Homeರಾಜಕೀಯಅಪಾಯಕಾರಿ ಆಟಕ್ಕೆ ಕೈಹಾಕಿದರೂ, ಬಿಜೆಪಿಯೊಳಗೆ ಅಜ್ಞಾತರಾಗುತ್ತಾ ಬಂದರು ಈ ಕುಮಾರ

ಅಪಾಯಕಾರಿ ಆಟಕ್ಕೆ ಕೈಹಾಕಿದರೂ, ಬಿಜೆಪಿಯೊಳಗೆ ಅಜ್ಞಾತರಾಗುತ್ತಾ ಬಂದರು ಈ ಕುಮಾರ

- Advertisement -
- Advertisement -

ಇತ್ತಿÃಚಿನ ವರ್ಷಗಳಲ್ಲಿ, ಕರ್ನಾಟಕದ ಮುಖ್ಮಮಂತ್ರಿ ಆಗಬೇಕೆಂಬ ಮಹಾತ್ವಾಕಾಂಕ್ಷೆ ಈಡೇರುವುದು ಅಸಾಧ್ಯ ಎಂಬ ಸತ್ಯ ಅರಿತಿದ್ದ ಅಡ್ವಾಣಿಯವರ ಶಿಷ್ಯ ಅನಂತಕುಮಾರ ವಿಧಿವಶರಾಗಿದ್ದಾರೆ. ಕೇಂದ್ರ ಸಚಿವರಾಗಿದ್ದು ಅದ್ವಾನಿಯವರಂತೆ ಅನಂತ್ ಕೂಡ ಮೋದಿ ಟೀಮ್‌ನಿಂದ ದೂರವೇ ಇಟ್ಟಲ್ಪಟ್ಟಿದ್ದರು.
ಹುಬ್ಬಳ್ಳಿಯಲ್ಲಿ ರಾಜಕೀಯ ದೀಕ್ಷೆ ಪಡೆದ ಅಂತಕುಮಾರ, ತೆಲುಗು ಮನೆಭಾಷೆಯಾಗಿರುವ ಮೂಲ್ಕನಾಡು ಬ್ರಾಹ್ಮಣ ಸಮುದಾಯಕ್ಕೆ ಸೇರಿದವರು. ಹುಬ್ಬಳ್ಳಿಯಲ್ಲಿ ಪ್ರಚಂಡ ಭಾಷಣಗಳಿಗೆ ಹೆಸರಾಗಿದ್ದ ಜನಸಂಘದ ಜಗನ್ನಾಥರಾವ್ ಜೋಶಿ ಪ್ರಭಾವಕ್ಕೆ ಒಳಗಾಗಿ ಅನಂತಕುಮಾರ, ಪ್ರಹ್ಲಾದ್ ಜೋಶಿ ಸಂಘ ಪರಿವಾರದ ಅಂಗಸಂಸ್ಥೆ ಎಬಿವಿಪಿ ಸೇರಿದ್ದರು. ರೈಲ್ವೆ ನೌಕರರಾಗಿದ್ದ ಇವರಿಬ್ಬರ ತಂದೆಯಂದಿರು ಹುಬ್ಬಳ್ಳಿಯ ರೈಲ್ವೆÃ ಕ್ವಾರ್ಟರ್ಸ್ನಲ್ಲಿ ತಮ್ಮ ಮಧ್ಯಮ ವರ್ಗದ ಕುಟುಂಬಗಳನ್ನು ಸಾಗಿಸುತ್ತಿದ್ದರು.
ಮೊದಲಿಂದಲೂ ವೈದಿಕಶಾಹಿಯ ‘ಶ್ರೆÃಷ್ಠತೆ’ಯ ಆರಾಧಕರಾಗಿದ್ದ ಅನಂತಕುಮಾರ ಕುಟುಂಬ 80ರ ದಶಕದಾರಂಭದಲ್ಲಿ ಬಿಜೆಪಿಯೊಂದಿಗೆ ಗುರುತಿಸಿಕೊಂಡಿತ್ತು. ಅನಂತ್ ತಾಯಿ ಗಿರಿಜಾ ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಸದಸ್ಯರೂ ಆಗಿದ್ದರು.
80ರ ದಶಕದ ಆರಂಭದ ವರ್ಷಗಳಲ್ಲಿ ಎಬಿವಿಪಿ ಕಾರ್ಯಕ್ರಮಗಳ ಸುದ್ದಿಗಳನ್ನು ಪತ್ರಿಕಾ ಕಚೇರಿಗಳಿಗೆ ತಲುಪಿಸುತ್ತಿದ್ದ ಅನಂತಕುಮಾರ್ ಪತ್ರಕರ್ತರೊಂದಿಗೆ ಆತ್ಮಿÃಯರಾಗಿದ್ದರು. ಆಗಿನ್ನೂ ಅವರಿಗೆ ಉಗ್ರ ಹಿಂದೂತ್ವದ ನಶೆ ತಗುಲಿರಲಿಲ್ಲ. ವಿದ್ಯಾರ್ಥಿ ಸಂಘಟನೆಯಷ್ಟನ್ನೆÃ ತಲೆಗೆ ಹಚ್ಚಿಕೊಂಡಿದ್ದ ಅವರು ಎಬಿವಿಪಿಯೇತರ ಕಾರ್ಯಕ್ರಮಗಳಿಗೂ ಹಾಜರಾಗುವ ಉದಾರಮನಸ್ಕರಾಗಿದ್ದರು. ಹೀಗಾಗಿಯೇ 1982ರಲ್ಲಿ ಬಂಡಾಯ ಸಾಹಿತ್ಯ ಸಂಘಟನೆಯ ಹುಬ್ಬಳ್ಳಿ ಘಟಕ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅನಂತಕುಮಾರ್ ಸಭಿಕರಾಗಿ ಭಾಗವಹಿಸಿದ್ದರು. ಆ ಸಭೆಯ ಆಕರ್ಷಣೆಯಾಗಿದ್ದ ಪಿ.ಲಂಕೇಶರ ಭಾಷಣವನ್ನು ತನ್ಮಯತೆಯಿಂದ ಆಲಿಸಿದ್ದರು. ರೈಲ್ವೆ ಕ್ವಾರ್ಟರ್ಸ್ನಲ್ಲಿದ್ದ ಕಾರಣಕ್ಕೆÃನೋ ಎಡಪಂಥಿಯ ಕಾರ್ಮಿಕ ನಾಯಕರ ಬಗ್ಗೆ ಗೌರವ ಹೊಂದಿದ್ದರು.
ಇದು ಅಲ್ಪಕಾಲದ ಕತೆಯಷ್ಟೆÃ. ಮುಂದೆ ಅವರು ಎಬಿವಿಪಿಯ ರಾಜ್ಯ ಕಾರ್ಯದರ್ಶಿಯಾಗಿ, 1985ರ ಹೊತ್ತಿಗೆ ರಾಷ್ಟç ಕಾರ್ಯದರ್ಶಿಯಾಗಿ ಹಿಂದುತ್ವ ರಾಷ್ಟಿçÃಯತೆಯ ಪ್ರತಿಪಾದನೆಯ ಕಾಲಾಳುಗಳ ಗುಂಪಿಗೆ ಸೇರಿದರು. 80ರ ದಶಕದ ಅಂತ್ಯದಲ್ಲಿ ಆರೆಸ್ಸೆಸ್ ಅವರನ್ನು ಬಿಜೆಪಿಗೆ ಡೆಪ್ಯೂಟ್ ಮಾಡಿ, ಯಡಿಯೂರಪ್ಪ ನಂತರದ ನಾಯಕನ್ನಾಗಿ ಬೆಳೆಸಲು ಆರಂಭಿಸಿತು.
ಮುಂದೆ ಅವರು ಬೆಂಗಳೂರು ದಕ್ಷಿಣದ ಸಂಸದರಾದರು. ಅಲ್ಲಿನ ಬಹುಸಂಖ್ಯಾತ ಬ್ರಾಹ್ಮಣರು ಅನಂತರ ಕಾಯಂ ಮತಬ್ಯಾಂಕ್ ಆದರು. ಕಾಂಗ್ರೆಸ್-ಜೆಡಿಎಸ್‌ಗಳ ದುರ್ಬಲ ಅಭ್ಯರ್ಥಿಗಳು, ಅವರ ನಡುವಿನ ಮತ ಹಂಚಿಕೆಯೂ ಅನಂತರ ಸತತ ಗೆಲುವಿಗೆ ಸಹಕರಿಸಿತು. ವೆಂಕಯ್ಯನಾಯ್ಡು, ಪಿಇಎಸ್ ದೊರೆಸ್ವಾಮಿ ಕಾರಣದಿಂದ ತೆಲುಗರ ಮತಗಳು ದಕ್ಕುತ್ತ ಬಂದವು. ಕೇಂದ್ರ ಸರ್ಕಾರಿ ನೌಕರರೂ ಅನಂತ್‌ರ ಪರವೇ ಇದ್ದರು.
ಕರ್ನಾಟಕದ ಸಿಎಂ ಆಗಬೇಕೆಂದು ಬಯಸಿದ್ದ ಅನಂತರಿಗೆ ಅಂತಹ ಪೂರಕ ವಾತಾವರಣವೂ ಲಭ್ಯವಾಗಲಿಲ್ಲ. ದೆಹಲಿಯ ಅಧಿಕಾರ ರಾಜಕಾರಣಕ್ಕೆ ಸೀಮಿತರಾದ ಅವರು ಬೆಂಗಳೂರಿನ ಕಾಸ್ಮೊಪಾಲ್ಟಿಯನ್ ರಾಜಕಾರಣಿಯಾದರಷ್ಟೆÃ. ನರೇಂದ್ರ ಮೋದಿ ಪ್ರಧಾನಮಂತ್ರಿಯಾದ ನಂತರ, ಅದ್ವಾನಿ ಬಳಗಲ್ಲಿದ್ದ ಅನಂತ್‌ಗೆ ಪ್ರಾಧಾನ್ಯತೆ ಸಿಗಲಿಲ್ಲ. ಆರ್‌ಎಸ್‌ಎಸ್ ಕಾರಣದಿಂದ ರಾಸಾಯನಿಕ ಗೊಬ್ಬರ ಖಾತೆಯ ಸಚಿವರಾದರಷ್ಟೆÃ.
ಲಿಂಗಾಯತ ಯಡಿಯೂರಪ್ಪ ಮಾಸ್ ಲೀಡರ್ ಕೂಡ ಆಗಿದ್ದರಿಂದ, ಕನ್ನಡಿಗರ ತಳಮಟ್ಟದ ಸಂಪರ್ಕವೇ ಇಲ್ಲದಿದ್ದ ಬ್ರಾಹ್ಮಣ ಅನಂತಕುಮಾರರಿಗೆ ಸಿಎಂ ಪಟ್ಟ ಮರೀಚಿಕೆಯೇ ಆಯಿತು. ಆರ್‌ಎಸ್‌ಎಸ್ ಪ್ರಭಾವವಷ್ಟನ್ನೆÃ ನೆಚ್ಚಿಕೊಂಡು ಸಿಎಂ ಹುದ್ದೆಯ ಕನಸು ಕಂಡಿದ್ದು ಅನಂತರ ಸ್ವಯಂಕೃತಾಪರಾಧವಾಗಿತ್ತು.
ಸೈದ್ಧಾಂತಿಕವಾಗಿ ಅನಂತಕುಮಾರ ಹೆಗಡೆಯಂತೆಯೇ ಇದ್ದ ಅವರು, ಹೆಗಡೆಯಂತೆ ಬಾಹ್ಯವಾಗಿ ಅದನ್ನು ಕ್ಷÄಲ್ಲಕ ಭಾಷೆಯಲ್ಲಿ ಬಳಸಲಿಲ್ಲ. ರಾಜ್ಯಕ್ಕೆ ಅನಂತರ ಕೊಡುಗೆ ಏನೆಂದು ನೋಡಿದರೆ ಹೇಳಿಕೊಳ್ಳುವಂತದ್ದೆÃನೂ ಇಲ್ಲ. ಭೌಗೋಳಿಕ ಮತ್ತು ಆಡಳಿತಾತ್ಮಕ ಕಾರಣದಿಂದ ಸಹಜವಾಗಿ ಹುಬ್ಬಳ್ಳಿಗೆ ಮಂಜೂರಾಗಿದ್ದ ನೈರುತ್ಯವಲಯ ಕಚೇರಿ ಕೈಜಾರದಂತೆ ಅನಂತ್ ಶ್ರಮಿಸಿದರು. ಆಗಿನ ಪ್ರಧಾನಿ ವಾಜಪೇಯಿ ಇದಕ್ಕೆ ನೆರವಾದರು.
ಉಳಿದಂತೆ ತಮಗೆ ರಾಜಕೀಯ ದೀಕ್ಷೆ ನೀಡಿದ ಹುಬ್ಬಳ್ಳಿ ಭಾಗವನ್ನು ಅವರು ನಿರ್ಲಕ್ಷಿಸುತ್ತಲೇ ಬಂದರು. ಈದ್ಗಾ ಮೈದಾನದಲ್ಲಿ ಉಮಾಭಾರತಿ ಧ್ವಜ ಹಾರಿಸಲು ಬಂದಾಗಷ್ಟೆÃ ಅವರು ಗಳಿಗೆ ಹೊತ್ತು ಇಲ್ಲಿ ಕ್ರಿಯಾಶೀಲರಾಗಿದ್ದರು. ಈ ಭಾಗದ ಜೀವನ್ಮರಣದ ಹೋರಾಟ ಎನಿಸಿದ ಮಹದಾಯಿ ಹೋರಾಟವನ್ನೂ ಅವರು ನಿರ್ಲಕ್ಷಿಸಿದರು. ನರಗುಂದದ ಹೋರಾಟ ವೇದಿಕೆಯ ಮೇಲೆ ಔಪಚಾರಿಕವಾಗಿಯಾದರೂ ಕಾಣಿಸಿಕೊಳ್ಳುವಷ್ಟು ನೈತಿಕತೆಯನ್ನು ಅವರು ಕಳೆÀದುಕೊಂಡಿದ್ದರು.
ಮಹದಾಯಿ ನೀರಿಗಾಗಿ ಸರ್ವಪಕ್ಷ ನಿಯೋಗ ಪ್ರಧಾನಿ ಭೇಟಿಯಾದಾಗ ಅನಂತ್ ಮೌನವಾಗಿದ್ದರು. ಪ್ರಧಾನಿ ಕಚೇರಿಯ ಸರ್ವಾಡಳಿತದಿಂದ ಬಹುಪಾಲು ಕೇಂದ್ರ ಸಚಿವರಂತೆ ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾಗಿದ್ದರು.
ಬಾಬಾ ಬುಡನ್‌ಗಿರಿ ವಿವಾದ ರಾಜ್ಯವ್ಯಾಪಿಯಾದರೆ ಸಿಎಂ ಆಗಬಹುದು ಎಂದು ಲೆಕ್ಕಿಸಿದ್ದ ಅವರು, ‘ಬಾಬಾಬುಡನ್‌ಗಿರಿಯನ್ನು ಕರ್ನಾಟಕದ ಅಂiÉÆÃಧ್ಯೆಯನ್ನಾಗಿ ಮಾಡುತ್ತೆÃವೆ’ ಎಂಬ ಅಪಾಯಕಾರಿ ಆಟಕ್ಕೂ ಕೈ ಹಾಕಿದ್ದರು. ಕೋಮು ಸೌಹಾರ್ದ ವೇದಿಕೆಯ ಹೋರಾಟದಿಂದ ಮೂಡಿದ ಜನಜಾಗೃತಿಯ ಎದುರು ನಿಲ್ಲದೇ ಹೋದರು.
ಅನಂತ್ ನಿಧನ ಎಂಬ ಸುದ್ದಿಯನ್ನು ಕೇಳಿದ ಕ್ಷಣದಲ್ಲಿ ಈ ಭಾಗದ ಜನಸಾಮಾನ್ಯರಿರಲಿ, ಹೊಸ ತಲೆಮಾರಿನ ಬಿಜೆಪಿ ಭಕ್ತರ ಕಣ್ಣಮುಂದೆ ಬಂದಿದ್ದು ಅನಂತಕುಮಾರ್ ಹೆಗಡೆಯ ಚಿತ್ರವೇ ಹೊರತು ಅನಂತಕುಮಾರರದ್ದಲ್ಲ ಎಂಬ ವಿದ್ಯಮಾನ, ಬಿಜೆಪಿಯಲ್ಲೆÃ ಅನಂತಕುಮಾರ್ ಅಜ್ಞಾತರಾಗಿದ್ದರು ಎಂಬುದಕ್ಕೆ ಸಂಕೇತದಂತಿದೆ. ಅದು ಮೋದಿ ಬಿಜೆಪಿಯ ಪರಿಸ್ಥಿತಿ ಕೂಡ ಆಗಿದೆ!

– ಪಿ.ಕೆ. ಮಲ್ಲನಗೌಡರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...