Homeಮುಖಪುಟಚುನಾವಣಾ ಬಾಂಡ್ ಮಾಹಿತಿ ಒದಗಿಸದ ಎಸ್‌ಬಿಐ: ನ್ಯಾಯಾಂಗ ನಿಂದನೆ ಕ್ರಮಕ್ಕೆ ಕೋರಿ ಸುಪ್ರೀಂ ಮೊರೆ ಹೋದ...

ಚುನಾವಣಾ ಬಾಂಡ್ ಮಾಹಿತಿ ಒದಗಿಸದ ಎಸ್‌ಬಿಐ: ನ್ಯಾಯಾಂಗ ನಿಂದನೆ ಕ್ರಮಕ್ಕೆ ಕೋರಿ ಸುಪ್ರೀಂ ಮೊರೆ ಹೋದ ಎಡಿಆರ್

- Advertisement -
- Advertisement -

ನ್ಯಾಯಾಲಯ ನೀಡಿದ ಗಡುವಿನೊಳಗೆ ಚುನಾವಣಾ ಬಾಂಡ್ ಕುರಿತ ಮಾಹಿತಿಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸುವಂತೆ ಕೋರಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠದ ಮುಂದೆ ಇಂದು (ಮಾ.7) ಎಡಿಆರ್ ಅರ್ಜಿಯನ್ನು ವಕೀಲ ಪ್ರಶಾಂತ್ ಭೂಷಣ್ ಸಲ್ಲಿಸಿದ್ದು, ವಿಚಾರಣೆಗೆ ಪಟ್ಟಿ ಮಾಡಲು ನ್ಯಾಯಾಲಯ ಒಪ್ಪಿಕೊಂಡಿದೆ.

ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿದ್ದ ಚುನಾವಣಾ ಬಾಂಡ್ ಯೋಜನೆಯನ್ನು ಫೆಬ್ರವರಿ 15,2024ರಂದು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್‌ ಐತಿಹಾಸಿಕ ತೀರ್ಪು ನೀಡಿತ್ತು. ಈ ವೇಳೆ, ಏಪ್ರಿಲ್ 12, 2019 ರಿಂದ ಫೆ.15ವರೆಗೆ ಚುನಾವಣಾ ಬಾಂಡ್‌ಗಳ ಮೂಲಕ ಕೊಡುಗೆಗಳನ್ನು ಪಡೆದ ರಾಜಕೀಯ ಪಕ್ಷಗಳ ವಿವರಗಳನ್ನು ಭಾರತೀಯ ಚುನಾವಣಾ ಆಯೋಗಕ್ಕೆ ಮಾರ್ಚ್‌ 6ರೊಳಗೆ ಸಲ್ಲಿಸುವಂತೆ ಎಸ್‌ಬಿಐಗೆ ನಿರ್ದೇಶಿಸಿತ್ತು. ಅಲ್ಲದೆ, ಮಾರ್ಚ್‌ 13ರೊಳಗೆ ಎಸ್‌ಬಿಐ ನೀಡಿದ ಮಾಹಿತಿಯನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿತ್ತು.

ಮಾರ್ಚ್‌ 4ರಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಎಸ್‌ಬಿಐ, ಚುನಾವಣಾ ಬಾಂಡ್‌ಗಳ ಕುರಿತು ಮಾಹಿತಿ ಒದಗಿಸಲು ಜೂನ್ 30ರವರೆಗೆ ಸಮಯ ವಿಸ್ತರಿಸುವಂತೆ ಕೋರಿದೆ. ಎಸ್‌ಬಿಐನ ಅರ್ಜಿ ಇನ್ನೂ ವಿಚಾರಣೆಗೆ ಬಂದಿಲ್ಲ. ಮಾರ್ಚ್ 6ರ ನ್ಯಾಯಾಲಯದ ನೀಡಿದ ಗಡುವಿನ ಮೊದಲು ಸಲ್ಲಿಸಿರುವ ಅರ್ಜಿಯಲ್ಲಿ, ಮಾಹಿತಿ ಒದಗಿಸಲು ಕೆಲವು ಪ್ರಯೋಗಿಕ ಸಮಸ್ಯೆಗಳಿವೆ ಎಂದು ಎಸ್‌ಬಿಐ ತಿಳಿಸಿದೆ.

ಎಸ್‌ಬಿಐ ಉದ್ದೇಶಪೂರ್ವಕವಾಗಿ ಸಮಯ ವಿಸ್ತರಣೆ ಕೋರಿದೆ. ಈ ಮೂಲಕ ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠದ ಆದೇಶವನ್ನು ಧಿಕ್ಕರಿಸಿದೆ. ಅಲ್ಲದೆ, ಚುನಾವಣಾ ಆಯೋಗಕ್ಕೆ ಮಾಹಿತಿ ಒದಗಿಸುವ ಪ್ರಕ್ರಿಯೆ ಎಲ್ಲಿಯವರೆಗೆ ಬಂತು. ಮಾಹಿತಿ ಒದಗಿಸಲು ಕೈಗೊಂಡ ಕ್ರಮಗಳೇನು? ಇತ್ಯಾದಿ ವಿಷಯಗಳನ್ನು ಎಸ್‌ಬಿಐ ತನ್ನ ಅರ್ಜಿಯಲ್ಲಿ ವಿವರಿಸಿಲ್ಲ ಎಂದು ಎಡಿಆರ್ ತನ್ನ ಅರ್ಜಿಯಲ್ಲಿ ದೂರಿದೆ.

ಚುನಾವಣಾ ಬಾಂಡ್‌ಗಳ ಕುರಿತು ಮಾಹಿತಿ ಒದಗಿಸುವುದು ಸಂಕೀರ್ಣ ಕೆಲಸವಾಗಿದೆ. ಹಾಗಾಗಿ, ಸಮಯ ವಿಸ್ತರಣೆ ಮಾಡಬೇಕು ಎಂದಿರುವ ಎಸ್‌ಬಿಐ ವಾದವನ್ನು ಪ್ರಶ್ನಿಸಿರುವ ಎಡಿಆರ್, ಪ್ರತಿ ಚುನಾವಣಾ ಬಾಂಡ್ ಮತ್ತು ಅದರ ಖರೀದಿದಾರನ ಕೆವೈಸಿ ವಿವರಗಳಿಗೆ ನಿಗದಿಪಡಿಸಿದ ವಿಶಿಷ್ಟ ಸಂಖ್ಯೆಯ ದಾಖಲೆಯನ್ನು ಎಸ್‌ಬಿಐ ಹೊಂದಿದೆ. ತಾಂತ್ರಿಕ ತಜ್ಞರ ಪ್ರಕಾರ, ಪ್ರತಿ ಚುನಾವಣಾ ಬಾಂಡ್ ವಿಶಿಷ್ಟ ಸಂಖ್ಯೆಯನ್ನು ಹೊಂದಿರುವುದರಿಂದ, ಯಾವುದೇ ಹಸ್ತಚಾಲಿತ ಪರಿಶೀಲನೆಯ ಅಗತ್ಯವಿಲ್ಲದೇ ಡೇಟಾಬೇಸ್‌ನ ಮಾಹಿತಿ ಅನುಸರಿಸಿ ನಿರ್ದಿಷ್ಟ ಸ್ವರೂಪದಲ್ಲಿ ವರದಿಯನ್ನು ರಚಿಸಬಹುದು ಎಂದಿದೆ.

ಇದನ್ನೂ ಓದಿ : ಚುನಾವಣಾ ಬಾಂಡ್ ಕುರಿತ ಎಸ್‌ಬಿಐ ಅರ್ಜಿ ಹಾಸ್ಯಾಸ್ಪದವಾಗಿದೆ: ಸುಪ್ರೀಂಕೋರ್ಟ್‌ ಮಾಜಿ ನ್ಯಾಯಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...