Homeನ್ಯಾಯ ಪಥಅತೀ ದೊಡ್ಡ ಮತ್ತು ವಿಶ್ವಾಸಾರ್ಹ ಸರ್ವೆ ಹೇಳುತ್ತಿದೆ: ಕೇಂದ್ರ ಸರ್ಕಾರದ ಸಾಧನೆ ಸಾಲದು

ಅತೀ ದೊಡ್ಡ ಮತ್ತು ವಿಶ್ವಾಸಾರ್ಹ ಸರ್ವೆ ಹೇಳುತ್ತಿದೆ: ಕೇಂದ್ರ ಸರ್ಕಾರದ ಸಾಧನೆ ಸಾಲದು

- Advertisement -
- Advertisement -

ಮೂಲ: ಔಟ್‍ಲುಕ್ ಇಂಡಿಯಾ

ಕನ್ನಡಕ್ಕೆ: ಬಿ.ಸಿ.ಬಸವರಾಜು

ಅಭಿವೃದ್ದಿಯ ಪ್ರಮುಖ ಕ್ಷೇತ್ರಗಳಲ್ಲಿ ಕೇಂದ್ರ ಸರ್ಕಾರದ ಸಾಧನೆ ಸಾಧಾರಣಕ್ಕಿಂತ ಕಡಿಮೆಯಿದೆ (below average)ಯೆಂಬ ಅಭಿಪ್ರಾಯವನ್ನು ದೇಶದ ಮತದಾರರು ಹೊಂದಿದ್ದಾರೆಂಬ ಒಂದು ಸರ್ವೇ ಹೊರಬಿದ್ದಿದೆ. ಸರ್ವೇ ಮಾಡಿದವರು ಯಾರು ಗೊತ್ತೇ? ದೇಶಾದ್ಯಂತ ನಿಷ್ಪಕ್ಷಪಾತವಾಗಿ ಎಲ್ಲಾ ಪಕ್ಷಗಳ ಅಭ್ಯರ್ಥಿಗಳ ಆಸ್ತಿ ವಿವರ, ಕ್ರಿಮಿನಲ್ ಪ್ರಕರಣಗಳು ಇತ್ಯಾದಿಗಳನ್ನು ಜನರಿಗೆ ತಿಳಿಸುವ ಮೊಟ್ಟ ಮೊದಲ ಕೆಲಸ ಮಾಡಿದ ಸಂಸ್ಥೆ- ಎಡಿಆರ್. ಈ ಸಂಸ್ಥೆಯು ನಂತರ ಚುನಾವಣೆಗಳಲ್ಲಿ ಹಲವು ಸುಧಾರಣೆಗಳನ್ನು ತರಲು ವ್ಯವಸ್ಥಿತವಾಗಿ ಕೆಲಸ ನಡೆಸುತ್ತಿದೆ.  ಮತದಾರರ ಸರ್ವೆ ಮಾಡುವಾಗಲೂ ಎಡಿಆರ್ ತನ್ನ ಹಿರಿಮೆ ಮೆರೆದಿದೆ. ದೇಶದಲ್ಲಿ ಮಾತ್ರವಲ್ಲದೇ, ಪ್ರಪಂಚದಲ್ಲಿ ಇಷ್ಟೊಂದು ದೊಡ್ಡ ಸರ್ವೇ ನಡೆದಿಲ್ಲವೆಂದು ಹೇಳಲಾಗುತ್ತಿದೆ. ದೇಶದ 534 ಕ್ಷೇತ್ರಗಳಲ್ಲಿ ಎರಡೂ ಮುಕ್ಕಾಲು ಲಕ್ಷ ಜನ ಮತದಾರರನ್ನು ಈ ಸರ್ವೇಯಲ್ಲಿ ಮಾತಾಡಿಸಲಾಗಿದೆ!! ಅದೇನು ಹೇಳುತ್ತದೆ ಎಂಬುದನ್ನು ನೋಡೋಣ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾಮ್ರ್ಸ್ (ಎಡಿಆರ್) ನವರು ದೇಶದಾದ್ಯಂತ ನಡೆಸಿದ ಸರ್ವೆಯಲ್ಲಿ, ಮತದಾರರು ಪ್ರಮುಖ ಹತ್ತು (top priority) ಆದ್ಯತಾ ಕ್ಷೇತ್ರಗಳಲ್ಲಿ ಕೇಂದ್ರ ಸರ್ಕಾರದ ಸಾಧನೆ ಸಾಧಾರಣಕ್ಕಿಂತ ಕಡಿಮೆಯಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಉದ್ಯೋಗ ಸೃಷ್ಟಿ ಮಾಡುವುದು ಕೇಂದ್ರ ಸರ್ಕಾರದ ಅತ್ಯಂತ ಆದ್ಯತೆಯ ಕೆಲಸವಾಗಿರಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ ಬಹುತೇಕ ಮತದಾರರು ಉದ್ಯೋಗ ಸೃಷ್ಟಿ ಮಾಡುವಲ್ಲಿ ಸರ್ಕಾರದ ಸಾಧನೆ ಕಳಪೆಯಾಗಿದೆಯೆಂದು ತಿಳಿಸಿದ್ದಾರೆ.

ಉದ್ಯೋಗ ಸೃಷ್ಟಿಯ ನಂತರದ ಆದ್ಯತಾ ಕ್ಷೇತ್ರಗಳೆಂದು “ಉತ್ತಮ ಆರೋಗ್ಯ ಸೌಲಭ್ಯ” ಮತ್ತು “ಶುದ್ದ ಕುಡಿಯುವ ನೀರಿನ ಲಭ್ಯತೆ” ಗಳನ್ನು ಗುರುತಿಸಿರುವ ಮತದಾರರು ಈ ಕ್ಷೇತ್ರಗಳಲ್ಲೂ ಕೇಂದ್ರ ಸರ್ಕಾರದ ಸಾಧನೆ ಸಾಧಾರಣಕ್ಕಿಂತ ಕೆಳಿಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸುಭದ್ರ ಉದ್ಯೋಗ ಸೃಷ್ಟಿ  ಅತಿಮುಖ್ಯ ಅಗತ್ಯ ಎಂದು ಗುರುತಿಸಿರುವ ಮತದಾರರು ಈ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರದ ಸಾಧನೆ ಅತ್ಯಂತ ಕೆಟ್ಟದಾಗಿದೆಯೆಂದು ತಿಳಿಸಿದ್ದು ಈ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರಕ್ಕೆ 5ರ ಸ್ಕೇಲಿನಲ್ಲಿ ಕೇವಲ 2.15 ಅಂಕ ನೀಡಿದ್ದಾರೆ.

ಎಡಿಆರ್ ನವರು ಅಕ್ಟೋಬರ್ 2018 ಮತ್ತು ಡಿಸೆಂಬರ್ 2018 ರ ಮಧ್ಯೆ ದೇಶದ 534 ಲೋಕಸಭಾ ಕ್ಷೇತ್ರಗಳ 2,73,487 ಜನ ಮತದಾರರನ್ನು ಸಂದರ್ಶಿಸಿ  ನಡೆಸಿದ ಸರ್ವೆಯಲ್ಲಿ ಈ ಮೇಲಿನ ಅಂಶಗಳು ಹೊರಬಿದ್ದಿವೆ.

ಮತದಾರರ ಪ್ರಕಾರ ಅಭಿವೃದ್ದಿಯಲ್ಲಿ ಮುಂಚೂಣಿಯಲ್ಲಿರಬೇಕಾದ ಆದ್ಯತಾ ಕ್ಷೇತ್ರಗಳಾವುವು, ಅಂಥಾ ಆದ್ಯತೆಯ ಕ್ಷೇತ್ರಗಳಲ್ಲಿ ಸರ್ಕಾರದ ಸಾಧನೆ ತೃಪ್ತಿದಾಯಕವಾಗಿದೆಯೆ ಮತ್ತು ಈ ಕ್ಷೇತ್ರಗಳಲ್ಲಿಯ ಸಾಧನೆ ಮತದಾನದ ಮೇಲೆ ಬೀರುವ ಪರಿಣಾಮವನ್ನು ತಿಳಿಯುವುದು ಈ ಸರ್ವೆಯ ಉದ್ದೇಶವಾಗಿತ್ತು.

ಈ ಸರ್ವೆಯ ಸಮಯದಲ್ಲಿ ಪ್ರತಿಕ್ರಿಯಿಸಿದ ಮತದಾರರಲ್ಲಿ ಶೇ 46.80 ಮಂದಿ  ಉತ್ತಮ ಉದ್ಯೋಗ ಸೃಷ್ಟಿ ಅತಿ ಮುಖ್ಯ ಎಂದು ಪರಿಗಣಿಸಿದರೆ, ಶೇ 34.60 ಮಂದಿ ಉತ್ತಮ ಆರೋಗ್ಯ ಸೇವೆ ಮತ್ತು ಶೇ 30.50 ಮಂದಿ ಶುದ್ದ ಕುಡಿಯುವ ನೀರಿನ ಲಭ್ಯತೆ ಮುಖ್ಯವೆಂದು ಪರಿಗಣಿಸಿದ್ದಾರೆ.

ಒಟ್ಟಾರೆ ಈ ಮೇಲಿನ ಮೂರು ಸರ್ಕಾರದ ಅತ್ಯಂತ ಮುಖ್ಯ ಆದ್ಯತಾ ಕ್ಷೇತ್ರಗಳಾಗಿರಬೇಕೆಂಬುದು ಮತದಾರರ ಅಭಿಪ್ರಾಯವಾಗಿದೆ.

ಉಳಿದಂತೆ, ಶೇ 28.34 ಮಂದಿ ಉತ್ತಮ ರಸ್ತೆಗಳು, ಶೇ 27.35 ಮಂದಿ ಉತ್ತಮ ಸಾರ್ವಜನಿಕ ಸಾರಿಗೆ, ಶೇ 26.4  ಮಂದಿ ವ್ಯವಸಾಯಕ್ಕೆ ಉತ್ತಮ ನೀರಾವರಿ ಸೌಲಭ್ಯ, ಶೇ 25.62 ಮಂದಿ ಕೃಷಿ ಸಾಲದ ಸುಲಭ ಲಭ್ಯತೆ, ಶೇ 25.41 ಮಂದಿ ರೈತರಿಗೆ ಸರಿಯಾದ ಬೆಂಬಲ ಬೆಲೆ ಮತ್ತು ಶೇ 25.06 ಮಂದಿ ಬೀಜ ಹಾಗೂ ರಸಗೊಬ್ಬರಕ್ಕೆ ಸರಿಯಾದ ಸಬ್ಸಿಡಿ ಇವುಗಳು ತಮ್ಮ ಪ್ರಕಾರ ಆದ್ಯತೆಯ ಕ್ಷೇತ್ರಗಳೆಂದು ತಿಳಿಸಿದ್ದಾರೆ.

ಮೇಲಿನವುಗಳೂ ಸೇರಿದಂತೆ ಎಡಿಆರ್ ನವರು ಪಟ್ಟಿ ಮಾಡಿರುವ ಒಟ್ಟು ಮೂವತ್ತೊಂದು ಆದ್ಯತಾ ಕ್ಷೇತ್ರಗಳಲ್ಲಿ ಒಂದು ಕ್ಷೇತ್ರದಲ್ಲಿ ಕೂಡ ಕೇಂದ್ರ ಸರ್ಕಾರದ ಸಾಧನೆ ಸಮಾಧಾನಕರವಾಗಿಲ್ಲ ಎಂದು ಬಹುತೇಕ ಮತದಾರರ ಅಭಿಪ್ರಾಯವಾಗಿದೆ.

ಇದೇ ಸಂಸ್ಥೆಯು ಕಳೆದ ವರ್ಷ ನಡೆಸಿದ್ದ ಸರ್ವೆಯಲ್ಲಿ ಕೂಡ ಉತ್ತಮ ಉದ್ಯೋಗ ಸೃಷ್ಟಿ ಮತ್ತು ಉತ್ತಮ ಆರೋಗ್ಯ ಸೇವೆ ಪ್ರಮುಖ ಆದ್ಯತಾ ಕ್ಷೇತ್ರಗಳೆಂದು ಮತದಾರರು ಗುರುತಿಸಿದ್ದನ್ನು ಗಮನಿಸಬಹುದು.

ಈ ಸರ್ವೆಯು ಗಮನಿಸಿದ ಇನ್ನೊಂದು ಅಂಶವೆಂದರೆ, ಹಿಂದುಳಿದ ರಾಜ್ಯಗಳಾದ ಉತ್ತರಪ್ರದೇಶ, ಬಿಹಾರ, ಛತ್ತೀಸ್‍ಗಡ, ಜಾಖರ್ಂಡ್, ರಾಜಸ್ಥಾನ ಮತ್ತು ಮದ್ಯಪ್ರದೇಶಗಳ ಮತದಾರರು ಉತ್ತಮ ಉದ್ಯೋಗ ಸೃಷ್ಟಿ ಅತಿಮುಖ್ಯವೆಂದು ಪರಿಗಣಿಸಿದರೆ, ಒರಿಸ್ಸಾ, ಕರ್ನಾಟಕ ಮತ್ತು ದಮನ್ ಅಂಡ್ ದಿಯುವಿನ ಮತದಾರರು ಕುಡಿಯುವ ನೀರು ಅತ್ಯಂತ ಮುಖ್ಯವೆಂದು ಅಭಿಪ್ರಾಯ ಪಟ್ಟಿದ್ದಾರೆ.

ಒಟ್ಟಾರೆಯಾಗಿ, ಮೋದಿಯವರು ಹೇಳಿದ ಅಚ್ಚೇದಿನ್ ಬಂದಿಲ್ಲವೆಂಬ ಮತದಾರರ ಅಭಿಪ್ರಾಯ ಸ್ಪಷ್ಟವಾಗಿ ಗೋಚರಿಸುತ್ತಿದೆ. ಉದ್ಯೋಗ ಸೃಷ್ಟಿ ಮಾಡಿದ್ದೇನೆಂದು  ಬಗ್ಗೆ ಕೇಂದ್ರ ಸರ್ಕಾರ ಹತ್ತು ಹಲವು ಗೊಂದಲಮಯ ಹೇಳಿಕೆಗಳನ್ನು ನೀಡುತ್ತಿದ್ದರೂ ವಾಸ್ತವದಲ್ಲಿ ಮತದಾರ ಮಾತ್ರ ನಿರುದ್ಯೋಗ ಸಮಸ್ಯೆ ಅತ್ಯಂತ ಗಂಭೀರವಾಗಿರುವುದೆಂದೂ ಮತ್ತು ಅದು ಮತದಾನದ ಮೇಲೆ ಪರಿಣಾಮ ಬೀರುತ್ತದೆಂದೂ ಸ್ಪಷ್ಟ ಸಂದೇಶ ಕೊಡುತ್ತಿದ್ದಾನೆ.

ಬಹುಶಃ ಈ ಕಾರಣಕ್ಕಾಗಿಯೇ ಮೋದಿ ಮತ್ತು ಕೇಂದ್ರಸರ್ಕಾರ ಅಭಿವೃದ್ದಿ ಆಧಾರಿತ ವಿಷಯಗಳನ್ನು ಬದಿಗೆ ಸರಿಸಿ ಜನರ ಗಮನವನ್ನು ಪಾಕಿಸ್ತಾನ, ಉಗ್ರರ ದಾಳಿಯಂಥ ವಿಷಯಗಳಿಗೆ ಸೀಮಿತಗೊಳಿಸಿ ಚುನಾವಣೆ ನಡೆಸುವ ಪ್ರಯತ್ನದಲ್ಲಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...