Homeಮುಖಪುಟನನ್ನ ಮಗ ರಾಜಾ ವೇಮುಲಾ ವಕೀಲನಾಗಿದ್ದು, ಜನರಿಗಾಗಿ ಹೋರಾಡಲಿದ್ದಾನೆ: ರಾಧಿಕ ವೇಮುಲಾ

ನನ್ನ ಮಗ ರಾಜಾ ವೇಮುಲಾ ವಕೀಲನಾಗಿದ್ದು, ಜನರಿಗಾಗಿ ಹೋರಾಡಲಿದ್ದಾನೆ: ರಾಧಿಕ ವೇಮುಲಾ

ನಾನು ವಿಜ್ಞಾನದ ಬರಹಗಾರ ಆಗಬೇಕೆಂದುಕೊಂಡಿದ್ದೆ, ವಿಜ್ಞಾನ ಲೇಖಕ ಕಾರ್ಲ್ ಸಗಾನನ ಹಾಗೆ. ಆದರೆ ಕೊನೆಗೆ, ಇದೊಂದು ಪತ್ರವನ್ನಷ್ಟೇ ಬರೆಯಲು ನನ್ನಿಂದಾದದ್ದು” ಎಂದು ಆತ್ಮಹತ್ಯೆ ಪತ್ರ ಬರೆದು ಜನವರಿ 16, 2016ರಂದು ರೋಹಿತ್ ವೇಮುಲಾ ಪ್ರಾಣತೆತ್ತಿದ್ದರು.

- Advertisement -
- Advertisement -

2016ರ ಜನವರಿಯಲ್ಲಿ ಪ್ರಾಣತೆತ್ತ ಮತ್ತು ಆ ಮೂಲಕ ವಿವಿಗಳಲ್ಲಿನ ಜಾತಿ ಮನಸ್ಥಿತಿಯನ್ನು ದೇಶಕ್ಕೆ ಸಾರಿದ ಹುತಾತ್ಮ ರೋಹಿತ್ ವೇಮುಲಾರವರ ಸಹೋದರ ರಾಜಾ ವೇಮುಲಾ ವಕೀಲ ಪದವಿ ಪಡೆದಿದ್ದು, ಜನರ ಹಕ್ಕುಗಳಿಗಾಗಿ ಹೋರಾಡಲು ಸಿದ್ದನಾಗಿದ್ದಾನೆ ಎಂದು ರಾಧಿಕ ವೇಮುಲಾ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ನನ್ನ ಕಿರಿಯ ಮಗ ರಾಜಾ ವೇಮುಲಾ ಈಗ ವಕೀಲ. ರೋಹಿತ್ ವೇಮುಲಾ ನಂತರ ಈ 5 ವರ್ಷಗಳಲ್ಲಿ ನಮ್ಮ ಜೀವನದಲ್ಲಿ ಸಂಭವಿಸಿದ ಪ್ರಮುಖ ಬದಲಾವಣೆಗಳಲ್ಲಿ ಇದು ಒಂದು. ವಕೀಲ ರಾಜಾ ವೇಮುಲಾ ಈಗ ನ್ಯಾಯಾಲಯದಲ್ಲಿ ಜನರಿಗೆ ಮತ್ತು ಅವರ ಹಕ್ಕುಗಳಿಗಾಗಿ ಕೆಲಸ ಮಾಡುತ್ತಾನೆ ಮತ್ತು ಹೋರಾಡುತ್ತಾನೆ. ಇದು ಸಮಾಜಕ್ಕೆ ನಾನು ಹಿಂತಿರುಗಿಸುತ್ತಿರುವ ಕೊಡುಗೆ. ಅವನನ್ನು ಆಶೀರ್ವದಿಸಿ. ಜೈ ಭೀಮ್” ಎಂದಿದ್ದಾರೆ.

“ನಾನು ವಿಜ್ಞಾನದ ಬರಹಗಾರ ಆಗಬೇಕೆಂದುಕೊಂಡಿದ್ದೆ, ವಿಜ್ಞಾನ ಲೇಖಕ ಕಾರ್ಲ್ ಸಗಾನನ ಹಾಗೆ. ಆದರೆ ಕೊನೆಗೆ, ಇದೊಂದು ಪತ್ರವನ್ನಷ್ಟೇ ಬರೆಯಲು ನನ್ನಿಂದಾದದ್ದು” ಎಂದು ಆತ್ಮಹತ್ಯೆ ಪತ್ರ ಬರೆದು ಜನವರಿ 16, 2016ರಂದು ರೋಹಿತ್ ವೇಮುಲಾ ಪ್ರಾಣತೆತ್ತಿದ್ದರು. ಇದನ್ನು ಪ್ರಗತಿಪರ ವಿದ್ಯಾರ್ಥಿ ಸಂಘಟನೆಗಳು ವಿಶ್ವವಿದ್ಯಾಲಯ, ಸಮಾಜ ಮತ್ತು ಜಾತಿ ವ್ಯವಸ್ಥೆ ಮಾಡಿದ ಸಾಂಸ್ಥಿಕ ಕೊಲೆಯೆಂದು ಕರೆದಿದ್ದರು.

ಅಂದು ರೋಹಿತ್ ವೇಮುಲಾನನ್ನು ಜಾತಿ ತೀವ್ರವಾಗಿ ಕಾಡಿತ್ತು. ಆತ ಪಿಎಚ್‌ಡಿ ಮಾಡುತ್ತಿದ್ದಾಗ ಎಬಿವಿಪಿ ಗೂಂಡಾಗಳು ಕಾಡಿದರು. ಬ್ರಾಹ್ಮಣವಾದಿ ವಿವಿಯ ಆಡಳಿತ ಮಂಡಳಿ 7 ತಿಂಗಳು ಆತನಿಗೆ ಫೆಲೋಶಿಪ್ ತಡೆ ಹಿಡಿದಿದ್ದಲ್ಲದೇ ಆತನನ್ನು ಕಾಲೇಜು ಮತ್ತು ಹಾಸ್ಟೆಲ್‌ನಿಂದ ಹೊರಹಾಕಿತ್ತು. ಆತ ಆತ ಅಂಬೇಡ್ಕರ್, ಸಾವಿತ್ರಿ ಬಾಯಿ ಫುಲೆ ಫೋಟೊ ಹಿಡಿದು ಕ್ಯಾಂಪಸ್ಸಿನ ’ವೆಲಿವಾಡ’ದಲ್ಲಿ ಹೋರಾಟ ಆರಂಭಿಸಿದ್ದ. ನಂತರ ಪ್ರಾಣತೆತ್ತಿದ್ದು ಇತಿಹಾಸ.

ಅಂದಿನಿಂದ ಸಾಮಾಜಿಕ ಚಳವಳಿಗಳ ಭಾಗವಾಗಿರುವ ಅವರ ತಾಯಿ ರಾಧಿಕಾ ವೇಮುಲಾ ಗುಜರಾತ್‌ನಲ್ಲಿ ನಡೆದ ಊನಾ ಚಲೋ ಚಳವಳಿಯಲ್ಲಿ ಭಾಗವಹಿಸಿದ್ದರು. ದೆಹಲಿಯ ವಿದ್ಯಾರ್ಥಿ ನಜೀಬ್ ಕಾಣೆಯಾದಾಗ ಆತನ ತಾಯಿಯೊಂದಿಗೆ ನಿಂತಿದ್ದರು. ನೂರಾರು ಹೋರಾಟಗಳಲ್ಲಿ ಭಾಗವಹಿಸಿದ್ದ ಅವರು ಈಗ ತಮ್ಮ ಇನ್ನೊಬ್ಬ ಮಗನನ್ನು ವಕೀಲನಾಗಿ ಸಮಾಜಕ್ಕೆ ಅರ್ಪಿಸುತ್ತಿದ್ದೇನೆ ಎಂದು ಘೋಷಿಸಿದ್ದಾರೆ.


ಇದನ್ನೂ ಓದಿ: ರೋಹಿತ್ ವೇಮುಲ ಇಂದು ಬದುಕಿದ್ದರೆ……’ : ಅಗಲಿದ ಯುವಚೈತನ್ಯದ ಸ್ಮರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...