Homeರಾಜಕೀಯಅಪಾಯಕಾರಿ ಆಟಕ್ಕೆ ಕೈಹಾಕಿದರೂ, ಬಿಜೆಪಿಯೊಳಗೆ ಅಜ್ಞಾತರಾಗುತ್ತಾ ಬಂದರು ಈ ಕುಮಾರ

ಅಪಾಯಕಾರಿ ಆಟಕ್ಕೆ ಕೈಹಾಕಿದರೂ, ಬಿಜೆಪಿಯೊಳಗೆ ಅಜ್ಞಾತರಾಗುತ್ತಾ ಬಂದರು ಈ ಕುಮಾರ

- Advertisement -
- Advertisement -

ಇತ್ತಿÃಚಿನ ವರ್ಷಗಳಲ್ಲಿ, ಕರ್ನಾಟಕದ ಮುಖ್ಮಮಂತ್ರಿ ಆಗಬೇಕೆಂಬ ಮಹಾತ್ವಾಕಾಂಕ್ಷೆ ಈಡೇರುವುದು ಅಸಾಧ್ಯ ಎಂಬ ಸತ್ಯ ಅರಿತಿದ್ದ ಅಡ್ವಾಣಿಯವರ ಶಿಷ್ಯ ಅನಂತಕುಮಾರ ವಿಧಿವಶರಾಗಿದ್ದಾರೆ. ಕೇಂದ್ರ ಸಚಿವರಾಗಿದ್ದು ಅದ್ವಾನಿಯವರಂತೆ ಅನಂತ್ ಕೂಡ ಮೋದಿ ಟೀಮ್‌ನಿಂದ ದೂರವೇ ಇಟ್ಟಲ್ಪಟ್ಟಿದ್ದರು.
ಹುಬ್ಬಳ್ಳಿಯಲ್ಲಿ ರಾಜಕೀಯ ದೀಕ್ಷೆ ಪಡೆದ ಅಂತಕುಮಾರ, ತೆಲುಗು ಮನೆಭಾಷೆಯಾಗಿರುವ ಮೂಲ್ಕನಾಡು ಬ್ರಾಹ್ಮಣ ಸಮುದಾಯಕ್ಕೆ ಸೇರಿದವರು. ಹುಬ್ಬಳ್ಳಿಯಲ್ಲಿ ಪ್ರಚಂಡ ಭಾಷಣಗಳಿಗೆ ಹೆಸರಾಗಿದ್ದ ಜನಸಂಘದ ಜಗನ್ನಾಥರಾವ್ ಜೋಶಿ ಪ್ರಭಾವಕ್ಕೆ ಒಳಗಾಗಿ ಅನಂತಕುಮಾರ, ಪ್ರಹ್ಲಾದ್ ಜೋಶಿ ಸಂಘ ಪರಿವಾರದ ಅಂಗಸಂಸ್ಥೆ ಎಬಿವಿಪಿ ಸೇರಿದ್ದರು. ರೈಲ್ವೆ ನೌಕರರಾಗಿದ್ದ ಇವರಿಬ್ಬರ ತಂದೆಯಂದಿರು ಹುಬ್ಬಳ್ಳಿಯ ರೈಲ್ವೆÃ ಕ್ವಾರ್ಟರ್ಸ್ನಲ್ಲಿ ತಮ್ಮ ಮಧ್ಯಮ ವರ್ಗದ ಕುಟುಂಬಗಳನ್ನು ಸಾಗಿಸುತ್ತಿದ್ದರು.
ಮೊದಲಿಂದಲೂ ವೈದಿಕಶಾಹಿಯ ‘ಶ್ರೆÃಷ್ಠತೆ’ಯ ಆರಾಧಕರಾಗಿದ್ದ ಅನಂತಕುಮಾರ ಕುಟುಂಬ 80ರ ದಶಕದಾರಂಭದಲ್ಲಿ ಬಿಜೆಪಿಯೊಂದಿಗೆ ಗುರುತಿಸಿಕೊಂಡಿತ್ತು. ಅನಂತ್ ತಾಯಿ ಗಿರಿಜಾ ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಸದಸ್ಯರೂ ಆಗಿದ್ದರು.
80ರ ದಶಕದ ಆರಂಭದ ವರ್ಷಗಳಲ್ಲಿ ಎಬಿವಿಪಿ ಕಾರ್ಯಕ್ರಮಗಳ ಸುದ್ದಿಗಳನ್ನು ಪತ್ರಿಕಾ ಕಚೇರಿಗಳಿಗೆ ತಲುಪಿಸುತ್ತಿದ್ದ ಅನಂತಕುಮಾರ್ ಪತ್ರಕರ್ತರೊಂದಿಗೆ ಆತ್ಮಿÃಯರಾಗಿದ್ದರು. ಆಗಿನ್ನೂ ಅವರಿಗೆ ಉಗ್ರ ಹಿಂದೂತ್ವದ ನಶೆ ತಗುಲಿರಲಿಲ್ಲ. ವಿದ್ಯಾರ್ಥಿ ಸಂಘಟನೆಯಷ್ಟನ್ನೆÃ ತಲೆಗೆ ಹಚ್ಚಿಕೊಂಡಿದ್ದ ಅವರು ಎಬಿವಿಪಿಯೇತರ ಕಾರ್ಯಕ್ರಮಗಳಿಗೂ ಹಾಜರಾಗುವ ಉದಾರಮನಸ್ಕರಾಗಿದ್ದರು. ಹೀಗಾಗಿಯೇ 1982ರಲ್ಲಿ ಬಂಡಾಯ ಸಾಹಿತ್ಯ ಸಂಘಟನೆಯ ಹುಬ್ಬಳ್ಳಿ ಘಟಕ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅನಂತಕುಮಾರ್ ಸಭಿಕರಾಗಿ ಭಾಗವಹಿಸಿದ್ದರು. ಆ ಸಭೆಯ ಆಕರ್ಷಣೆಯಾಗಿದ್ದ ಪಿ.ಲಂಕೇಶರ ಭಾಷಣವನ್ನು ತನ್ಮಯತೆಯಿಂದ ಆಲಿಸಿದ್ದರು. ರೈಲ್ವೆ ಕ್ವಾರ್ಟರ್ಸ್ನಲ್ಲಿದ್ದ ಕಾರಣಕ್ಕೆÃನೋ ಎಡಪಂಥಿಯ ಕಾರ್ಮಿಕ ನಾಯಕರ ಬಗ್ಗೆ ಗೌರವ ಹೊಂದಿದ್ದರು.
ಇದು ಅಲ್ಪಕಾಲದ ಕತೆಯಷ್ಟೆÃ. ಮುಂದೆ ಅವರು ಎಬಿವಿಪಿಯ ರಾಜ್ಯ ಕಾರ್ಯದರ್ಶಿಯಾಗಿ, 1985ರ ಹೊತ್ತಿಗೆ ರಾಷ್ಟç ಕಾರ್ಯದರ್ಶಿಯಾಗಿ ಹಿಂದುತ್ವ ರಾಷ್ಟಿçÃಯತೆಯ ಪ್ರತಿಪಾದನೆಯ ಕಾಲಾಳುಗಳ ಗುಂಪಿಗೆ ಸೇರಿದರು. 80ರ ದಶಕದ ಅಂತ್ಯದಲ್ಲಿ ಆರೆಸ್ಸೆಸ್ ಅವರನ್ನು ಬಿಜೆಪಿಗೆ ಡೆಪ್ಯೂಟ್ ಮಾಡಿ, ಯಡಿಯೂರಪ್ಪ ನಂತರದ ನಾಯಕನ್ನಾಗಿ ಬೆಳೆಸಲು ಆರಂಭಿಸಿತು.
ಮುಂದೆ ಅವರು ಬೆಂಗಳೂರು ದಕ್ಷಿಣದ ಸಂಸದರಾದರು. ಅಲ್ಲಿನ ಬಹುಸಂಖ್ಯಾತ ಬ್ರಾಹ್ಮಣರು ಅನಂತರ ಕಾಯಂ ಮತಬ್ಯಾಂಕ್ ಆದರು. ಕಾಂಗ್ರೆಸ್-ಜೆಡಿಎಸ್‌ಗಳ ದುರ್ಬಲ ಅಭ್ಯರ್ಥಿಗಳು, ಅವರ ನಡುವಿನ ಮತ ಹಂಚಿಕೆಯೂ ಅನಂತರ ಸತತ ಗೆಲುವಿಗೆ ಸಹಕರಿಸಿತು. ವೆಂಕಯ್ಯನಾಯ್ಡು, ಪಿಇಎಸ್ ದೊರೆಸ್ವಾಮಿ ಕಾರಣದಿಂದ ತೆಲುಗರ ಮತಗಳು ದಕ್ಕುತ್ತ ಬಂದವು. ಕೇಂದ್ರ ಸರ್ಕಾರಿ ನೌಕರರೂ ಅನಂತ್‌ರ ಪರವೇ ಇದ್ದರು.
ಕರ್ನಾಟಕದ ಸಿಎಂ ಆಗಬೇಕೆಂದು ಬಯಸಿದ್ದ ಅನಂತರಿಗೆ ಅಂತಹ ಪೂರಕ ವಾತಾವರಣವೂ ಲಭ್ಯವಾಗಲಿಲ್ಲ. ದೆಹಲಿಯ ಅಧಿಕಾರ ರಾಜಕಾರಣಕ್ಕೆ ಸೀಮಿತರಾದ ಅವರು ಬೆಂಗಳೂರಿನ ಕಾಸ್ಮೊಪಾಲ್ಟಿಯನ್ ರಾಜಕಾರಣಿಯಾದರಷ್ಟೆÃ. ನರೇಂದ್ರ ಮೋದಿ ಪ್ರಧಾನಮಂತ್ರಿಯಾದ ನಂತರ, ಅದ್ವಾನಿ ಬಳಗಲ್ಲಿದ್ದ ಅನಂತ್‌ಗೆ ಪ್ರಾಧಾನ್ಯತೆ ಸಿಗಲಿಲ್ಲ. ಆರ್‌ಎಸ್‌ಎಸ್ ಕಾರಣದಿಂದ ರಾಸಾಯನಿಕ ಗೊಬ್ಬರ ಖಾತೆಯ ಸಚಿವರಾದರಷ್ಟೆÃ.
ಲಿಂಗಾಯತ ಯಡಿಯೂರಪ್ಪ ಮಾಸ್ ಲೀಡರ್ ಕೂಡ ಆಗಿದ್ದರಿಂದ, ಕನ್ನಡಿಗರ ತಳಮಟ್ಟದ ಸಂಪರ್ಕವೇ ಇಲ್ಲದಿದ್ದ ಬ್ರಾಹ್ಮಣ ಅನಂತಕುಮಾರರಿಗೆ ಸಿಎಂ ಪಟ್ಟ ಮರೀಚಿಕೆಯೇ ಆಯಿತು. ಆರ್‌ಎಸ್‌ಎಸ್ ಪ್ರಭಾವವಷ್ಟನ್ನೆÃ ನೆಚ್ಚಿಕೊಂಡು ಸಿಎಂ ಹುದ್ದೆಯ ಕನಸು ಕಂಡಿದ್ದು ಅನಂತರ ಸ್ವಯಂಕೃತಾಪರಾಧವಾಗಿತ್ತು.
ಸೈದ್ಧಾಂತಿಕವಾಗಿ ಅನಂತಕುಮಾರ ಹೆಗಡೆಯಂತೆಯೇ ಇದ್ದ ಅವರು, ಹೆಗಡೆಯಂತೆ ಬಾಹ್ಯವಾಗಿ ಅದನ್ನು ಕ್ಷÄಲ್ಲಕ ಭಾಷೆಯಲ್ಲಿ ಬಳಸಲಿಲ್ಲ. ರಾಜ್ಯಕ್ಕೆ ಅನಂತರ ಕೊಡುಗೆ ಏನೆಂದು ನೋಡಿದರೆ ಹೇಳಿಕೊಳ್ಳುವಂತದ್ದೆÃನೂ ಇಲ್ಲ. ಭೌಗೋಳಿಕ ಮತ್ತು ಆಡಳಿತಾತ್ಮಕ ಕಾರಣದಿಂದ ಸಹಜವಾಗಿ ಹುಬ್ಬಳ್ಳಿಗೆ ಮಂಜೂರಾಗಿದ್ದ ನೈರುತ್ಯವಲಯ ಕಚೇರಿ ಕೈಜಾರದಂತೆ ಅನಂತ್ ಶ್ರಮಿಸಿದರು. ಆಗಿನ ಪ್ರಧಾನಿ ವಾಜಪೇಯಿ ಇದಕ್ಕೆ ನೆರವಾದರು.
ಉಳಿದಂತೆ ತಮಗೆ ರಾಜಕೀಯ ದೀಕ್ಷೆ ನೀಡಿದ ಹುಬ್ಬಳ್ಳಿ ಭಾಗವನ್ನು ಅವರು ನಿರ್ಲಕ್ಷಿಸುತ್ತಲೇ ಬಂದರು. ಈದ್ಗಾ ಮೈದಾನದಲ್ಲಿ ಉಮಾಭಾರತಿ ಧ್ವಜ ಹಾರಿಸಲು ಬಂದಾಗಷ್ಟೆÃ ಅವರು ಗಳಿಗೆ ಹೊತ್ತು ಇಲ್ಲಿ ಕ್ರಿಯಾಶೀಲರಾಗಿದ್ದರು. ಈ ಭಾಗದ ಜೀವನ್ಮರಣದ ಹೋರಾಟ ಎನಿಸಿದ ಮಹದಾಯಿ ಹೋರಾಟವನ್ನೂ ಅವರು ನಿರ್ಲಕ್ಷಿಸಿದರು. ನರಗುಂದದ ಹೋರಾಟ ವೇದಿಕೆಯ ಮೇಲೆ ಔಪಚಾರಿಕವಾಗಿಯಾದರೂ ಕಾಣಿಸಿಕೊಳ್ಳುವಷ್ಟು ನೈತಿಕತೆಯನ್ನು ಅವರು ಕಳೆÀದುಕೊಂಡಿದ್ದರು.
ಮಹದಾಯಿ ನೀರಿಗಾಗಿ ಸರ್ವಪಕ್ಷ ನಿಯೋಗ ಪ್ರಧಾನಿ ಭೇಟಿಯಾದಾಗ ಅನಂತ್ ಮೌನವಾಗಿದ್ದರು. ಪ್ರಧಾನಿ ಕಚೇರಿಯ ಸರ್ವಾಡಳಿತದಿಂದ ಬಹುಪಾಲು ಕೇಂದ್ರ ಸಚಿವರಂತೆ ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾಗಿದ್ದರು.
ಬಾಬಾ ಬುಡನ್‌ಗಿರಿ ವಿವಾದ ರಾಜ್ಯವ್ಯಾಪಿಯಾದರೆ ಸಿಎಂ ಆಗಬಹುದು ಎಂದು ಲೆಕ್ಕಿಸಿದ್ದ ಅವರು, ‘ಬಾಬಾಬುಡನ್‌ಗಿರಿಯನ್ನು ಕರ್ನಾಟಕದ ಅಂiÉÆÃಧ್ಯೆಯನ್ನಾಗಿ ಮಾಡುತ್ತೆÃವೆ’ ಎಂಬ ಅಪಾಯಕಾರಿ ಆಟಕ್ಕೂ ಕೈ ಹಾಕಿದ್ದರು. ಕೋಮು ಸೌಹಾರ್ದ ವೇದಿಕೆಯ ಹೋರಾಟದಿಂದ ಮೂಡಿದ ಜನಜಾಗೃತಿಯ ಎದುರು ನಿಲ್ಲದೇ ಹೋದರು.
ಅನಂತ್ ನಿಧನ ಎಂಬ ಸುದ್ದಿಯನ್ನು ಕೇಳಿದ ಕ್ಷಣದಲ್ಲಿ ಈ ಭಾಗದ ಜನಸಾಮಾನ್ಯರಿರಲಿ, ಹೊಸ ತಲೆಮಾರಿನ ಬಿಜೆಪಿ ಭಕ್ತರ ಕಣ್ಣಮುಂದೆ ಬಂದಿದ್ದು ಅನಂತಕುಮಾರ್ ಹೆಗಡೆಯ ಚಿತ್ರವೇ ಹೊರತು ಅನಂತಕುಮಾರರದ್ದಲ್ಲ ಎಂಬ ವಿದ್ಯಮಾನ, ಬಿಜೆಪಿಯಲ್ಲೆÃ ಅನಂತಕುಮಾರ್ ಅಜ್ಞಾತರಾಗಿದ್ದರು ಎಂಬುದಕ್ಕೆ ಸಂಕೇತದಂತಿದೆ. ಅದು ಮೋದಿ ಬಿಜೆಪಿಯ ಪರಿಸ್ಥಿತಿ ಕೂಡ ಆಗಿದೆ!

– ಪಿ.ಕೆ. ಮಲ್ಲನಗೌಡರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...