Homeಮುಖಪುಟಕೇರಳ: ಪಾದ್ರಿಗಳಿಗೆ 'ಕೈಗಳನ್ನು ಕತ್ತರಿಸುವುದಾಗಿ' ಬೆದರಿಕೆ ಪತ್ರ ರವಾನೆ

ಕೇರಳ: ಪಾದ್ರಿಗಳಿಗೆ ‘ಕೈಗಳನ್ನು ಕತ್ತರಿಸುವುದಾಗಿ’ ಬೆದರಿಕೆ ಪತ್ರ ರವಾನೆ

- Advertisement -
- Advertisement -

ಕೇರಳದ ಎರ್ನಾಕುಲಂ-ಅಂಗಮಾಲಿ ಧರ್ಮಪ್ರಾಂತ್ಯದ ಹಲವಾರು ಪಾದ್ರಿಗಳಿಗೆ ಅಂಚೆ ಮೂಲಕ ಬೆದರಿಕೆ ಪತ್ರ ಬಂದಿದ್ದು, ಕೇರಳದ ಸಿರೋ-ಮಲಬಾರ್ ಚರ್ಚ್ ಅಳವಡಿಸಿಕೊಂಡ ನಿಯಮಗಳನ್ನು ಅನುಸರಿಸದಿದ್ದಲ್ಲಿ ಅವರ ಕೈಗಳನ್ನು ಕತ್ತರಿಸುವುದಾಗಿ ಪತ್ರದಲ್ಲಿ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ಪೊಲೀಸ್‌ ದೂರುಗಳನ್ನು ಕೂಡ ದಾಖಲಿಸಲಾಗಿದೆ.

ಎರ್ನಾಕುಲಂ-ಅಂಗಮಾಲಿ ಧರ್ಮಪ್ರಾಂತ್ಯದ ಕೆಲವು ಪಾದ್ರಿಗಳು ಪತ್ರಗಳನ್ನು ಸ್ವೀಕರಿಸಿದ್ದಾರೆ. 2024 – ಕ್ರಿಸ್‌ಮಸ್ ಉಡುಗೊರೆ ಎಂಬ ಶೀರ್ಷಿಕೆಯ ಪತ್ರದಲ್ಲಿ, ಇದು ಎರ್ನಾಕುಲಂ – ಅಂಗಮಾಲಿ ಧರ್ಮಪ್ರಾಂತ್ಯದ ಬಂಡಾಯ ಪಾದ್ರಿಗಳಿಗೆ ಉಡುಗೊರೆಯಾಗಿದೆ ಎಂದು ಪತ್ರದಲ್ಲಿ ಬರೆಯಲಾಗಿದೆ.

ಚರ್ಚಿಗೆ ವಿಧೇಯರಾಗದ ನೀವು ಮದುವೆಯಾಗಬಹುದು ಮತ್ತು ಸಂಪೂರ್ಣವಾಗಿ ಚರ್ಚ್‌ ವಿರುದ್ಧ ತಿರುಗಿ ಬೀಳಬಹುದು. ಇಲ್ಲದಿದ್ದರೆ ಸಿರೋ-ಮಲಬಾರ್ ಚರ್ಚ್‌ನ ಶತಮಾನೋತ್ಸವದ ವರ್ಷಾಚರಣೆಯ ಹಿನ್ನೆಲೆಯಲ್ಲಿ ಬಂಡಾಯ ಪಾದ್ರಿಗಳ ಮತ್ತು ಬಿಷಪ್‌ಗಳ ತೋಳುಗಳನ್ನು ಕತ್ತರಿಸಲು ಭಕ್ತರು ನಿರ್ಧರಿಸಿದ್ದಾರೆ. ಕ್ರಿಸ್‌ಮಸ್ ಸಂದರ್ಭದಲ್ಲಿ ಶಿಕ್ಷೆಯನ್ನು ಜಾರಿಗೊಳಿಸಲು ಭಕ್ತರ ಸಮುದಾಯ ಸಾಕಷ್ಟು ಯೋಜನೆ ರೂಪಿಸಿದೆ ಎಂದು ಬೆದರಿಕೆ ಪತ್ರದಲ್ಲಿ ತಿಳಿಸಲಾಗಿದೆ.

ವಿಶ್ವಾಸಿಗಳಿಗೆ ಚರ್ಚ್ ನಿಯಮವನ್ನು ಪಾಲಿಸದ ಬಿಷಪ್‌ಗಳು ಮತ್ತು ಪಾದ್ರಿಗಳ ಅಗತ್ಯವಿಲ್ಲ ಎಂದು ನಾವು ಘೋಷಿಸುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಈ ಕುರಿತು ಅನೇಕ ಪಾದ್ರಿಗಳು ಪ್ರತ್ಯೇಕವಾಗಿ ಪೊಲೀಸ್ ದೂರುಗಳನ್ನು ದಾಖಲಿಸಿದ್ದಾರೆ. ಇದೀಗ ಜಂಟಿ ದೂರನ್ನು ಕೂಡ ದಾಖಲಿಸಲು ನಿರ್ಧರಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಪಾದ್ರಿಯೋರ್ವರು, ಮೂಲಭೂತವಾದಿಯೋರ್ವ ಅಂಗೈಯನ್ನು ಕತ್ತರಿಸಿದ ಟಿಜೆ ಜೋಸೆಫ್ ಅವರ ಘಟನೆ ನಮಗೆ ತಿಳಿದಿದೆ. ಈ ಬೆದರಿಕೆಯು ಇದೇ ರೀತಿಯದ್ದಾಗಿದೆ. ಇದೀಗ ತೀವ್ರವಾದ ಮೂಲಭೂತವಾದಗಳು ಬೆಳೆಯುತ್ತಿವೆ ಎಂದು ಹೇಳಿದ್ದಾರೆ.

ಇದರ ಹಿಂದೆ ಸ್ಪಷ್ಟ ಷಡ್ಯಂತ್ರವಿದೆ ಎಂದು ಮತ್ತೋರ್ವ ಪಾದ್ರಿ ಹೇಳಿದ್ದು, ಇದು ಕೇವಲ ಯಾದೃಚ್ಛಿಕ ಬೆದರಿಕೆ ಪತ್ರವಲ್ಲ. ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದ್ದಾರೆ.

ಮೂರು ದಶಕಗಳಿಗೂ ಹೆಚ್ಚು ಕಾಲದಿಂದ ಸೈರೋ-ಮಲಬಾರ್ ಚರ್ಚ್‌ನ ಸದಸ್ಯರು ಪವಿತ್ರ ಮಾಸ್‌ನ್ನು ಆಚರಿಸುವ ವಿಧಾನದ ಬಗ್ಗೆ ಭಿನ್ನಾಭಿಪ್ರಾಯ ಹೊಂದಿದ್ದಾರೆ. ಕ್ಯಾಥೋಲಿಕ್ ಚರ್ಚ್‌ನ ಅಡಿಯಲ್ಲಿ ಮಾಸ್ ಅರ್ಪಿಸುವ ಬಗ್ಗೆ ಏಕರೂಪದ ವಿಧಾನವನ್ನು ಜಾರಿಗೆ ತರಲಾಗಿತ್ತು. ಅದರೆ ಕೆಲವು ಧರ್ಮಪ್ರಾಂತ್ಯದ ಪಾದ್ರಿಗಳಿಗೆ ಭಿನ್ನಾಭಿಪ್ರಾಯವಿತ್ತು.

ಇದನ್ನು ಓದಿ: ರಾಮಮಂದಿರ ಉದ್ಘಾಟನೆಗೆ ಅಡ್ವಾಣಿ, ಜೋಷಿಗಿಲ್ಲ ಪ್ರವೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...