Homeನ್ಯಾಯ ಪಥಅತೀ ದೊಡ್ಡ ಮತ್ತು ವಿಶ್ವಾಸಾರ್ಹ ಸರ್ವೆ ಹೇಳುತ್ತಿದೆ: ಕೇಂದ್ರ ಸರ್ಕಾರದ ಸಾಧನೆ ಸಾಲದು

ಅತೀ ದೊಡ್ಡ ಮತ್ತು ವಿಶ್ವಾಸಾರ್ಹ ಸರ್ವೆ ಹೇಳುತ್ತಿದೆ: ಕೇಂದ್ರ ಸರ್ಕಾರದ ಸಾಧನೆ ಸಾಲದು

- Advertisement -
- Advertisement -

ಮೂಲ: ಔಟ್‍ಲುಕ್ ಇಂಡಿಯಾ

ಕನ್ನಡಕ್ಕೆ: ಬಿ.ಸಿ.ಬಸವರಾಜು

ಅಭಿವೃದ್ದಿಯ ಪ್ರಮುಖ ಕ್ಷೇತ್ರಗಳಲ್ಲಿ ಕೇಂದ್ರ ಸರ್ಕಾರದ ಸಾಧನೆ ಸಾಧಾರಣಕ್ಕಿಂತ ಕಡಿಮೆಯಿದೆ (below average)ಯೆಂಬ ಅಭಿಪ್ರಾಯವನ್ನು ದೇಶದ ಮತದಾರರು ಹೊಂದಿದ್ದಾರೆಂಬ ಒಂದು ಸರ್ವೇ ಹೊರಬಿದ್ದಿದೆ. ಸರ್ವೇ ಮಾಡಿದವರು ಯಾರು ಗೊತ್ತೇ? ದೇಶಾದ್ಯಂತ ನಿಷ್ಪಕ್ಷಪಾತವಾಗಿ ಎಲ್ಲಾ ಪಕ್ಷಗಳ ಅಭ್ಯರ್ಥಿಗಳ ಆಸ್ತಿ ವಿವರ, ಕ್ರಿಮಿನಲ್ ಪ್ರಕರಣಗಳು ಇತ್ಯಾದಿಗಳನ್ನು ಜನರಿಗೆ ತಿಳಿಸುವ ಮೊಟ್ಟ ಮೊದಲ ಕೆಲಸ ಮಾಡಿದ ಸಂಸ್ಥೆ- ಎಡಿಆರ್. ಈ ಸಂಸ್ಥೆಯು ನಂತರ ಚುನಾವಣೆಗಳಲ್ಲಿ ಹಲವು ಸುಧಾರಣೆಗಳನ್ನು ತರಲು ವ್ಯವಸ್ಥಿತವಾಗಿ ಕೆಲಸ ನಡೆಸುತ್ತಿದೆ.  ಮತದಾರರ ಸರ್ವೆ ಮಾಡುವಾಗಲೂ ಎಡಿಆರ್ ತನ್ನ ಹಿರಿಮೆ ಮೆರೆದಿದೆ. ದೇಶದಲ್ಲಿ ಮಾತ್ರವಲ್ಲದೇ, ಪ್ರಪಂಚದಲ್ಲಿ ಇಷ್ಟೊಂದು ದೊಡ್ಡ ಸರ್ವೇ ನಡೆದಿಲ್ಲವೆಂದು ಹೇಳಲಾಗುತ್ತಿದೆ. ದೇಶದ 534 ಕ್ಷೇತ್ರಗಳಲ್ಲಿ ಎರಡೂ ಮುಕ್ಕಾಲು ಲಕ್ಷ ಜನ ಮತದಾರರನ್ನು ಈ ಸರ್ವೇಯಲ್ಲಿ ಮಾತಾಡಿಸಲಾಗಿದೆ!! ಅದೇನು ಹೇಳುತ್ತದೆ ಎಂಬುದನ್ನು ನೋಡೋಣ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾಮ್ರ್ಸ್ (ಎಡಿಆರ್) ನವರು ದೇಶದಾದ್ಯಂತ ನಡೆಸಿದ ಸರ್ವೆಯಲ್ಲಿ, ಮತದಾರರು ಪ್ರಮುಖ ಹತ್ತು (top priority) ಆದ್ಯತಾ ಕ್ಷೇತ್ರಗಳಲ್ಲಿ ಕೇಂದ್ರ ಸರ್ಕಾರದ ಸಾಧನೆ ಸಾಧಾರಣಕ್ಕಿಂತ ಕಡಿಮೆಯಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಉದ್ಯೋಗ ಸೃಷ್ಟಿ ಮಾಡುವುದು ಕೇಂದ್ರ ಸರ್ಕಾರದ ಅತ್ಯಂತ ಆದ್ಯತೆಯ ಕೆಲಸವಾಗಿರಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ ಬಹುತೇಕ ಮತದಾರರು ಉದ್ಯೋಗ ಸೃಷ್ಟಿ ಮಾಡುವಲ್ಲಿ ಸರ್ಕಾರದ ಸಾಧನೆ ಕಳಪೆಯಾಗಿದೆಯೆಂದು ತಿಳಿಸಿದ್ದಾರೆ.

ಉದ್ಯೋಗ ಸೃಷ್ಟಿಯ ನಂತರದ ಆದ್ಯತಾ ಕ್ಷೇತ್ರಗಳೆಂದು “ಉತ್ತಮ ಆರೋಗ್ಯ ಸೌಲಭ್ಯ” ಮತ್ತು “ಶುದ್ದ ಕುಡಿಯುವ ನೀರಿನ ಲಭ್ಯತೆ” ಗಳನ್ನು ಗುರುತಿಸಿರುವ ಮತದಾರರು ಈ ಕ್ಷೇತ್ರಗಳಲ್ಲೂ ಕೇಂದ್ರ ಸರ್ಕಾರದ ಸಾಧನೆ ಸಾಧಾರಣಕ್ಕಿಂತ ಕೆಳಿಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸುಭದ್ರ ಉದ್ಯೋಗ ಸೃಷ್ಟಿ  ಅತಿಮುಖ್ಯ ಅಗತ್ಯ ಎಂದು ಗುರುತಿಸಿರುವ ಮತದಾರರು ಈ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರದ ಸಾಧನೆ ಅತ್ಯಂತ ಕೆಟ್ಟದಾಗಿದೆಯೆಂದು ತಿಳಿಸಿದ್ದು ಈ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರಕ್ಕೆ 5ರ ಸ್ಕೇಲಿನಲ್ಲಿ ಕೇವಲ 2.15 ಅಂಕ ನೀಡಿದ್ದಾರೆ.

ಎಡಿಆರ್ ನವರು ಅಕ್ಟೋಬರ್ 2018 ಮತ್ತು ಡಿಸೆಂಬರ್ 2018 ರ ಮಧ್ಯೆ ದೇಶದ 534 ಲೋಕಸಭಾ ಕ್ಷೇತ್ರಗಳ 2,73,487 ಜನ ಮತದಾರರನ್ನು ಸಂದರ್ಶಿಸಿ  ನಡೆಸಿದ ಸರ್ವೆಯಲ್ಲಿ ಈ ಮೇಲಿನ ಅಂಶಗಳು ಹೊರಬಿದ್ದಿವೆ.

ಮತದಾರರ ಪ್ರಕಾರ ಅಭಿವೃದ್ದಿಯಲ್ಲಿ ಮುಂಚೂಣಿಯಲ್ಲಿರಬೇಕಾದ ಆದ್ಯತಾ ಕ್ಷೇತ್ರಗಳಾವುವು, ಅಂಥಾ ಆದ್ಯತೆಯ ಕ್ಷೇತ್ರಗಳಲ್ಲಿ ಸರ್ಕಾರದ ಸಾಧನೆ ತೃಪ್ತಿದಾಯಕವಾಗಿದೆಯೆ ಮತ್ತು ಈ ಕ್ಷೇತ್ರಗಳಲ್ಲಿಯ ಸಾಧನೆ ಮತದಾನದ ಮೇಲೆ ಬೀರುವ ಪರಿಣಾಮವನ್ನು ತಿಳಿಯುವುದು ಈ ಸರ್ವೆಯ ಉದ್ದೇಶವಾಗಿತ್ತು.

ಈ ಸರ್ವೆಯ ಸಮಯದಲ್ಲಿ ಪ್ರತಿಕ್ರಿಯಿಸಿದ ಮತದಾರರಲ್ಲಿ ಶೇ 46.80 ಮಂದಿ  ಉತ್ತಮ ಉದ್ಯೋಗ ಸೃಷ್ಟಿ ಅತಿ ಮುಖ್ಯ ಎಂದು ಪರಿಗಣಿಸಿದರೆ, ಶೇ 34.60 ಮಂದಿ ಉತ್ತಮ ಆರೋಗ್ಯ ಸೇವೆ ಮತ್ತು ಶೇ 30.50 ಮಂದಿ ಶುದ್ದ ಕುಡಿಯುವ ನೀರಿನ ಲಭ್ಯತೆ ಮುಖ್ಯವೆಂದು ಪರಿಗಣಿಸಿದ್ದಾರೆ.

ಒಟ್ಟಾರೆ ಈ ಮೇಲಿನ ಮೂರು ಸರ್ಕಾರದ ಅತ್ಯಂತ ಮುಖ್ಯ ಆದ್ಯತಾ ಕ್ಷೇತ್ರಗಳಾಗಿರಬೇಕೆಂಬುದು ಮತದಾರರ ಅಭಿಪ್ರಾಯವಾಗಿದೆ.

ಉಳಿದಂತೆ, ಶೇ 28.34 ಮಂದಿ ಉತ್ತಮ ರಸ್ತೆಗಳು, ಶೇ 27.35 ಮಂದಿ ಉತ್ತಮ ಸಾರ್ವಜನಿಕ ಸಾರಿಗೆ, ಶೇ 26.4  ಮಂದಿ ವ್ಯವಸಾಯಕ್ಕೆ ಉತ್ತಮ ನೀರಾವರಿ ಸೌಲಭ್ಯ, ಶೇ 25.62 ಮಂದಿ ಕೃಷಿ ಸಾಲದ ಸುಲಭ ಲಭ್ಯತೆ, ಶೇ 25.41 ಮಂದಿ ರೈತರಿಗೆ ಸರಿಯಾದ ಬೆಂಬಲ ಬೆಲೆ ಮತ್ತು ಶೇ 25.06 ಮಂದಿ ಬೀಜ ಹಾಗೂ ರಸಗೊಬ್ಬರಕ್ಕೆ ಸರಿಯಾದ ಸಬ್ಸಿಡಿ ಇವುಗಳು ತಮ್ಮ ಪ್ರಕಾರ ಆದ್ಯತೆಯ ಕ್ಷೇತ್ರಗಳೆಂದು ತಿಳಿಸಿದ್ದಾರೆ.

ಮೇಲಿನವುಗಳೂ ಸೇರಿದಂತೆ ಎಡಿಆರ್ ನವರು ಪಟ್ಟಿ ಮಾಡಿರುವ ಒಟ್ಟು ಮೂವತ್ತೊಂದು ಆದ್ಯತಾ ಕ್ಷೇತ್ರಗಳಲ್ಲಿ ಒಂದು ಕ್ಷೇತ್ರದಲ್ಲಿ ಕೂಡ ಕೇಂದ್ರ ಸರ್ಕಾರದ ಸಾಧನೆ ಸಮಾಧಾನಕರವಾಗಿಲ್ಲ ಎಂದು ಬಹುತೇಕ ಮತದಾರರ ಅಭಿಪ್ರಾಯವಾಗಿದೆ.

ಇದೇ ಸಂಸ್ಥೆಯು ಕಳೆದ ವರ್ಷ ನಡೆಸಿದ್ದ ಸರ್ವೆಯಲ್ಲಿ ಕೂಡ ಉತ್ತಮ ಉದ್ಯೋಗ ಸೃಷ್ಟಿ ಮತ್ತು ಉತ್ತಮ ಆರೋಗ್ಯ ಸೇವೆ ಪ್ರಮುಖ ಆದ್ಯತಾ ಕ್ಷೇತ್ರಗಳೆಂದು ಮತದಾರರು ಗುರುತಿಸಿದ್ದನ್ನು ಗಮನಿಸಬಹುದು.

ಈ ಸರ್ವೆಯು ಗಮನಿಸಿದ ಇನ್ನೊಂದು ಅಂಶವೆಂದರೆ, ಹಿಂದುಳಿದ ರಾಜ್ಯಗಳಾದ ಉತ್ತರಪ್ರದೇಶ, ಬಿಹಾರ, ಛತ್ತೀಸ್‍ಗಡ, ಜಾಖರ್ಂಡ್, ರಾಜಸ್ಥಾನ ಮತ್ತು ಮದ್ಯಪ್ರದೇಶಗಳ ಮತದಾರರು ಉತ್ತಮ ಉದ್ಯೋಗ ಸೃಷ್ಟಿ ಅತಿಮುಖ್ಯವೆಂದು ಪರಿಗಣಿಸಿದರೆ, ಒರಿಸ್ಸಾ, ಕರ್ನಾಟಕ ಮತ್ತು ದಮನ್ ಅಂಡ್ ದಿಯುವಿನ ಮತದಾರರು ಕುಡಿಯುವ ನೀರು ಅತ್ಯಂತ ಮುಖ್ಯವೆಂದು ಅಭಿಪ್ರಾಯ ಪಟ್ಟಿದ್ದಾರೆ.

ಒಟ್ಟಾರೆಯಾಗಿ, ಮೋದಿಯವರು ಹೇಳಿದ ಅಚ್ಚೇದಿನ್ ಬಂದಿಲ್ಲವೆಂಬ ಮತದಾರರ ಅಭಿಪ್ರಾಯ ಸ್ಪಷ್ಟವಾಗಿ ಗೋಚರಿಸುತ್ತಿದೆ. ಉದ್ಯೋಗ ಸೃಷ್ಟಿ ಮಾಡಿದ್ದೇನೆಂದು  ಬಗ್ಗೆ ಕೇಂದ್ರ ಸರ್ಕಾರ ಹತ್ತು ಹಲವು ಗೊಂದಲಮಯ ಹೇಳಿಕೆಗಳನ್ನು ನೀಡುತ್ತಿದ್ದರೂ ವಾಸ್ತವದಲ್ಲಿ ಮತದಾರ ಮಾತ್ರ ನಿರುದ್ಯೋಗ ಸಮಸ್ಯೆ ಅತ್ಯಂತ ಗಂಭೀರವಾಗಿರುವುದೆಂದೂ ಮತ್ತು ಅದು ಮತದಾನದ ಮೇಲೆ ಪರಿಣಾಮ ಬೀರುತ್ತದೆಂದೂ ಸ್ಪಷ್ಟ ಸಂದೇಶ ಕೊಡುತ್ತಿದ್ದಾನೆ.

ಬಹುಶಃ ಈ ಕಾರಣಕ್ಕಾಗಿಯೇ ಮೋದಿ ಮತ್ತು ಕೇಂದ್ರಸರ್ಕಾರ ಅಭಿವೃದ್ದಿ ಆಧಾರಿತ ವಿಷಯಗಳನ್ನು ಬದಿಗೆ ಸರಿಸಿ ಜನರ ಗಮನವನ್ನು ಪಾಕಿಸ್ತಾನ, ಉಗ್ರರ ದಾಳಿಯಂಥ ವಿಷಯಗಳಿಗೆ ಸೀಮಿತಗೊಳಿಸಿ ಚುನಾವಣೆ ನಡೆಸುವ ಪ್ರಯತ್ನದಲ್ಲಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...