Homeಮುಖಪುಟವರವರ ರಾವ್ ಆಸ್ಪತ್ರೆಗೆ: ಜಾಮೀನು ನಿರಾಕರಣೆ ವಿರುದ್ಧ ಹೈಕೋರ್ಟ್‌ನಲ್ಲಿ ಮನವಿ

ವರವರ ರಾವ್ ಆಸ್ಪತ್ರೆಗೆ: ಜಾಮೀನು ನಿರಾಕರಣೆ ವಿರುದ್ಧ ಹೈಕೋರ್ಟ್‌ನಲ್ಲಿ ಮನವಿ

ಕಳೆದ ವಾರದ ನಂತರ, ರಾವ್ ಅವರು ಮುಂಬೈನ ವಿಶೇಷ ಎನ್ಐಎ ನ್ಯಾಯಾಲಯದಲ್ಲಿ ವೈದ್ಯಕೀಯ ಆಧಾರದ ಮೇಲೆ ಸಲ್ಲಿಸಿದ್ದ ತಮ್ಮ ಮಧ್ಯಂತರ ಜಾಮೀನು ಅರ್ಜಿಯನ್ನು  ತಿರಸ್ಕರಿಸಲಾಯಿತು.

- Advertisement -
- Advertisement -

ಎಲ್ಗಾರ್ ಪರಿಷತ್ ಪ್ರಕರಣದಲ್ಲಿ 2018 ರಿಂದ ಜೈಲಿನಲ್ಲಿರುವ ಇರುವ 80 ವರ್ಷದ ತೆಲುಗು ಕವಿ-ಸಾಹಿತಿ ಮತ್ತು ಹೋರಾಟಗಾರ ವರವರರಾವ್ ಅವರನ್ನು, ಅನಾರೋಗ್ಯದ ಕಾರಣದಿಂದ ಪರೀಕ್ಷೆಗಾಗಿ ಸೋಮವಾರ ಸರ್ಕಾರಿ ಜೆಜೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಜುಲೈ 11 ರಂದು ಫೋನ್ ಮೂಲಕ ವರವರ ರಾವ್‌ರೊಂದಿಗೆ ಮಾತನಾಡಿದ ಸಮಯದಲ್ಲಿ, ಅವರು ಸ್ಪಷ್ಟವಾಗಿ ಮಾತನಾಡಿಲ್ಲ. ಅವರ ಆರೋಗ್ಯದ ಬಗೆಗಿನ ಪ್ರಶ್ನೆಗಳಿಗೆ ಉತ್ತರಿಸಲಿಲ್ಲ. 70 ವರ್ಷಗಳ ಹಿಂದೆ ಮತ್ತು 40 ವರ್ಷಗಳ ಹಿಂದೆಯೇ ನಿಧನ ಹೊಂದಿರುವ ತಮ್ಮ ತಂದೆ ಮತ್ತು ತಾಯಿಯ ಅಂತ್ಯಕ್ರಿಯೆಯ ಬಗ್ಗೆ ಒಂದು ರೀತಿಯ ಭ್ರಮನಿರಸನ ಮತ್ತು ಭ್ರಮೆಯ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಮಾತನಾಡಲು ಪದಗಳಿಗಾಗಿ ಅವರು ಹುಡುಕಾಡುತ್ತಿದ್ದರು. ಇದೆಲ್ಲವೂ ಅವರ ಆರೋಗ್ಯ ಸಂಪೂರ್ಣ ಹದಗೆಟ್ಟಿರುವುದನ್ನು ತೋರಿಸುತ್ತದೆ ಎಂದು ಅವರ ಪತ್ನಿ ಭಾನುವಾರವಷ್ಟೇ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದರು.


ಇದನ್ನೂ ಓದಿ: ಜೈಲಿನಲ್ಲಿ ಕವಿ ವರವರ ರಾವ್‌ರನ್ನು ಕೊಲ್ಲಬೇಡಿ! ಕುಟುಂಬ ಸದಸ್ಯರ ಮನವಿ


ಜೈಲಿನಲ್ಲಿ ಕೋವಿಡ್ -19 ಗೆ ಒಳಗಾಗುವ ಸಾಧ್ಯತೆಯನ್ನು ಉಲ್ಲೇಖಿಸಿ ರಾವ್ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ಜೂನ್ 27 ರಂದು ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಈ ಆದೇಶದ ವಿರುದ್ಧ ಬಾಂಬೆ ಹೈಕೋರ್ಟ್‌ಗೆ ಅವರು ಮನವಿ ಸಲ್ಲಿಸಿದ್ದರು. ಕಳೆದ ಶುಕ್ರವಾರ, ನ್ಯಾಯಾಲಯವು ಎನ್ಐಎ ಮತ್ತು ಮಹಾರಾಷ್ಟ್ರ ಸರ್ಕಾರಕ್ಕೆ ಮುಂದಿನ ವಿಚಾರಣೆಯ ದಿನಾಂಕ ಜುಲೈ 17 ರೊಳಗೆ ತಮ್ಮ ಪ್ರತಿಕ್ರಿಯೆ ಸಲ್ಲಿಸಲು ನೋಟಿಸ್ ನೀಡಿದೆ.

ಜೆಜೆ ಆಸ್ಪತ್ರೆಯ ಡೀನ್ ಡಾ.ರಂಜಿತ್ ಮಾಂಕೇಶ್ವರ ಮಾತನಾಡಿ “ನಾವು ಕೆಲವು ಪರೀಕ್ಷೆಗಳನ್ನು ನಡೆಸಿದ ನಂತರ ಅವರನ್ನು ಆಸ್ಪತ್ರೆಗೆ ಸೇರಿಸಬೇಕೆ ಎಂದು ನಿರ್ಧರಿಸುತ್ತೇವೆ” ಎಂದು ಹೇಳಿದ್ದಾರೆ.

ಮುಂಬಯಿಯ ತಾಜೋಲಾ ಕೇಂದ್ರ ಕಾರಾಗೃಹದಿಂದ ಆಸ್ಪತ್ರೆಗೆ ಸ್ಥಳಾಂತರಿಸಬೇಕೆಂದು ರಾವ್ ಅವರ ಕುಟುಂಬವು ಒತ್ತಾಯಿಸಿತ್ತು.

ಸೋಮವಾರ ರಾವ್ ಪರ ವಕೀಲ ಆರ್ ಸತ್ಯನಾರಾಯಣನ್, ಮಧ್ಯಂತರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ವಿಶೇಷ ಎನ್‌ಐಎ ನ್ಯಾಯಾಲಯದ ವಿರುದ್ಧದ ಮೇಲ್ಮನವಿಯನ್ನು ಜುಲೈ 17ರ ಬದಲು ಮಂಗಳವಾರ ವಿಚಾರಣೆಗೆ ಒಳಪಡಿಸಬೇಕು ಎಂದು ಹೈಕೋರ್ಟ್‌ನ ಮುಂದೆ ತುರ್ತು ಪ್ರೆಸಿಪಿಯನ್ನು ಸಲ್ಲಿಸಿದ್ದಾರೆ. ಜೆಜೆ ಆಸ್ಪತ್ರೆಯ ಸೂಚನೆಯಂತೆ ವೈದ್ಯಕೀಯ ತಪಾಸಣೆ ನಡೆಸದಿರುವುದಕ್ಕೆ ಜೈಲು ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಭೀಮಾ ಕೋರೆಗಾಂವ್: ತಕ್ಷಣದ ವೈದ್ಯಕೀಯ ತಪಾಸಣೆ ಕೋರಿ ಬಾಂಬೆ ಹೈಕೋರ್ಟ್‌‌ಗೆ ಮೊರೆ ಹೋದ ವರವರ ರಾವ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...