Homeಕರ್ನಾಟಕಎಡೂರಪ್ಪ ನಿಮ್ಮ ಕಷ್ಟ ನೋಡಕ್ಕಾಗದೆ ಲಿಕ್ಕರ್ ಅಂಗಡಿ ಬಾಗಲ ತಗಿಸ್ತ ಅತ್ತಗೆ...!!

ಎಡೂರಪ್ಪ ನಿಮ್ಮ ಕಷ್ಟ ನೋಡಕ್ಕಾಗದೆ ಲಿಕ್ಕರ್ ಅಂಗಡಿ ಬಾಗಲ ತಗಿಸ್ತ ಅತ್ತಗೆ…!!

ಬಿ.ಚಂದ್ರೇಗೌಡರ ಕಟ್ಟೆಪುರಾಣ

- Advertisement -
- Advertisement -

“ಕರೊನಾದಿಂದ ಏಟು ಜನ ಸತ್ರಲಾ ಉಗ್ರಿ” ಎಂದಳು ಜುಮ್ಮಿ.

“ವಾಟಿಸ್ಸೆ ಬಂದ ಅವುನ್ನೆ ಕೇಳು” ಎಂದ.

“ಲೆ ವಾಟಿಸ್ಸೆ ಏಟು ಜನ ಸತ್ರಲಾ.”

“ನೀನು ತಿಳಕಂಡಂಗೆ ಜನ ಸಾಯ್ತಯಿಲ್ಲ ಕಣ್ಣಕ್ಕ.”

“ಯಾಕ್ಲ.”

“ನಮ್ಮ ಜನಗಳ ಪರ‍್ರಂಗದೆ. ಕರೋನಾನೂ ಫೇಸ್ ಮಾಡ್ತ ಅವುರೆ, ಅಂತ ಯೇಡ್ಸನೆ ತಡಕಂಡ್ರು ಇದ್ಯಾವ ಲ್ಯಕ್ಕ.”

“ಏಡಿಸಿಗಿಂತ್ಲೂ ದ್ಲಡ್ಡ ಕಾಯಲವೆ ಇದು.”

“ಊ ಕಣ್ಣಕ್ಕ, ಏಡಸಾದೋನು ಸತ್ತೇ ಸಾಯ್ತನೆ. ಆದ್ರೆ ಕೊರೋನಾ ಬಂದೋರು ರಿಕವರಿ ಆಯ್ತ ಅವುರೆ ಇದಕೇನೇಳ್ತೀ.”

“ಮತ್ತೆ ಪಾರಿನ್ನಲ್ಲಿ ಭಾಳ ಜನ ಸತ್ರಂತೆ.”

“ಆ ನನ್‌ಮಕ್ಕಳು ಡೆಲಿಕೇಟು ಕಣಕ್ಕ. ಅದ್ಕೆ ಉದಿರೋದ್ರು.”

“ಡೇಲ್ಲಿಕೇಟು ಅಂದ್ರೇನ್ಲ.”

“ಡೆಲಿಕೇಟ್ ಅಂದ್ರೆ. ಯಾವಾಗ್ಲೂ ಕೈಯಿ ಬಾಯಿ ತ್ವಳಕಳದು ದಿನ ಸ್ನಾನ ಮಾಡದು. ಮೈನ್ಯಲ್ಲ ವರಿಸಿಗಳದು. ಸೆಂಟಾಕದು ಇಂತ ವಿಪರೀತ ಮಾಡಿ ಮೈಲಿಗೆ ಮಾಡಿದ್ರೆ ಮನುಸುನ ಬಾಡಿ ಡೆಲಿಕೇಟಾಯ್ತದೆ. ಅಂತಾ ನನ್‌ಮಕ್ಕಳು ಕಾಯ್ಲೆ ತಡಕಳ್ಳದಿಲ್ಲ.”

“ಅಂಗರೆ ಕಿಲೀನಾಗಿರಬಾರ್ದು ಅನ್ನು.”

“ಎಷ್ಟು ಬೇಕೊ ಅಷ್ಟಿರಬೇಕು.”

“ಊ ಯಾವ್ದು ಅತಿಯಾಗಬಾರ್ದು ಅಂತ ಅತಿ ಮಾಡಕ್ಕೋದ ಪಾರಿನ್ನರು ಕರೋನಾ ತಡಿಯಕ್ಕಾಗದೆ ಗ್ವಾತ ವಡಿತಾ ಅವುರೆ ಅದೇ ನಮ್ಮೊರು ನೋಡು ರಿಕವರಿ ಆಯ್ತಾ ಅವುರೆ.”

“ಯಣ್ಣೆ ಸಿಕ್ಕತೇನೊ ನಿನಗೆ” ಎಂದ ಉಗ್ರಿ.

“ಸಿಕ್ತು ಕಣೊ ಉಗ್ರಿ, ಆದ್ರೆ ಒಂದೂವರೆ ತಿಂಗಳು ಅದ ಮುಟ್ಟದಂಗಿದ್ದೆ ನೋಡು, ಅದ್ಕೊ ಏನೊ ವರಕು ಮಾಡಲಿಲ್ಲ ಅದು.”

“ಹಳೆ ಸ್ಟಾಕಿರಬೇಕೇನೊ.”

“ಹಳೆ ಸ್ಟಾಕೆ ಅಲವೆ ಕಿಕ್ ಕೊಡದು. ಎಲ್ಲೊ ಡೂಪ್ಲಿಕೇಟು ಅಂತ ಡವುಟು ಬತ್ತು.”

“ಅಂತೂ ಎಡೂರಪ್ಪ ನಿಮ್ಮ ಕಷ್ಟ ನೋಡಕ್ಕಾಗದೆ ಲಿಕ್ಕರ್ ಅಂಗಡಿ ಬಾಗಲ ತಗಿಸ್ತ ಅತ್ತಗೆ.”

“ಅವುನೆಲ್ಲಿ ತಗದ್ನೊ, ಮೋದಿ ತಗಿರಿ ಅತ್ತಗೆ ಅಂದ ಇವುನು ತಗದ ಅವುರಿಗೇನು ಸರಕಾರಕೆ ಆದಾಯ ಬತ್ತು.”

“ಮೋದಿ ಏನು ಮಾಡಿದುನ್ಲ ಕರೋನ ಕಾಯಿಲಕೆ.”

“ಅವುನು ರಾಮಾಯ್ಣ ದಾರವಾಯಿ ನೋಡ್ತ ಕುಂತವುನೆ.”

“ಅದ್ಯಾಕ್ಲ.”

“ಅಷ್ಟೆ ಅಲವೇನಕ್ಕ ಅವುನ ಕೈಲಾಗದು. ಅವುನೇನು ಕರೋನಾ ಡಾಗುಟ್ರೊ ಅಥವ ಮುಂದಾಲೋಚನೆಯಿರೊ ನಾಯಕನೋ ಇಲ್ಲ ಬುಡಬಗ್ಗರು ಸ್ಥಿತಿ ಗೊತ್ತಿರೊ ಮನುಸನೊ ಯಾವುದೂ ಅಲ್ಲ ಕಣಕ್ಕ ಅದ್ಕೆ ದೇಸವ ಅದರ ಪಾಡಿಗೆ ಬುಟ್ಟು ಅಗಾಗ್ಗೆ ಏನೇನೂ ಆಜ್ಞೆ ವರುಡುಸ್ತನೆ ಅವೂ ಅವನ ಸ್ವಂತ ತೀರಮಾನ ಅಲ್ಲ ಆರೆಸೆಸ್ ಮುಖಂಡ್ರು ಹೇಳಿದವು.”

“ನಮ್ಮ ಎಡೂರಪ್ಪನೆ ವಾಸಿ ಅಲವೇನೊ.”

“ಅದ್ಯಂಗೊ ಉಗ್ರಿ.”

“ಅವುನು ಉಗಾದಿ ಹಬ್ಬದ ಹಿಂದಿನ ದಿನ ಊರಿಗೋಗಿ ಬರೋರು ಬನ್ನಿ ಅಂದೆ ಇದ್ರೆ, ನಮ್ಮೂರರ‍್ಯಲ್ಲ ಬೆಂಗಳೂರಲೇ ಸಾಯಬೇಕಾಗಿತ್ತು.”

“ಅದೇನೊ ನಿಜಕಣೊ ಉಗ್ರಿ, ನೋಡು ಎಡೂರಪ್ಪಾಗ್ಲಿ ಮೋದಿ ಆಗ್ಲಿ ಕರೋನಾ ಸಮಸ್ಯೆಗೆ ಇವುರತ್ರ ಇರೊ ಸಲ್ಯೂಷನ್ ಏನದೆ ಗೊತ್ತೇನೊ.”

“ಅದಯಾವುದಪ್ಪ ಸಲೂಶನ್ನು.”

“ಮನೆಯಿಂದ ಯಾರು ವರಗೆ ಬರಬ್ಯಾಡಿ, ಬಾಯಿಗೆ ಬಟ್ಟೆ ಕಟಿಗಂಡಿರಿ, ದೂರ ನಿಂತಗಂಡು ಯವಾರ ಮಾಡಿ, ದೀಪಹಚ್ಚಿ ಜಾಗಟೆ ಬಾರಿಸಿ, ಅನ್ನದು ಬುಟ್ರೆ ಇನ್ನೆನುಯಿಲ್ಲ.”

“ಅಷ್ಟೆ ಅಂತಿಯಾ.”

“ಅಷ್ಟೆ ಅಂತಿಯಾ ಅಂತ ಕೇಳತಿಯಲ್ಲಾ ಈಗನುಭವುಸ್ತಯಿರದು ಅದೇ ಅಲವೇನೊ ನೀವಿಂಗಿರಿ ನಾವಿಂಗೆ ಮಾಡ್ತಿವಿ ದವಸ ಧಾನ್ಯ ಕೊಡ್ತೀವಿ ಸಾರಿಗೆ ಯವಸ್ಥೆ ಮಾಡ್ತಿವಿ ಊರಿಗೋಗಿ ಹೆದರಬ್ಯಾಡಿ ಅನ್ನೊ ಮಾತು ಅವುರ ಬಾಯಿಲಿ ಬರಲಿಲ್ಲಲ್ವೊ.”

“ಅದ್ಕೆ ಏನೊ ಕಂಡ್ಳ ಸೋನಿಯಗಾಂಧಿ ಊರಿಗೋಗೊ ಜನಕ್ಯಲ್ಲ ಗಾಡಿ ಚಾರ್ಜು ಕೊಡ್ತಿನಿ ಅಂದವುಳೆ.”

“ಆಗ್ಲೆ ಕಣಕ್ಕ ಬಿಜೆಪಿಗಳ ಬಾಯಿಗೆ ಬೀಗ ಬಿದ್ದಿದ್ದು. ಇವುಕೆ ಮಾನ ಮರಿಯಾದಿ ಇದ್ರೆ ಆ ಹೆಣ್ಣೆಂಗಸು ಹತ್ತುವರಸ ದೇಸ ಯಂಗೆ ಮಡಗಿದ್ಲು ಅಂತ ತಿಳಕಬೇಕು ಕಣಕ್ಕ ಆಗ್ಲಾರ ದೇಸ ಯಂಗಾಳಬೇಕು ಅನ್ನದು ವಳಿತದೆ.”

“ನಿಜ ಕಂಡ್ಳ ನೀನೇಳಿದ್ದು.”


ಇದನ್ನೂ ಓದಿ: ಹಿಂಗಾಡಿದ್ರೆ ಸಾಬರ ಕತೆ ಮುಗಿತು ಬುಡು: ಚಂದ್ರೇಗೌಡರ ಕಟ್ಟೆಪುರಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...