Homeಮುಖಪುಟವರವರ ರಾವ್ ಆಸ್ಪತ್ರೆಗೆ: ಜಾಮೀನು ನಿರಾಕರಣೆ ವಿರುದ್ಧ ಹೈಕೋರ್ಟ್‌ನಲ್ಲಿ ಮನವಿ

ವರವರ ರಾವ್ ಆಸ್ಪತ್ರೆಗೆ: ಜಾಮೀನು ನಿರಾಕರಣೆ ವಿರುದ್ಧ ಹೈಕೋರ್ಟ್‌ನಲ್ಲಿ ಮನವಿ

ಕಳೆದ ವಾರದ ನಂತರ, ರಾವ್ ಅವರು ಮುಂಬೈನ ವಿಶೇಷ ಎನ್ಐಎ ನ್ಯಾಯಾಲಯದಲ್ಲಿ ವೈದ್ಯಕೀಯ ಆಧಾರದ ಮೇಲೆ ಸಲ್ಲಿಸಿದ್ದ ತಮ್ಮ ಮಧ್ಯಂತರ ಜಾಮೀನು ಅರ್ಜಿಯನ್ನು  ತಿರಸ್ಕರಿಸಲಾಯಿತು.

- Advertisement -
- Advertisement -

ಎಲ್ಗಾರ್ ಪರಿಷತ್ ಪ್ರಕರಣದಲ್ಲಿ 2018 ರಿಂದ ಜೈಲಿನಲ್ಲಿರುವ ಇರುವ 80 ವರ್ಷದ ತೆಲುಗು ಕವಿ-ಸಾಹಿತಿ ಮತ್ತು ಹೋರಾಟಗಾರ ವರವರರಾವ್ ಅವರನ್ನು, ಅನಾರೋಗ್ಯದ ಕಾರಣದಿಂದ ಪರೀಕ್ಷೆಗಾಗಿ ಸೋಮವಾರ ಸರ್ಕಾರಿ ಜೆಜೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಜುಲೈ 11 ರಂದು ಫೋನ್ ಮೂಲಕ ವರವರ ರಾವ್‌ರೊಂದಿಗೆ ಮಾತನಾಡಿದ ಸಮಯದಲ್ಲಿ, ಅವರು ಸ್ಪಷ್ಟವಾಗಿ ಮಾತನಾಡಿಲ್ಲ. ಅವರ ಆರೋಗ್ಯದ ಬಗೆಗಿನ ಪ್ರಶ್ನೆಗಳಿಗೆ ಉತ್ತರಿಸಲಿಲ್ಲ. 70 ವರ್ಷಗಳ ಹಿಂದೆ ಮತ್ತು 40 ವರ್ಷಗಳ ಹಿಂದೆಯೇ ನಿಧನ ಹೊಂದಿರುವ ತಮ್ಮ ತಂದೆ ಮತ್ತು ತಾಯಿಯ ಅಂತ್ಯಕ್ರಿಯೆಯ ಬಗ್ಗೆ ಒಂದು ರೀತಿಯ ಭ್ರಮನಿರಸನ ಮತ್ತು ಭ್ರಮೆಯ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಮಾತನಾಡಲು ಪದಗಳಿಗಾಗಿ ಅವರು ಹುಡುಕಾಡುತ್ತಿದ್ದರು. ಇದೆಲ್ಲವೂ ಅವರ ಆರೋಗ್ಯ ಸಂಪೂರ್ಣ ಹದಗೆಟ್ಟಿರುವುದನ್ನು ತೋರಿಸುತ್ತದೆ ಎಂದು ಅವರ ಪತ್ನಿ ಭಾನುವಾರವಷ್ಟೇ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದರು.


ಇದನ್ನೂ ಓದಿ: ಜೈಲಿನಲ್ಲಿ ಕವಿ ವರವರ ರಾವ್‌ರನ್ನು ಕೊಲ್ಲಬೇಡಿ! ಕುಟುಂಬ ಸದಸ್ಯರ ಮನವಿ


ಜೈಲಿನಲ್ಲಿ ಕೋವಿಡ್ -19 ಗೆ ಒಳಗಾಗುವ ಸಾಧ್ಯತೆಯನ್ನು ಉಲ್ಲೇಖಿಸಿ ರಾವ್ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ಜೂನ್ 27 ರಂದು ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಈ ಆದೇಶದ ವಿರುದ್ಧ ಬಾಂಬೆ ಹೈಕೋರ್ಟ್‌ಗೆ ಅವರು ಮನವಿ ಸಲ್ಲಿಸಿದ್ದರು. ಕಳೆದ ಶುಕ್ರವಾರ, ನ್ಯಾಯಾಲಯವು ಎನ್ಐಎ ಮತ್ತು ಮಹಾರಾಷ್ಟ್ರ ಸರ್ಕಾರಕ್ಕೆ ಮುಂದಿನ ವಿಚಾರಣೆಯ ದಿನಾಂಕ ಜುಲೈ 17 ರೊಳಗೆ ತಮ್ಮ ಪ್ರತಿಕ್ರಿಯೆ ಸಲ್ಲಿಸಲು ನೋಟಿಸ್ ನೀಡಿದೆ.

ಜೆಜೆ ಆಸ್ಪತ್ರೆಯ ಡೀನ್ ಡಾ.ರಂಜಿತ್ ಮಾಂಕೇಶ್ವರ ಮಾತನಾಡಿ “ನಾವು ಕೆಲವು ಪರೀಕ್ಷೆಗಳನ್ನು ನಡೆಸಿದ ನಂತರ ಅವರನ್ನು ಆಸ್ಪತ್ರೆಗೆ ಸೇರಿಸಬೇಕೆ ಎಂದು ನಿರ್ಧರಿಸುತ್ತೇವೆ” ಎಂದು ಹೇಳಿದ್ದಾರೆ.

ಮುಂಬಯಿಯ ತಾಜೋಲಾ ಕೇಂದ್ರ ಕಾರಾಗೃಹದಿಂದ ಆಸ್ಪತ್ರೆಗೆ ಸ್ಥಳಾಂತರಿಸಬೇಕೆಂದು ರಾವ್ ಅವರ ಕುಟುಂಬವು ಒತ್ತಾಯಿಸಿತ್ತು.

ಸೋಮವಾರ ರಾವ್ ಪರ ವಕೀಲ ಆರ್ ಸತ್ಯನಾರಾಯಣನ್, ಮಧ್ಯಂತರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ವಿಶೇಷ ಎನ್‌ಐಎ ನ್ಯಾಯಾಲಯದ ವಿರುದ್ಧದ ಮೇಲ್ಮನವಿಯನ್ನು ಜುಲೈ 17ರ ಬದಲು ಮಂಗಳವಾರ ವಿಚಾರಣೆಗೆ ಒಳಪಡಿಸಬೇಕು ಎಂದು ಹೈಕೋರ್ಟ್‌ನ ಮುಂದೆ ತುರ್ತು ಪ್ರೆಸಿಪಿಯನ್ನು ಸಲ್ಲಿಸಿದ್ದಾರೆ. ಜೆಜೆ ಆಸ್ಪತ್ರೆಯ ಸೂಚನೆಯಂತೆ ವೈದ್ಯಕೀಯ ತಪಾಸಣೆ ನಡೆಸದಿರುವುದಕ್ಕೆ ಜೈಲು ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಭೀಮಾ ಕೋರೆಗಾಂವ್: ತಕ್ಷಣದ ವೈದ್ಯಕೀಯ ತಪಾಸಣೆ ಕೋರಿ ಬಾಂಬೆ ಹೈಕೋರ್ಟ್‌‌ಗೆ ಮೊರೆ ಹೋದ ವರವರ ರಾವ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...