Homeನ್ಯಾಯ ಪಥಅತೀ ದೊಡ್ಡ ಮತ್ತು ವಿಶ್ವಾಸಾರ್ಹ ಸರ್ವೆ ಹೇಳುತ್ತಿದೆ: ಕೇಂದ್ರ ಸರ್ಕಾರದ ಸಾಧನೆ ಸಾಲದು

ಅತೀ ದೊಡ್ಡ ಮತ್ತು ವಿಶ್ವಾಸಾರ್ಹ ಸರ್ವೆ ಹೇಳುತ್ತಿದೆ: ಕೇಂದ್ರ ಸರ್ಕಾರದ ಸಾಧನೆ ಸಾಲದು

- Advertisement -
- Advertisement -

ಮೂಲ: ಔಟ್‍ಲುಕ್ ಇಂಡಿಯಾ

ಕನ್ನಡಕ್ಕೆ: ಬಿ.ಸಿ.ಬಸವರಾಜು

ಅಭಿವೃದ್ದಿಯ ಪ್ರಮುಖ ಕ್ಷೇತ್ರಗಳಲ್ಲಿ ಕೇಂದ್ರ ಸರ್ಕಾರದ ಸಾಧನೆ ಸಾಧಾರಣಕ್ಕಿಂತ ಕಡಿಮೆಯಿದೆ (below average)ಯೆಂಬ ಅಭಿಪ್ರಾಯವನ್ನು ದೇಶದ ಮತದಾರರು ಹೊಂದಿದ್ದಾರೆಂಬ ಒಂದು ಸರ್ವೇ ಹೊರಬಿದ್ದಿದೆ. ಸರ್ವೇ ಮಾಡಿದವರು ಯಾರು ಗೊತ್ತೇ? ದೇಶಾದ್ಯಂತ ನಿಷ್ಪಕ್ಷಪಾತವಾಗಿ ಎಲ್ಲಾ ಪಕ್ಷಗಳ ಅಭ್ಯರ್ಥಿಗಳ ಆಸ್ತಿ ವಿವರ, ಕ್ರಿಮಿನಲ್ ಪ್ರಕರಣಗಳು ಇತ್ಯಾದಿಗಳನ್ನು ಜನರಿಗೆ ತಿಳಿಸುವ ಮೊಟ್ಟ ಮೊದಲ ಕೆಲಸ ಮಾಡಿದ ಸಂಸ್ಥೆ- ಎಡಿಆರ್. ಈ ಸಂಸ್ಥೆಯು ನಂತರ ಚುನಾವಣೆಗಳಲ್ಲಿ ಹಲವು ಸುಧಾರಣೆಗಳನ್ನು ತರಲು ವ್ಯವಸ್ಥಿತವಾಗಿ ಕೆಲಸ ನಡೆಸುತ್ತಿದೆ.  ಮತದಾರರ ಸರ್ವೆ ಮಾಡುವಾಗಲೂ ಎಡಿಆರ್ ತನ್ನ ಹಿರಿಮೆ ಮೆರೆದಿದೆ. ದೇಶದಲ್ಲಿ ಮಾತ್ರವಲ್ಲದೇ, ಪ್ರಪಂಚದಲ್ಲಿ ಇಷ್ಟೊಂದು ದೊಡ್ಡ ಸರ್ವೇ ನಡೆದಿಲ್ಲವೆಂದು ಹೇಳಲಾಗುತ್ತಿದೆ. ದೇಶದ 534 ಕ್ಷೇತ್ರಗಳಲ್ಲಿ ಎರಡೂ ಮುಕ್ಕಾಲು ಲಕ್ಷ ಜನ ಮತದಾರರನ್ನು ಈ ಸರ್ವೇಯಲ್ಲಿ ಮಾತಾಡಿಸಲಾಗಿದೆ!! ಅದೇನು ಹೇಳುತ್ತದೆ ಎಂಬುದನ್ನು ನೋಡೋಣ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾಮ್ರ್ಸ್ (ಎಡಿಆರ್) ನವರು ದೇಶದಾದ್ಯಂತ ನಡೆಸಿದ ಸರ್ವೆಯಲ್ಲಿ, ಮತದಾರರು ಪ್ರಮುಖ ಹತ್ತು (top priority) ಆದ್ಯತಾ ಕ್ಷೇತ್ರಗಳಲ್ಲಿ ಕೇಂದ್ರ ಸರ್ಕಾರದ ಸಾಧನೆ ಸಾಧಾರಣಕ್ಕಿಂತ ಕಡಿಮೆಯಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಉದ್ಯೋಗ ಸೃಷ್ಟಿ ಮಾಡುವುದು ಕೇಂದ್ರ ಸರ್ಕಾರದ ಅತ್ಯಂತ ಆದ್ಯತೆಯ ಕೆಲಸವಾಗಿರಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ ಬಹುತೇಕ ಮತದಾರರು ಉದ್ಯೋಗ ಸೃಷ್ಟಿ ಮಾಡುವಲ್ಲಿ ಸರ್ಕಾರದ ಸಾಧನೆ ಕಳಪೆಯಾಗಿದೆಯೆಂದು ತಿಳಿಸಿದ್ದಾರೆ.

ಉದ್ಯೋಗ ಸೃಷ್ಟಿಯ ನಂತರದ ಆದ್ಯತಾ ಕ್ಷೇತ್ರಗಳೆಂದು “ಉತ್ತಮ ಆರೋಗ್ಯ ಸೌಲಭ್ಯ” ಮತ್ತು “ಶುದ್ದ ಕುಡಿಯುವ ನೀರಿನ ಲಭ್ಯತೆ” ಗಳನ್ನು ಗುರುತಿಸಿರುವ ಮತದಾರರು ಈ ಕ್ಷೇತ್ರಗಳಲ್ಲೂ ಕೇಂದ್ರ ಸರ್ಕಾರದ ಸಾಧನೆ ಸಾಧಾರಣಕ್ಕಿಂತ ಕೆಳಿಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸುಭದ್ರ ಉದ್ಯೋಗ ಸೃಷ್ಟಿ  ಅತಿಮುಖ್ಯ ಅಗತ್ಯ ಎಂದು ಗುರುತಿಸಿರುವ ಮತದಾರರು ಈ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರದ ಸಾಧನೆ ಅತ್ಯಂತ ಕೆಟ್ಟದಾಗಿದೆಯೆಂದು ತಿಳಿಸಿದ್ದು ಈ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರಕ್ಕೆ 5ರ ಸ್ಕೇಲಿನಲ್ಲಿ ಕೇವಲ 2.15 ಅಂಕ ನೀಡಿದ್ದಾರೆ.

ಎಡಿಆರ್ ನವರು ಅಕ್ಟೋಬರ್ 2018 ಮತ್ತು ಡಿಸೆಂಬರ್ 2018 ರ ಮಧ್ಯೆ ದೇಶದ 534 ಲೋಕಸಭಾ ಕ್ಷೇತ್ರಗಳ 2,73,487 ಜನ ಮತದಾರರನ್ನು ಸಂದರ್ಶಿಸಿ  ನಡೆಸಿದ ಸರ್ವೆಯಲ್ಲಿ ಈ ಮೇಲಿನ ಅಂಶಗಳು ಹೊರಬಿದ್ದಿವೆ.

ಮತದಾರರ ಪ್ರಕಾರ ಅಭಿವೃದ್ದಿಯಲ್ಲಿ ಮುಂಚೂಣಿಯಲ್ಲಿರಬೇಕಾದ ಆದ್ಯತಾ ಕ್ಷೇತ್ರಗಳಾವುವು, ಅಂಥಾ ಆದ್ಯತೆಯ ಕ್ಷೇತ್ರಗಳಲ್ಲಿ ಸರ್ಕಾರದ ಸಾಧನೆ ತೃಪ್ತಿದಾಯಕವಾಗಿದೆಯೆ ಮತ್ತು ಈ ಕ್ಷೇತ್ರಗಳಲ್ಲಿಯ ಸಾಧನೆ ಮತದಾನದ ಮೇಲೆ ಬೀರುವ ಪರಿಣಾಮವನ್ನು ತಿಳಿಯುವುದು ಈ ಸರ್ವೆಯ ಉದ್ದೇಶವಾಗಿತ್ತು.

ಈ ಸರ್ವೆಯ ಸಮಯದಲ್ಲಿ ಪ್ರತಿಕ್ರಿಯಿಸಿದ ಮತದಾರರಲ್ಲಿ ಶೇ 46.80 ಮಂದಿ  ಉತ್ತಮ ಉದ್ಯೋಗ ಸೃಷ್ಟಿ ಅತಿ ಮುಖ್ಯ ಎಂದು ಪರಿಗಣಿಸಿದರೆ, ಶೇ 34.60 ಮಂದಿ ಉತ್ತಮ ಆರೋಗ್ಯ ಸೇವೆ ಮತ್ತು ಶೇ 30.50 ಮಂದಿ ಶುದ್ದ ಕುಡಿಯುವ ನೀರಿನ ಲಭ್ಯತೆ ಮುಖ್ಯವೆಂದು ಪರಿಗಣಿಸಿದ್ದಾರೆ.

ಒಟ್ಟಾರೆ ಈ ಮೇಲಿನ ಮೂರು ಸರ್ಕಾರದ ಅತ್ಯಂತ ಮುಖ್ಯ ಆದ್ಯತಾ ಕ್ಷೇತ್ರಗಳಾಗಿರಬೇಕೆಂಬುದು ಮತದಾರರ ಅಭಿಪ್ರಾಯವಾಗಿದೆ.

ಉಳಿದಂತೆ, ಶೇ 28.34 ಮಂದಿ ಉತ್ತಮ ರಸ್ತೆಗಳು, ಶೇ 27.35 ಮಂದಿ ಉತ್ತಮ ಸಾರ್ವಜನಿಕ ಸಾರಿಗೆ, ಶೇ 26.4  ಮಂದಿ ವ್ಯವಸಾಯಕ್ಕೆ ಉತ್ತಮ ನೀರಾವರಿ ಸೌಲಭ್ಯ, ಶೇ 25.62 ಮಂದಿ ಕೃಷಿ ಸಾಲದ ಸುಲಭ ಲಭ್ಯತೆ, ಶೇ 25.41 ಮಂದಿ ರೈತರಿಗೆ ಸರಿಯಾದ ಬೆಂಬಲ ಬೆಲೆ ಮತ್ತು ಶೇ 25.06 ಮಂದಿ ಬೀಜ ಹಾಗೂ ರಸಗೊಬ್ಬರಕ್ಕೆ ಸರಿಯಾದ ಸಬ್ಸಿಡಿ ಇವುಗಳು ತಮ್ಮ ಪ್ರಕಾರ ಆದ್ಯತೆಯ ಕ್ಷೇತ್ರಗಳೆಂದು ತಿಳಿಸಿದ್ದಾರೆ.

ಮೇಲಿನವುಗಳೂ ಸೇರಿದಂತೆ ಎಡಿಆರ್ ನವರು ಪಟ್ಟಿ ಮಾಡಿರುವ ಒಟ್ಟು ಮೂವತ್ತೊಂದು ಆದ್ಯತಾ ಕ್ಷೇತ್ರಗಳಲ್ಲಿ ಒಂದು ಕ್ಷೇತ್ರದಲ್ಲಿ ಕೂಡ ಕೇಂದ್ರ ಸರ್ಕಾರದ ಸಾಧನೆ ಸಮಾಧಾನಕರವಾಗಿಲ್ಲ ಎಂದು ಬಹುತೇಕ ಮತದಾರರ ಅಭಿಪ್ರಾಯವಾಗಿದೆ.

ಇದೇ ಸಂಸ್ಥೆಯು ಕಳೆದ ವರ್ಷ ನಡೆಸಿದ್ದ ಸರ್ವೆಯಲ್ಲಿ ಕೂಡ ಉತ್ತಮ ಉದ್ಯೋಗ ಸೃಷ್ಟಿ ಮತ್ತು ಉತ್ತಮ ಆರೋಗ್ಯ ಸೇವೆ ಪ್ರಮುಖ ಆದ್ಯತಾ ಕ್ಷೇತ್ರಗಳೆಂದು ಮತದಾರರು ಗುರುತಿಸಿದ್ದನ್ನು ಗಮನಿಸಬಹುದು.

ಈ ಸರ್ವೆಯು ಗಮನಿಸಿದ ಇನ್ನೊಂದು ಅಂಶವೆಂದರೆ, ಹಿಂದುಳಿದ ರಾಜ್ಯಗಳಾದ ಉತ್ತರಪ್ರದೇಶ, ಬಿಹಾರ, ಛತ್ತೀಸ್‍ಗಡ, ಜಾಖರ್ಂಡ್, ರಾಜಸ್ಥಾನ ಮತ್ತು ಮದ್ಯಪ್ರದೇಶಗಳ ಮತದಾರರು ಉತ್ತಮ ಉದ್ಯೋಗ ಸೃಷ್ಟಿ ಅತಿಮುಖ್ಯವೆಂದು ಪರಿಗಣಿಸಿದರೆ, ಒರಿಸ್ಸಾ, ಕರ್ನಾಟಕ ಮತ್ತು ದಮನ್ ಅಂಡ್ ದಿಯುವಿನ ಮತದಾರರು ಕುಡಿಯುವ ನೀರು ಅತ್ಯಂತ ಮುಖ್ಯವೆಂದು ಅಭಿಪ್ರಾಯ ಪಟ್ಟಿದ್ದಾರೆ.

ಒಟ್ಟಾರೆಯಾಗಿ, ಮೋದಿಯವರು ಹೇಳಿದ ಅಚ್ಚೇದಿನ್ ಬಂದಿಲ್ಲವೆಂಬ ಮತದಾರರ ಅಭಿಪ್ರಾಯ ಸ್ಪಷ್ಟವಾಗಿ ಗೋಚರಿಸುತ್ತಿದೆ. ಉದ್ಯೋಗ ಸೃಷ್ಟಿ ಮಾಡಿದ್ದೇನೆಂದು  ಬಗ್ಗೆ ಕೇಂದ್ರ ಸರ್ಕಾರ ಹತ್ತು ಹಲವು ಗೊಂದಲಮಯ ಹೇಳಿಕೆಗಳನ್ನು ನೀಡುತ್ತಿದ್ದರೂ ವಾಸ್ತವದಲ್ಲಿ ಮತದಾರ ಮಾತ್ರ ನಿರುದ್ಯೋಗ ಸಮಸ್ಯೆ ಅತ್ಯಂತ ಗಂಭೀರವಾಗಿರುವುದೆಂದೂ ಮತ್ತು ಅದು ಮತದಾನದ ಮೇಲೆ ಪರಿಣಾಮ ಬೀರುತ್ತದೆಂದೂ ಸ್ಪಷ್ಟ ಸಂದೇಶ ಕೊಡುತ್ತಿದ್ದಾನೆ.

ಬಹುಶಃ ಈ ಕಾರಣಕ್ಕಾಗಿಯೇ ಮೋದಿ ಮತ್ತು ಕೇಂದ್ರಸರ್ಕಾರ ಅಭಿವೃದ್ದಿ ಆಧಾರಿತ ವಿಷಯಗಳನ್ನು ಬದಿಗೆ ಸರಿಸಿ ಜನರ ಗಮನವನ್ನು ಪಾಕಿಸ್ತಾನ, ಉಗ್ರರ ದಾಳಿಯಂಥ ವಿಷಯಗಳಿಗೆ ಸೀಮಿತಗೊಳಿಸಿ ಚುನಾವಣೆ ನಡೆಸುವ ಪ್ರಯತ್ನದಲ್ಲಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...