Homeಮುಖಪುಟವಿಧಾನಸಭೆಯಲ್ಲೂ ಮುಂದುವರಿದ ಮುಸುಕಿನ ಗುದ್ದಾಟ; 2 ನಿಮಿಷಕ್ಕೆ ಭಾಷಣ ಮುಗಿಸಿದ ಕೇರಳ ರಾಜ್ಯಪಾಲ!

ವಿಧಾನಸಭೆಯಲ್ಲೂ ಮುಂದುವರಿದ ಮುಸುಕಿನ ಗುದ್ದಾಟ; 2 ನಿಮಿಷಕ್ಕೆ ಭಾಷಣ ಮುಗಿಸಿದ ಕೇರಳ ರಾಜ್ಯಪಾಲ!

- Advertisement -
- Advertisement -

ರಾಜ್ಯದಲ್ಲಿ ಆಡಳಿತಾರೂಢ ಎಡಪಕ್ಷದ ಬಗ್ಗೆ ತಮ್ಮ ಅಸಮಾಧಾನವನ್ನು ವಿಧಾನಸಭೆಯಲ್ಲೂ ಪ್ರದರ್ಶಿಸಿರುವ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಸರ್ಕಾರದ ಸಾಂಪ್ರದಾಯಿಕ ನೀತಿ ಭಾಷಣದಲ್ಲಿ ಕೊನೆಯ ಪ್ಯಾರಾಗ್ರಾಫ್ ಅನ್ನು ಓದುವ ಮೂಲಕ ಆತುರಾತುರವಾಗಿ ಮುಕ್ತಾಯಗೊಳಿಸಿದ್ದಾರೆ.

ಬೆಳಗ್ಗೆ 9 ಗಂಟೆ ಸುಮಾರಿಗೆ ವಿಧಾನಸಭೆ ತಲುಪಿದ ಖಾನ್, 9.02ಕ್ಕೆ ಮೊದಲು ನೀತಿ ಭಾಷಣ ಮುಗಿಸಿ 9.04ಕ್ಕೆ ಸದನದಿಂದ ನಿರ್ಗಮಿಸಿದರು. ಖಾನ್ ಅವರನ್ನು ಸದನದ ಹೊರಗೆ ಸ್ಪೀಕರ್ ಎಎನ್ ಶಂಸೀರ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೆ. ರಾಧಾಕೃಷ್ಣನ್ ಅವರು ಹೂಗುಚ್ಛಗಳೊಂದಿಗೆ ಸ್ವಾಗತಿಸಿದರು.

ಖಾನ್ ಅವರು ಸದನದಲ್ಲಿ ಎಲ್ಲರಿಗೂ ಶುಭಾಶಯ ಕೋರುವ ಮೂಲಕ ಸಾಂಪ್ರದಾಯಿಕ ನೀತಿಯ ಭಾಷಣವನ್ನು ಪ್ರಾರಂಭಿಸಿ, ‘ನಾನು ಈಗ ಕೊನೆಯ ಪ್ಯಾರಾವನ್ನು ಓದುತ್ತೇನೆ’ ಎಂದರು.

62 ಪುಟಗಳ ನೀತಿ ಭಾಷಣದ 136 ಪ್ಯಾರಾಗಳಲ್ಲಿ ಕೊನೆಯದನ್ನು ಓದಿದ ರಾಜ್ಯಪಾಲರು, ‘ನಮ್ಮ ಶ್ರೇಷ್ಠ ಪರಂಪರೆ ಕಟ್ಟಡಗಳು ಅಥವಾ ಸ್ಮಾರಕಗಳಿಂದಲ್ಲ. ಸಂವಿಧಾನದ ಅಮೂಲ್ಯ ಪರಂಪರೆಗೆ ನಾವು ತೋರುವ ಗೌರವವನ್ನು ನೆನಪಿಸಿಕೊಳ್ಳೋಣ. ಭಾರತದ ಪ್ರಜಾಪ್ರಭುತ್ವ, ಜಾತ್ಯತೀತತೆ, ಫೆಡರಲಿಸಂ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಅರಿಯೋಣ. ಒಕ್ಕೂಟ ವ್ಯವಸ್ಥೆಯ ಮೂಲತತ್ವವೇ ಭಾರತವನ್ನು ಇಷ್ಟು ವರ್ಷಗಳ ಕಾಲ ಏಕತೆ ಮತ್ತು ಬಲಿಷ್ಠವಾಗಿ ಇರಿಸಿದೆ’ ಎಂದು ಅವರು ಹೇಳಿದರು. ‘ಈ ಸಾರವು ದುರ್ಬಲಗೊಳ್ಳದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ’ ಎಂದರು.

‘ಈ ವೈವಿಧ್ಯಮಯ ಮತ್ತು ಸುಂದರವಾದ ರಾಷ್ಟ್ರದ ಭಾಗವಾಗಿ, ನಾವು ನಮ್ಮ ದಾರಿಯಲ್ಲಿ ಸಿಗುವ ಎಲ್ಲಾ ಸವಾಲುಗಳನ್ನು ಜಯಿಸುವ ಮೂಲಕ ಅಂತರ್ಗತ ಬೆಳವಣಿಗೆ ಮತ್ತು ಜವಾಬ್ದಾರಿಯುತ ಸ್ಥಿತಿಸ್ಥಾಪಕತ್ವದ ವಸ್ತ್ರವನ್ನು ನೇಯುತ್ತೇವೆ’ ಎಂದು ಅವರು ತಮ್ಮ ಭಾಷಣವನ್ನು ಮುಗಿಸಿ, ತಮಗೆ ಮೀಸಲಿಟ್ಟ ಆಸನದಲ್ಲಿ ಕುಳಿತುಕೊಂಡರು.

ರಾಷ್ಟ್ರಗೀತೆ ಮುಗಿದ ನಂತರ ಖಾನ್ ಅವರು ವಿಧಾನಸಭೆಯಿಂದ ಹೊರನಡೆದರು. ಈ ಸಂಪೂರ್ಣ ಪ್ರಹಸನವು ಕೇವಲ 5 ನಿಮಿಷಗಳಿಗಿಂತ ಕಡಿಮೆ ಸಮಯವನ್ನು ತೆಗೆದುಕೊಂಡಿತು.

ರಾಜ್ಯಪಾಲ ಖಾನ್ ಮತ್ತು ಪಿಣರಾಯಿ ವಿಜಯನ್ ಸರ್ಕಾರದ ನಡುವೆ ಹಲವು ದಿನಗಳಿಂದ ತಿಕ್ಕಾಟ ನಡೆಯುತ್ತಿದೆ. ಮುಖ್ಯವಾಗಿ, ರಾಜ್ಯದ ವಿಶ್ವವಿದ್ಯಾಲಯಗಳ ಕಾರ್ಯನಿರ್ವಹಣೆ ಮತ್ತು ವಿಧಾನಸಭೆ ಅಂಗೀಕರಿಸಿದ ಕೆಲವು ಮಸೂದೆಗಳಿಗೆ ಅವರು ಸಹಿ ಹಾಕದಿರುವುದು ಮನಸ್ಥಾಪಕ್ಕೆ ಕಾರಣವಾಗಿದೆ.

ರಾಜ್ಯಪಾಲರ ಕಾರ್ಯವೈಖರಿ ವಿರುದ್ಧ ಸಿಪಿಐ(ಎಂ), ಅದರ ಯುವ ಘಟಕ ‘ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ’ (ಡಿವೈಎಫ್ಐ), ವಿದ್ಯಾರ್ಥಿ ಸಂಘಟನೆಯಾದ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್ಎಫ್ಐ) ಘಟಕಗಳು ರಾಜ್ಯದಾದ್ಯಂತ ವ್ಯಾಪಕ ಪ್ರತಿಭಟನೆ ನಡೆಸಿದವು.

ಇದನ್ನೂ ಓದಿ; ನನಗೆ ಹಿಂದಿ ಬರಲ್ಲ, ಕ್ರಿಮಿನಲ್ ಕಾನೂನುಗಳನ್ನು ಹಳೆಯ ಹೆಸರಿನಿಂದಲೇ ಉಲ್ಲೇಖಿಸುತ್ತೇನೆ: ನ್ಯಾ. ಆನಂದ್ ವೆಂಕಟೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...