Homeನ್ಯಾಯ ಪಥಅತೀ ದೊಡ್ಡ ಮತ್ತು ವಿಶ್ವಾಸಾರ್ಹ ಸರ್ವೆ ಹೇಳುತ್ತಿದೆ: ಕೇಂದ್ರ ಸರ್ಕಾರದ ಸಾಧನೆ ಸಾಲದು

ಅತೀ ದೊಡ್ಡ ಮತ್ತು ವಿಶ್ವಾಸಾರ್ಹ ಸರ್ವೆ ಹೇಳುತ್ತಿದೆ: ಕೇಂದ್ರ ಸರ್ಕಾರದ ಸಾಧನೆ ಸಾಲದು

- Advertisement -
- Advertisement -

ಮೂಲ: ಔಟ್‍ಲುಕ್ ಇಂಡಿಯಾ

ಕನ್ನಡಕ್ಕೆ: ಬಿ.ಸಿ.ಬಸವರಾಜು

ಅಭಿವೃದ್ದಿಯ ಪ್ರಮುಖ ಕ್ಷೇತ್ರಗಳಲ್ಲಿ ಕೇಂದ್ರ ಸರ್ಕಾರದ ಸಾಧನೆ ಸಾಧಾರಣಕ್ಕಿಂತ ಕಡಿಮೆಯಿದೆ (below average)ಯೆಂಬ ಅಭಿಪ್ರಾಯವನ್ನು ದೇಶದ ಮತದಾರರು ಹೊಂದಿದ್ದಾರೆಂಬ ಒಂದು ಸರ್ವೇ ಹೊರಬಿದ್ದಿದೆ. ಸರ್ವೇ ಮಾಡಿದವರು ಯಾರು ಗೊತ್ತೇ? ದೇಶಾದ್ಯಂತ ನಿಷ್ಪಕ್ಷಪಾತವಾಗಿ ಎಲ್ಲಾ ಪಕ್ಷಗಳ ಅಭ್ಯರ್ಥಿಗಳ ಆಸ್ತಿ ವಿವರ, ಕ್ರಿಮಿನಲ್ ಪ್ರಕರಣಗಳು ಇತ್ಯಾದಿಗಳನ್ನು ಜನರಿಗೆ ತಿಳಿಸುವ ಮೊಟ್ಟ ಮೊದಲ ಕೆಲಸ ಮಾಡಿದ ಸಂಸ್ಥೆ- ಎಡಿಆರ್. ಈ ಸಂಸ್ಥೆಯು ನಂತರ ಚುನಾವಣೆಗಳಲ್ಲಿ ಹಲವು ಸುಧಾರಣೆಗಳನ್ನು ತರಲು ವ್ಯವಸ್ಥಿತವಾಗಿ ಕೆಲಸ ನಡೆಸುತ್ತಿದೆ.  ಮತದಾರರ ಸರ್ವೆ ಮಾಡುವಾಗಲೂ ಎಡಿಆರ್ ತನ್ನ ಹಿರಿಮೆ ಮೆರೆದಿದೆ. ದೇಶದಲ್ಲಿ ಮಾತ್ರವಲ್ಲದೇ, ಪ್ರಪಂಚದಲ್ಲಿ ಇಷ್ಟೊಂದು ದೊಡ್ಡ ಸರ್ವೇ ನಡೆದಿಲ್ಲವೆಂದು ಹೇಳಲಾಗುತ್ತಿದೆ. ದೇಶದ 534 ಕ್ಷೇತ್ರಗಳಲ್ಲಿ ಎರಡೂ ಮುಕ್ಕಾಲು ಲಕ್ಷ ಜನ ಮತದಾರರನ್ನು ಈ ಸರ್ವೇಯಲ್ಲಿ ಮಾತಾಡಿಸಲಾಗಿದೆ!! ಅದೇನು ಹೇಳುತ್ತದೆ ಎಂಬುದನ್ನು ನೋಡೋಣ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾಮ್ರ್ಸ್ (ಎಡಿಆರ್) ನವರು ದೇಶದಾದ್ಯಂತ ನಡೆಸಿದ ಸರ್ವೆಯಲ್ಲಿ, ಮತದಾರರು ಪ್ರಮುಖ ಹತ್ತು (top priority) ಆದ್ಯತಾ ಕ್ಷೇತ್ರಗಳಲ್ಲಿ ಕೇಂದ್ರ ಸರ್ಕಾರದ ಸಾಧನೆ ಸಾಧಾರಣಕ್ಕಿಂತ ಕಡಿಮೆಯಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಉದ್ಯೋಗ ಸೃಷ್ಟಿ ಮಾಡುವುದು ಕೇಂದ್ರ ಸರ್ಕಾರದ ಅತ್ಯಂತ ಆದ್ಯತೆಯ ಕೆಲಸವಾಗಿರಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ ಬಹುತೇಕ ಮತದಾರರು ಉದ್ಯೋಗ ಸೃಷ್ಟಿ ಮಾಡುವಲ್ಲಿ ಸರ್ಕಾರದ ಸಾಧನೆ ಕಳಪೆಯಾಗಿದೆಯೆಂದು ತಿಳಿಸಿದ್ದಾರೆ.

ಉದ್ಯೋಗ ಸೃಷ್ಟಿಯ ನಂತರದ ಆದ್ಯತಾ ಕ್ಷೇತ್ರಗಳೆಂದು “ಉತ್ತಮ ಆರೋಗ್ಯ ಸೌಲಭ್ಯ” ಮತ್ತು “ಶುದ್ದ ಕುಡಿಯುವ ನೀರಿನ ಲಭ್ಯತೆ” ಗಳನ್ನು ಗುರುತಿಸಿರುವ ಮತದಾರರು ಈ ಕ್ಷೇತ್ರಗಳಲ್ಲೂ ಕೇಂದ್ರ ಸರ್ಕಾರದ ಸಾಧನೆ ಸಾಧಾರಣಕ್ಕಿಂತ ಕೆಳಿಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸುಭದ್ರ ಉದ್ಯೋಗ ಸೃಷ್ಟಿ  ಅತಿಮುಖ್ಯ ಅಗತ್ಯ ಎಂದು ಗುರುತಿಸಿರುವ ಮತದಾರರು ಈ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರದ ಸಾಧನೆ ಅತ್ಯಂತ ಕೆಟ್ಟದಾಗಿದೆಯೆಂದು ತಿಳಿಸಿದ್ದು ಈ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರಕ್ಕೆ 5ರ ಸ್ಕೇಲಿನಲ್ಲಿ ಕೇವಲ 2.15 ಅಂಕ ನೀಡಿದ್ದಾರೆ.

ಎಡಿಆರ್ ನವರು ಅಕ್ಟೋಬರ್ 2018 ಮತ್ತು ಡಿಸೆಂಬರ್ 2018 ರ ಮಧ್ಯೆ ದೇಶದ 534 ಲೋಕಸಭಾ ಕ್ಷೇತ್ರಗಳ 2,73,487 ಜನ ಮತದಾರರನ್ನು ಸಂದರ್ಶಿಸಿ  ನಡೆಸಿದ ಸರ್ವೆಯಲ್ಲಿ ಈ ಮೇಲಿನ ಅಂಶಗಳು ಹೊರಬಿದ್ದಿವೆ.

ಮತದಾರರ ಪ್ರಕಾರ ಅಭಿವೃದ್ದಿಯಲ್ಲಿ ಮುಂಚೂಣಿಯಲ್ಲಿರಬೇಕಾದ ಆದ್ಯತಾ ಕ್ಷೇತ್ರಗಳಾವುವು, ಅಂಥಾ ಆದ್ಯತೆಯ ಕ್ಷೇತ್ರಗಳಲ್ಲಿ ಸರ್ಕಾರದ ಸಾಧನೆ ತೃಪ್ತಿದಾಯಕವಾಗಿದೆಯೆ ಮತ್ತು ಈ ಕ್ಷೇತ್ರಗಳಲ್ಲಿಯ ಸಾಧನೆ ಮತದಾನದ ಮೇಲೆ ಬೀರುವ ಪರಿಣಾಮವನ್ನು ತಿಳಿಯುವುದು ಈ ಸರ್ವೆಯ ಉದ್ದೇಶವಾಗಿತ್ತು.

ಈ ಸರ್ವೆಯ ಸಮಯದಲ್ಲಿ ಪ್ರತಿಕ್ರಿಯಿಸಿದ ಮತದಾರರಲ್ಲಿ ಶೇ 46.80 ಮಂದಿ  ಉತ್ತಮ ಉದ್ಯೋಗ ಸೃಷ್ಟಿ ಅತಿ ಮುಖ್ಯ ಎಂದು ಪರಿಗಣಿಸಿದರೆ, ಶೇ 34.60 ಮಂದಿ ಉತ್ತಮ ಆರೋಗ್ಯ ಸೇವೆ ಮತ್ತು ಶೇ 30.50 ಮಂದಿ ಶುದ್ದ ಕುಡಿಯುವ ನೀರಿನ ಲಭ್ಯತೆ ಮುಖ್ಯವೆಂದು ಪರಿಗಣಿಸಿದ್ದಾರೆ.

ಒಟ್ಟಾರೆ ಈ ಮೇಲಿನ ಮೂರು ಸರ್ಕಾರದ ಅತ್ಯಂತ ಮುಖ್ಯ ಆದ್ಯತಾ ಕ್ಷೇತ್ರಗಳಾಗಿರಬೇಕೆಂಬುದು ಮತದಾರರ ಅಭಿಪ್ರಾಯವಾಗಿದೆ.

ಉಳಿದಂತೆ, ಶೇ 28.34 ಮಂದಿ ಉತ್ತಮ ರಸ್ತೆಗಳು, ಶೇ 27.35 ಮಂದಿ ಉತ್ತಮ ಸಾರ್ವಜನಿಕ ಸಾರಿಗೆ, ಶೇ 26.4  ಮಂದಿ ವ್ಯವಸಾಯಕ್ಕೆ ಉತ್ತಮ ನೀರಾವರಿ ಸೌಲಭ್ಯ, ಶೇ 25.62 ಮಂದಿ ಕೃಷಿ ಸಾಲದ ಸುಲಭ ಲಭ್ಯತೆ, ಶೇ 25.41 ಮಂದಿ ರೈತರಿಗೆ ಸರಿಯಾದ ಬೆಂಬಲ ಬೆಲೆ ಮತ್ತು ಶೇ 25.06 ಮಂದಿ ಬೀಜ ಹಾಗೂ ರಸಗೊಬ್ಬರಕ್ಕೆ ಸರಿಯಾದ ಸಬ್ಸಿಡಿ ಇವುಗಳು ತಮ್ಮ ಪ್ರಕಾರ ಆದ್ಯತೆಯ ಕ್ಷೇತ್ರಗಳೆಂದು ತಿಳಿಸಿದ್ದಾರೆ.

ಮೇಲಿನವುಗಳೂ ಸೇರಿದಂತೆ ಎಡಿಆರ್ ನವರು ಪಟ್ಟಿ ಮಾಡಿರುವ ಒಟ್ಟು ಮೂವತ್ತೊಂದು ಆದ್ಯತಾ ಕ್ಷೇತ್ರಗಳಲ್ಲಿ ಒಂದು ಕ್ಷೇತ್ರದಲ್ಲಿ ಕೂಡ ಕೇಂದ್ರ ಸರ್ಕಾರದ ಸಾಧನೆ ಸಮಾಧಾನಕರವಾಗಿಲ್ಲ ಎಂದು ಬಹುತೇಕ ಮತದಾರರ ಅಭಿಪ್ರಾಯವಾಗಿದೆ.

ಇದೇ ಸಂಸ್ಥೆಯು ಕಳೆದ ವರ್ಷ ನಡೆಸಿದ್ದ ಸರ್ವೆಯಲ್ಲಿ ಕೂಡ ಉತ್ತಮ ಉದ್ಯೋಗ ಸೃಷ್ಟಿ ಮತ್ತು ಉತ್ತಮ ಆರೋಗ್ಯ ಸೇವೆ ಪ್ರಮುಖ ಆದ್ಯತಾ ಕ್ಷೇತ್ರಗಳೆಂದು ಮತದಾರರು ಗುರುತಿಸಿದ್ದನ್ನು ಗಮನಿಸಬಹುದು.

ಈ ಸರ್ವೆಯು ಗಮನಿಸಿದ ಇನ್ನೊಂದು ಅಂಶವೆಂದರೆ, ಹಿಂದುಳಿದ ರಾಜ್ಯಗಳಾದ ಉತ್ತರಪ್ರದೇಶ, ಬಿಹಾರ, ಛತ್ತೀಸ್‍ಗಡ, ಜಾಖರ್ಂಡ್, ರಾಜಸ್ಥಾನ ಮತ್ತು ಮದ್ಯಪ್ರದೇಶಗಳ ಮತದಾರರು ಉತ್ತಮ ಉದ್ಯೋಗ ಸೃಷ್ಟಿ ಅತಿಮುಖ್ಯವೆಂದು ಪರಿಗಣಿಸಿದರೆ, ಒರಿಸ್ಸಾ, ಕರ್ನಾಟಕ ಮತ್ತು ದಮನ್ ಅಂಡ್ ದಿಯುವಿನ ಮತದಾರರು ಕುಡಿಯುವ ನೀರು ಅತ್ಯಂತ ಮುಖ್ಯವೆಂದು ಅಭಿಪ್ರಾಯ ಪಟ್ಟಿದ್ದಾರೆ.

ಒಟ್ಟಾರೆಯಾಗಿ, ಮೋದಿಯವರು ಹೇಳಿದ ಅಚ್ಚೇದಿನ್ ಬಂದಿಲ್ಲವೆಂಬ ಮತದಾರರ ಅಭಿಪ್ರಾಯ ಸ್ಪಷ್ಟವಾಗಿ ಗೋಚರಿಸುತ್ತಿದೆ. ಉದ್ಯೋಗ ಸೃಷ್ಟಿ ಮಾಡಿದ್ದೇನೆಂದು  ಬಗ್ಗೆ ಕೇಂದ್ರ ಸರ್ಕಾರ ಹತ್ತು ಹಲವು ಗೊಂದಲಮಯ ಹೇಳಿಕೆಗಳನ್ನು ನೀಡುತ್ತಿದ್ದರೂ ವಾಸ್ತವದಲ್ಲಿ ಮತದಾರ ಮಾತ್ರ ನಿರುದ್ಯೋಗ ಸಮಸ್ಯೆ ಅತ್ಯಂತ ಗಂಭೀರವಾಗಿರುವುದೆಂದೂ ಮತ್ತು ಅದು ಮತದಾನದ ಮೇಲೆ ಪರಿಣಾಮ ಬೀರುತ್ತದೆಂದೂ ಸ್ಪಷ್ಟ ಸಂದೇಶ ಕೊಡುತ್ತಿದ್ದಾನೆ.

ಬಹುಶಃ ಈ ಕಾರಣಕ್ಕಾಗಿಯೇ ಮೋದಿ ಮತ್ತು ಕೇಂದ್ರಸರ್ಕಾರ ಅಭಿವೃದ್ದಿ ಆಧಾರಿತ ವಿಷಯಗಳನ್ನು ಬದಿಗೆ ಸರಿಸಿ ಜನರ ಗಮನವನ್ನು ಪಾಕಿಸ್ತಾನ, ಉಗ್ರರ ದಾಳಿಯಂಥ ವಿಷಯಗಳಿಗೆ ಸೀಮಿತಗೊಳಿಸಿ ಚುನಾವಣೆ ನಡೆಸುವ ಪ್ರಯತ್ನದಲ್ಲಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...