Homeಕರ್ನಾಟಕಎಡೂರಪ್ಪ ನಿಮ್ಮ ಕಷ್ಟ ನೋಡಕ್ಕಾಗದೆ ಲಿಕ್ಕರ್ ಅಂಗಡಿ ಬಾಗಲ ತಗಿಸ್ತ ಅತ್ತಗೆ...!!

ಎಡೂರಪ್ಪ ನಿಮ್ಮ ಕಷ್ಟ ನೋಡಕ್ಕಾಗದೆ ಲಿಕ್ಕರ್ ಅಂಗಡಿ ಬಾಗಲ ತಗಿಸ್ತ ಅತ್ತಗೆ…!!

ಬಿ.ಚಂದ್ರೇಗೌಡರ ಕಟ್ಟೆಪುರಾಣ

- Advertisement -
- Advertisement -

“ಕರೊನಾದಿಂದ ಏಟು ಜನ ಸತ್ರಲಾ ಉಗ್ರಿ” ಎಂದಳು ಜುಮ್ಮಿ.

“ವಾಟಿಸ್ಸೆ ಬಂದ ಅವುನ್ನೆ ಕೇಳು” ಎಂದ.

“ಲೆ ವಾಟಿಸ್ಸೆ ಏಟು ಜನ ಸತ್ರಲಾ.”

“ನೀನು ತಿಳಕಂಡಂಗೆ ಜನ ಸಾಯ್ತಯಿಲ್ಲ ಕಣ್ಣಕ್ಕ.”

“ಯಾಕ್ಲ.”

“ನಮ್ಮ ಜನಗಳ ಪರ‍್ರಂಗದೆ. ಕರೋನಾನೂ ಫೇಸ್ ಮಾಡ್ತ ಅವುರೆ, ಅಂತ ಯೇಡ್ಸನೆ ತಡಕಂಡ್ರು ಇದ್ಯಾವ ಲ್ಯಕ್ಕ.”

“ಏಡಿಸಿಗಿಂತ್ಲೂ ದ್ಲಡ್ಡ ಕಾಯಲವೆ ಇದು.”

“ಊ ಕಣ್ಣಕ್ಕ, ಏಡಸಾದೋನು ಸತ್ತೇ ಸಾಯ್ತನೆ. ಆದ್ರೆ ಕೊರೋನಾ ಬಂದೋರು ರಿಕವರಿ ಆಯ್ತ ಅವುರೆ ಇದಕೇನೇಳ್ತೀ.”

“ಮತ್ತೆ ಪಾರಿನ್ನಲ್ಲಿ ಭಾಳ ಜನ ಸತ್ರಂತೆ.”

“ಆ ನನ್‌ಮಕ್ಕಳು ಡೆಲಿಕೇಟು ಕಣಕ್ಕ. ಅದ್ಕೆ ಉದಿರೋದ್ರು.”

“ಡೇಲ್ಲಿಕೇಟು ಅಂದ್ರೇನ್ಲ.”

“ಡೆಲಿಕೇಟ್ ಅಂದ್ರೆ. ಯಾವಾಗ್ಲೂ ಕೈಯಿ ಬಾಯಿ ತ್ವಳಕಳದು ದಿನ ಸ್ನಾನ ಮಾಡದು. ಮೈನ್ಯಲ್ಲ ವರಿಸಿಗಳದು. ಸೆಂಟಾಕದು ಇಂತ ವಿಪರೀತ ಮಾಡಿ ಮೈಲಿಗೆ ಮಾಡಿದ್ರೆ ಮನುಸುನ ಬಾಡಿ ಡೆಲಿಕೇಟಾಯ್ತದೆ. ಅಂತಾ ನನ್‌ಮಕ್ಕಳು ಕಾಯ್ಲೆ ತಡಕಳ್ಳದಿಲ್ಲ.”

“ಅಂಗರೆ ಕಿಲೀನಾಗಿರಬಾರ್ದು ಅನ್ನು.”

“ಎಷ್ಟು ಬೇಕೊ ಅಷ್ಟಿರಬೇಕು.”

“ಊ ಯಾವ್ದು ಅತಿಯಾಗಬಾರ್ದು ಅಂತ ಅತಿ ಮಾಡಕ್ಕೋದ ಪಾರಿನ್ನರು ಕರೋನಾ ತಡಿಯಕ್ಕಾಗದೆ ಗ್ವಾತ ವಡಿತಾ ಅವುರೆ ಅದೇ ನಮ್ಮೊರು ನೋಡು ರಿಕವರಿ ಆಯ್ತಾ ಅವುರೆ.”

“ಯಣ್ಣೆ ಸಿಕ್ಕತೇನೊ ನಿನಗೆ” ಎಂದ ಉಗ್ರಿ.

“ಸಿಕ್ತು ಕಣೊ ಉಗ್ರಿ, ಆದ್ರೆ ಒಂದೂವರೆ ತಿಂಗಳು ಅದ ಮುಟ್ಟದಂಗಿದ್ದೆ ನೋಡು, ಅದ್ಕೊ ಏನೊ ವರಕು ಮಾಡಲಿಲ್ಲ ಅದು.”

“ಹಳೆ ಸ್ಟಾಕಿರಬೇಕೇನೊ.”

“ಹಳೆ ಸ್ಟಾಕೆ ಅಲವೆ ಕಿಕ್ ಕೊಡದು. ಎಲ್ಲೊ ಡೂಪ್ಲಿಕೇಟು ಅಂತ ಡವುಟು ಬತ್ತು.”

“ಅಂತೂ ಎಡೂರಪ್ಪ ನಿಮ್ಮ ಕಷ್ಟ ನೋಡಕ್ಕಾಗದೆ ಲಿಕ್ಕರ್ ಅಂಗಡಿ ಬಾಗಲ ತಗಿಸ್ತ ಅತ್ತಗೆ.”

“ಅವುನೆಲ್ಲಿ ತಗದ್ನೊ, ಮೋದಿ ತಗಿರಿ ಅತ್ತಗೆ ಅಂದ ಇವುನು ತಗದ ಅವುರಿಗೇನು ಸರಕಾರಕೆ ಆದಾಯ ಬತ್ತು.”

“ಮೋದಿ ಏನು ಮಾಡಿದುನ್ಲ ಕರೋನ ಕಾಯಿಲಕೆ.”

“ಅವುನು ರಾಮಾಯ್ಣ ದಾರವಾಯಿ ನೋಡ್ತ ಕುಂತವುನೆ.”

“ಅದ್ಯಾಕ್ಲ.”

“ಅಷ್ಟೆ ಅಲವೇನಕ್ಕ ಅವುನ ಕೈಲಾಗದು. ಅವುನೇನು ಕರೋನಾ ಡಾಗುಟ್ರೊ ಅಥವ ಮುಂದಾಲೋಚನೆಯಿರೊ ನಾಯಕನೋ ಇಲ್ಲ ಬುಡಬಗ್ಗರು ಸ್ಥಿತಿ ಗೊತ್ತಿರೊ ಮನುಸನೊ ಯಾವುದೂ ಅಲ್ಲ ಕಣಕ್ಕ ಅದ್ಕೆ ದೇಸವ ಅದರ ಪಾಡಿಗೆ ಬುಟ್ಟು ಅಗಾಗ್ಗೆ ಏನೇನೂ ಆಜ್ಞೆ ವರುಡುಸ್ತನೆ ಅವೂ ಅವನ ಸ್ವಂತ ತೀರಮಾನ ಅಲ್ಲ ಆರೆಸೆಸ್ ಮುಖಂಡ್ರು ಹೇಳಿದವು.”

“ನಮ್ಮ ಎಡೂರಪ್ಪನೆ ವಾಸಿ ಅಲವೇನೊ.”

“ಅದ್ಯಂಗೊ ಉಗ್ರಿ.”

“ಅವುನು ಉಗಾದಿ ಹಬ್ಬದ ಹಿಂದಿನ ದಿನ ಊರಿಗೋಗಿ ಬರೋರು ಬನ್ನಿ ಅಂದೆ ಇದ್ರೆ, ನಮ್ಮೂರರ‍್ಯಲ್ಲ ಬೆಂಗಳೂರಲೇ ಸಾಯಬೇಕಾಗಿತ್ತು.”

“ಅದೇನೊ ನಿಜಕಣೊ ಉಗ್ರಿ, ನೋಡು ಎಡೂರಪ್ಪಾಗ್ಲಿ ಮೋದಿ ಆಗ್ಲಿ ಕರೋನಾ ಸಮಸ್ಯೆಗೆ ಇವುರತ್ರ ಇರೊ ಸಲ್ಯೂಷನ್ ಏನದೆ ಗೊತ್ತೇನೊ.”

“ಅದಯಾವುದಪ್ಪ ಸಲೂಶನ್ನು.”

“ಮನೆಯಿಂದ ಯಾರು ವರಗೆ ಬರಬ್ಯಾಡಿ, ಬಾಯಿಗೆ ಬಟ್ಟೆ ಕಟಿಗಂಡಿರಿ, ದೂರ ನಿಂತಗಂಡು ಯವಾರ ಮಾಡಿ, ದೀಪಹಚ್ಚಿ ಜಾಗಟೆ ಬಾರಿಸಿ, ಅನ್ನದು ಬುಟ್ರೆ ಇನ್ನೆನುಯಿಲ್ಲ.”

“ಅಷ್ಟೆ ಅಂತಿಯಾ.”

“ಅಷ್ಟೆ ಅಂತಿಯಾ ಅಂತ ಕೇಳತಿಯಲ್ಲಾ ಈಗನುಭವುಸ್ತಯಿರದು ಅದೇ ಅಲವೇನೊ ನೀವಿಂಗಿರಿ ನಾವಿಂಗೆ ಮಾಡ್ತಿವಿ ದವಸ ಧಾನ್ಯ ಕೊಡ್ತೀವಿ ಸಾರಿಗೆ ಯವಸ್ಥೆ ಮಾಡ್ತಿವಿ ಊರಿಗೋಗಿ ಹೆದರಬ್ಯಾಡಿ ಅನ್ನೊ ಮಾತು ಅವುರ ಬಾಯಿಲಿ ಬರಲಿಲ್ಲಲ್ವೊ.”

“ಅದ್ಕೆ ಏನೊ ಕಂಡ್ಳ ಸೋನಿಯಗಾಂಧಿ ಊರಿಗೋಗೊ ಜನಕ್ಯಲ್ಲ ಗಾಡಿ ಚಾರ್ಜು ಕೊಡ್ತಿನಿ ಅಂದವುಳೆ.”

“ಆಗ್ಲೆ ಕಣಕ್ಕ ಬಿಜೆಪಿಗಳ ಬಾಯಿಗೆ ಬೀಗ ಬಿದ್ದಿದ್ದು. ಇವುಕೆ ಮಾನ ಮರಿಯಾದಿ ಇದ್ರೆ ಆ ಹೆಣ್ಣೆಂಗಸು ಹತ್ತುವರಸ ದೇಸ ಯಂಗೆ ಮಡಗಿದ್ಲು ಅಂತ ತಿಳಕಬೇಕು ಕಣಕ್ಕ ಆಗ್ಲಾರ ದೇಸ ಯಂಗಾಳಬೇಕು ಅನ್ನದು ವಳಿತದೆ.”

“ನಿಜ ಕಂಡ್ಳ ನೀನೇಳಿದ್ದು.”


ಇದನ್ನೂ ಓದಿ: ಹಿಂಗಾಡಿದ್ರೆ ಸಾಬರ ಕತೆ ಮುಗಿತು ಬುಡು: ಚಂದ್ರೇಗೌಡರ ಕಟ್ಟೆಪುರಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...