Homeಮುಖಪುಟನನ್ನ ಮಗ ರಾಜಾ ವೇಮುಲಾ ವಕೀಲನಾಗಿದ್ದು, ಜನರಿಗಾಗಿ ಹೋರಾಡಲಿದ್ದಾನೆ: ರಾಧಿಕ ವೇಮುಲಾ

ನನ್ನ ಮಗ ರಾಜಾ ವೇಮುಲಾ ವಕೀಲನಾಗಿದ್ದು, ಜನರಿಗಾಗಿ ಹೋರಾಡಲಿದ್ದಾನೆ: ರಾಧಿಕ ವೇಮುಲಾ

ನಾನು ವಿಜ್ಞಾನದ ಬರಹಗಾರ ಆಗಬೇಕೆಂದುಕೊಂಡಿದ್ದೆ, ವಿಜ್ಞಾನ ಲೇಖಕ ಕಾರ್ಲ್ ಸಗಾನನ ಹಾಗೆ. ಆದರೆ ಕೊನೆಗೆ, ಇದೊಂದು ಪತ್ರವನ್ನಷ್ಟೇ ಬರೆಯಲು ನನ್ನಿಂದಾದದ್ದು” ಎಂದು ಆತ್ಮಹತ್ಯೆ ಪತ್ರ ಬರೆದು ಜನವರಿ 16, 2016ರಂದು ರೋಹಿತ್ ವೇಮುಲಾ ಪ್ರಾಣತೆತ್ತಿದ್ದರು.

- Advertisement -
- Advertisement -

2016ರ ಜನವರಿಯಲ್ಲಿ ಪ್ರಾಣತೆತ್ತ ಮತ್ತು ಆ ಮೂಲಕ ವಿವಿಗಳಲ್ಲಿನ ಜಾತಿ ಮನಸ್ಥಿತಿಯನ್ನು ದೇಶಕ್ಕೆ ಸಾರಿದ ಹುತಾತ್ಮ ರೋಹಿತ್ ವೇಮುಲಾರವರ ಸಹೋದರ ರಾಜಾ ವೇಮುಲಾ ವಕೀಲ ಪದವಿ ಪಡೆದಿದ್ದು, ಜನರ ಹಕ್ಕುಗಳಿಗಾಗಿ ಹೋರಾಡಲು ಸಿದ್ದನಾಗಿದ್ದಾನೆ ಎಂದು ರಾಧಿಕ ವೇಮುಲಾ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ನನ್ನ ಕಿರಿಯ ಮಗ ರಾಜಾ ವೇಮುಲಾ ಈಗ ವಕೀಲ. ರೋಹಿತ್ ವೇಮುಲಾ ನಂತರ ಈ 5 ವರ್ಷಗಳಲ್ಲಿ ನಮ್ಮ ಜೀವನದಲ್ಲಿ ಸಂಭವಿಸಿದ ಪ್ರಮುಖ ಬದಲಾವಣೆಗಳಲ್ಲಿ ಇದು ಒಂದು. ವಕೀಲ ರಾಜಾ ವೇಮುಲಾ ಈಗ ನ್ಯಾಯಾಲಯದಲ್ಲಿ ಜನರಿಗೆ ಮತ್ತು ಅವರ ಹಕ್ಕುಗಳಿಗಾಗಿ ಕೆಲಸ ಮಾಡುತ್ತಾನೆ ಮತ್ತು ಹೋರಾಡುತ್ತಾನೆ. ಇದು ಸಮಾಜಕ್ಕೆ ನಾನು ಹಿಂತಿರುಗಿಸುತ್ತಿರುವ ಕೊಡುಗೆ. ಅವನನ್ನು ಆಶೀರ್ವದಿಸಿ. ಜೈ ಭೀಮ್” ಎಂದಿದ್ದಾರೆ.

“ನಾನು ವಿಜ್ಞಾನದ ಬರಹಗಾರ ಆಗಬೇಕೆಂದುಕೊಂಡಿದ್ದೆ, ವಿಜ್ಞಾನ ಲೇಖಕ ಕಾರ್ಲ್ ಸಗಾನನ ಹಾಗೆ. ಆದರೆ ಕೊನೆಗೆ, ಇದೊಂದು ಪತ್ರವನ್ನಷ್ಟೇ ಬರೆಯಲು ನನ್ನಿಂದಾದದ್ದು” ಎಂದು ಆತ್ಮಹತ್ಯೆ ಪತ್ರ ಬರೆದು ಜನವರಿ 16, 2016ರಂದು ರೋಹಿತ್ ವೇಮುಲಾ ಪ್ರಾಣತೆತ್ತಿದ್ದರು. ಇದನ್ನು ಪ್ರಗತಿಪರ ವಿದ್ಯಾರ್ಥಿ ಸಂಘಟನೆಗಳು ವಿಶ್ವವಿದ್ಯಾಲಯ, ಸಮಾಜ ಮತ್ತು ಜಾತಿ ವ್ಯವಸ್ಥೆ ಮಾಡಿದ ಸಾಂಸ್ಥಿಕ ಕೊಲೆಯೆಂದು ಕರೆದಿದ್ದರು.

ಅಂದು ರೋಹಿತ್ ವೇಮುಲಾನನ್ನು ಜಾತಿ ತೀವ್ರವಾಗಿ ಕಾಡಿತ್ತು. ಆತ ಪಿಎಚ್‌ಡಿ ಮಾಡುತ್ತಿದ್ದಾಗ ಎಬಿವಿಪಿ ಗೂಂಡಾಗಳು ಕಾಡಿದರು. ಬ್ರಾಹ್ಮಣವಾದಿ ವಿವಿಯ ಆಡಳಿತ ಮಂಡಳಿ 7 ತಿಂಗಳು ಆತನಿಗೆ ಫೆಲೋಶಿಪ್ ತಡೆ ಹಿಡಿದಿದ್ದಲ್ಲದೇ ಆತನನ್ನು ಕಾಲೇಜು ಮತ್ತು ಹಾಸ್ಟೆಲ್‌ನಿಂದ ಹೊರಹಾಕಿತ್ತು. ಆತ ಆತ ಅಂಬೇಡ್ಕರ್, ಸಾವಿತ್ರಿ ಬಾಯಿ ಫುಲೆ ಫೋಟೊ ಹಿಡಿದು ಕ್ಯಾಂಪಸ್ಸಿನ ’ವೆಲಿವಾಡ’ದಲ್ಲಿ ಹೋರಾಟ ಆರಂಭಿಸಿದ್ದ. ನಂತರ ಪ್ರಾಣತೆತ್ತಿದ್ದು ಇತಿಹಾಸ.

ಅಂದಿನಿಂದ ಸಾಮಾಜಿಕ ಚಳವಳಿಗಳ ಭಾಗವಾಗಿರುವ ಅವರ ತಾಯಿ ರಾಧಿಕಾ ವೇಮುಲಾ ಗುಜರಾತ್‌ನಲ್ಲಿ ನಡೆದ ಊನಾ ಚಲೋ ಚಳವಳಿಯಲ್ಲಿ ಭಾಗವಹಿಸಿದ್ದರು. ದೆಹಲಿಯ ವಿದ್ಯಾರ್ಥಿ ನಜೀಬ್ ಕಾಣೆಯಾದಾಗ ಆತನ ತಾಯಿಯೊಂದಿಗೆ ನಿಂತಿದ್ದರು. ನೂರಾರು ಹೋರಾಟಗಳಲ್ಲಿ ಭಾಗವಹಿಸಿದ್ದ ಅವರು ಈಗ ತಮ್ಮ ಇನ್ನೊಬ್ಬ ಮಗನನ್ನು ವಕೀಲನಾಗಿ ಸಮಾಜಕ್ಕೆ ಅರ್ಪಿಸುತ್ತಿದ್ದೇನೆ ಎಂದು ಘೋಷಿಸಿದ್ದಾರೆ.


ಇದನ್ನೂ ಓದಿ: ರೋಹಿತ್ ವೇಮುಲ ಇಂದು ಬದುಕಿದ್ದರೆ……’ : ಅಗಲಿದ ಯುವಚೈತನ್ಯದ ಸ್ಮರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...