Homeನ್ಯಾಯ ಪಥಅತೀ ದೊಡ್ಡ ಮತ್ತು ವಿಶ್ವಾಸಾರ್ಹ ಸರ್ವೆ ಹೇಳುತ್ತಿದೆ: ಕೇಂದ್ರ ಸರ್ಕಾರದ ಸಾಧನೆ ಸಾಲದು

ಅತೀ ದೊಡ್ಡ ಮತ್ತು ವಿಶ್ವಾಸಾರ್ಹ ಸರ್ವೆ ಹೇಳುತ್ತಿದೆ: ಕೇಂದ್ರ ಸರ್ಕಾರದ ಸಾಧನೆ ಸಾಲದು

- Advertisement -
- Advertisement -

ಮೂಲ: ಔಟ್‍ಲುಕ್ ಇಂಡಿಯಾ

ಕನ್ನಡಕ್ಕೆ: ಬಿ.ಸಿ.ಬಸವರಾಜು

ಅಭಿವೃದ್ದಿಯ ಪ್ರಮುಖ ಕ್ಷೇತ್ರಗಳಲ್ಲಿ ಕೇಂದ್ರ ಸರ್ಕಾರದ ಸಾಧನೆ ಸಾಧಾರಣಕ್ಕಿಂತ ಕಡಿಮೆಯಿದೆ (below average)ಯೆಂಬ ಅಭಿಪ್ರಾಯವನ್ನು ದೇಶದ ಮತದಾರರು ಹೊಂದಿದ್ದಾರೆಂಬ ಒಂದು ಸರ್ವೇ ಹೊರಬಿದ್ದಿದೆ. ಸರ್ವೇ ಮಾಡಿದವರು ಯಾರು ಗೊತ್ತೇ? ದೇಶಾದ್ಯಂತ ನಿಷ್ಪಕ್ಷಪಾತವಾಗಿ ಎಲ್ಲಾ ಪಕ್ಷಗಳ ಅಭ್ಯರ್ಥಿಗಳ ಆಸ್ತಿ ವಿವರ, ಕ್ರಿಮಿನಲ್ ಪ್ರಕರಣಗಳು ಇತ್ಯಾದಿಗಳನ್ನು ಜನರಿಗೆ ತಿಳಿಸುವ ಮೊಟ್ಟ ಮೊದಲ ಕೆಲಸ ಮಾಡಿದ ಸಂಸ್ಥೆ- ಎಡಿಆರ್. ಈ ಸಂಸ್ಥೆಯು ನಂತರ ಚುನಾವಣೆಗಳಲ್ಲಿ ಹಲವು ಸುಧಾರಣೆಗಳನ್ನು ತರಲು ವ್ಯವಸ್ಥಿತವಾಗಿ ಕೆಲಸ ನಡೆಸುತ್ತಿದೆ.  ಮತದಾರರ ಸರ್ವೆ ಮಾಡುವಾಗಲೂ ಎಡಿಆರ್ ತನ್ನ ಹಿರಿಮೆ ಮೆರೆದಿದೆ. ದೇಶದಲ್ಲಿ ಮಾತ್ರವಲ್ಲದೇ, ಪ್ರಪಂಚದಲ್ಲಿ ಇಷ್ಟೊಂದು ದೊಡ್ಡ ಸರ್ವೇ ನಡೆದಿಲ್ಲವೆಂದು ಹೇಳಲಾಗುತ್ತಿದೆ. ದೇಶದ 534 ಕ್ಷೇತ್ರಗಳಲ್ಲಿ ಎರಡೂ ಮುಕ್ಕಾಲು ಲಕ್ಷ ಜನ ಮತದಾರರನ್ನು ಈ ಸರ್ವೇಯಲ್ಲಿ ಮಾತಾಡಿಸಲಾಗಿದೆ!! ಅದೇನು ಹೇಳುತ್ತದೆ ಎಂಬುದನ್ನು ನೋಡೋಣ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾಮ್ರ್ಸ್ (ಎಡಿಆರ್) ನವರು ದೇಶದಾದ್ಯಂತ ನಡೆಸಿದ ಸರ್ವೆಯಲ್ಲಿ, ಮತದಾರರು ಪ್ರಮುಖ ಹತ್ತು (top priority) ಆದ್ಯತಾ ಕ್ಷೇತ್ರಗಳಲ್ಲಿ ಕೇಂದ್ರ ಸರ್ಕಾರದ ಸಾಧನೆ ಸಾಧಾರಣಕ್ಕಿಂತ ಕಡಿಮೆಯಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಉದ್ಯೋಗ ಸೃಷ್ಟಿ ಮಾಡುವುದು ಕೇಂದ್ರ ಸರ್ಕಾರದ ಅತ್ಯಂತ ಆದ್ಯತೆಯ ಕೆಲಸವಾಗಿರಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ ಬಹುತೇಕ ಮತದಾರರು ಉದ್ಯೋಗ ಸೃಷ್ಟಿ ಮಾಡುವಲ್ಲಿ ಸರ್ಕಾರದ ಸಾಧನೆ ಕಳಪೆಯಾಗಿದೆಯೆಂದು ತಿಳಿಸಿದ್ದಾರೆ.

ಉದ್ಯೋಗ ಸೃಷ್ಟಿಯ ನಂತರದ ಆದ್ಯತಾ ಕ್ಷೇತ್ರಗಳೆಂದು “ಉತ್ತಮ ಆರೋಗ್ಯ ಸೌಲಭ್ಯ” ಮತ್ತು “ಶುದ್ದ ಕುಡಿಯುವ ನೀರಿನ ಲಭ್ಯತೆ” ಗಳನ್ನು ಗುರುತಿಸಿರುವ ಮತದಾರರು ಈ ಕ್ಷೇತ್ರಗಳಲ್ಲೂ ಕೇಂದ್ರ ಸರ್ಕಾರದ ಸಾಧನೆ ಸಾಧಾರಣಕ್ಕಿಂತ ಕೆಳಿಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸುಭದ್ರ ಉದ್ಯೋಗ ಸೃಷ್ಟಿ  ಅತಿಮುಖ್ಯ ಅಗತ್ಯ ಎಂದು ಗುರುತಿಸಿರುವ ಮತದಾರರು ಈ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರದ ಸಾಧನೆ ಅತ್ಯಂತ ಕೆಟ್ಟದಾಗಿದೆಯೆಂದು ತಿಳಿಸಿದ್ದು ಈ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರಕ್ಕೆ 5ರ ಸ್ಕೇಲಿನಲ್ಲಿ ಕೇವಲ 2.15 ಅಂಕ ನೀಡಿದ್ದಾರೆ.

ಎಡಿಆರ್ ನವರು ಅಕ್ಟೋಬರ್ 2018 ಮತ್ತು ಡಿಸೆಂಬರ್ 2018 ರ ಮಧ್ಯೆ ದೇಶದ 534 ಲೋಕಸಭಾ ಕ್ಷೇತ್ರಗಳ 2,73,487 ಜನ ಮತದಾರರನ್ನು ಸಂದರ್ಶಿಸಿ  ನಡೆಸಿದ ಸರ್ವೆಯಲ್ಲಿ ಈ ಮೇಲಿನ ಅಂಶಗಳು ಹೊರಬಿದ್ದಿವೆ.

ಮತದಾರರ ಪ್ರಕಾರ ಅಭಿವೃದ್ದಿಯಲ್ಲಿ ಮುಂಚೂಣಿಯಲ್ಲಿರಬೇಕಾದ ಆದ್ಯತಾ ಕ್ಷೇತ್ರಗಳಾವುವು, ಅಂಥಾ ಆದ್ಯತೆಯ ಕ್ಷೇತ್ರಗಳಲ್ಲಿ ಸರ್ಕಾರದ ಸಾಧನೆ ತೃಪ್ತಿದಾಯಕವಾಗಿದೆಯೆ ಮತ್ತು ಈ ಕ್ಷೇತ್ರಗಳಲ್ಲಿಯ ಸಾಧನೆ ಮತದಾನದ ಮೇಲೆ ಬೀರುವ ಪರಿಣಾಮವನ್ನು ತಿಳಿಯುವುದು ಈ ಸರ್ವೆಯ ಉದ್ದೇಶವಾಗಿತ್ತು.

ಈ ಸರ್ವೆಯ ಸಮಯದಲ್ಲಿ ಪ್ರತಿಕ್ರಿಯಿಸಿದ ಮತದಾರರಲ್ಲಿ ಶೇ 46.80 ಮಂದಿ  ಉತ್ತಮ ಉದ್ಯೋಗ ಸೃಷ್ಟಿ ಅತಿ ಮುಖ್ಯ ಎಂದು ಪರಿಗಣಿಸಿದರೆ, ಶೇ 34.60 ಮಂದಿ ಉತ್ತಮ ಆರೋಗ್ಯ ಸೇವೆ ಮತ್ತು ಶೇ 30.50 ಮಂದಿ ಶುದ್ದ ಕುಡಿಯುವ ನೀರಿನ ಲಭ್ಯತೆ ಮುಖ್ಯವೆಂದು ಪರಿಗಣಿಸಿದ್ದಾರೆ.

ಒಟ್ಟಾರೆ ಈ ಮೇಲಿನ ಮೂರು ಸರ್ಕಾರದ ಅತ್ಯಂತ ಮುಖ್ಯ ಆದ್ಯತಾ ಕ್ಷೇತ್ರಗಳಾಗಿರಬೇಕೆಂಬುದು ಮತದಾರರ ಅಭಿಪ್ರಾಯವಾಗಿದೆ.

ಉಳಿದಂತೆ, ಶೇ 28.34 ಮಂದಿ ಉತ್ತಮ ರಸ್ತೆಗಳು, ಶೇ 27.35 ಮಂದಿ ಉತ್ತಮ ಸಾರ್ವಜನಿಕ ಸಾರಿಗೆ, ಶೇ 26.4  ಮಂದಿ ವ್ಯವಸಾಯಕ್ಕೆ ಉತ್ತಮ ನೀರಾವರಿ ಸೌಲಭ್ಯ, ಶೇ 25.62 ಮಂದಿ ಕೃಷಿ ಸಾಲದ ಸುಲಭ ಲಭ್ಯತೆ, ಶೇ 25.41 ಮಂದಿ ರೈತರಿಗೆ ಸರಿಯಾದ ಬೆಂಬಲ ಬೆಲೆ ಮತ್ತು ಶೇ 25.06 ಮಂದಿ ಬೀಜ ಹಾಗೂ ರಸಗೊಬ್ಬರಕ್ಕೆ ಸರಿಯಾದ ಸಬ್ಸಿಡಿ ಇವುಗಳು ತಮ್ಮ ಪ್ರಕಾರ ಆದ್ಯತೆಯ ಕ್ಷೇತ್ರಗಳೆಂದು ತಿಳಿಸಿದ್ದಾರೆ.

ಮೇಲಿನವುಗಳೂ ಸೇರಿದಂತೆ ಎಡಿಆರ್ ನವರು ಪಟ್ಟಿ ಮಾಡಿರುವ ಒಟ್ಟು ಮೂವತ್ತೊಂದು ಆದ್ಯತಾ ಕ್ಷೇತ್ರಗಳಲ್ಲಿ ಒಂದು ಕ್ಷೇತ್ರದಲ್ಲಿ ಕೂಡ ಕೇಂದ್ರ ಸರ್ಕಾರದ ಸಾಧನೆ ಸಮಾಧಾನಕರವಾಗಿಲ್ಲ ಎಂದು ಬಹುತೇಕ ಮತದಾರರ ಅಭಿಪ್ರಾಯವಾಗಿದೆ.

ಇದೇ ಸಂಸ್ಥೆಯು ಕಳೆದ ವರ್ಷ ನಡೆಸಿದ್ದ ಸರ್ವೆಯಲ್ಲಿ ಕೂಡ ಉತ್ತಮ ಉದ್ಯೋಗ ಸೃಷ್ಟಿ ಮತ್ತು ಉತ್ತಮ ಆರೋಗ್ಯ ಸೇವೆ ಪ್ರಮುಖ ಆದ್ಯತಾ ಕ್ಷೇತ್ರಗಳೆಂದು ಮತದಾರರು ಗುರುತಿಸಿದ್ದನ್ನು ಗಮನಿಸಬಹುದು.

ಈ ಸರ್ವೆಯು ಗಮನಿಸಿದ ಇನ್ನೊಂದು ಅಂಶವೆಂದರೆ, ಹಿಂದುಳಿದ ರಾಜ್ಯಗಳಾದ ಉತ್ತರಪ್ರದೇಶ, ಬಿಹಾರ, ಛತ್ತೀಸ್‍ಗಡ, ಜಾಖರ್ಂಡ್, ರಾಜಸ್ಥಾನ ಮತ್ತು ಮದ್ಯಪ್ರದೇಶಗಳ ಮತದಾರರು ಉತ್ತಮ ಉದ್ಯೋಗ ಸೃಷ್ಟಿ ಅತಿಮುಖ್ಯವೆಂದು ಪರಿಗಣಿಸಿದರೆ, ಒರಿಸ್ಸಾ, ಕರ್ನಾಟಕ ಮತ್ತು ದಮನ್ ಅಂಡ್ ದಿಯುವಿನ ಮತದಾರರು ಕುಡಿಯುವ ನೀರು ಅತ್ಯಂತ ಮುಖ್ಯವೆಂದು ಅಭಿಪ್ರಾಯ ಪಟ್ಟಿದ್ದಾರೆ.

ಒಟ್ಟಾರೆಯಾಗಿ, ಮೋದಿಯವರು ಹೇಳಿದ ಅಚ್ಚೇದಿನ್ ಬಂದಿಲ್ಲವೆಂಬ ಮತದಾರರ ಅಭಿಪ್ರಾಯ ಸ್ಪಷ್ಟವಾಗಿ ಗೋಚರಿಸುತ್ತಿದೆ. ಉದ್ಯೋಗ ಸೃಷ್ಟಿ ಮಾಡಿದ್ದೇನೆಂದು  ಬಗ್ಗೆ ಕೇಂದ್ರ ಸರ್ಕಾರ ಹತ್ತು ಹಲವು ಗೊಂದಲಮಯ ಹೇಳಿಕೆಗಳನ್ನು ನೀಡುತ್ತಿದ್ದರೂ ವಾಸ್ತವದಲ್ಲಿ ಮತದಾರ ಮಾತ್ರ ನಿರುದ್ಯೋಗ ಸಮಸ್ಯೆ ಅತ್ಯಂತ ಗಂಭೀರವಾಗಿರುವುದೆಂದೂ ಮತ್ತು ಅದು ಮತದಾನದ ಮೇಲೆ ಪರಿಣಾಮ ಬೀರುತ್ತದೆಂದೂ ಸ್ಪಷ್ಟ ಸಂದೇಶ ಕೊಡುತ್ತಿದ್ದಾನೆ.

ಬಹುಶಃ ಈ ಕಾರಣಕ್ಕಾಗಿಯೇ ಮೋದಿ ಮತ್ತು ಕೇಂದ್ರಸರ್ಕಾರ ಅಭಿವೃದ್ದಿ ಆಧಾರಿತ ವಿಷಯಗಳನ್ನು ಬದಿಗೆ ಸರಿಸಿ ಜನರ ಗಮನವನ್ನು ಪಾಕಿಸ್ತಾನ, ಉಗ್ರರ ದಾಳಿಯಂಥ ವಿಷಯಗಳಿಗೆ ಸೀಮಿತಗೊಳಿಸಿ ಚುನಾವಣೆ ನಡೆಸುವ ಪ್ರಯತ್ನದಲ್ಲಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...