Homeಕರ್ನಾಟಕಎಡೂರಪ್ಪ ನಿಮ್ಮ ಕಷ್ಟ ನೋಡಕ್ಕಾಗದೆ ಲಿಕ್ಕರ್ ಅಂಗಡಿ ಬಾಗಲ ತಗಿಸ್ತ ಅತ್ತಗೆ...!!

ಎಡೂರಪ್ಪ ನಿಮ್ಮ ಕಷ್ಟ ನೋಡಕ್ಕಾಗದೆ ಲಿಕ್ಕರ್ ಅಂಗಡಿ ಬಾಗಲ ತಗಿಸ್ತ ಅತ್ತಗೆ…!!

ಬಿ.ಚಂದ್ರೇಗೌಡರ ಕಟ್ಟೆಪುರಾಣ

- Advertisement -
- Advertisement -

“ಕರೊನಾದಿಂದ ಏಟು ಜನ ಸತ್ರಲಾ ಉಗ್ರಿ” ಎಂದಳು ಜುಮ್ಮಿ.

“ವಾಟಿಸ್ಸೆ ಬಂದ ಅವುನ್ನೆ ಕೇಳು” ಎಂದ.

“ಲೆ ವಾಟಿಸ್ಸೆ ಏಟು ಜನ ಸತ್ರಲಾ.”

“ನೀನು ತಿಳಕಂಡಂಗೆ ಜನ ಸಾಯ್ತಯಿಲ್ಲ ಕಣ್ಣಕ್ಕ.”

“ಯಾಕ್ಲ.”

“ನಮ್ಮ ಜನಗಳ ಪರ‍್ರಂಗದೆ. ಕರೋನಾನೂ ಫೇಸ್ ಮಾಡ್ತ ಅವುರೆ, ಅಂತ ಯೇಡ್ಸನೆ ತಡಕಂಡ್ರು ಇದ್ಯಾವ ಲ್ಯಕ್ಕ.”

“ಏಡಿಸಿಗಿಂತ್ಲೂ ದ್ಲಡ್ಡ ಕಾಯಲವೆ ಇದು.”

“ಊ ಕಣ್ಣಕ್ಕ, ಏಡಸಾದೋನು ಸತ್ತೇ ಸಾಯ್ತನೆ. ಆದ್ರೆ ಕೊರೋನಾ ಬಂದೋರು ರಿಕವರಿ ಆಯ್ತ ಅವುರೆ ಇದಕೇನೇಳ್ತೀ.”

“ಮತ್ತೆ ಪಾರಿನ್ನಲ್ಲಿ ಭಾಳ ಜನ ಸತ್ರಂತೆ.”

“ಆ ನನ್‌ಮಕ್ಕಳು ಡೆಲಿಕೇಟು ಕಣಕ್ಕ. ಅದ್ಕೆ ಉದಿರೋದ್ರು.”

“ಡೇಲ್ಲಿಕೇಟು ಅಂದ್ರೇನ್ಲ.”

“ಡೆಲಿಕೇಟ್ ಅಂದ್ರೆ. ಯಾವಾಗ್ಲೂ ಕೈಯಿ ಬಾಯಿ ತ್ವಳಕಳದು ದಿನ ಸ್ನಾನ ಮಾಡದು. ಮೈನ್ಯಲ್ಲ ವರಿಸಿಗಳದು. ಸೆಂಟಾಕದು ಇಂತ ವಿಪರೀತ ಮಾಡಿ ಮೈಲಿಗೆ ಮಾಡಿದ್ರೆ ಮನುಸುನ ಬಾಡಿ ಡೆಲಿಕೇಟಾಯ್ತದೆ. ಅಂತಾ ನನ್‌ಮಕ್ಕಳು ಕಾಯ್ಲೆ ತಡಕಳ್ಳದಿಲ್ಲ.”

“ಅಂಗರೆ ಕಿಲೀನಾಗಿರಬಾರ್ದು ಅನ್ನು.”

“ಎಷ್ಟು ಬೇಕೊ ಅಷ್ಟಿರಬೇಕು.”

“ಊ ಯಾವ್ದು ಅತಿಯಾಗಬಾರ್ದು ಅಂತ ಅತಿ ಮಾಡಕ್ಕೋದ ಪಾರಿನ್ನರು ಕರೋನಾ ತಡಿಯಕ್ಕಾಗದೆ ಗ್ವಾತ ವಡಿತಾ ಅವುರೆ ಅದೇ ನಮ್ಮೊರು ನೋಡು ರಿಕವರಿ ಆಯ್ತಾ ಅವುರೆ.”

“ಯಣ್ಣೆ ಸಿಕ್ಕತೇನೊ ನಿನಗೆ” ಎಂದ ಉಗ್ರಿ.

“ಸಿಕ್ತು ಕಣೊ ಉಗ್ರಿ, ಆದ್ರೆ ಒಂದೂವರೆ ತಿಂಗಳು ಅದ ಮುಟ್ಟದಂಗಿದ್ದೆ ನೋಡು, ಅದ್ಕೊ ಏನೊ ವರಕು ಮಾಡಲಿಲ್ಲ ಅದು.”

“ಹಳೆ ಸ್ಟಾಕಿರಬೇಕೇನೊ.”

“ಹಳೆ ಸ್ಟಾಕೆ ಅಲವೆ ಕಿಕ್ ಕೊಡದು. ಎಲ್ಲೊ ಡೂಪ್ಲಿಕೇಟು ಅಂತ ಡವುಟು ಬತ್ತು.”

“ಅಂತೂ ಎಡೂರಪ್ಪ ನಿಮ್ಮ ಕಷ್ಟ ನೋಡಕ್ಕಾಗದೆ ಲಿಕ್ಕರ್ ಅಂಗಡಿ ಬಾಗಲ ತಗಿಸ್ತ ಅತ್ತಗೆ.”

“ಅವುನೆಲ್ಲಿ ತಗದ್ನೊ, ಮೋದಿ ತಗಿರಿ ಅತ್ತಗೆ ಅಂದ ಇವುನು ತಗದ ಅವುರಿಗೇನು ಸರಕಾರಕೆ ಆದಾಯ ಬತ್ತು.”

“ಮೋದಿ ಏನು ಮಾಡಿದುನ್ಲ ಕರೋನ ಕಾಯಿಲಕೆ.”

“ಅವುನು ರಾಮಾಯ್ಣ ದಾರವಾಯಿ ನೋಡ್ತ ಕುಂತವುನೆ.”

“ಅದ್ಯಾಕ್ಲ.”

“ಅಷ್ಟೆ ಅಲವೇನಕ್ಕ ಅವುನ ಕೈಲಾಗದು. ಅವುನೇನು ಕರೋನಾ ಡಾಗುಟ್ರೊ ಅಥವ ಮುಂದಾಲೋಚನೆಯಿರೊ ನಾಯಕನೋ ಇಲ್ಲ ಬುಡಬಗ್ಗರು ಸ್ಥಿತಿ ಗೊತ್ತಿರೊ ಮನುಸನೊ ಯಾವುದೂ ಅಲ್ಲ ಕಣಕ್ಕ ಅದ್ಕೆ ದೇಸವ ಅದರ ಪಾಡಿಗೆ ಬುಟ್ಟು ಅಗಾಗ್ಗೆ ಏನೇನೂ ಆಜ್ಞೆ ವರುಡುಸ್ತನೆ ಅವೂ ಅವನ ಸ್ವಂತ ತೀರಮಾನ ಅಲ್ಲ ಆರೆಸೆಸ್ ಮುಖಂಡ್ರು ಹೇಳಿದವು.”

“ನಮ್ಮ ಎಡೂರಪ್ಪನೆ ವಾಸಿ ಅಲವೇನೊ.”

“ಅದ್ಯಂಗೊ ಉಗ್ರಿ.”

“ಅವುನು ಉಗಾದಿ ಹಬ್ಬದ ಹಿಂದಿನ ದಿನ ಊರಿಗೋಗಿ ಬರೋರು ಬನ್ನಿ ಅಂದೆ ಇದ್ರೆ, ನಮ್ಮೂರರ‍್ಯಲ್ಲ ಬೆಂಗಳೂರಲೇ ಸಾಯಬೇಕಾಗಿತ್ತು.”

“ಅದೇನೊ ನಿಜಕಣೊ ಉಗ್ರಿ, ನೋಡು ಎಡೂರಪ್ಪಾಗ್ಲಿ ಮೋದಿ ಆಗ್ಲಿ ಕರೋನಾ ಸಮಸ್ಯೆಗೆ ಇವುರತ್ರ ಇರೊ ಸಲ್ಯೂಷನ್ ಏನದೆ ಗೊತ್ತೇನೊ.”

“ಅದಯಾವುದಪ್ಪ ಸಲೂಶನ್ನು.”

“ಮನೆಯಿಂದ ಯಾರು ವರಗೆ ಬರಬ್ಯಾಡಿ, ಬಾಯಿಗೆ ಬಟ್ಟೆ ಕಟಿಗಂಡಿರಿ, ದೂರ ನಿಂತಗಂಡು ಯವಾರ ಮಾಡಿ, ದೀಪಹಚ್ಚಿ ಜಾಗಟೆ ಬಾರಿಸಿ, ಅನ್ನದು ಬುಟ್ರೆ ಇನ್ನೆನುಯಿಲ್ಲ.”

“ಅಷ್ಟೆ ಅಂತಿಯಾ.”

“ಅಷ್ಟೆ ಅಂತಿಯಾ ಅಂತ ಕೇಳತಿಯಲ್ಲಾ ಈಗನುಭವುಸ್ತಯಿರದು ಅದೇ ಅಲವೇನೊ ನೀವಿಂಗಿರಿ ನಾವಿಂಗೆ ಮಾಡ್ತಿವಿ ದವಸ ಧಾನ್ಯ ಕೊಡ್ತೀವಿ ಸಾರಿಗೆ ಯವಸ್ಥೆ ಮಾಡ್ತಿವಿ ಊರಿಗೋಗಿ ಹೆದರಬ್ಯಾಡಿ ಅನ್ನೊ ಮಾತು ಅವುರ ಬಾಯಿಲಿ ಬರಲಿಲ್ಲಲ್ವೊ.”

“ಅದ್ಕೆ ಏನೊ ಕಂಡ್ಳ ಸೋನಿಯಗಾಂಧಿ ಊರಿಗೋಗೊ ಜನಕ್ಯಲ್ಲ ಗಾಡಿ ಚಾರ್ಜು ಕೊಡ್ತಿನಿ ಅಂದವುಳೆ.”

“ಆಗ್ಲೆ ಕಣಕ್ಕ ಬಿಜೆಪಿಗಳ ಬಾಯಿಗೆ ಬೀಗ ಬಿದ್ದಿದ್ದು. ಇವುಕೆ ಮಾನ ಮರಿಯಾದಿ ಇದ್ರೆ ಆ ಹೆಣ್ಣೆಂಗಸು ಹತ್ತುವರಸ ದೇಸ ಯಂಗೆ ಮಡಗಿದ್ಲು ಅಂತ ತಿಳಕಬೇಕು ಕಣಕ್ಕ ಆಗ್ಲಾರ ದೇಸ ಯಂಗಾಳಬೇಕು ಅನ್ನದು ವಳಿತದೆ.”

“ನಿಜ ಕಂಡ್ಳ ನೀನೇಳಿದ್ದು.”


ಇದನ್ನೂ ಓದಿ: ಹಿಂಗಾಡಿದ್ರೆ ಸಾಬರ ಕತೆ ಮುಗಿತು ಬುಡು: ಚಂದ್ರೇಗೌಡರ ಕಟ್ಟೆಪುರಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...