Homeಕರ್ನಾಟಕಎಡೂರಪ್ಪ ನಿಮ್ಮ ಕಷ್ಟ ನೋಡಕ್ಕಾಗದೆ ಲಿಕ್ಕರ್ ಅಂಗಡಿ ಬಾಗಲ ತಗಿಸ್ತ ಅತ್ತಗೆ...!!

ಎಡೂರಪ್ಪ ನಿಮ್ಮ ಕಷ್ಟ ನೋಡಕ್ಕಾಗದೆ ಲಿಕ್ಕರ್ ಅಂಗಡಿ ಬಾಗಲ ತಗಿಸ್ತ ಅತ್ತಗೆ…!!

ಬಿ.ಚಂದ್ರೇಗೌಡರ ಕಟ್ಟೆಪುರಾಣ

- Advertisement -
- Advertisement -

“ಕರೊನಾದಿಂದ ಏಟು ಜನ ಸತ್ರಲಾ ಉಗ್ರಿ” ಎಂದಳು ಜುಮ್ಮಿ.

“ವಾಟಿಸ್ಸೆ ಬಂದ ಅವುನ್ನೆ ಕೇಳು” ಎಂದ.

“ಲೆ ವಾಟಿಸ್ಸೆ ಏಟು ಜನ ಸತ್ರಲಾ.”

“ನೀನು ತಿಳಕಂಡಂಗೆ ಜನ ಸಾಯ್ತಯಿಲ್ಲ ಕಣ್ಣಕ್ಕ.”

“ಯಾಕ್ಲ.”

“ನಮ್ಮ ಜನಗಳ ಪರ‍್ರಂಗದೆ. ಕರೋನಾನೂ ಫೇಸ್ ಮಾಡ್ತ ಅವುರೆ, ಅಂತ ಯೇಡ್ಸನೆ ತಡಕಂಡ್ರು ಇದ್ಯಾವ ಲ್ಯಕ್ಕ.”

“ಏಡಿಸಿಗಿಂತ್ಲೂ ದ್ಲಡ್ಡ ಕಾಯಲವೆ ಇದು.”

“ಊ ಕಣ್ಣಕ್ಕ, ಏಡಸಾದೋನು ಸತ್ತೇ ಸಾಯ್ತನೆ. ಆದ್ರೆ ಕೊರೋನಾ ಬಂದೋರು ರಿಕವರಿ ಆಯ್ತ ಅವುರೆ ಇದಕೇನೇಳ್ತೀ.”

“ಮತ್ತೆ ಪಾರಿನ್ನಲ್ಲಿ ಭಾಳ ಜನ ಸತ್ರಂತೆ.”

“ಆ ನನ್‌ಮಕ್ಕಳು ಡೆಲಿಕೇಟು ಕಣಕ್ಕ. ಅದ್ಕೆ ಉದಿರೋದ್ರು.”

“ಡೇಲ್ಲಿಕೇಟು ಅಂದ್ರೇನ್ಲ.”

“ಡೆಲಿಕೇಟ್ ಅಂದ್ರೆ. ಯಾವಾಗ್ಲೂ ಕೈಯಿ ಬಾಯಿ ತ್ವಳಕಳದು ದಿನ ಸ್ನಾನ ಮಾಡದು. ಮೈನ್ಯಲ್ಲ ವರಿಸಿಗಳದು. ಸೆಂಟಾಕದು ಇಂತ ವಿಪರೀತ ಮಾಡಿ ಮೈಲಿಗೆ ಮಾಡಿದ್ರೆ ಮನುಸುನ ಬಾಡಿ ಡೆಲಿಕೇಟಾಯ್ತದೆ. ಅಂತಾ ನನ್‌ಮಕ್ಕಳು ಕಾಯ್ಲೆ ತಡಕಳ್ಳದಿಲ್ಲ.”

“ಅಂಗರೆ ಕಿಲೀನಾಗಿರಬಾರ್ದು ಅನ್ನು.”

“ಎಷ್ಟು ಬೇಕೊ ಅಷ್ಟಿರಬೇಕು.”

“ಊ ಯಾವ್ದು ಅತಿಯಾಗಬಾರ್ದು ಅಂತ ಅತಿ ಮಾಡಕ್ಕೋದ ಪಾರಿನ್ನರು ಕರೋನಾ ತಡಿಯಕ್ಕಾಗದೆ ಗ್ವಾತ ವಡಿತಾ ಅವುರೆ ಅದೇ ನಮ್ಮೊರು ನೋಡು ರಿಕವರಿ ಆಯ್ತಾ ಅವುರೆ.”

“ಯಣ್ಣೆ ಸಿಕ್ಕತೇನೊ ನಿನಗೆ” ಎಂದ ಉಗ್ರಿ.

“ಸಿಕ್ತು ಕಣೊ ಉಗ್ರಿ, ಆದ್ರೆ ಒಂದೂವರೆ ತಿಂಗಳು ಅದ ಮುಟ್ಟದಂಗಿದ್ದೆ ನೋಡು, ಅದ್ಕೊ ಏನೊ ವರಕು ಮಾಡಲಿಲ್ಲ ಅದು.”

“ಹಳೆ ಸ್ಟಾಕಿರಬೇಕೇನೊ.”

“ಹಳೆ ಸ್ಟಾಕೆ ಅಲವೆ ಕಿಕ್ ಕೊಡದು. ಎಲ್ಲೊ ಡೂಪ್ಲಿಕೇಟು ಅಂತ ಡವುಟು ಬತ್ತು.”

“ಅಂತೂ ಎಡೂರಪ್ಪ ನಿಮ್ಮ ಕಷ್ಟ ನೋಡಕ್ಕಾಗದೆ ಲಿಕ್ಕರ್ ಅಂಗಡಿ ಬಾಗಲ ತಗಿಸ್ತ ಅತ್ತಗೆ.”

“ಅವುನೆಲ್ಲಿ ತಗದ್ನೊ, ಮೋದಿ ತಗಿರಿ ಅತ್ತಗೆ ಅಂದ ಇವುನು ತಗದ ಅವುರಿಗೇನು ಸರಕಾರಕೆ ಆದಾಯ ಬತ್ತು.”

“ಮೋದಿ ಏನು ಮಾಡಿದುನ್ಲ ಕರೋನ ಕಾಯಿಲಕೆ.”

“ಅವುನು ರಾಮಾಯ್ಣ ದಾರವಾಯಿ ನೋಡ್ತ ಕುಂತವುನೆ.”

“ಅದ್ಯಾಕ್ಲ.”

“ಅಷ್ಟೆ ಅಲವೇನಕ್ಕ ಅವುನ ಕೈಲಾಗದು. ಅವುನೇನು ಕರೋನಾ ಡಾಗುಟ್ರೊ ಅಥವ ಮುಂದಾಲೋಚನೆಯಿರೊ ನಾಯಕನೋ ಇಲ್ಲ ಬುಡಬಗ್ಗರು ಸ್ಥಿತಿ ಗೊತ್ತಿರೊ ಮನುಸನೊ ಯಾವುದೂ ಅಲ್ಲ ಕಣಕ್ಕ ಅದ್ಕೆ ದೇಸವ ಅದರ ಪಾಡಿಗೆ ಬುಟ್ಟು ಅಗಾಗ್ಗೆ ಏನೇನೂ ಆಜ್ಞೆ ವರುಡುಸ್ತನೆ ಅವೂ ಅವನ ಸ್ವಂತ ತೀರಮಾನ ಅಲ್ಲ ಆರೆಸೆಸ್ ಮುಖಂಡ್ರು ಹೇಳಿದವು.”

“ನಮ್ಮ ಎಡೂರಪ್ಪನೆ ವಾಸಿ ಅಲವೇನೊ.”

“ಅದ್ಯಂಗೊ ಉಗ್ರಿ.”

“ಅವುನು ಉಗಾದಿ ಹಬ್ಬದ ಹಿಂದಿನ ದಿನ ಊರಿಗೋಗಿ ಬರೋರು ಬನ್ನಿ ಅಂದೆ ಇದ್ರೆ, ನಮ್ಮೂರರ‍್ಯಲ್ಲ ಬೆಂಗಳೂರಲೇ ಸಾಯಬೇಕಾಗಿತ್ತು.”

“ಅದೇನೊ ನಿಜಕಣೊ ಉಗ್ರಿ, ನೋಡು ಎಡೂರಪ್ಪಾಗ್ಲಿ ಮೋದಿ ಆಗ್ಲಿ ಕರೋನಾ ಸಮಸ್ಯೆಗೆ ಇವುರತ್ರ ಇರೊ ಸಲ್ಯೂಷನ್ ಏನದೆ ಗೊತ್ತೇನೊ.”

“ಅದಯಾವುದಪ್ಪ ಸಲೂಶನ್ನು.”

“ಮನೆಯಿಂದ ಯಾರು ವರಗೆ ಬರಬ್ಯಾಡಿ, ಬಾಯಿಗೆ ಬಟ್ಟೆ ಕಟಿಗಂಡಿರಿ, ದೂರ ನಿಂತಗಂಡು ಯವಾರ ಮಾಡಿ, ದೀಪಹಚ್ಚಿ ಜಾಗಟೆ ಬಾರಿಸಿ, ಅನ್ನದು ಬುಟ್ರೆ ಇನ್ನೆನುಯಿಲ್ಲ.”

“ಅಷ್ಟೆ ಅಂತಿಯಾ.”

“ಅಷ್ಟೆ ಅಂತಿಯಾ ಅಂತ ಕೇಳತಿಯಲ್ಲಾ ಈಗನುಭವುಸ್ತಯಿರದು ಅದೇ ಅಲವೇನೊ ನೀವಿಂಗಿರಿ ನಾವಿಂಗೆ ಮಾಡ್ತಿವಿ ದವಸ ಧಾನ್ಯ ಕೊಡ್ತೀವಿ ಸಾರಿಗೆ ಯವಸ್ಥೆ ಮಾಡ್ತಿವಿ ಊರಿಗೋಗಿ ಹೆದರಬ್ಯಾಡಿ ಅನ್ನೊ ಮಾತು ಅವುರ ಬಾಯಿಲಿ ಬರಲಿಲ್ಲಲ್ವೊ.”

“ಅದ್ಕೆ ಏನೊ ಕಂಡ್ಳ ಸೋನಿಯಗಾಂಧಿ ಊರಿಗೋಗೊ ಜನಕ್ಯಲ್ಲ ಗಾಡಿ ಚಾರ್ಜು ಕೊಡ್ತಿನಿ ಅಂದವುಳೆ.”

“ಆಗ್ಲೆ ಕಣಕ್ಕ ಬಿಜೆಪಿಗಳ ಬಾಯಿಗೆ ಬೀಗ ಬಿದ್ದಿದ್ದು. ಇವುಕೆ ಮಾನ ಮರಿಯಾದಿ ಇದ್ರೆ ಆ ಹೆಣ್ಣೆಂಗಸು ಹತ್ತುವರಸ ದೇಸ ಯಂಗೆ ಮಡಗಿದ್ಲು ಅಂತ ತಿಳಕಬೇಕು ಕಣಕ್ಕ ಆಗ್ಲಾರ ದೇಸ ಯಂಗಾಳಬೇಕು ಅನ್ನದು ವಳಿತದೆ.”

“ನಿಜ ಕಂಡ್ಳ ನೀನೇಳಿದ್ದು.”


ಇದನ್ನೂ ಓದಿ: ಹಿಂಗಾಡಿದ್ರೆ ಸಾಬರ ಕತೆ ಮುಗಿತು ಬುಡು: ಚಂದ್ರೇಗೌಡರ ಕಟ್ಟೆಪುರಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...