Homeನ್ಯಾಯ ಪಥಅತೀ ದೊಡ್ಡ ಮತ್ತು ವಿಶ್ವಾಸಾರ್ಹ ಸರ್ವೆ ಹೇಳುತ್ತಿದೆ: ಕೇಂದ್ರ ಸರ್ಕಾರದ ಸಾಧನೆ ಸಾಲದು

ಅತೀ ದೊಡ್ಡ ಮತ್ತು ವಿಶ್ವಾಸಾರ್ಹ ಸರ್ವೆ ಹೇಳುತ್ತಿದೆ: ಕೇಂದ್ರ ಸರ್ಕಾರದ ಸಾಧನೆ ಸಾಲದು

- Advertisement -
- Advertisement -

ಮೂಲ: ಔಟ್‍ಲುಕ್ ಇಂಡಿಯಾ

ಕನ್ನಡಕ್ಕೆ: ಬಿ.ಸಿ.ಬಸವರಾಜು

ಅಭಿವೃದ್ದಿಯ ಪ್ರಮುಖ ಕ್ಷೇತ್ರಗಳಲ್ಲಿ ಕೇಂದ್ರ ಸರ್ಕಾರದ ಸಾಧನೆ ಸಾಧಾರಣಕ್ಕಿಂತ ಕಡಿಮೆಯಿದೆ (below average)ಯೆಂಬ ಅಭಿಪ್ರಾಯವನ್ನು ದೇಶದ ಮತದಾರರು ಹೊಂದಿದ್ದಾರೆಂಬ ಒಂದು ಸರ್ವೇ ಹೊರಬಿದ್ದಿದೆ. ಸರ್ವೇ ಮಾಡಿದವರು ಯಾರು ಗೊತ್ತೇ? ದೇಶಾದ್ಯಂತ ನಿಷ್ಪಕ್ಷಪಾತವಾಗಿ ಎಲ್ಲಾ ಪಕ್ಷಗಳ ಅಭ್ಯರ್ಥಿಗಳ ಆಸ್ತಿ ವಿವರ, ಕ್ರಿಮಿನಲ್ ಪ್ರಕರಣಗಳು ಇತ್ಯಾದಿಗಳನ್ನು ಜನರಿಗೆ ತಿಳಿಸುವ ಮೊಟ್ಟ ಮೊದಲ ಕೆಲಸ ಮಾಡಿದ ಸಂಸ್ಥೆ- ಎಡಿಆರ್. ಈ ಸಂಸ್ಥೆಯು ನಂತರ ಚುನಾವಣೆಗಳಲ್ಲಿ ಹಲವು ಸುಧಾರಣೆಗಳನ್ನು ತರಲು ವ್ಯವಸ್ಥಿತವಾಗಿ ಕೆಲಸ ನಡೆಸುತ್ತಿದೆ.  ಮತದಾರರ ಸರ್ವೆ ಮಾಡುವಾಗಲೂ ಎಡಿಆರ್ ತನ್ನ ಹಿರಿಮೆ ಮೆರೆದಿದೆ. ದೇಶದಲ್ಲಿ ಮಾತ್ರವಲ್ಲದೇ, ಪ್ರಪಂಚದಲ್ಲಿ ಇಷ್ಟೊಂದು ದೊಡ್ಡ ಸರ್ವೇ ನಡೆದಿಲ್ಲವೆಂದು ಹೇಳಲಾಗುತ್ತಿದೆ. ದೇಶದ 534 ಕ್ಷೇತ್ರಗಳಲ್ಲಿ ಎರಡೂ ಮುಕ್ಕಾಲು ಲಕ್ಷ ಜನ ಮತದಾರರನ್ನು ಈ ಸರ್ವೇಯಲ್ಲಿ ಮಾತಾಡಿಸಲಾಗಿದೆ!! ಅದೇನು ಹೇಳುತ್ತದೆ ಎಂಬುದನ್ನು ನೋಡೋಣ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾಮ್ರ್ಸ್ (ಎಡಿಆರ್) ನವರು ದೇಶದಾದ್ಯಂತ ನಡೆಸಿದ ಸರ್ವೆಯಲ್ಲಿ, ಮತದಾರರು ಪ್ರಮುಖ ಹತ್ತು (top priority) ಆದ್ಯತಾ ಕ್ಷೇತ್ರಗಳಲ್ಲಿ ಕೇಂದ್ರ ಸರ್ಕಾರದ ಸಾಧನೆ ಸಾಧಾರಣಕ್ಕಿಂತ ಕಡಿಮೆಯಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಉದ್ಯೋಗ ಸೃಷ್ಟಿ ಮಾಡುವುದು ಕೇಂದ್ರ ಸರ್ಕಾರದ ಅತ್ಯಂತ ಆದ್ಯತೆಯ ಕೆಲಸವಾಗಿರಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ ಬಹುತೇಕ ಮತದಾರರು ಉದ್ಯೋಗ ಸೃಷ್ಟಿ ಮಾಡುವಲ್ಲಿ ಸರ್ಕಾರದ ಸಾಧನೆ ಕಳಪೆಯಾಗಿದೆಯೆಂದು ತಿಳಿಸಿದ್ದಾರೆ.

ಉದ್ಯೋಗ ಸೃಷ್ಟಿಯ ನಂತರದ ಆದ್ಯತಾ ಕ್ಷೇತ್ರಗಳೆಂದು “ಉತ್ತಮ ಆರೋಗ್ಯ ಸೌಲಭ್ಯ” ಮತ್ತು “ಶುದ್ದ ಕುಡಿಯುವ ನೀರಿನ ಲಭ್ಯತೆ” ಗಳನ್ನು ಗುರುತಿಸಿರುವ ಮತದಾರರು ಈ ಕ್ಷೇತ್ರಗಳಲ್ಲೂ ಕೇಂದ್ರ ಸರ್ಕಾರದ ಸಾಧನೆ ಸಾಧಾರಣಕ್ಕಿಂತ ಕೆಳಿಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸುಭದ್ರ ಉದ್ಯೋಗ ಸೃಷ್ಟಿ  ಅತಿಮುಖ್ಯ ಅಗತ್ಯ ಎಂದು ಗುರುತಿಸಿರುವ ಮತದಾರರು ಈ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರದ ಸಾಧನೆ ಅತ್ಯಂತ ಕೆಟ್ಟದಾಗಿದೆಯೆಂದು ತಿಳಿಸಿದ್ದು ಈ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರಕ್ಕೆ 5ರ ಸ್ಕೇಲಿನಲ್ಲಿ ಕೇವಲ 2.15 ಅಂಕ ನೀಡಿದ್ದಾರೆ.

ಎಡಿಆರ್ ನವರು ಅಕ್ಟೋಬರ್ 2018 ಮತ್ತು ಡಿಸೆಂಬರ್ 2018 ರ ಮಧ್ಯೆ ದೇಶದ 534 ಲೋಕಸಭಾ ಕ್ಷೇತ್ರಗಳ 2,73,487 ಜನ ಮತದಾರರನ್ನು ಸಂದರ್ಶಿಸಿ  ನಡೆಸಿದ ಸರ್ವೆಯಲ್ಲಿ ಈ ಮೇಲಿನ ಅಂಶಗಳು ಹೊರಬಿದ್ದಿವೆ.

ಮತದಾರರ ಪ್ರಕಾರ ಅಭಿವೃದ್ದಿಯಲ್ಲಿ ಮುಂಚೂಣಿಯಲ್ಲಿರಬೇಕಾದ ಆದ್ಯತಾ ಕ್ಷೇತ್ರಗಳಾವುವು, ಅಂಥಾ ಆದ್ಯತೆಯ ಕ್ಷೇತ್ರಗಳಲ್ಲಿ ಸರ್ಕಾರದ ಸಾಧನೆ ತೃಪ್ತಿದಾಯಕವಾಗಿದೆಯೆ ಮತ್ತು ಈ ಕ್ಷೇತ್ರಗಳಲ್ಲಿಯ ಸಾಧನೆ ಮತದಾನದ ಮೇಲೆ ಬೀರುವ ಪರಿಣಾಮವನ್ನು ತಿಳಿಯುವುದು ಈ ಸರ್ವೆಯ ಉದ್ದೇಶವಾಗಿತ್ತು.

ಈ ಸರ್ವೆಯ ಸಮಯದಲ್ಲಿ ಪ್ರತಿಕ್ರಿಯಿಸಿದ ಮತದಾರರಲ್ಲಿ ಶೇ 46.80 ಮಂದಿ  ಉತ್ತಮ ಉದ್ಯೋಗ ಸೃಷ್ಟಿ ಅತಿ ಮುಖ್ಯ ಎಂದು ಪರಿಗಣಿಸಿದರೆ, ಶೇ 34.60 ಮಂದಿ ಉತ್ತಮ ಆರೋಗ್ಯ ಸೇವೆ ಮತ್ತು ಶೇ 30.50 ಮಂದಿ ಶುದ್ದ ಕುಡಿಯುವ ನೀರಿನ ಲಭ್ಯತೆ ಮುಖ್ಯವೆಂದು ಪರಿಗಣಿಸಿದ್ದಾರೆ.

ಒಟ್ಟಾರೆ ಈ ಮೇಲಿನ ಮೂರು ಸರ್ಕಾರದ ಅತ್ಯಂತ ಮುಖ್ಯ ಆದ್ಯತಾ ಕ್ಷೇತ್ರಗಳಾಗಿರಬೇಕೆಂಬುದು ಮತದಾರರ ಅಭಿಪ್ರಾಯವಾಗಿದೆ.

ಉಳಿದಂತೆ, ಶೇ 28.34 ಮಂದಿ ಉತ್ತಮ ರಸ್ತೆಗಳು, ಶೇ 27.35 ಮಂದಿ ಉತ್ತಮ ಸಾರ್ವಜನಿಕ ಸಾರಿಗೆ, ಶೇ 26.4  ಮಂದಿ ವ್ಯವಸಾಯಕ್ಕೆ ಉತ್ತಮ ನೀರಾವರಿ ಸೌಲಭ್ಯ, ಶೇ 25.62 ಮಂದಿ ಕೃಷಿ ಸಾಲದ ಸುಲಭ ಲಭ್ಯತೆ, ಶೇ 25.41 ಮಂದಿ ರೈತರಿಗೆ ಸರಿಯಾದ ಬೆಂಬಲ ಬೆಲೆ ಮತ್ತು ಶೇ 25.06 ಮಂದಿ ಬೀಜ ಹಾಗೂ ರಸಗೊಬ್ಬರಕ್ಕೆ ಸರಿಯಾದ ಸಬ್ಸಿಡಿ ಇವುಗಳು ತಮ್ಮ ಪ್ರಕಾರ ಆದ್ಯತೆಯ ಕ್ಷೇತ್ರಗಳೆಂದು ತಿಳಿಸಿದ್ದಾರೆ.

ಮೇಲಿನವುಗಳೂ ಸೇರಿದಂತೆ ಎಡಿಆರ್ ನವರು ಪಟ್ಟಿ ಮಾಡಿರುವ ಒಟ್ಟು ಮೂವತ್ತೊಂದು ಆದ್ಯತಾ ಕ್ಷೇತ್ರಗಳಲ್ಲಿ ಒಂದು ಕ್ಷೇತ್ರದಲ್ಲಿ ಕೂಡ ಕೇಂದ್ರ ಸರ್ಕಾರದ ಸಾಧನೆ ಸಮಾಧಾನಕರವಾಗಿಲ್ಲ ಎಂದು ಬಹುತೇಕ ಮತದಾರರ ಅಭಿಪ್ರಾಯವಾಗಿದೆ.

ಇದೇ ಸಂಸ್ಥೆಯು ಕಳೆದ ವರ್ಷ ನಡೆಸಿದ್ದ ಸರ್ವೆಯಲ್ಲಿ ಕೂಡ ಉತ್ತಮ ಉದ್ಯೋಗ ಸೃಷ್ಟಿ ಮತ್ತು ಉತ್ತಮ ಆರೋಗ್ಯ ಸೇವೆ ಪ್ರಮುಖ ಆದ್ಯತಾ ಕ್ಷೇತ್ರಗಳೆಂದು ಮತದಾರರು ಗುರುತಿಸಿದ್ದನ್ನು ಗಮನಿಸಬಹುದು.

ಈ ಸರ್ವೆಯು ಗಮನಿಸಿದ ಇನ್ನೊಂದು ಅಂಶವೆಂದರೆ, ಹಿಂದುಳಿದ ರಾಜ್ಯಗಳಾದ ಉತ್ತರಪ್ರದೇಶ, ಬಿಹಾರ, ಛತ್ತೀಸ್‍ಗಡ, ಜಾಖರ್ಂಡ್, ರಾಜಸ್ಥಾನ ಮತ್ತು ಮದ್ಯಪ್ರದೇಶಗಳ ಮತದಾರರು ಉತ್ತಮ ಉದ್ಯೋಗ ಸೃಷ್ಟಿ ಅತಿಮುಖ್ಯವೆಂದು ಪರಿಗಣಿಸಿದರೆ, ಒರಿಸ್ಸಾ, ಕರ್ನಾಟಕ ಮತ್ತು ದಮನ್ ಅಂಡ್ ದಿಯುವಿನ ಮತದಾರರು ಕುಡಿಯುವ ನೀರು ಅತ್ಯಂತ ಮುಖ್ಯವೆಂದು ಅಭಿಪ್ರಾಯ ಪಟ್ಟಿದ್ದಾರೆ.

ಒಟ್ಟಾರೆಯಾಗಿ, ಮೋದಿಯವರು ಹೇಳಿದ ಅಚ್ಚೇದಿನ್ ಬಂದಿಲ್ಲವೆಂಬ ಮತದಾರರ ಅಭಿಪ್ರಾಯ ಸ್ಪಷ್ಟವಾಗಿ ಗೋಚರಿಸುತ್ತಿದೆ. ಉದ್ಯೋಗ ಸೃಷ್ಟಿ ಮಾಡಿದ್ದೇನೆಂದು  ಬಗ್ಗೆ ಕೇಂದ್ರ ಸರ್ಕಾರ ಹತ್ತು ಹಲವು ಗೊಂದಲಮಯ ಹೇಳಿಕೆಗಳನ್ನು ನೀಡುತ್ತಿದ್ದರೂ ವಾಸ್ತವದಲ್ಲಿ ಮತದಾರ ಮಾತ್ರ ನಿರುದ್ಯೋಗ ಸಮಸ್ಯೆ ಅತ್ಯಂತ ಗಂಭೀರವಾಗಿರುವುದೆಂದೂ ಮತ್ತು ಅದು ಮತದಾನದ ಮೇಲೆ ಪರಿಣಾಮ ಬೀರುತ್ತದೆಂದೂ ಸ್ಪಷ್ಟ ಸಂದೇಶ ಕೊಡುತ್ತಿದ್ದಾನೆ.

ಬಹುಶಃ ಈ ಕಾರಣಕ್ಕಾಗಿಯೇ ಮೋದಿ ಮತ್ತು ಕೇಂದ್ರಸರ್ಕಾರ ಅಭಿವೃದ್ದಿ ಆಧಾರಿತ ವಿಷಯಗಳನ್ನು ಬದಿಗೆ ಸರಿಸಿ ಜನರ ಗಮನವನ್ನು ಪಾಕಿಸ್ತಾನ, ಉಗ್ರರ ದಾಳಿಯಂಥ ವಿಷಯಗಳಿಗೆ ಸೀಮಿತಗೊಳಿಸಿ ಚುನಾವಣೆ ನಡೆಸುವ ಪ್ರಯತ್ನದಲ್ಲಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...