Homeಮುಖಪುಟಚುನಾವಣಾ ಬಾಂಡ್ ಮಾಹಿತಿ ಒದಗಿಸದ ಎಸ್‌ಬಿಐ: ನ್ಯಾಯಾಂಗ ನಿಂದನೆ ಕ್ರಮಕ್ಕೆ ಕೋರಿ ಸುಪ್ರೀಂ ಮೊರೆ ಹೋದ...

ಚುನಾವಣಾ ಬಾಂಡ್ ಮಾಹಿತಿ ಒದಗಿಸದ ಎಸ್‌ಬಿಐ: ನ್ಯಾಯಾಂಗ ನಿಂದನೆ ಕ್ರಮಕ್ಕೆ ಕೋರಿ ಸುಪ್ರೀಂ ಮೊರೆ ಹೋದ ಎಡಿಆರ್

- Advertisement -
- Advertisement -

ನ್ಯಾಯಾಲಯ ನೀಡಿದ ಗಡುವಿನೊಳಗೆ ಚುನಾವಣಾ ಬಾಂಡ್ ಕುರಿತ ಮಾಹಿತಿಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸುವಂತೆ ಕೋರಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠದ ಮುಂದೆ ಇಂದು (ಮಾ.7) ಎಡಿಆರ್ ಅರ್ಜಿಯನ್ನು ವಕೀಲ ಪ್ರಶಾಂತ್ ಭೂಷಣ್ ಸಲ್ಲಿಸಿದ್ದು, ವಿಚಾರಣೆಗೆ ಪಟ್ಟಿ ಮಾಡಲು ನ್ಯಾಯಾಲಯ ಒಪ್ಪಿಕೊಂಡಿದೆ.

ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿದ್ದ ಚುನಾವಣಾ ಬಾಂಡ್ ಯೋಜನೆಯನ್ನು ಫೆಬ್ರವರಿ 15,2024ರಂದು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್‌ ಐತಿಹಾಸಿಕ ತೀರ್ಪು ನೀಡಿತ್ತು. ಈ ವೇಳೆ, ಏಪ್ರಿಲ್ 12, 2019 ರಿಂದ ಫೆ.15ವರೆಗೆ ಚುನಾವಣಾ ಬಾಂಡ್‌ಗಳ ಮೂಲಕ ಕೊಡುಗೆಗಳನ್ನು ಪಡೆದ ರಾಜಕೀಯ ಪಕ್ಷಗಳ ವಿವರಗಳನ್ನು ಭಾರತೀಯ ಚುನಾವಣಾ ಆಯೋಗಕ್ಕೆ ಮಾರ್ಚ್‌ 6ರೊಳಗೆ ಸಲ್ಲಿಸುವಂತೆ ಎಸ್‌ಬಿಐಗೆ ನಿರ್ದೇಶಿಸಿತ್ತು. ಅಲ್ಲದೆ, ಮಾರ್ಚ್‌ 13ರೊಳಗೆ ಎಸ್‌ಬಿಐ ನೀಡಿದ ಮಾಹಿತಿಯನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿತ್ತು.

ಮಾರ್ಚ್‌ 4ರಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಎಸ್‌ಬಿಐ, ಚುನಾವಣಾ ಬಾಂಡ್‌ಗಳ ಕುರಿತು ಮಾಹಿತಿ ಒದಗಿಸಲು ಜೂನ್ 30ರವರೆಗೆ ಸಮಯ ವಿಸ್ತರಿಸುವಂತೆ ಕೋರಿದೆ. ಎಸ್‌ಬಿಐನ ಅರ್ಜಿ ಇನ್ನೂ ವಿಚಾರಣೆಗೆ ಬಂದಿಲ್ಲ. ಮಾರ್ಚ್ 6ರ ನ್ಯಾಯಾಲಯದ ನೀಡಿದ ಗಡುವಿನ ಮೊದಲು ಸಲ್ಲಿಸಿರುವ ಅರ್ಜಿಯಲ್ಲಿ, ಮಾಹಿತಿ ಒದಗಿಸಲು ಕೆಲವು ಪ್ರಯೋಗಿಕ ಸಮಸ್ಯೆಗಳಿವೆ ಎಂದು ಎಸ್‌ಬಿಐ ತಿಳಿಸಿದೆ.

ಎಸ್‌ಬಿಐ ಉದ್ದೇಶಪೂರ್ವಕವಾಗಿ ಸಮಯ ವಿಸ್ತರಣೆ ಕೋರಿದೆ. ಈ ಮೂಲಕ ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠದ ಆದೇಶವನ್ನು ಧಿಕ್ಕರಿಸಿದೆ. ಅಲ್ಲದೆ, ಚುನಾವಣಾ ಆಯೋಗಕ್ಕೆ ಮಾಹಿತಿ ಒದಗಿಸುವ ಪ್ರಕ್ರಿಯೆ ಎಲ್ಲಿಯವರೆಗೆ ಬಂತು. ಮಾಹಿತಿ ಒದಗಿಸಲು ಕೈಗೊಂಡ ಕ್ರಮಗಳೇನು? ಇತ್ಯಾದಿ ವಿಷಯಗಳನ್ನು ಎಸ್‌ಬಿಐ ತನ್ನ ಅರ್ಜಿಯಲ್ಲಿ ವಿವರಿಸಿಲ್ಲ ಎಂದು ಎಡಿಆರ್ ತನ್ನ ಅರ್ಜಿಯಲ್ಲಿ ದೂರಿದೆ.

ಚುನಾವಣಾ ಬಾಂಡ್‌ಗಳ ಕುರಿತು ಮಾಹಿತಿ ಒದಗಿಸುವುದು ಸಂಕೀರ್ಣ ಕೆಲಸವಾಗಿದೆ. ಹಾಗಾಗಿ, ಸಮಯ ವಿಸ್ತರಣೆ ಮಾಡಬೇಕು ಎಂದಿರುವ ಎಸ್‌ಬಿಐ ವಾದವನ್ನು ಪ್ರಶ್ನಿಸಿರುವ ಎಡಿಆರ್, ಪ್ರತಿ ಚುನಾವಣಾ ಬಾಂಡ್ ಮತ್ತು ಅದರ ಖರೀದಿದಾರನ ಕೆವೈಸಿ ವಿವರಗಳಿಗೆ ನಿಗದಿಪಡಿಸಿದ ವಿಶಿಷ್ಟ ಸಂಖ್ಯೆಯ ದಾಖಲೆಯನ್ನು ಎಸ್‌ಬಿಐ ಹೊಂದಿದೆ. ತಾಂತ್ರಿಕ ತಜ್ಞರ ಪ್ರಕಾರ, ಪ್ರತಿ ಚುನಾವಣಾ ಬಾಂಡ್ ವಿಶಿಷ್ಟ ಸಂಖ್ಯೆಯನ್ನು ಹೊಂದಿರುವುದರಿಂದ, ಯಾವುದೇ ಹಸ್ತಚಾಲಿತ ಪರಿಶೀಲನೆಯ ಅಗತ್ಯವಿಲ್ಲದೇ ಡೇಟಾಬೇಸ್‌ನ ಮಾಹಿತಿ ಅನುಸರಿಸಿ ನಿರ್ದಿಷ್ಟ ಸ್ವರೂಪದಲ್ಲಿ ವರದಿಯನ್ನು ರಚಿಸಬಹುದು ಎಂದಿದೆ.

ಇದನ್ನೂ ಓದಿ : ಚುನಾವಣಾ ಬಾಂಡ್ ಕುರಿತ ಎಸ್‌ಬಿಐ ಅರ್ಜಿ ಹಾಸ್ಯಾಸ್ಪದವಾಗಿದೆ: ಸುಪ್ರೀಂಕೋರ್ಟ್‌ ಮಾಜಿ ನ್ಯಾಯಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...