತ್ರದಿಂದ ಸಂಪೂರ್ಣ ಮಂತ್ರಮುಗ್ಧನಾಗಿದ್ದೆ ಎಂಬುದನ್ನು ಒಪ್ಪಿಕೊಳ್ಳಬೇಕು. ನೆಹರೂ ಅವರನ್ನು ಅವರ ನಿಷ್ಕಳಂಕ ಚೂಡಿದಾರ್- ಕುರ್ತಾ ಮತ್ತು ವಿಶಿಷ್ಟ “ನೆಹರೂ” ಜ್ಯಾಕೆಟ್‌ನಲ್ಲಿ ನೋಡದಿರುವುದು ಸಾಧ್ಯವಿರಲಿಲ್ಲ- ಅದಕ್ಕೆ ಈ ದಿನಗಳಲ್ಲಿ ಬೇರೆಯೇ ಹೆಸರಿದೆ.

ನೆನಪಿನಲ್ಲಿ ಎದ್ದು ಕಾಣುವ ಆ ತಲೆಮಾರಿನ ನಾಯಕರ ಗುಣಗಳ ಕುರಿತು ಹಿಂತಿರುಗಿ ನೋಡಿದಾಗ ಒಂದು ಚಿತ್ರವನ್ನು ಅದೂ ತೀರಾ ಹತ್ತಿರದಿಂದ ನೋಡಿದ ಒಂದು ಚಿತ್ರವನ್ನು ನಾನೆಂದಿಗೂ ಮರೆಯಲಾರೆ. ಅದೆಂದರೆ “ಕಾರ್ಯಾಚರಣೆಯಲ್ಲಿ ನೆಹರೂ”.

ಆ ಭಯಾನಕ ದಿನಗಳ ಮೂರು ಚಿತ್ರಗಳು ನನ್ನ ಮನದಲ್ಲಿ ಅಚ್ಚೊತ್ತಿ ಉಳಿದಿವೆ-

– ನನ್ನ ಕಣ್ಣೆದುರೇ ಅಸಹಾಯಕ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಚೂರಿ ಇರಿತದ ಕ್ರೂರ ಘಟನೆ.

-ನಮ್ಮ ಬಂಗಾಳಿ ಮಾರ್ಕೆಟ್ ಮನೆಯ ಹೊರಗೆ ಉದ್ರಿಕ್ತ ಗುಂಪೊಂದು ನಮ್ಮ ಮನೆಯಲ್ಲಿ ಆಶ್ರಯ ಪಡೆದಿದ್ದ ನನ್ನ ತಂದೆಯವರ ಮಿತ್ರ ಹಾಗೂ ಸಹೋದ್ಯೋಗಿ ಗುಲಾಂ ಮೊಹಮ್ಮದ್ ಅವರನ್ನು ಹೊರಗೆ ಕಳುಹಿಸದಿದ್ದರೆ ತಂದೆಯವರಿಗೆ ಹಿಂಸಾಚಾರದ ಬೆದರಿಕೆ ಒಡ್ಡಿದ್ದು.

– ತನ್ನ ಸ್ವಂತ ಜೀವದ ಬೆದರಿಕೆಯನ್ನೂ ಲೆಕ್ಕಿಸದೆ ಪಂಡಿತ್ ನೆಹರೂ ಅವರು ಹಿಂಸಾನಿರತ ಉದ್ರಿಕ್ತ ಜನರ ಗುಂಪನ್ನು ಚದರಿಸಲು ಲಾಠಿ ಹಿಡಿದು ಧುಮುಕಿದ್ದು.

ಈ ಕೊನೆಯ ಘಟನೆಯನ್ನು ನೆನಪಿಸಿಕೊಳ್ಳಲು ನಾನು ಕೆಲವು ಸೆಕೆಂಡುಗಳನ್ನು ಕಳೆಯುತ್ತೇನೆ.

ನಾನು ಕನ್ನಾಟ್ ಸರ್ಕಸ್‌ನ ಅಗ್ನಿಶಾಮಕ ಠಾಣೆಯ ಎದುರಿದ್ದ ಕಟ್ಟಡವೊಂದರ ಮೊದಲ ಮಹಡಿಯಲ್ಲಿದ್ದ ನ್ಯೂ ಕ್ಯಾಂಬ್ರಿಡ್ಜ್ ಸ್ಕೂಲ್‌ನಿಂದ ಮನೆಗೆ ಮರಳುವ ಹಾದಿಯಲ್ಲಿದ್ದೆ. ಆಗ ಅಲ್ಲಲ್ಲಿ ಉದ್ರಿಕ್ತ ಮತ್ತು ಹಿಂಸಾಚಾರ ನಿರತ ಗುಂಪುಗಳಿರುತ್ತಿದ್ದವು. ಅಂತಹಾ ಒಂದು ಗುಂಪು ದಿಲ್ಲಿಯ ಹಲವಾರು ಜನರಿಗೆ ಪ್ರಿಯ ತಾಣವಾಗಿದ್ದ ಪ್ರಸಿದ್ಧ ಪುಸ್ತಕದಂಗಡಿಯಾಗಿದ್ದ ಎಸ್. ರಿಯಾಜುದ್ದೀನ್ ಎಂಡ್ ಸನ್ಸ್‌ನತ್ತ ಸಾಗುತ್ತಿತ್ತು.

ಏಕಾಏಕಿಯಾಗಿ ಒಂದು ಕೆನೆಬಣ್ಣದ ಅಂಬಾಸಿಡರ್ ಕಾರು ಬಂದು ನಿಂತಿತು, ಅದರ ಬಾಗಿಲು ತೆರೆಯಿತು ಮತ್ತು ನನ್ನನ್ನು ದಂಗುಬಡಿಸುವಂತಹ ಅಚ್ಚರಿಯಲ್ಲಿ ಕೆಡಹುವಂತೆ ಕೆಳಗಿಳಿದ ಜವಾಹರಲಾಲ್ ನೆಹರೂ ಅವರು ತನ್ನ ಕೈಯಲ್ಲಿದ್ದ ಲಾಠಿಯನ್ನು ಝಳಪಿಸುತ್ತಾ, ಹಿಂಸಾಚಾರ ನಿಲ್ಲಿಸುವಂತೆ ಕೂಗುತ್ತಾ ಗುಂಪಿನತ್ತ ಓಡಿದರು. ನಮ್ಮ ಪ್ರಧಾನಿಯವರೇ ಸ್ವಂತ ಭದ್ರತೆಯನ್ನು ಲೆಕ್ಕಿಸದೇ, ಯಾವುದೇ ಭದ್ರತೆ ಇಲ್ಲದೇ ಕಾರ್ಯಾಚರಣೆಗೆ ಧುಮುಕಿದ್ದನ್ನು ನೋಡಿ ದಂಗಾಗಿಹೋದೆ.

ಹೀಗೆ ನಡೆದಂತೆ, ನಾನು ಚಿಕ್ಕದೊಂದು ಭೇಟಿಗಾಗಿ ಮುಂಬಯಿಗೆ ಹೋಗಿದ್ದವನು ಮಹಮ್ಮದಾಲಿ ರಸ್ತೆಯಲ್ಲಿದ್ದಾಗ ದಿಲ್ಲಿಯ ಬಿರ್ಲಾ ಭವನದಲ್ಲಿ ರಾಷ್ಟ್ರಪಿತ ಗಾಂಧೀಜಿಯವರ ಹತ್ಯೆಯಾದ ಸುದ್ದಿ ಬಂತು. ವ್ಯಾಪಾರಿಗಳು ತರಾತುರಿಯಲ್ಲಿ ಅಂಗಡಿ ಬಾಗಿಲುಗಳನ್ನು ಮುಚ್ಚುವುದನ್ನು ಮತ್ತು ಜನರು ಯದ್ವಾತದ್ವಾ ಓಡುವುದನ್ನು ಕಂಡೆ. ಗಾಂಧೀಜಿಯವರನ್ನು ಕೊಂದದ್ದು ಒಬ್ಬ ಹಿಂದೂ ಎಂದು ಆಕಾಶವಾಣಿಯಲ್ಲಿ ಮಾತನಾಡಿದ ಪ್ರಧಾನಿ ನೆಹರೂ ಮತ್ತೆ ಮತ್ತೆ ಹೇಳಿದ್ದನ್ನು ಕೇಳಿ ನಮಗೆಷ್ಟು ಸಮಾಧಾನವಾಯಿತು ಎಂಬುದನ್ನು ನೆನಪಿಸಿಕೊಳ್ಳಬಲ್ಲೆ. ಇದರಿಂದ ಅವರು ಅಲ್ಪಪಸಂಖ್ಯಾತ ಸಮುದಾಯದ ಮೇಲೆ ಕೋಪ ಸ್ಫೋಟಗೊಂಡು ಹಿಂಸಾಚಾರ ನಡೆಯದಂತೆ ಅವರು ಖಾತರಿಪಡಿಸಿದ್ದರು. ಇದಕ್ಕೆ ತೀಕ್ಷ್ಣವಾದ ಪ್ರಸಂಗಾವಧಾನತೆ ಮತ್ತು ನಮ್ಮ ದೇಶದ ಜಾತ್ಯಾತೀತ ಸ್ವರೂಪದ ರಕ್ಷಣೆಯ ಅಗತ್ಯದ ಕುರಿತು ಆಳವಾದ ನಂಬಿಕೆಯ ಅಗತ್ಯವಿತ್ತು.

ನಾನು ವರ್ಷಗಳ ಹಿಂದೆ ಕಣ್ಣುತಿರುಗಿಸಿ ನೋಡಿದಾಗ, ಅದರಲ್ಲೂ ಮುಖ್ಯವಾಗಿ ಈ ವರ್ಷದ ಫೆಬ್ರವರಿಯಲ್ಲಿ ಈಶಾನ್ಯ ದಿಲ್ಲಿಯಲ್ಲಿ ನಡೆದ ಹಿಂಸಾಚಾರ ಗಮನಿಸಿದಾಗ ಅದನ್ನು 1947ರ ಅತ್ಯಂತ ಸ್ಫೋಟಕ ಪರಿಸ್ಥಿತಿಗೆ ಹೋಲಿಸುವುದು ಕಷ್ಟವಲ್ಲ. 2020ರಲ್ಲಿ ಯಾವುದೇ ರಾಜಕೀಯ ನಾಯಕರು ಹಿಂಸಾಚಾರವನ್ನಾಗಲೀ, ನಂತರದಲ್ಲಿ ದೇಶಕ್ಕೆ ಆಳವಾದ ಹಾನಿಯುಂಟುಮಾಡುವ ವಿಭಜನೆಯನ್ನಾಗಲೀ ದೈಹಿಕವಾಗಿ ನಿಯಂತ್ರಿಸಲು ವೈಯಕ್ತಿಕವಾಗಿ ಹಾಜರಿರಲಿಲ್ಲ.

ನಿಜವಾದ ನಾಯಕರೆಂದರೆ, ದಾರ್ಶನಿಕತೆ ಮತ್ತು ಧೈರ್ಯ ಹೊಂದಿರುವವರು. ಪಂಡಿತ್‌ಜೀ ಅವರು ಈ ಗುಣಗಳ ಮಾದರಿಯಾಗಿದ್ದಾರೆ.

ಅನುವಾದ: ನಿಖಿಲ್ ಕೋಲ್ಪೆ


ಇದನ್ನೂ ಓದಿ: ವಿಚ್ಛಿದ್ರಕಾರಿ ಅಜೆಂಡಾ ತಡೆಯಲು ಮುಂದಾಗಿ: ಮೋದಿಗೆ ನೌಕಾಪಡೆ ಮಾಜಿ ಮುಖ್ಯಸ್ಥ ಎಲ್. ರಾಮದಾಸ್ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...