Homeಕರ್ನಾಟಕಎಡೂರಪ್ಪ ನಿಮ್ಮ ಕಷ್ಟ ನೋಡಕ್ಕಾಗದೆ ಲಿಕ್ಕರ್ ಅಂಗಡಿ ಬಾಗಲ ತಗಿಸ್ತ ಅತ್ತಗೆ...!!

ಎಡೂರಪ್ಪ ನಿಮ್ಮ ಕಷ್ಟ ನೋಡಕ್ಕಾಗದೆ ಲಿಕ್ಕರ್ ಅಂಗಡಿ ಬಾಗಲ ತಗಿಸ್ತ ಅತ್ತಗೆ…!!

ಬಿ.ಚಂದ್ರೇಗೌಡರ ಕಟ್ಟೆಪುರಾಣ

- Advertisement -
- Advertisement -

“ಕರೊನಾದಿಂದ ಏಟು ಜನ ಸತ್ರಲಾ ಉಗ್ರಿ” ಎಂದಳು ಜುಮ್ಮಿ.

“ವಾಟಿಸ್ಸೆ ಬಂದ ಅವುನ್ನೆ ಕೇಳು” ಎಂದ.

“ಲೆ ವಾಟಿಸ್ಸೆ ಏಟು ಜನ ಸತ್ರಲಾ.”

“ನೀನು ತಿಳಕಂಡಂಗೆ ಜನ ಸಾಯ್ತಯಿಲ್ಲ ಕಣ್ಣಕ್ಕ.”

“ಯಾಕ್ಲ.”

“ನಮ್ಮ ಜನಗಳ ಪರ‍್ರಂಗದೆ. ಕರೋನಾನೂ ಫೇಸ್ ಮಾಡ್ತ ಅವುರೆ, ಅಂತ ಯೇಡ್ಸನೆ ತಡಕಂಡ್ರು ಇದ್ಯಾವ ಲ್ಯಕ್ಕ.”

“ಏಡಿಸಿಗಿಂತ್ಲೂ ದ್ಲಡ್ಡ ಕಾಯಲವೆ ಇದು.”

“ಊ ಕಣ್ಣಕ್ಕ, ಏಡಸಾದೋನು ಸತ್ತೇ ಸಾಯ್ತನೆ. ಆದ್ರೆ ಕೊರೋನಾ ಬಂದೋರು ರಿಕವರಿ ಆಯ್ತ ಅವುರೆ ಇದಕೇನೇಳ್ತೀ.”

“ಮತ್ತೆ ಪಾರಿನ್ನಲ್ಲಿ ಭಾಳ ಜನ ಸತ್ರಂತೆ.”

“ಆ ನನ್‌ಮಕ್ಕಳು ಡೆಲಿಕೇಟು ಕಣಕ್ಕ. ಅದ್ಕೆ ಉದಿರೋದ್ರು.”

“ಡೇಲ್ಲಿಕೇಟು ಅಂದ್ರೇನ್ಲ.”

“ಡೆಲಿಕೇಟ್ ಅಂದ್ರೆ. ಯಾವಾಗ್ಲೂ ಕೈಯಿ ಬಾಯಿ ತ್ವಳಕಳದು ದಿನ ಸ್ನಾನ ಮಾಡದು. ಮೈನ್ಯಲ್ಲ ವರಿಸಿಗಳದು. ಸೆಂಟಾಕದು ಇಂತ ವಿಪರೀತ ಮಾಡಿ ಮೈಲಿಗೆ ಮಾಡಿದ್ರೆ ಮನುಸುನ ಬಾಡಿ ಡೆಲಿಕೇಟಾಯ್ತದೆ. ಅಂತಾ ನನ್‌ಮಕ್ಕಳು ಕಾಯ್ಲೆ ತಡಕಳ್ಳದಿಲ್ಲ.”

“ಅಂಗರೆ ಕಿಲೀನಾಗಿರಬಾರ್ದು ಅನ್ನು.”

“ಎಷ್ಟು ಬೇಕೊ ಅಷ್ಟಿರಬೇಕು.”

“ಊ ಯಾವ್ದು ಅತಿಯಾಗಬಾರ್ದು ಅಂತ ಅತಿ ಮಾಡಕ್ಕೋದ ಪಾರಿನ್ನರು ಕರೋನಾ ತಡಿಯಕ್ಕಾಗದೆ ಗ್ವಾತ ವಡಿತಾ ಅವುರೆ ಅದೇ ನಮ್ಮೊರು ನೋಡು ರಿಕವರಿ ಆಯ್ತಾ ಅವುರೆ.”

“ಯಣ್ಣೆ ಸಿಕ್ಕತೇನೊ ನಿನಗೆ” ಎಂದ ಉಗ್ರಿ.

“ಸಿಕ್ತು ಕಣೊ ಉಗ್ರಿ, ಆದ್ರೆ ಒಂದೂವರೆ ತಿಂಗಳು ಅದ ಮುಟ್ಟದಂಗಿದ್ದೆ ನೋಡು, ಅದ್ಕೊ ಏನೊ ವರಕು ಮಾಡಲಿಲ್ಲ ಅದು.”

“ಹಳೆ ಸ್ಟಾಕಿರಬೇಕೇನೊ.”

“ಹಳೆ ಸ್ಟಾಕೆ ಅಲವೆ ಕಿಕ್ ಕೊಡದು. ಎಲ್ಲೊ ಡೂಪ್ಲಿಕೇಟು ಅಂತ ಡವುಟು ಬತ್ತು.”

“ಅಂತೂ ಎಡೂರಪ್ಪ ನಿಮ್ಮ ಕಷ್ಟ ನೋಡಕ್ಕಾಗದೆ ಲಿಕ್ಕರ್ ಅಂಗಡಿ ಬಾಗಲ ತಗಿಸ್ತ ಅತ್ತಗೆ.”

“ಅವುನೆಲ್ಲಿ ತಗದ್ನೊ, ಮೋದಿ ತಗಿರಿ ಅತ್ತಗೆ ಅಂದ ಇವುನು ತಗದ ಅವುರಿಗೇನು ಸರಕಾರಕೆ ಆದಾಯ ಬತ್ತು.”

“ಮೋದಿ ಏನು ಮಾಡಿದುನ್ಲ ಕರೋನ ಕಾಯಿಲಕೆ.”

“ಅವುನು ರಾಮಾಯ್ಣ ದಾರವಾಯಿ ನೋಡ್ತ ಕುಂತವುನೆ.”

“ಅದ್ಯಾಕ್ಲ.”

“ಅಷ್ಟೆ ಅಲವೇನಕ್ಕ ಅವುನ ಕೈಲಾಗದು. ಅವುನೇನು ಕರೋನಾ ಡಾಗುಟ್ರೊ ಅಥವ ಮುಂದಾಲೋಚನೆಯಿರೊ ನಾಯಕನೋ ಇಲ್ಲ ಬುಡಬಗ್ಗರು ಸ್ಥಿತಿ ಗೊತ್ತಿರೊ ಮನುಸನೊ ಯಾವುದೂ ಅಲ್ಲ ಕಣಕ್ಕ ಅದ್ಕೆ ದೇಸವ ಅದರ ಪಾಡಿಗೆ ಬುಟ್ಟು ಅಗಾಗ್ಗೆ ಏನೇನೂ ಆಜ್ಞೆ ವರುಡುಸ್ತನೆ ಅವೂ ಅವನ ಸ್ವಂತ ತೀರಮಾನ ಅಲ್ಲ ಆರೆಸೆಸ್ ಮುಖಂಡ್ರು ಹೇಳಿದವು.”

“ನಮ್ಮ ಎಡೂರಪ್ಪನೆ ವಾಸಿ ಅಲವೇನೊ.”

“ಅದ್ಯಂಗೊ ಉಗ್ರಿ.”

“ಅವುನು ಉಗಾದಿ ಹಬ್ಬದ ಹಿಂದಿನ ದಿನ ಊರಿಗೋಗಿ ಬರೋರು ಬನ್ನಿ ಅಂದೆ ಇದ್ರೆ, ನಮ್ಮೂರರ‍್ಯಲ್ಲ ಬೆಂಗಳೂರಲೇ ಸಾಯಬೇಕಾಗಿತ್ತು.”

“ಅದೇನೊ ನಿಜಕಣೊ ಉಗ್ರಿ, ನೋಡು ಎಡೂರಪ್ಪಾಗ್ಲಿ ಮೋದಿ ಆಗ್ಲಿ ಕರೋನಾ ಸಮಸ್ಯೆಗೆ ಇವುರತ್ರ ಇರೊ ಸಲ್ಯೂಷನ್ ಏನದೆ ಗೊತ್ತೇನೊ.”

“ಅದಯಾವುದಪ್ಪ ಸಲೂಶನ್ನು.”

“ಮನೆಯಿಂದ ಯಾರು ವರಗೆ ಬರಬ್ಯಾಡಿ, ಬಾಯಿಗೆ ಬಟ್ಟೆ ಕಟಿಗಂಡಿರಿ, ದೂರ ನಿಂತಗಂಡು ಯವಾರ ಮಾಡಿ, ದೀಪಹಚ್ಚಿ ಜಾಗಟೆ ಬಾರಿಸಿ, ಅನ್ನದು ಬುಟ್ರೆ ಇನ್ನೆನುಯಿಲ್ಲ.”

“ಅಷ್ಟೆ ಅಂತಿಯಾ.”

“ಅಷ್ಟೆ ಅಂತಿಯಾ ಅಂತ ಕೇಳತಿಯಲ್ಲಾ ಈಗನುಭವುಸ್ತಯಿರದು ಅದೇ ಅಲವೇನೊ ನೀವಿಂಗಿರಿ ನಾವಿಂಗೆ ಮಾಡ್ತಿವಿ ದವಸ ಧಾನ್ಯ ಕೊಡ್ತೀವಿ ಸಾರಿಗೆ ಯವಸ್ಥೆ ಮಾಡ್ತಿವಿ ಊರಿಗೋಗಿ ಹೆದರಬ್ಯಾಡಿ ಅನ್ನೊ ಮಾತು ಅವುರ ಬಾಯಿಲಿ ಬರಲಿಲ್ಲಲ್ವೊ.”

“ಅದ್ಕೆ ಏನೊ ಕಂಡ್ಳ ಸೋನಿಯಗಾಂಧಿ ಊರಿಗೋಗೊ ಜನಕ್ಯಲ್ಲ ಗಾಡಿ ಚಾರ್ಜು ಕೊಡ್ತಿನಿ ಅಂದವುಳೆ.”

“ಆಗ್ಲೆ ಕಣಕ್ಕ ಬಿಜೆಪಿಗಳ ಬಾಯಿಗೆ ಬೀಗ ಬಿದ್ದಿದ್ದು. ಇವುಕೆ ಮಾನ ಮರಿಯಾದಿ ಇದ್ರೆ ಆ ಹೆಣ್ಣೆಂಗಸು ಹತ್ತುವರಸ ದೇಸ ಯಂಗೆ ಮಡಗಿದ್ಲು ಅಂತ ತಿಳಕಬೇಕು ಕಣಕ್ಕ ಆಗ್ಲಾರ ದೇಸ ಯಂಗಾಳಬೇಕು ಅನ್ನದು ವಳಿತದೆ.”

“ನಿಜ ಕಂಡ್ಳ ನೀನೇಳಿದ್ದು.”


ಇದನ್ನೂ ಓದಿ: ಹಿಂಗಾಡಿದ್ರೆ ಸಾಬರ ಕತೆ ಮುಗಿತು ಬುಡು: ಚಂದ್ರೇಗೌಡರ ಕಟ್ಟೆಪುರಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...