Homeಕರ್ನಾಟಕಎಡೂರಪ್ಪ ನಿಮ್ಮ ಕಷ್ಟ ನೋಡಕ್ಕಾಗದೆ ಲಿಕ್ಕರ್ ಅಂಗಡಿ ಬಾಗಲ ತಗಿಸ್ತ ಅತ್ತಗೆ...!!

ಎಡೂರಪ್ಪ ನಿಮ್ಮ ಕಷ್ಟ ನೋಡಕ್ಕಾಗದೆ ಲಿಕ್ಕರ್ ಅಂಗಡಿ ಬಾಗಲ ತಗಿಸ್ತ ಅತ್ತಗೆ…!!

ಬಿ.ಚಂದ್ರೇಗೌಡರ ಕಟ್ಟೆಪುರಾಣ

- Advertisement -
- Advertisement -

“ಕರೊನಾದಿಂದ ಏಟು ಜನ ಸತ್ರಲಾ ಉಗ್ರಿ” ಎಂದಳು ಜುಮ್ಮಿ.

“ವಾಟಿಸ್ಸೆ ಬಂದ ಅವುನ್ನೆ ಕೇಳು” ಎಂದ.

“ಲೆ ವಾಟಿಸ್ಸೆ ಏಟು ಜನ ಸತ್ರಲಾ.”

“ನೀನು ತಿಳಕಂಡಂಗೆ ಜನ ಸಾಯ್ತಯಿಲ್ಲ ಕಣ್ಣಕ್ಕ.”

“ಯಾಕ್ಲ.”

“ನಮ್ಮ ಜನಗಳ ಪರ‍್ರಂಗದೆ. ಕರೋನಾನೂ ಫೇಸ್ ಮಾಡ್ತ ಅವುರೆ, ಅಂತ ಯೇಡ್ಸನೆ ತಡಕಂಡ್ರು ಇದ್ಯಾವ ಲ್ಯಕ್ಕ.”

“ಏಡಿಸಿಗಿಂತ್ಲೂ ದ್ಲಡ್ಡ ಕಾಯಲವೆ ಇದು.”

“ಊ ಕಣ್ಣಕ್ಕ, ಏಡಸಾದೋನು ಸತ್ತೇ ಸಾಯ್ತನೆ. ಆದ್ರೆ ಕೊರೋನಾ ಬಂದೋರು ರಿಕವರಿ ಆಯ್ತ ಅವುರೆ ಇದಕೇನೇಳ್ತೀ.”

“ಮತ್ತೆ ಪಾರಿನ್ನಲ್ಲಿ ಭಾಳ ಜನ ಸತ್ರಂತೆ.”

“ಆ ನನ್‌ಮಕ್ಕಳು ಡೆಲಿಕೇಟು ಕಣಕ್ಕ. ಅದ್ಕೆ ಉದಿರೋದ್ರು.”

“ಡೇಲ್ಲಿಕೇಟು ಅಂದ್ರೇನ್ಲ.”

“ಡೆಲಿಕೇಟ್ ಅಂದ್ರೆ. ಯಾವಾಗ್ಲೂ ಕೈಯಿ ಬಾಯಿ ತ್ವಳಕಳದು ದಿನ ಸ್ನಾನ ಮಾಡದು. ಮೈನ್ಯಲ್ಲ ವರಿಸಿಗಳದು. ಸೆಂಟಾಕದು ಇಂತ ವಿಪರೀತ ಮಾಡಿ ಮೈಲಿಗೆ ಮಾಡಿದ್ರೆ ಮನುಸುನ ಬಾಡಿ ಡೆಲಿಕೇಟಾಯ್ತದೆ. ಅಂತಾ ನನ್‌ಮಕ್ಕಳು ಕಾಯ್ಲೆ ತಡಕಳ್ಳದಿಲ್ಲ.”

“ಅಂಗರೆ ಕಿಲೀನಾಗಿರಬಾರ್ದು ಅನ್ನು.”

“ಎಷ್ಟು ಬೇಕೊ ಅಷ್ಟಿರಬೇಕು.”

“ಊ ಯಾವ್ದು ಅತಿಯಾಗಬಾರ್ದು ಅಂತ ಅತಿ ಮಾಡಕ್ಕೋದ ಪಾರಿನ್ನರು ಕರೋನಾ ತಡಿಯಕ್ಕಾಗದೆ ಗ್ವಾತ ವಡಿತಾ ಅವುರೆ ಅದೇ ನಮ್ಮೊರು ನೋಡು ರಿಕವರಿ ಆಯ್ತಾ ಅವುರೆ.”

“ಯಣ್ಣೆ ಸಿಕ್ಕತೇನೊ ನಿನಗೆ” ಎಂದ ಉಗ್ರಿ.

“ಸಿಕ್ತು ಕಣೊ ಉಗ್ರಿ, ಆದ್ರೆ ಒಂದೂವರೆ ತಿಂಗಳು ಅದ ಮುಟ್ಟದಂಗಿದ್ದೆ ನೋಡು, ಅದ್ಕೊ ಏನೊ ವರಕು ಮಾಡಲಿಲ್ಲ ಅದು.”

“ಹಳೆ ಸ್ಟಾಕಿರಬೇಕೇನೊ.”

“ಹಳೆ ಸ್ಟಾಕೆ ಅಲವೆ ಕಿಕ್ ಕೊಡದು. ಎಲ್ಲೊ ಡೂಪ್ಲಿಕೇಟು ಅಂತ ಡವುಟು ಬತ್ತು.”

“ಅಂತೂ ಎಡೂರಪ್ಪ ನಿಮ್ಮ ಕಷ್ಟ ನೋಡಕ್ಕಾಗದೆ ಲಿಕ್ಕರ್ ಅಂಗಡಿ ಬಾಗಲ ತಗಿಸ್ತ ಅತ್ತಗೆ.”

“ಅವುನೆಲ್ಲಿ ತಗದ್ನೊ, ಮೋದಿ ತಗಿರಿ ಅತ್ತಗೆ ಅಂದ ಇವುನು ತಗದ ಅವುರಿಗೇನು ಸರಕಾರಕೆ ಆದಾಯ ಬತ್ತು.”

“ಮೋದಿ ಏನು ಮಾಡಿದುನ್ಲ ಕರೋನ ಕಾಯಿಲಕೆ.”

“ಅವುನು ರಾಮಾಯ್ಣ ದಾರವಾಯಿ ನೋಡ್ತ ಕುಂತವುನೆ.”

“ಅದ್ಯಾಕ್ಲ.”

“ಅಷ್ಟೆ ಅಲವೇನಕ್ಕ ಅವುನ ಕೈಲಾಗದು. ಅವುನೇನು ಕರೋನಾ ಡಾಗುಟ್ರೊ ಅಥವ ಮುಂದಾಲೋಚನೆಯಿರೊ ನಾಯಕನೋ ಇಲ್ಲ ಬುಡಬಗ್ಗರು ಸ್ಥಿತಿ ಗೊತ್ತಿರೊ ಮನುಸನೊ ಯಾವುದೂ ಅಲ್ಲ ಕಣಕ್ಕ ಅದ್ಕೆ ದೇಸವ ಅದರ ಪಾಡಿಗೆ ಬುಟ್ಟು ಅಗಾಗ್ಗೆ ಏನೇನೂ ಆಜ್ಞೆ ವರುಡುಸ್ತನೆ ಅವೂ ಅವನ ಸ್ವಂತ ತೀರಮಾನ ಅಲ್ಲ ಆರೆಸೆಸ್ ಮುಖಂಡ್ರು ಹೇಳಿದವು.”

“ನಮ್ಮ ಎಡೂರಪ್ಪನೆ ವಾಸಿ ಅಲವೇನೊ.”

“ಅದ್ಯಂಗೊ ಉಗ್ರಿ.”

“ಅವುನು ಉಗಾದಿ ಹಬ್ಬದ ಹಿಂದಿನ ದಿನ ಊರಿಗೋಗಿ ಬರೋರು ಬನ್ನಿ ಅಂದೆ ಇದ್ರೆ, ನಮ್ಮೂರರ‍್ಯಲ್ಲ ಬೆಂಗಳೂರಲೇ ಸಾಯಬೇಕಾಗಿತ್ತು.”

“ಅದೇನೊ ನಿಜಕಣೊ ಉಗ್ರಿ, ನೋಡು ಎಡೂರಪ್ಪಾಗ್ಲಿ ಮೋದಿ ಆಗ್ಲಿ ಕರೋನಾ ಸಮಸ್ಯೆಗೆ ಇವುರತ್ರ ಇರೊ ಸಲ್ಯೂಷನ್ ಏನದೆ ಗೊತ್ತೇನೊ.”

“ಅದಯಾವುದಪ್ಪ ಸಲೂಶನ್ನು.”

“ಮನೆಯಿಂದ ಯಾರು ವರಗೆ ಬರಬ್ಯಾಡಿ, ಬಾಯಿಗೆ ಬಟ್ಟೆ ಕಟಿಗಂಡಿರಿ, ದೂರ ನಿಂತಗಂಡು ಯವಾರ ಮಾಡಿ, ದೀಪಹಚ್ಚಿ ಜಾಗಟೆ ಬಾರಿಸಿ, ಅನ್ನದು ಬುಟ್ರೆ ಇನ್ನೆನುಯಿಲ್ಲ.”

“ಅಷ್ಟೆ ಅಂತಿಯಾ.”

“ಅಷ್ಟೆ ಅಂತಿಯಾ ಅಂತ ಕೇಳತಿಯಲ್ಲಾ ಈಗನುಭವುಸ್ತಯಿರದು ಅದೇ ಅಲವೇನೊ ನೀವಿಂಗಿರಿ ನಾವಿಂಗೆ ಮಾಡ್ತಿವಿ ದವಸ ಧಾನ್ಯ ಕೊಡ್ತೀವಿ ಸಾರಿಗೆ ಯವಸ್ಥೆ ಮಾಡ್ತಿವಿ ಊರಿಗೋಗಿ ಹೆದರಬ್ಯಾಡಿ ಅನ್ನೊ ಮಾತು ಅವುರ ಬಾಯಿಲಿ ಬರಲಿಲ್ಲಲ್ವೊ.”

“ಅದ್ಕೆ ಏನೊ ಕಂಡ್ಳ ಸೋನಿಯಗಾಂಧಿ ಊರಿಗೋಗೊ ಜನಕ್ಯಲ್ಲ ಗಾಡಿ ಚಾರ್ಜು ಕೊಡ್ತಿನಿ ಅಂದವುಳೆ.”

“ಆಗ್ಲೆ ಕಣಕ್ಕ ಬಿಜೆಪಿಗಳ ಬಾಯಿಗೆ ಬೀಗ ಬಿದ್ದಿದ್ದು. ಇವುಕೆ ಮಾನ ಮರಿಯಾದಿ ಇದ್ರೆ ಆ ಹೆಣ್ಣೆಂಗಸು ಹತ್ತುವರಸ ದೇಸ ಯಂಗೆ ಮಡಗಿದ್ಲು ಅಂತ ತಿಳಕಬೇಕು ಕಣಕ್ಕ ಆಗ್ಲಾರ ದೇಸ ಯಂಗಾಳಬೇಕು ಅನ್ನದು ವಳಿತದೆ.”

“ನಿಜ ಕಂಡ್ಳ ನೀನೇಳಿದ್ದು.”


ಇದನ್ನೂ ಓದಿ: ಹಿಂಗಾಡಿದ್ರೆ ಸಾಬರ ಕತೆ ಮುಗಿತು ಬುಡು: ಚಂದ್ರೇಗೌಡರ ಕಟ್ಟೆಪುರಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...