Homeನ್ಯಾಯ ಪಥಅತೀ ದೊಡ್ಡ ಮತ್ತು ವಿಶ್ವಾಸಾರ್ಹ ಸರ್ವೆ ಹೇಳುತ್ತಿದೆ: ಕೇಂದ್ರ ಸರ್ಕಾರದ ಸಾಧನೆ ಸಾಲದು

ಅತೀ ದೊಡ್ಡ ಮತ್ತು ವಿಶ್ವಾಸಾರ್ಹ ಸರ್ವೆ ಹೇಳುತ್ತಿದೆ: ಕೇಂದ್ರ ಸರ್ಕಾರದ ಸಾಧನೆ ಸಾಲದು

- Advertisement -
- Advertisement -

ಮೂಲ: ಔಟ್‍ಲುಕ್ ಇಂಡಿಯಾ

ಕನ್ನಡಕ್ಕೆ: ಬಿ.ಸಿ.ಬಸವರಾಜು

ಅಭಿವೃದ್ದಿಯ ಪ್ರಮುಖ ಕ್ಷೇತ್ರಗಳಲ್ಲಿ ಕೇಂದ್ರ ಸರ್ಕಾರದ ಸಾಧನೆ ಸಾಧಾರಣಕ್ಕಿಂತ ಕಡಿಮೆಯಿದೆ (below average)ಯೆಂಬ ಅಭಿಪ್ರಾಯವನ್ನು ದೇಶದ ಮತದಾರರು ಹೊಂದಿದ್ದಾರೆಂಬ ಒಂದು ಸರ್ವೇ ಹೊರಬಿದ್ದಿದೆ. ಸರ್ವೇ ಮಾಡಿದವರು ಯಾರು ಗೊತ್ತೇ? ದೇಶಾದ್ಯಂತ ನಿಷ್ಪಕ್ಷಪಾತವಾಗಿ ಎಲ್ಲಾ ಪಕ್ಷಗಳ ಅಭ್ಯರ್ಥಿಗಳ ಆಸ್ತಿ ವಿವರ, ಕ್ರಿಮಿನಲ್ ಪ್ರಕರಣಗಳು ಇತ್ಯಾದಿಗಳನ್ನು ಜನರಿಗೆ ತಿಳಿಸುವ ಮೊಟ್ಟ ಮೊದಲ ಕೆಲಸ ಮಾಡಿದ ಸಂಸ್ಥೆ- ಎಡಿಆರ್. ಈ ಸಂಸ್ಥೆಯು ನಂತರ ಚುನಾವಣೆಗಳಲ್ಲಿ ಹಲವು ಸುಧಾರಣೆಗಳನ್ನು ತರಲು ವ್ಯವಸ್ಥಿತವಾಗಿ ಕೆಲಸ ನಡೆಸುತ್ತಿದೆ.  ಮತದಾರರ ಸರ್ವೆ ಮಾಡುವಾಗಲೂ ಎಡಿಆರ್ ತನ್ನ ಹಿರಿಮೆ ಮೆರೆದಿದೆ. ದೇಶದಲ್ಲಿ ಮಾತ್ರವಲ್ಲದೇ, ಪ್ರಪಂಚದಲ್ಲಿ ಇಷ್ಟೊಂದು ದೊಡ್ಡ ಸರ್ವೇ ನಡೆದಿಲ್ಲವೆಂದು ಹೇಳಲಾಗುತ್ತಿದೆ. ದೇಶದ 534 ಕ್ಷೇತ್ರಗಳಲ್ಲಿ ಎರಡೂ ಮುಕ್ಕಾಲು ಲಕ್ಷ ಜನ ಮತದಾರರನ್ನು ಈ ಸರ್ವೇಯಲ್ಲಿ ಮಾತಾಡಿಸಲಾಗಿದೆ!! ಅದೇನು ಹೇಳುತ್ತದೆ ಎಂಬುದನ್ನು ನೋಡೋಣ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾಮ್ರ್ಸ್ (ಎಡಿಆರ್) ನವರು ದೇಶದಾದ್ಯಂತ ನಡೆಸಿದ ಸರ್ವೆಯಲ್ಲಿ, ಮತದಾರರು ಪ್ರಮುಖ ಹತ್ತು (top priority) ಆದ್ಯತಾ ಕ್ಷೇತ್ರಗಳಲ್ಲಿ ಕೇಂದ್ರ ಸರ್ಕಾರದ ಸಾಧನೆ ಸಾಧಾರಣಕ್ಕಿಂತ ಕಡಿಮೆಯಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಉದ್ಯೋಗ ಸೃಷ್ಟಿ ಮಾಡುವುದು ಕೇಂದ್ರ ಸರ್ಕಾರದ ಅತ್ಯಂತ ಆದ್ಯತೆಯ ಕೆಲಸವಾಗಿರಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ ಬಹುತೇಕ ಮತದಾರರು ಉದ್ಯೋಗ ಸೃಷ್ಟಿ ಮಾಡುವಲ್ಲಿ ಸರ್ಕಾರದ ಸಾಧನೆ ಕಳಪೆಯಾಗಿದೆಯೆಂದು ತಿಳಿಸಿದ್ದಾರೆ.

ಉದ್ಯೋಗ ಸೃಷ್ಟಿಯ ನಂತರದ ಆದ್ಯತಾ ಕ್ಷೇತ್ರಗಳೆಂದು “ಉತ್ತಮ ಆರೋಗ್ಯ ಸೌಲಭ್ಯ” ಮತ್ತು “ಶುದ್ದ ಕುಡಿಯುವ ನೀರಿನ ಲಭ್ಯತೆ” ಗಳನ್ನು ಗುರುತಿಸಿರುವ ಮತದಾರರು ಈ ಕ್ಷೇತ್ರಗಳಲ್ಲೂ ಕೇಂದ್ರ ಸರ್ಕಾರದ ಸಾಧನೆ ಸಾಧಾರಣಕ್ಕಿಂತ ಕೆಳಿಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸುಭದ್ರ ಉದ್ಯೋಗ ಸೃಷ್ಟಿ  ಅತಿಮುಖ್ಯ ಅಗತ್ಯ ಎಂದು ಗುರುತಿಸಿರುವ ಮತದಾರರು ಈ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರದ ಸಾಧನೆ ಅತ್ಯಂತ ಕೆಟ್ಟದಾಗಿದೆಯೆಂದು ತಿಳಿಸಿದ್ದು ಈ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರಕ್ಕೆ 5ರ ಸ್ಕೇಲಿನಲ್ಲಿ ಕೇವಲ 2.15 ಅಂಕ ನೀಡಿದ್ದಾರೆ.

ಎಡಿಆರ್ ನವರು ಅಕ್ಟೋಬರ್ 2018 ಮತ್ತು ಡಿಸೆಂಬರ್ 2018 ರ ಮಧ್ಯೆ ದೇಶದ 534 ಲೋಕಸಭಾ ಕ್ಷೇತ್ರಗಳ 2,73,487 ಜನ ಮತದಾರರನ್ನು ಸಂದರ್ಶಿಸಿ  ನಡೆಸಿದ ಸರ್ವೆಯಲ್ಲಿ ಈ ಮೇಲಿನ ಅಂಶಗಳು ಹೊರಬಿದ್ದಿವೆ.

ಮತದಾರರ ಪ್ರಕಾರ ಅಭಿವೃದ್ದಿಯಲ್ಲಿ ಮುಂಚೂಣಿಯಲ್ಲಿರಬೇಕಾದ ಆದ್ಯತಾ ಕ್ಷೇತ್ರಗಳಾವುವು, ಅಂಥಾ ಆದ್ಯತೆಯ ಕ್ಷೇತ್ರಗಳಲ್ಲಿ ಸರ್ಕಾರದ ಸಾಧನೆ ತೃಪ್ತಿದಾಯಕವಾಗಿದೆಯೆ ಮತ್ತು ಈ ಕ್ಷೇತ್ರಗಳಲ್ಲಿಯ ಸಾಧನೆ ಮತದಾನದ ಮೇಲೆ ಬೀರುವ ಪರಿಣಾಮವನ್ನು ತಿಳಿಯುವುದು ಈ ಸರ್ವೆಯ ಉದ್ದೇಶವಾಗಿತ್ತು.

ಈ ಸರ್ವೆಯ ಸಮಯದಲ್ಲಿ ಪ್ರತಿಕ್ರಿಯಿಸಿದ ಮತದಾರರಲ್ಲಿ ಶೇ 46.80 ಮಂದಿ  ಉತ್ತಮ ಉದ್ಯೋಗ ಸೃಷ್ಟಿ ಅತಿ ಮುಖ್ಯ ಎಂದು ಪರಿಗಣಿಸಿದರೆ, ಶೇ 34.60 ಮಂದಿ ಉತ್ತಮ ಆರೋಗ್ಯ ಸೇವೆ ಮತ್ತು ಶೇ 30.50 ಮಂದಿ ಶುದ್ದ ಕುಡಿಯುವ ನೀರಿನ ಲಭ್ಯತೆ ಮುಖ್ಯವೆಂದು ಪರಿಗಣಿಸಿದ್ದಾರೆ.

ಒಟ್ಟಾರೆ ಈ ಮೇಲಿನ ಮೂರು ಸರ್ಕಾರದ ಅತ್ಯಂತ ಮುಖ್ಯ ಆದ್ಯತಾ ಕ್ಷೇತ್ರಗಳಾಗಿರಬೇಕೆಂಬುದು ಮತದಾರರ ಅಭಿಪ್ರಾಯವಾಗಿದೆ.

ಉಳಿದಂತೆ, ಶೇ 28.34 ಮಂದಿ ಉತ್ತಮ ರಸ್ತೆಗಳು, ಶೇ 27.35 ಮಂದಿ ಉತ್ತಮ ಸಾರ್ವಜನಿಕ ಸಾರಿಗೆ, ಶೇ 26.4  ಮಂದಿ ವ್ಯವಸಾಯಕ್ಕೆ ಉತ್ತಮ ನೀರಾವರಿ ಸೌಲಭ್ಯ, ಶೇ 25.62 ಮಂದಿ ಕೃಷಿ ಸಾಲದ ಸುಲಭ ಲಭ್ಯತೆ, ಶೇ 25.41 ಮಂದಿ ರೈತರಿಗೆ ಸರಿಯಾದ ಬೆಂಬಲ ಬೆಲೆ ಮತ್ತು ಶೇ 25.06 ಮಂದಿ ಬೀಜ ಹಾಗೂ ರಸಗೊಬ್ಬರಕ್ಕೆ ಸರಿಯಾದ ಸಬ್ಸಿಡಿ ಇವುಗಳು ತಮ್ಮ ಪ್ರಕಾರ ಆದ್ಯತೆಯ ಕ್ಷೇತ್ರಗಳೆಂದು ತಿಳಿಸಿದ್ದಾರೆ.

ಮೇಲಿನವುಗಳೂ ಸೇರಿದಂತೆ ಎಡಿಆರ್ ನವರು ಪಟ್ಟಿ ಮಾಡಿರುವ ಒಟ್ಟು ಮೂವತ್ತೊಂದು ಆದ್ಯತಾ ಕ್ಷೇತ್ರಗಳಲ್ಲಿ ಒಂದು ಕ್ಷೇತ್ರದಲ್ಲಿ ಕೂಡ ಕೇಂದ್ರ ಸರ್ಕಾರದ ಸಾಧನೆ ಸಮಾಧಾನಕರವಾಗಿಲ್ಲ ಎಂದು ಬಹುತೇಕ ಮತದಾರರ ಅಭಿಪ್ರಾಯವಾಗಿದೆ.

ಇದೇ ಸಂಸ್ಥೆಯು ಕಳೆದ ವರ್ಷ ನಡೆಸಿದ್ದ ಸರ್ವೆಯಲ್ಲಿ ಕೂಡ ಉತ್ತಮ ಉದ್ಯೋಗ ಸೃಷ್ಟಿ ಮತ್ತು ಉತ್ತಮ ಆರೋಗ್ಯ ಸೇವೆ ಪ್ರಮುಖ ಆದ್ಯತಾ ಕ್ಷೇತ್ರಗಳೆಂದು ಮತದಾರರು ಗುರುತಿಸಿದ್ದನ್ನು ಗಮನಿಸಬಹುದು.

ಈ ಸರ್ವೆಯು ಗಮನಿಸಿದ ಇನ್ನೊಂದು ಅಂಶವೆಂದರೆ, ಹಿಂದುಳಿದ ರಾಜ್ಯಗಳಾದ ಉತ್ತರಪ್ರದೇಶ, ಬಿಹಾರ, ಛತ್ತೀಸ್‍ಗಡ, ಜಾಖರ್ಂಡ್, ರಾಜಸ್ಥಾನ ಮತ್ತು ಮದ್ಯಪ್ರದೇಶಗಳ ಮತದಾರರು ಉತ್ತಮ ಉದ್ಯೋಗ ಸೃಷ್ಟಿ ಅತಿಮುಖ್ಯವೆಂದು ಪರಿಗಣಿಸಿದರೆ, ಒರಿಸ್ಸಾ, ಕರ್ನಾಟಕ ಮತ್ತು ದಮನ್ ಅಂಡ್ ದಿಯುವಿನ ಮತದಾರರು ಕುಡಿಯುವ ನೀರು ಅತ್ಯಂತ ಮುಖ್ಯವೆಂದು ಅಭಿಪ್ರಾಯ ಪಟ್ಟಿದ್ದಾರೆ.

ಒಟ್ಟಾರೆಯಾಗಿ, ಮೋದಿಯವರು ಹೇಳಿದ ಅಚ್ಚೇದಿನ್ ಬಂದಿಲ್ಲವೆಂಬ ಮತದಾರರ ಅಭಿಪ್ರಾಯ ಸ್ಪಷ್ಟವಾಗಿ ಗೋಚರಿಸುತ್ತಿದೆ. ಉದ್ಯೋಗ ಸೃಷ್ಟಿ ಮಾಡಿದ್ದೇನೆಂದು  ಬಗ್ಗೆ ಕೇಂದ್ರ ಸರ್ಕಾರ ಹತ್ತು ಹಲವು ಗೊಂದಲಮಯ ಹೇಳಿಕೆಗಳನ್ನು ನೀಡುತ್ತಿದ್ದರೂ ವಾಸ್ತವದಲ್ಲಿ ಮತದಾರ ಮಾತ್ರ ನಿರುದ್ಯೋಗ ಸಮಸ್ಯೆ ಅತ್ಯಂತ ಗಂಭೀರವಾಗಿರುವುದೆಂದೂ ಮತ್ತು ಅದು ಮತದಾನದ ಮೇಲೆ ಪರಿಣಾಮ ಬೀರುತ್ತದೆಂದೂ ಸ್ಪಷ್ಟ ಸಂದೇಶ ಕೊಡುತ್ತಿದ್ದಾನೆ.

ಬಹುಶಃ ಈ ಕಾರಣಕ್ಕಾಗಿಯೇ ಮೋದಿ ಮತ್ತು ಕೇಂದ್ರಸರ್ಕಾರ ಅಭಿವೃದ್ದಿ ಆಧಾರಿತ ವಿಷಯಗಳನ್ನು ಬದಿಗೆ ಸರಿಸಿ ಜನರ ಗಮನವನ್ನು ಪಾಕಿಸ್ತಾನ, ಉಗ್ರರ ದಾಳಿಯಂಥ ವಿಷಯಗಳಿಗೆ ಸೀಮಿತಗೊಳಿಸಿ ಚುನಾವಣೆ ನಡೆಸುವ ಪ್ರಯತ್ನದಲ್ಲಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...