Homeಕರ್ನಾಟಕಕಲಬುರಗಿ: 144 ಸೆಕ್ಷನ್‌ ಇದ್ದರೂ ಮೆರವಣಿಗೆ ನಡೆಸಿ ಗಲಭೆಗೆ ಪ್ರಚೋದಿಸಿದ ಕೇಂದ್ರ ಸಚಿವ ಮತ್ತು ಬಿಜೆಪಿ...

ಕಲಬುರಗಿ: 144 ಸೆಕ್ಷನ್‌ ಇದ್ದರೂ ಮೆರವಣಿಗೆ ನಡೆಸಿ ಗಲಭೆಗೆ ಪ್ರಚೋದಿಸಿದ ಕೇಂದ್ರ ಸಚಿವ ಮತ್ತು ಬಿಜೆಪಿ ಶಾಸಕರು!

ಪೊಲೀಸರು ದಾಖಲಿಸಿದ ಎಫ್‌ಐಆರ್‌ನಲ್ಲಿ 72 ಮುಸ್ಲಿಮರ ಹೆಸರುಗಳಿದ್ದು, ಇದುವರೆಗೂ ಯಾವುದೇ ಸಂಘಪರಿವಾರದ ಕಾರ್ಯಕರ್ತರು ಅಥವಾ ನಾಯಕರ ವಿರುದ್ಧ ಎಫ್‌ಐಆರ್‌ ದಾಖಲಾಗಿಲ್ಲ

- Advertisement -
- Advertisement -

ಸೆಕ್ಷನ್‌ 144 ಜಾರಿಯಲ್ಲಿದ್ದರೂ ಕೇಂದ್ರ ಸಚಿವರು, ಆಡಳಿತಾರೂಢ ಬಿಜೆಪಿ ಶಾಸಕರು ಹಾಗೂ ಶ್ರೀರಾಮಸೇನೆ ಸದಸ್ಯರು ಸೇರಿದಂತೆ ಅಪಾರ ಸಂಖ್ಯೆಯ ಸಂಘಪರಿವಾರದ ಬೆಂಬಲಿಗರು ಕಲಬುರಗಿ ಜಿಲ್ಲೆಯ ಅಳಂದದಲ್ಲಿ ಮಾರ್ಚ್ 1 ರಂದು ಜಮಾಯಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಈ ವೇಳೆ ಭುಗಿಲೆದ್ದ ಸಂಘರ್ಷದ ಹಿನ್ನೆಲೆಯಲ್ಲಿ ಪೊಲೀಸರು 72 ಮುಸ್ಲಿಮರ ವಿರುದ್ಧ ವಿವಿಧ ಕಲಂ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ. ಆದರೆ ಮೆರವಣಿಗೆಗೆ ನೇತೃತ್ವ ನೀಡಿದ ಬಿಜೆಪಿ ನಾಯಕರು ಅಥವಾ ಯಾವುದೆ ಸಂಘಪರಿವಾರದ ಕಾರ್ಯಕರ್ತರ ವಿರುದ್ದ ಪ್ರಕರಣ ದಾಖಲಾಗಿಲ್ಲ.

ಮೆರವಣಿಗೆಯ ನೇತೃತ್ವವನ್ನು ಒಕ್ಕೂಟ ಸರ್ಕಾರದ ಸಚಿವ ಭಗವಂತ್‌ ಖೂಬಾ, ಅಳಂದಾ ಶಾಸಕ ಸುಭಾಷ್‌ ಗುತ್ತೇದಾರ್‌, ಸೇಡಂ ಶಾಸಕ ರಾಜ್‌ಕುಮಾರ್‌ ಪಾಟಿಲ್, ಗುಲ್ಬರ್ಗಾ ಗ್ರಾಮಾಂತರ ಶಾಸಕ ಬಸವರಾಜ್ ಮಟ್ಟಿಮೋಡ್ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲಿಕಯ್ಯ ಗುತ್ತೇದಾರ್‌ ವಹಿಸಿದ್ದರು ಎಂದು ಸ್ಥಳೀಯ ಪತ್ರಕರ್ತರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ ಗಲಭೆ: ತಮ್ಮದ್ದಲ್ಲದ ತಪ್ಪಿಗೆ ಬಲಿಪಶುವಾದ ಮುಸ್ಲಿಮರ ನೋವಿನ ಕಥೆಯಿದು

ಘಟನೆಯ ವಿವರ

ಅಳಂದಾದಲ್ಲಿರುವ ಲಾಡಲ್ ಮಶಾಕ್ ದರ್ಗಾದಲ್ಲಿ ಮಾರ್ಚ್‌ 1 ರಂದು ಸಂದಲ್ ಮೆರವಣಿಗೆ ಮತ್ತು ಧಾರ್ಮಿಕ ಸಭೆಯನ್ನು ಆಯೋಜಿಸಲಾಗಿತ್ತು. ಆದರೆ ಅದೇ ದಿನಂದು ಶ್ರೀರಾಮಸೇನೆ ಮತ್ತು ಇರತ ಸಂಘಪರಿವಾರದ ಸಂಘಟನೆಗಳು ಮಹಾಶಿವರಾತ್ರಿಯ ಸಂದರ್ಭದಲ್ಲಿ ದರ್ಗಾ ಆವರಣದಲ್ಲೆ ಇರುವ ಶಿವಲಿಂಗಕ್ಕೆ ‘ಶುದ್ಧೀಕರಣ ಪೂಜೆ’ ಸಲ್ಲಿಸುವುದಾಗಿ ಘೋಷಿಸಿತ್ತು. ಹೀಗಾಗಿ ಅಳಂದಾದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು ಜಿಲ್ಲಾಧಿಕಾರಿ 144 ಸೆಕ್ಷನ್ ಜಾರಿಗೊಳಿಸಿದ್ದರು.

ಇದರ ಹೊರತಾಗಿಯೂ ಆಡಳಿತಾರೂಢ ಬಿಜೆಪಿ ಮತ್ತು ಶ್ರೀರಾಮಸೇನೆ ಸದಸ್ಯರು ಸೇರಿದಂತೆ ಅಪಾರ ಸಂಖ್ಯೆಯ ಸಂಘಪರಿವಾರ ಕಾರ್ಯಕರ್ತರು ಶಿವಲಿಂಗಕ್ಕೆ ಶುದ್ದೀಕರಣ ಪೂಜೆ ಮಾಡುವುದಾಗಿ ಮೆರವಣಿಗೆ ನಡೆಸಿ ದರ್ಗಾ ಆವರಣ ಪ್ರವೇಶಿಸುವಂತೆ ಒತ್ತಾಯಿಸಿದ್ದಾರೆ. ಈ ಮೆರವಣಿಗೆಯ ನೇತೃತ್ವವನ್ನು ಒಕ್ಕೂಟ ಸರ್ಕಾರದ ಸಚಿವ ಭಗವಂತ್‌ ಖೂಬಾ, ಅಳಂದಾ ಬಿಜೆಪಿ ಶಾಸಕ ಸುಭಾಷ್‌ ಗುತ್ತೇದಾರ್‌, ಸೇಡಂ ಬಿಜೆಪಿ ಶಾಸಕ ರಾಜ್‌ಕುಮಾರ್‌ ಪಾಟಿಲ್ ತೇಲ್ಕೂರ್, ಗುಲ್ಬರ್ಗಾ ಗ್ರಾಮಾಂತರ ಬಿಜೆಪಿ ಶಾಸಕ ಬಸವರಾಜ್ ಮಟ್ಟಿಮೋಡ್ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲಿಕಯ್ಯ ಗುತ್ತೇದಾರ್‌ ವಹಿಸಿದ್ದರು ಎಂದು ನಾನುಗೌರಿ.ಕಾಂಗೆ ಸ್ಥಳೀಯ ಪತ್ರಕರ್ತರು ತಿಳಿಸಿದ್ದಾರೆ.

ಈ ಮೆರವಣಿಗೆಯನ್ನು ನಿಭಾಯಿಸಲು ಸ್ಥಳೀಯ ಪೊಲೀಸರು ಮತ್ತು ಜಿಲ್ಲಾಡಳಿತ ಪರದಾಡಬೇಕಾಯಿತು ಎಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ.

144 ಸೆಕ್ಷನ್ ಜಾರಿಯಲ್ಲಿದ್ದರೂ, ಆಳಂದ ಶಾಸಕ ಸುಭಾಷ್ ಗುತ್ತೇದಾರ್ ನಿವಾಸದಿಂದ ಹೊರಟ ಸಂಘಪರಿವಾರದ ಕಾರ್ಯಕರ್ತರ ಮೆರವಣಿಗೆ ದರ್ಗಾದತ್ತ ಸಾಗಿದೆ. ಆದರೆ ಪೊಲೀಸರು ಈ ಮೆರವಣಿಗೆಯನ್ನು ಬಸ್ ನಿಲ್ದಾಣದ ಬಳಿ ತಡೆದು ನಿಷೇಧಾಜ್ಞೆ ಜಾರಿಯಲ್ಲಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಸೆಕ್ಷನ್ ಇರುವುದರಿಂದ ವಾಪಾಸು ಹೊರಟುಹೋಗುವಂತೆ ಪೊಲೀಸರು ಅವರಿಗೆ ಮನವಿ ಮಾಡಿದರೂ ಬಲಪಂಥೀಯ ಗುಂಪು ಜಗ್ಗಿರಲಿಲ್ಲ. ಕೊನೆಗೆ ಪೊಲೀಸರು ದರ್ಗಾ ಆವರಣದಲ್ಲಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಕೇವಲ 10 ಮಂದಿಗೆ ಮಾತ್ರ ಅವಕಾಶ ನೀಡಲು ಮುಂದಾಗಿದ್ದರು. ಆದರೆ, ಸಂಘಪರಿವಾರದ ಮುಖಂಡರು ಇದಕ್ಕೆ ಒಪ್ಪದೆ, ಇಡೀ ಗುಂಪನ್ನು ದರ್ಗಾ ಆವರಣದೊಳಗೆ ಬಿಡುವಂತೆ ಪಟ್ಟು ಹಿಡಿದು ಬಸ್ ನಿಲ್ದಾಣದ ಹೊರಗೆ ಧರಣಿ ಮಾಡಿದ್ದಾರೆ.

ಮತ್ತೊಂದೆಡೆ, ಹೆಚ್ಚಿನ ಸಂಖ್ಯೆಯ ಮುಸ್ಲಿಮರು ದರ್ಗಾದ ಬಳಿ ಜಮಾಯಿಸಿ, ಬ್ಯಾರಿಕೇಡ್‌ಗಳನ್ನು ಮುರಿಯಲು ಪ್ರಯತ್ನಿಸಿದರು ಎಂದು ದಿ ಹಿಂದೂ ವರದಿ ಮಾಡಿದೆ. ಇಷ್ಟೆ ಅಲ್ಲದೆ, ‘ನಿಷೇಧಾಜ್ಞೆಗಳನ್ನು ಮುಸ್ಲಿಮರಿಗೆ ಮಾತ್ರ ಯಾಕೆ ಅನ್ವಯ ಮಾಡಿದ್ದೀರಿ, ಬಲಪಂಥೀಯ ಕಾರ್ಯಕರ್ತರಿಗೆ ಅದು ಅನ್ವಯ ಆಗುವುದಿಲ್ಲವೆ’ ಎಂದು  ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. ಜೊತೆಗೆ ಸಂಘಪರಿವಾರ ಸಂಘಟನೆಗಳ 10 ಜನರಿಗೆ ದರ್ಗಾ ಆವರಣದಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡುವ ಅಧಿಕಾರಿಗಳ ನಿರ್ಧಾರವನ್ನು ಅವರು ವಿರೋಧಿಸಿದ್ದಾರೆ.

ಇದನ್ನೂ ಓದಿ:  ದೆಹಲಿ ಗಲಭೆ ಪ್ರಕರಣ: ಅಪರಾಧಿ ದಿನೇಶ್ ಯಾದವ್‌ಗೆ ಐದು ವರ್ಷ ಜೈಲು ಶಿಕ್ಷೆ

ಈ ವೇಳೆ ನಡೆದ ಸಂಘರ್ಷದಿಂದ ಕೆಲವು ಕಡೆ ಕಲ್ಲು ತೂರಾಟ ಹಾಗೂ ವಾಹನಗಳಿಗೆ ಹಾನಿಯಾದ ಘಟನೆಗಳು ವರದಿಯಾಗಿದ್ದು, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಸಹಾಯಕ ಆಯುಕ್ತರ ವಾಹನಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಅಂತಿಮವಾಗಿ ಪೊಲೀಸರು ಮತ್ತು ಜಿಲ್ಲಾಡಳಿತದ ನಿರಂತರ ಮನವೊಲಿಕೆಯಿಂದಾಗಿ ದರ್ಗಾವನ್ನು ಪ್ರವೇಶಿಸಿ ಪೂಜೆ ಮತ್ತು ಪ್ರಾರ್ಥನೆಗಳನ್ನು ಸಲ್ಲಿಸಲು ಉಭಯ ಕಡೆಯ ಒಟ್ಟು 20 ಸದಸ್ಯರಿಗೆ ಅವಕಾಶ ನೀಡಲಾಗಿ, ಸಂಜೆಯ ವೇಳೆಗೆ ಉದ್ವಿಗ್ನತೆ ತಣ್ಣಗಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಈ ನಡುವೆ ಮುನ್ನೆಚ್ಚರಿಕಾ ಕ್ರಮವಾಗಿ ಕಲಬುರಗಿ ಜಿಲ್ಲಾಧಿಕಾರಿ ಯಶವಂತ ಗುರುಕರ ಅವರು ಆಳಂದದಲ್ಲಿ ಫೆಬ್ರವರಿ 27 ರಿಂದ ಮಾರ್ಚ್ 3 ರವರೆಗೆ ಐದು ದಿನಗಳ ಕಾಲ ಸೆಕ್ಷನ್ 144 ಜಾರಿಗೊಳಿಸಿದ್ದರು. ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮತ್ತು ಸಂಘಪರಿವಾರದ ಕಾರ್ಯಕರ್ತೆ ಚೈತ್ರಾ ಕುಂದಾಪುರ ಜಿಲ್ಲಾ ಪ್ರವೇಶವನ್ನು ನಿರ್ಬಂಧಿಸಲಾಗಿದ್ದು, ಅವರನ್ನು ವಶಕ್ಕೆ ಪಡೆದು ವಾಪಾಸು ಕೂಡಾ ಕಳುಹಿಸಲಾಗಿತ್ತು.

ಈ ನಡುವೆ ಗಲಭೆಗೆ ಸಂಬಂಧಪಟ್ಟಂತೆ ದಾಖಲಾಗಿರುವ ಎಫ್‌ಐಆರ್‌ಗಳಲ್ಲಿ ಯಾವುದೇ ಸಂಘಪರಿವಾರದ ಸಂಘಟನೆಯ ಸದಸ್ಯರನ್ನು ಹೆಸರಿಸಲಾಗಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ಮತ್ತು ಅಳಂದ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್‌ ಮಂಜುನಾಥ್ ಎಸ್. ತಿಳಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಘಟನೆಗೆ ಸಂಬಂಧಿಸಿದಂತೆ ಒಟ್ಟು ನಾಲ್ಕು ಎಫ್‌ಐಆರ್‌ಗಳನ್ನು ಮುಸ್ಲಿಮರ ವಿರುದ್ದ ಪೊಲೀಸರು ದಾಖಲಿಸಿದ್ದು, 144 ಸೆಕ್ಷನ್‌‌ ಇದ್ದು ಕೂಡಾ ಮೆರವಣಿಗೆ ನಡೆಸಿ, ಗಲಭೆಗೆ ಪ್ರಚೋಧಿಸಿದ ಯಾವುದೆ ಬಿಜೆಪಿ ನಾಯಕರು ಮತ್ತು ಸಂಘಪರಿವಾರದ ಕಾರ್ಯಕರ್ತರನ್ನು ಇದರಲ್ಲಿ ಹೆಸರಿಸಲಾಗಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೂ 167 ಮಂದಿಯನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮುರುಡೇಶ್ವರದ ಶಿವನ ವಿಗ್ರಹ ವಿರೂಪ: ಚುನಾವಣೆಗಾಗಿ ಐಸಿಸ್ ಹೆಸರಲ್ಲಿ ಕೋಮು ಗಲಭೆಗೆ ಹುನ್ನಾರ? 

ಆದಾಗ್ಯೂ, ಆಳಂದ ತಹಶೀಲ್ದಾರ್ ಯಲ್ಲಪ್ಪ ಸುಬೇದಾರ್ ಅವರು, ಸೆಕ್ಷನ್ 188 ರ ಅಡಿಯಲ್ಲಿ ಮುಸ್ಲಿಂ ಸಮುದಾಯ ಮತ್ತು ಬಲಪಂಥೀಯ ಸಂಘಟನೆಗಳ ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರ್ಟ್‌ಗೆ ವರದಿಗಳನ್ನು ಸಲ್ಲಿಸಿರುವುದಾಗಿ ನಾನುಗೌರಿ.ಕಾಂಗೆ ಹೇಳಿದ್ದಾರೆ. “ಪ್ರತಿಭಟನೆ ಆಯೋಜಿಸಿರುವ ಪ್ರಮುಖ ವ್ಯಕ್ತಿಗಳ ಮೇಲೆ ದೂರು ನೀಡಿದ್ದೇನೆ. ನಾಲ್ಕೈದು ಹೆಸರು ಬರೆದು ‘ಇತರೆ’ ಎಂದು ನಮೂದಿಸಿ ದೂರು ನೀಡಿದ್ದೇನೆ” ಎಂದು ತಿಳಿಸಿದ ಅವರು, ಅವರ ಹೆಸರು ಹೇಳಲು ನಿರಾಕರಿಸಿದ್ದಾರೆ.

ಈ ವೇಳೆ ನಾನುಗೌರಿ.ಕಾಂ ಬಿಜೆಪಿಯ ಸಚಿವರ, ಶಾಸಕರು ಮತ್ತು ನಾಯಕರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು ಎಂದು ತಹಸಿಲ್ದಾರ್‌ ಅವರಿಗೆ ಸೂಚಿದಾಗ, “ಕಾರ್ಯಕ್ರಮ ಆಯೋಜಿಸಿದವರ ವಿರುದ್ಧ ದೂರು ನೀಡಿದ್ದೇವೆ. ಅದರಲ್ಲಿ ಭಾಗವಹಿಸಿರುವ ‘ಇವರುಗಳು’, ‘ಇತರೆ’ಯಲ್ಲಿ ಬರುತ್ತಾರೆ” ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು ಫೆಬ್ರವರಿ 28 ರಂದು ಪೊಲೀಸರು ‘ಅಪರಿಚಿತ ವ್ಯಕ್ತಿಗಳ’ ವಿರುದ್ಧ ಚೈತನ್ಯ ಶಿವಲಿಂಗವನ್ನು ಅಪವಿತ್ರ ಮಾಡಿದ್ದಕ್ಕೆ ಎಫ್‌ಐಆರ್ ದಾಖಲಿಸಿದ್ದರು.

ಇದೀಗ ಮತ್ತಷ್ಟು ಉದ್ವಿಗ್ನತೆಯನ್ನು ತಡೆಯಲು ಮತ್ತು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಆಳಂದದಲ್ಲಿ ಮಾರ್ಚ್ 5 ರವರೆಗೆ ಸೆಕ್ಷನ್ 144 ರ ಅಡಿಯಲ್ಲಿ ಹೊಸ ನಿಷೇಧಾಜ್ಞೆ ಆದೇಶಗಳನ್ನು ಹೊರಡಿಸಲಾಗಿದೆ. ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ವರದಿಯಾಗಿದೆ.

ಸ್ಥಳೀಯರೊಬ್ಬರು ಹೇಳುವಂತೆ “ಅಳಂದಾದಲ್ಲಿರುವ ಲಾಡಲ್ ಮಶಾಕ್ ದರ್ಗಾವು ಭಾವೈಕ್ಯತೆಯ ಕೇಂದ್ರವಾಗಿದೆ. ಒಂದೇ ಆವರಣದಲ್ಲಿ ಶಿವಲಿಂಗ ಮತ್ತು ದರ್ಗಾವಿದೆ. ನೂರಾರು ವರ್ಷಗಳಿಂದ ಹಿಂದೂ ಮುಸ್ಲಿಮರು ಇಲ್ಲಿ ತಮ್ಮ ಆಚರಣೆಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. ಆದರೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಜನರನ್ನು ಧ್ರುವೀಕರಣ ಮಾಡಲು ಬೇಕಾಗಿ ಈ ಅಹಿತಕರ ಘಟನೆಗಳನ್ನು ನಡೆಸಲಾಗುತ್ತಿದೆ”ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆ: ಸುಳ್ಳು ಸುದ್ದಿ ಬಿತ್ತರಿಸಿದ್ದ ಟೈಮ್ಸ್ ನೌ, ವಿಡಿಯೋ ಡಿಲೀಟ್ ಮಾಡಲು ಸೂಚನೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...