Homeನ್ಯಾಯ ಪಥಅತೀ ದೊಡ್ಡ ಮತ್ತು ವಿಶ್ವಾಸಾರ್ಹ ಸರ್ವೆ ಹೇಳುತ್ತಿದೆ: ಕೇಂದ್ರ ಸರ್ಕಾರದ ಸಾಧನೆ ಸಾಲದು

ಅತೀ ದೊಡ್ಡ ಮತ್ತು ವಿಶ್ವಾಸಾರ್ಹ ಸರ್ವೆ ಹೇಳುತ್ತಿದೆ: ಕೇಂದ್ರ ಸರ್ಕಾರದ ಸಾಧನೆ ಸಾಲದು

- Advertisement -
- Advertisement -

ಮೂಲ: ಔಟ್‍ಲುಕ್ ಇಂಡಿಯಾ

ಕನ್ನಡಕ್ಕೆ: ಬಿ.ಸಿ.ಬಸವರಾಜು

ಅಭಿವೃದ್ದಿಯ ಪ್ರಮುಖ ಕ್ಷೇತ್ರಗಳಲ್ಲಿ ಕೇಂದ್ರ ಸರ್ಕಾರದ ಸಾಧನೆ ಸಾಧಾರಣಕ್ಕಿಂತ ಕಡಿಮೆಯಿದೆ (below average)ಯೆಂಬ ಅಭಿಪ್ರಾಯವನ್ನು ದೇಶದ ಮತದಾರರು ಹೊಂದಿದ್ದಾರೆಂಬ ಒಂದು ಸರ್ವೇ ಹೊರಬಿದ್ದಿದೆ. ಸರ್ವೇ ಮಾಡಿದವರು ಯಾರು ಗೊತ್ತೇ? ದೇಶಾದ್ಯಂತ ನಿಷ್ಪಕ್ಷಪಾತವಾಗಿ ಎಲ್ಲಾ ಪಕ್ಷಗಳ ಅಭ್ಯರ್ಥಿಗಳ ಆಸ್ತಿ ವಿವರ, ಕ್ರಿಮಿನಲ್ ಪ್ರಕರಣಗಳು ಇತ್ಯಾದಿಗಳನ್ನು ಜನರಿಗೆ ತಿಳಿಸುವ ಮೊಟ್ಟ ಮೊದಲ ಕೆಲಸ ಮಾಡಿದ ಸಂಸ್ಥೆ- ಎಡಿಆರ್. ಈ ಸಂಸ್ಥೆಯು ನಂತರ ಚುನಾವಣೆಗಳಲ್ಲಿ ಹಲವು ಸುಧಾರಣೆಗಳನ್ನು ತರಲು ವ್ಯವಸ್ಥಿತವಾಗಿ ಕೆಲಸ ನಡೆಸುತ್ತಿದೆ.  ಮತದಾರರ ಸರ್ವೆ ಮಾಡುವಾಗಲೂ ಎಡಿಆರ್ ತನ್ನ ಹಿರಿಮೆ ಮೆರೆದಿದೆ. ದೇಶದಲ್ಲಿ ಮಾತ್ರವಲ್ಲದೇ, ಪ್ರಪಂಚದಲ್ಲಿ ಇಷ್ಟೊಂದು ದೊಡ್ಡ ಸರ್ವೇ ನಡೆದಿಲ್ಲವೆಂದು ಹೇಳಲಾಗುತ್ತಿದೆ. ದೇಶದ 534 ಕ್ಷೇತ್ರಗಳಲ್ಲಿ ಎರಡೂ ಮುಕ್ಕಾಲು ಲಕ್ಷ ಜನ ಮತದಾರರನ್ನು ಈ ಸರ್ವೇಯಲ್ಲಿ ಮಾತಾಡಿಸಲಾಗಿದೆ!! ಅದೇನು ಹೇಳುತ್ತದೆ ಎಂಬುದನ್ನು ನೋಡೋಣ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾಮ್ರ್ಸ್ (ಎಡಿಆರ್) ನವರು ದೇಶದಾದ್ಯಂತ ನಡೆಸಿದ ಸರ್ವೆಯಲ್ಲಿ, ಮತದಾರರು ಪ್ರಮುಖ ಹತ್ತು (top priority) ಆದ್ಯತಾ ಕ್ಷೇತ್ರಗಳಲ್ಲಿ ಕೇಂದ್ರ ಸರ್ಕಾರದ ಸಾಧನೆ ಸಾಧಾರಣಕ್ಕಿಂತ ಕಡಿಮೆಯಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಉದ್ಯೋಗ ಸೃಷ್ಟಿ ಮಾಡುವುದು ಕೇಂದ್ರ ಸರ್ಕಾರದ ಅತ್ಯಂತ ಆದ್ಯತೆಯ ಕೆಲಸವಾಗಿರಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ ಬಹುತೇಕ ಮತದಾರರು ಉದ್ಯೋಗ ಸೃಷ್ಟಿ ಮಾಡುವಲ್ಲಿ ಸರ್ಕಾರದ ಸಾಧನೆ ಕಳಪೆಯಾಗಿದೆಯೆಂದು ತಿಳಿಸಿದ್ದಾರೆ.

ಉದ್ಯೋಗ ಸೃಷ್ಟಿಯ ನಂತರದ ಆದ್ಯತಾ ಕ್ಷೇತ್ರಗಳೆಂದು “ಉತ್ತಮ ಆರೋಗ್ಯ ಸೌಲಭ್ಯ” ಮತ್ತು “ಶುದ್ದ ಕುಡಿಯುವ ನೀರಿನ ಲಭ್ಯತೆ” ಗಳನ್ನು ಗುರುತಿಸಿರುವ ಮತದಾರರು ಈ ಕ್ಷೇತ್ರಗಳಲ್ಲೂ ಕೇಂದ್ರ ಸರ್ಕಾರದ ಸಾಧನೆ ಸಾಧಾರಣಕ್ಕಿಂತ ಕೆಳಿಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸುಭದ್ರ ಉದ್ಯೋಗ ಸೃಷ್ಟಿ  ಅತಿಮುಖ್ಯ ಅಗತ್ಯ ಎಂದು ಗುರುತಿಸಿರುವ ಮತದಾರರು ಈ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರದ ಸಾಧನೆ ಅತ್ಯಂತ ಕೆಟ್ಟದಾಗಿದೆಯೆಂದು ತಿಳಿಸಿದ್ದು ಈ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರಕ್ಕೆ 5ರ ಸ್ಕೇಲಿನಲ್ಲಿ ಕೇವಲ 2.15 ಅಂಕ ನೀಡಿದ್ದಾರೆ.

ಎಡಿಆರ್ ನವರು ಅಕ್ಟೋಬರ್ 2018 ಮತ್ತು ಡಿಸೆಂಬರ್ 2018 ರ ಮಧ್ಯೆ ದೇಶದ 534 ಲೋಕಸಭಾ ಕ್ಷೇತ್ರಗಳ 2,73,487 ಜನ ಮತದಾರರನ್ನು ಸಂದರ್ಶಿಸಿ  ನಡೆಸಿದ ಸರ್ವೆಯಲ್ಲಿ ಈ ಮೇಲಿನ ಅಂಶಗಳು ಹೊರಬಿದ್ದಿವೆ.

ಮತದಾರರ ಪ್ರಕಾರ ಅಭಿವೃದ್ದಿಯಲ್ಲಿ ಮುಂಚೂಣಿಯಲ್ಲಿರಬೇಕಾದ ಆದ್ಯತಾ ಕ್ಷೇತ್ರಗಳಾವುವು, ಅಂಥಾ ಆದ್ಯತೆಯ ಕ್ಷೇತ್ರಗಳಲ್ಲಿ ಸರ್ಕಾರದ ಸಾಧನೆ ತೃಪ್ತಿದಾಯಕವಾಗಿದೆಯೆ ಮತ್ತು ಈ ಕ್ಷೇತ್ರಗಳಲ್ಲಿಯ ಸಾಧನೆ ಮತದಾನದ ಮೇಲೆ ಬೀರುವ ಪರಿಣಾಮವನ್ನು ತಿಳಿಯುವುದು ಈ ಸರ್ವೆಯ ಉದ್ದೇಶವಾಗಿತ್ತು.

ಈ ಸರ್ವೆಯ ಸಮಯದಲ್ಲಿ ಪ್ರತಿಕ್ರಿಯಿಸಿದ ಮತದಾರರಲ್ಲಿ ಶೇ 46.80 ಮಂದಿ  ಉತ್ತಮ ಉದ್ಯೋಗ ಸೃಷ್ಟಿ ಅತಿ ಮುಖ್ಯ ಎಂದು ಪರಿಗಣಿಸಿದರೆ, ಶೇ 34.60 ಮಂದಿ ಉತ್ತಮ ಆರೋಗ್ಯ ಸೇವೆ ಮತ್ತು ಶೇ 30.50 ಮಂದಿ ಶುದ್ದ ಕುಡಿಯುವ ನೀರಿನ ಲಭ್ಯತೆ ಮುಖ್ಯವೆಂದು ಪರಿಗಣಿಸಿದ್ದಾರೆ.

ಒಟ್ಟಾರೆ ಈ ಮೇಲಿನ ಮೂರು ಸರ್ಕಾರದ ಅತ್ಯಂತ ಮುಖ್ಯ ಆದ್ಯತಾ ಕ್ಷೇತ್ರಗಳಾಗಿರಬೇಕೆಂಬುದು ಮತದಾರರ ಅಭಿಪ್ರಾಯವಾಗಿದೆ.

ಉಳಿದಂತೆ, ಶೇ 28.34 ಮಂದಿ ಉತ್ತಮ ರಸ್ತೆಗಳು, ಶೇ 27.35 ಮಂದಿ ಉತ್ತಮ ಸಾರ್ವಜನಿಕ ಸಾರಿಗೆ, ಶೇ 26.4  ಮಂದಿ ವ್ಯವಸಾಯಕ್ಕೆ ಉತ್ತಮ ನೀರಾವರಿ ಸೌಲಭ್ಯ, ಶೇ 25.62 ಮಂದಿ ಕೃಷಿ ಸಾಲದ ಸುಲಭ ಲಭ್ಯತೆ, ಶೇ 25.41 ಮಂದಿ ರೈತರಿಗೆ ಸರಿಯಾದ ಬೆಂಬಲ ಬೆಲೆ ಮತ್ತು ಶೇ 25.06 ಮಂದಿ ಬೀಜ ಹಾಗೂ ರಸಗೊಬ್ಬರಕ್ಕೆ ಸರಿಯಾದ ಸಬ್ಸಿಡಿ ಇವುಗಳು ತಮ್ಮ ಪ್ರಕಾರ ಆದ್ಯತೆಯ ಕ್ಷೇತ್ರಗಳೆಂದು ತಿಳಿಸಿದ್ದಾರೆ.

ಮೇಲಿನವುಗಳೂ ಸೇರಿದಂತೆ ಎಡಿಆರ್ ನವರು ಪಟ್ಟಿ ಮಾಡಿರುವ ಒಟ್ಟು ಮೂವತ್ತೊಂದು ಆದ್ಯತಾ ಕ್ಷೇತ್ರಗಳಲ್ಲಿ ಒಂದು ಕ್ಷೇತ್ರದಲ್ಲಿ ಕೂಡ ಕೇಂದ್ರ ಸರ್ಕಾರದ ಸಾಧನೆ ಸಮಾಧಾನಕರವಾಗಿಲ್ಲ ಎಂದು ಬಹುತೇಕ ಮತದಾರರ ಅಭಿಪ್ರಾಯವಾಗಿದೆ.

ಇದೇ ಸಂಸ್ಥೆಯು ಕಳೆದ ವರ್ಷ ನಡೆಸಿದ್ದ ಸರ್ವೆಯಲ್ಲಿ ಕೂಡ ಉತ್ತಮ ಉದ್ಯೋಗ ಸೃಷ್ಟಿ ಮತ್ತು ಉತ್ತಮ ಆರೋಗ್ಯ ಸೇವೆ ಪ್ರಮುಖ ಆದ್ಯತಾ ಕ್ಷೇತ್ರಗಳೆಂದು ಮತದಾರರು ಗುರುತಿಸಿದ್ದನ್ನು ಗಮನಿಸಬಹುದು.

ಈ ಸರ್ವೆಯು ಗಮನಿಸಿದ ಇನ್ನೊಂದು ಅಂಶವೆಂದರೆ, ಹಿಂದುಳಿದ ರಾಜ್ಯಗಳಾದ ಉತ್ತರಪ್ರದೇಶ, ಬಿಹಾರ, ಛತ್ತೀಸ್‍ಗಡ, ಜಾಖರ್ಂಡ್, ರಾಜಸ್ಥಾನ ಮತ್ತು ಮದ್ಯಪ್ರದೇಶಗಳ ಮತದಾರರು ಉತ್ತಮ ಉದ್ಯೋಗ ಸೃಷ್ಟಿ ಅತಿಮುಖ್ಯವೆಂದು ಪರಿಗಣಿಸಿದರೆ, ಒರಿಸ್ಸಾ, ಕರ್ನಾಟಕ ಮತ್ತು ದಮನ್ ಅಂಡ್ ದಿಯುವಿನ ಮತದಾರರು ಕುಡಿಯುವ ನೀರು ಅತ್ಯಂತ ಮುಖ್ಯವೆಂದು ಅಭಿಪ್ರಾಯ ಪಟ್ಟಿದ್ದಾರೆ.

ಒಟ್ಟಾರೆಯಾಗಿ, ಮೋದಿಯವರು ಹೇಳಿದ ಅಚ್ಚೇದಿನ್ ಬಂದಿಲ್ಲವೆಂಬ ಮತದಾರರ ಅಭಿಪ್ರಾಯ ಸ್ಪಷ್ಟವಾಗಿ ಗೋಚರಿಸುತ್ತಿದೆ. ಉದ್ಯೋಗ ಸೃಷ್ಟಿ ಮಾಡಿದ್ದೇನೆಂದು  ಬಗ್ಗೆ ಕೇಂದ್ರ ಸರ್ಕಾರ ಹತ್ತು ಹಲವು ಗೊಂದಲಮಯ ಹೇಳಿಕೆಗಳನ್ನು ನೀಡುತ್ತಿದ್ದರೂ ವಾಸ್ತವದಲ್ಲಿ ಮತದಾರ ಮಾತ್ರ ನಿರುದ್ಯೋಗ ಸಮಸ್ಯೆ ಅತ್ಯಂತ ಗಂಭೀರವಾಗಿರುವುದೆಂದೂ ಮತ್ತು ಅದು ಮತದಾನದ ಮೇಲೆ ಪರಿಣಾಮ ಬೀರುತ್ತದೆಂದೂ ಸ್ಪಷ್ಟ ಸಂದೇಶ ಕೊಡುತ್ತಿದ್ದಾನೆ.

ಬಹುಶಃ ಈ ಕಾರಣಕ್ಕಾಗಿಯೇ ಮೋದಿ ಮತ್ತು ಕೇಂದ್ರಸರ್ಕಾರ ಅಭಿವೃದ್ದಿ ಆಧಾರಿತ ವಿಷಯಗಳನ್ನು ಬದಿಗೆ ಸರಿಸಿ ಜನರ ಗಮನವನ್ನು ಪಾಕಿಸ್ತಾನ, ಉಗ್ರರ ದಾಳಿಯಂಥ ವಿಷಯಗಳಿಗೆ ಸೀಮಿತಗೊಳಿಸಿ ಚುನಾವಣೆ ನಡೆಸುವ ಪ್ರಯತ್ನದಲ್ಲಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...