Homeನ್ಯಾಯ ಪಥಅತೀ ದೊಡ್ಡ ಮತ್ತು ವಿಶ್ವಾಸಾರ್ಹ ಸರ್ವೆ ಹೇಳುತ್ತಿದೆ: ಕೇಂದ್ರ ಸರ್ಕಾರದ ಸಾಧನೆ ಸಾಲದು

ಅತೀ ದೊಡ್ಡ ಮತ್ತು ವಿಶ್ವಾಸಾರ್ಹ ಸರ್ವೆ ಹೇಳುತ್ತಿದೆ: ಕೇಂದ್ರ ಸರ್ಕಾರದ ಸಾಧನೆ ಸಾಲದು

- Advertisement -
- Advertisement -

ಮೂಲ: ಔಟ್‍ಲುಕ್ ಇಂಡಿಯಾ

ಕನ್ನಡಕ್ಕೆ: ಬಿ.ಸಿ.ಬಸವರಾಜು

ಅಭಿವೃದ್ದಿಯ ಪ್ರಮುಖ ಕ್ಷೇತ್ರಗಳಲ್ಲಿ ಕೇಂದ್ರ ಸರ್ಕಾರದ ಸಾಧನೆ ಸಾಧಾರಣಕ್ಕಿಂತ ಕಡಿಮೆಯಿದೆ (below average)ಯೆಂಬ ಅಭಿಪ್ರಾಯವನ್ನು ದೇಶದ ಮತದಾರರು ಹೊಂದಿದ್ದಾರೆಂಬ ಒಂದು ಸರ್ವೇ ಹೊರಬಿದ್ದಿದೆ. ಸರ್ವೇ ಮಾಡಿದವರು ಯಾರು ಗೊತ್ತೇ? ದೇಶಾದ್ಯಂತ ನಿಷ್ಪಕ್ಷಪಾತವಾಗಿ ಎಲ್ಲಾ ಪಕ್ಷಗಳ ಅಭ್ಯರ್ಥಿಗಳ ಆಸ್ತಿ ವಿವರ, ಕ್ರಿಮಿನಲ್ ಪ್ರಕರಣಗಳು ಇತ್ಯಾದಿಗಳನ್ನು ಜನರಿಗೆ ತಿಳಿಸುವ ಮೊಟ್ಟ ಮೊದಲ ಕೆಲಸ ಮಾಡಿದ ಸಂಸ್ಥೆ- ಎಡಿಆರ್. ಈ ಸಂಸ್ಥೆಯು ನಂತರ ಚುನಾವಣೆಗಳಲ್ಲಿ ಹಲವು ಸುಧಾರಣೆಗಳನ್ನು ತರಲು ವ್ಯವಸ್ಥಿತವಾಗಿ ಕೆಲಸ ನಡೆಸುತ್ತಿದೆ.  ಮತದಾರರ ಸರ್ವೆ ಮಾಡುವಾಗಲೂ ಎಡಿಆರ್ ತನ್ನ ಹಿರಿಮೆ ಮೆರೆದಿದೆ. ದೇಶದಲ್ಲಿ ಮಾತ್ರವಲ್ಲದೇ, ಪ್ರಪಂಚದಲ್ಲಿ ಇಷ್ಟೊಂದು ದೊಡ್ಡ ಸರ್ವೇ ನಡೆದಿಲ್ಲವೆಂದು ಹೇಳಲಾಗುತ್ತಿದೆ. ದೇಶದ 534 ಕ್ಷೇತ್ರಗಳಲ್ಲಿ ಎರಡೂ ಮುಕ್ಕಾಲು ಲಕ್ಷ ಜನ ಮತದಾರರನ್ನು ಈ ಸರ್ವೇಯಲ್ಲಿ ಮಾತಾಡಿಸಲಾಗಿದೆ!! ಅದೇನು ಹೇಳುತ್ತದೆ ಎಂಬುದನ್ನು ನೋಡೋಣ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾಮ್ರ್ಸ್ (ಎಡಿಆರ್) ನವರು ದೇಶದಾದ್ಯಂತ ನಡೆಸಿದ ಸರ್ವೆಯಲ್ಲಿ, ಮತದಾರರು ಪ್ರಮುಖ ಹತ್ತು (top priority) ಆದ್ಯತಾ ಕ್ಷೇತ್ರಗಳಲ್ಲಿ ಕೇಂದ್ರ ಸರ್ಕಾರದ ಸಾಧನೆ ಸಾಧಾರಣಕ್ಕಿಂತ ಕಡಿಮೆಯಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಉದ್ಯೋಗ ಸೃಷ್ಟಿ ಮಾಡುವುದು ಕೇಂದ್ರ ಸರ್ಕಾರದ ಅತ್ಯಂತ ಆದ್ಯತೆಯ ಕೆಲಸವಾಗಿರಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ ಬಹುತೇಕ ಮತದಾರರು ಉದ್ಯೋಗ ಸೃಷ್ಟಿ ಮಾಡುವಲ್ಲಿ ಸರ್ಕಾರದ ಸಾಧನೆ ಕಳಪೆಯಾಗಿದೆಯೆಂದು ತಿಳಿಸಿದ್ದಾರೆ.

ಉದ್ಯೋಗ ಸೃಷ್ಟಿಯ ನಂತರದ ಆದ್ಯತಾ ಕ್ಷೇತ್ರಗಳೆಂದು “ಉತ್ತಮ ಆರೋಗ್ಯ ಸೌಲಭ್ಯ” ಮತ್ತು “ಶುದ್ದ ಕುಡಿಯುವ ನೀರಿನ ಲಭ್ಯತೆ” ಗಳನ್ನು ಗುರುತಿಸಿರುವ ಮತದಾರರು ಈ ಕ್ಷೇತ್ರಗಳಲ್ಲೂ ಕೇಂದ್ರ ಸರ್ಕಾರದ ಸಾಧನೆ ಸಾಧಾರಣಕ್ಕಿಂತ ಕೆಳಿಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸುಭದ್ರ ಉದ್ಯೋಗ ಸೃಷ್ಟಿ  ಅತಿಮುಖ್ಯ ಅಗತ್ಯ ಎಂದು ಗುರುತಿಸಿರುವ ಮತದಾರರು ಈ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರದ ಸಾಧನೆ ಅತ್ಯಂತ ಕೆಟ್ಟದಾಗಿದೆಯೆಂದು ತಿಳಿಸಿದ್ದು ಈ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರಕ್ಕೆ 5ರ ಸ್ಕೇಲಿನಲ್ಲಿ ಕೇವಲ 2.15 ಅಂಕ ನೀಡಿದ್ದಾರೆ.

ಎಡಿಆರ್ ನವರು ಅಕ್ಟೋಬರ್ 2018 ಮತ್ತು ಡಿಸೆಂಬರ್ 2018 ರ ಮಧ್ಯೆ ದೇಶದ 534 ಲೋಕಸಭಾ ಕ್ಷೇತ್ರಗಳ 2,73,487 ಜನ ಮತದಾರರನ್ನು ಸಂದರ್ಶಿಸಿ  ನಡೆಸಿದ ಸರ್ವೆಯಲ್ಲಿ ಈ ಮೇಲಿನ ಅಂಶಗಳು ಹೊರಬಿದ್ದಿವೆ.

ಮತದಾರರ ಪ್ರಕಾರ ಅಭಿವೃದ್ದಿಯಲ್ಲಿ ಮುಂಚೂಣಿಯಲ್ಲಿರಬೇಕಾದ ಆದ್ಯತಾ ಕ್ಷೇತ್ರಗಳಾವುವು, ಅಂಥಾ ಆದ್ಯತೆಯ ಕ್ಷೇತ್ರಗಳಲ್ಲಿ ಸರ್ಕಾರದ ಸಾಧನೆ ತೃಪ್ತಿದಾಯಕವಾಗಿದೆಯೆ ಮತ್ತು ಈ ಕ್ಷೇತ್ರಗಳಲ್ಲಿಯ ಸಾಧನೆ ಮತದಾನದ ಮೇಲೆ ಬೀರುವ ಪರಿಣಾಮವನ್ನು ತಿಳಿಯುವುದು ಈ ಸರ್ವೆಯ ಉದ್ದೇಶವಾಗಿತ್ತು.

ಈ ಸರ್ವೆಯ ಸಮಯದಲ್ಲಿ ಪ್ರತಿಕ್ರಿಯಿಸಿದ ಮತದಾರರಲ್ಲಿ ಶೇ 46.80 ಮಂದಿ  ಉತ್ತಮ ಉದ್ಯೋಗ ಸೃಷ್ಟಿ ಅತಿ ಮುಖ್ಯ ಎಂದು ಪರಿಗಣಿಸಿದರೆ, ಶೇ 34.60 ಮಂದಿ ಉತ್ತಮ ಆರೋಗ್ಯ ಸೇವೆ ಮತ್ತು ಶೇ 30.50 ಮಂದಿ ಶುದ್ದ ಕುಡಿಯುವ ನೀರಿನ ಲಭ್ಯತೆ ಮುಖ್ಯವೆಂದು ಪರಿಗಣಿಸಿದ್ದಾರೆ.

ಒಟ್ಟಾರೆ ಈ ಮೇಲಿನ ಮೂರು ಸರ್ಕಾರದ ಅತ್ಯಂತ ಮುಖ್ಯ ಆದ್ಯತಾ ಕ್ಷೇತ್ರಗಳಾಗಿರಬೇಕೆಂಬುದು ಮತದಾರರ ಅಭಿಪ್ರಾಯವಾಗಿದೆ.

ಉಳಿದಂತೆ, ಶೇ 28.34 ಮಂದಿ ಉತ್ತಮ ರಸ್ತೆಗಳು, ಶೇ 27.35 ಮಂದಿ ಉತ್ತಮ ಸಾರ್ವಜನಿಕ ಸಾರಿಗೆ, ಶೇ 26.4  ಮಂದಿ ವ್ಯವಸಾಯಕ್ಕೆ ಉತ್ತಮ ನೀರಾವರಿ ಸೌಲಭ್ಯ, ಶೇ 25.62 ಮಂದಿ ಕೃಷಿ ಸಾಲದ ಸುಲಭ ಲಭ್ಯತೆ, ಶೇ 25.41 ಮಂದಿ ರೈತರಿಗೆ ಸರಿಯಾದ ಬೆಂಬಲ ಬೆಲೆ ಮತ್ತು ಶೇ 25.06 ಮಂದಿ ಬೀಜ ಹಾಗೂ ರಸಗೊಬ್ಬರಕ್ಕೆ ಸರಿಯಾದ ಸಬ್ಸಿಡಿ ಇವುಗಳು ತಮ್ಮ ಪ್ರಕಾರ ಆದ್ಯತೆಯ ಕ್ಷೇತ್ರಗಳೆಂದು ತಿಳಿಸಿದ್ದಾರೆ.

ಮೇಲಿನವುಗಳೂ ಸೇರಿದಂತೆ ಎಡಿಆರ್ ನವರು ಪಟ್ಟಿ ಮಾಡಿರುವ ಒಟ್ಟು ಮೂವತ್ತೊಂದು ಆದ್ಯತಾ ಕ್ಷೇತ್ರಗಳಲ್ಲಿ ಒಂದು ಕ್ಷೇತ್ರದಲ್ಲಿ ಕೂಡ ಕೇಂದ್ರ ಸರ್ಕಾರದ ಸಾಧನೆ ಸಮಾಧಾನಕರವಾಗಿಲ್ಲ ಎಂದು ಬಹುತೇಕ ಮತದಾರರ ಅಭಿಪ್ರಾಯವಾಗಿದೆ.

ಇದೇ ಸಂಸ್ಥೆಯು ಕಳೆದ ವರ್ಷ ನಡೆಸಿದ್ದ ಸರ್ವೆಯಲ್ಲಿ ಕೂಡ ಉತ್ತಮ ಉದ್ಯೋಗ ಸೃಷ್ಟಿ ಮತ್ತು ಉತ್ತಮ ಆರೋಗ್ಯ ಸೇವೆ ಪ್ರಮುಖ ಆದ್ಯತಾ ಕ್ಷೇತ್ರಗಳೆಂದು ಮತದಾರರು ಗುರುತಿಸಿದ್ದನ್ನು ಗಮನಿಸಬಹುದು.

ಈ ಸರ್ವೆಯು ಗಮನಿಸಿದ ಇನ್ನೊಂದು ಅಂಶವೆಂದರೆ, ಹಿಂದುಳಿದ ರಾಜ್ಯಗಳಾದ ಉತ್ತರಪ್ರದೇಶ, ಬಿಹಾರ, ಛತ್ತೀಸ್‍ಗಡ, ಜಾಖರ್ಂಡ್, ರಾಜಸ್ಥಾನ ಮತ್ತು ಮದ್ಯಪ್ರದೇಶಗಳ ಮತದಾರರು ಉತ್ತಮ ಉದ್ಯೋಗ ಸೃಷ್ಟಿ ಅತಿಮುಖ್ಯವೆಂದು ಪರಿಗಣಿಸಿದರೆ, ಒರಿಸ್ಸಾ, ಕರ್ನಾಟಕ ಮತ್ತು ದಮನ್ ಅಂಡ್ ದಿಯುವಿನ ಮತದಾರರು ಕುಡಿಯುವ ನೀರು ಅತ್ಯಂತ ಮುಖ್ಯವೆಂದು ಅಭಿಪ್ರಾಯ ಪಟ್ಟಿದ್ದಾರೆ.

ಒಟ್ಟಾರೆಯಾಗಿ, ಮೋದಿಯವರು ಹೇಳಿದ ಅಚ್ಚೇದಿನ್ ಬಂದಿಲ್ಲವೆಂಬ ಮತದಾರರ ಅಭಿಪ್ರಾಯ ಸ್ಪಷ್ಟವಾಗಿ ಗೋಚರಿಸುತ್ತಿದೆ. ಉದ್ಯೋಗ ಸೃಷ್ಟಿ ಮಾಡಿದ್ದೇನೆಂದು  ಬಗ್ಗೆ ಕೇಂದ್ರ ಸರ್ಕಾರ ಹತ್ತು ಹಲವು ಗೊಂದಲಮಯ ಹೇಳಿಕೆಗಳನ್ನು ನೀಡುತ್ತಿದ್ದರೂ ವಾಸ್ತವದಲ್ಲಿ ಮತದಾರ ಮಾತ್ರ ನಿರುದ್ಯೋಗ ಸಮಸ್ಯೆ ಅತ್ಯಂತ ಗಂಭೀರವಾಗಿರುವುದೆಂದೂ ಮತ್ತು ಅದು ಮತದಾನದ ಮೇಲೆ ಪರಿಣಾಮ ಬೀರುತ್ತದೆಂದೂ ಸ್ಪಷ್ಟ ಸಂದೇಶ ಕೊಡುತ್ತಿದ್ದಾನೆ.

ಬಹುಶಃ ಈ ಕಾರಣಕ್ಕಾಗಿಯೇ ಮೋದಿ ಮತ್ತು ಕೇಂದ್ರಸರ್ಕಾರ ಅಭಿವೃದ್ದಿ ಆಧಾರಿತ ವಿಷಯಗಳನ್ನು ಬದಿಗೆ ಸರಿಸಿ ಜನರ ಗಮನವನ್ನು ಪಾಕಿಸ್ತಾನ, ಉಗ್ರರ ದಾಳಿಯಂಥ ವಿಷಯಗಳಿಗೆ ಸೀಮಿತಗೊಳಿಸಿ ಚುನಾವಣೆ ನಡೆಸುವ ಪ್ರಯತ್ನದಲ್ಲಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...