Homeರಾಜಕೀಯಅಪಾಯಕಾರಿ ಆಟಕ್ಕೆ ಕೈಹಾಕಿದರೂ, ಬಿಜೆಪಿಯೊಳಗೆ ಅಜ್ಞಾತರಾಗುತ್ತಾ ಬಂದರು ಈ ಕುಮಾರ

ಅಪಾಯಕಾರಿ ಆಟಕ್ಕೆ ಕೈಹಾಕಿದರೂ, ಬಿಜೆಪಿಯೊಳಗೆ ಅಜ್ಞಾತರಾಗುತ್ತಾ ಬಂದರು ಈ ಕುಮಾರ

- Advertisement -
- Advertisement -

ಇತ್ತಿÃಚಿನ ವರ್ಷಗಳಲ್ಲಿ, ಕರ್ನಾಟಕದ ಮುಖ್ಮಮಂತ್ರಿ ಆಗಬೇಕೆಂಬ ಮಹಾತ್ವಾಕಾಂಕ್ಷೆ ಈಡೇರುವುದು ಅಸಾಧ್ಯ ಎಂಬ ಸತ್ಯ ಅರಿತಿದ್ದ ಅಡ್ವಾಣಿಯವರ ಶಿಷ್ಯ ಅನಂತಕುಮಾರ ವಿಧಿವಶರಾಗಿದ್ದಾರೆ. ಕೇಂದ್ರ ಸಚಿವರಾಗಿದ್ದು ಅದ್ವಾನಿಯವರಂತೆ ಅನಂತ್ ಕೂಡ ಮೋದಿ ಟೀಮ್‌ನಿಂದ ದೂರವೇ ಇಟ್ಟಲ್ಪಟ್ಟಿದ್ದರು.
ಹುಬ್ಬಳ್ಳಿಯಲ್ಲಿ ರಾಜಕೀಯ ದೀಕ್ಷೆ ಪಡೆದ ಅಂತಕುಮಾರ, ತೆಲುಗು ಮನೆಭಾಷೆಯಾಗಿರುವ ಮೂಲ್ಕನಾಡು ಬ್ರಾಹ್ಮಣ ಸಮುದಾಯಕ್ಕೆ ಸೇರಿದವರು. ಹುಬ್ಬಳ್ಳಿಯಲ್ಲಿ ಪ್ರಚಂಡ ಭಾಷಣಗಳಿಗೆ ಹೆಸರಾಗಿದ್ದ ಜನಸಂಘದ ಜಗನ್ನಾಥರಾವ್ ಜೋಶಿ ಪ್ರಭಾವಕ್ಕೆ ಒಳಗಾಗಿ ಅನಂತಕುಮಾರ, ಪ್ರಹ್ಲಾದ್ ಜೋಶಿ ಸಂಘ ಪರಿವಾರದ ಅಂಗಸಂಸ್ಥೆ ಎಬಿವಿಪಿ ಸೇರಿದ್ದರು. ರೈಲ್ವೆ ನೌಕರರಾಗಿದ್ದ ಇವರಿಬ್ಬರ ತಂದೆಯಂದಿರು ಹುಬ್ಬಳ್ಳಿಯ ರೈಲ್ವೆÃ ಕ್ವಾರ್ಟರ್ಸ್ನಲ್ಲಿ ತಮ್ಮ ಮಧ್ಯಮ ವರ್ಗದ ಕುಟುಂಬಗಳನ್ನು ಸಾಗಿಸುತ್ತಿದ್ದರು.
ಮೊದಲಿಂದಲೂ ವೈದಿಕಶಾಹಿಯ ‘ಶ್ರೆÃಷ್ಠತೆ’ಯ ಆರಾಧಕರಾಗಿದ್ದ ಅನಂತಕುಮಾರ ಕುಟುಂಬ 80ರ ದಶಕದಾರಂಭದಲ್ಲಿ ಬಿಜೆಪಿಯೊಂದಿಗೆ ಗುರುತಿಸಿಕೊಂಡಿತ್ತು. ಅನಂತ್ ತಾಯಿ ಗಿರಿಜಾ ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಸದಸ್ಯರೂ ಆಗಿದ್ದರು.
80ರ ದಶಕದ ಆರಂಭದ ವರ್ಷಗಳಲ್ಲಿ ಎಬಿವಿಪಿ ಕಾರ್ಯಕ್ರಮಗಳ ಸುದ್ದಿಗಳನ್ನು ಪತ್ರಿಕಾ ಕಚೇರಿಗಳಿಗೆ ತಲುಪಿಸುತ್ತಿದ್ದ ಅನಂತಕುಮಾರ್ ಪತ್ರಕರ್ತರೊಂದಿಗೆ ಆತ್ಮಿÃಯರಾಗಿದ್ದರು. ಆಗಿನ್ನೂ ಅವರಿಗೆ ಉಗ್ರ ಹಿಂದೂತ್ವದ ನಶೆ ತಗುಲಿರಲಿಲ್ಲ. ವಿದ್ಯಾರ್ಥಿ ಸಂಘಟನೆಯಷ್ಟನ್ನೆÃ ತಲೆಗೆ ಹಚ್ಚಿಕೊಂಡಿದ್ದ ಅವರು ಎಬಿವಿಪಿಯೇತರ ಕಾರ್ಯಕ್ರಮಗಳಿಗೂ ಹಾಜರಾಗುವ ಉದಾರಮನಸ್ಕರಾಗಿದ್ದರು. ಹೀಗಾಗಿಯೇ 1982ರಲ್ಲಿ ಬಂಡಾಯ ಸಾಹಿತ್ಯ ಸಂಘಟನೆಯ ಹುಬ್ಬಳ್ಳಿ ಘಟಕ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅನಂತಕುಮಾರ್ ಸಭಿಕರಾಗಿ ಭಾಗವಹಿಸಿದ್ದರು. ಆ ಸಭೆಯ ಆಕರ್ಷಣೆಯಾಗಿದ್ದ ಪಿ.ಲಂಕೇಶರ ಭಾಷಣವನ್ನು ತನ್ಮಯತೆಯಿಂದ ಆಲಿಸಿದ್ದರು. ರೈಲ್ವೆ ಕ್ವಾರ್ಟರ್ಸ್ನಲ್ಲಿದ್ದ ಕಾರಣಕ್ಕೆÃನೋ ಎಡಪಂಥಿಯ ಕಾರ್ಮಿಕ ನಾಯಕರ ಬಗ್ಗೆ ಗೌರವ ಹೊಂದಿದ್ದರು.
ಇದು ಅಲ್ಪಕಾಲದ ಕತೆಯಷ್ಟೆÃ. ಮುಂದೆ ಅವರು ಎಬಿವಿಪಿಯ ರಾಜ್ಯ ಕಾರ್ಯದರ್ಶಿಯಾಗಿ, 1985ರ ಹೊತ್ತಿಗೆ ರಾಷ್ಟç ಕಾರ್ಯದರ್ಶಿಯಾಗಿ ಹಿಂದುತ್ವ ರಾಷ್ಟಿçÃಯತೆಯ ಪ್ರತಿಪಾದನೆಯ ಕಾಲಾಳುಗಳ ಗುಂಪಿಗೆ ಸೇರಿದರು. 80ರ ದಶಕದ ಅಂತ್ಯದಲ್ಲಿ ಆರೆಸ್ಸೆಸ್ ಅವರನ್ನು ಬಿಜೆಪಿಗೆ ಡೆಪ್ಯೂಟ್ ಮಾಡಿ, ಯಡಿಯೂರಪ್ಪ ನಂತರದ ನಾಯಕನ್ನಾಗಿ ಬೆಳೆಸಲು ಆರಂಭಿಸಿತು.
ಮುಂದೆ ಅವರು ಬೆಂಗಳೂರು ದಕ್ಷಿಣದ ಸಂಸದರಾದರು. ಅಲ್ಲಿನ ಬಹುಸಂಖ್ಯಾತ ಬ್ರಾಹ್ಮಣರು ಅನಂತರ ಕಾಯಂ ಮತಬ್ಯಾಂಕ್ ಆದರು. ಕಾಂಗ್ರೆಸ್-ಜೆಡಿಎಸ್‌ಗಳ ದುರ್ಬಲ ಅಭ್ಯರ್ಥಿಗಳು, ಅವರ ನಡುವಿನ ಮತ ಹಂಚಿಕೆಯೂ ಅನಂತರ ಸತತ ಗೆಲುವಿಗೆ ಸಹಕರಿಸಿತು. ವೆಂಕಯ್ಯನಾಯ್ಡು, ಪಿಇಎಸ್ ದೊರೆಸ್ವಾಮಿ ಕಾರಣದಿಂದ ತೆಲುಗರ ಮತಗಳು ದಕ್ಕುತ್ತ ಬಂದವು. ಕೇಂದ್ರ ಸರ್ಕಾರಿ ನೌಕರರೂ ಅನಂತ್‌ರ ಪರವೇ ಇದ್ದರು.
ಕರ್ನಾಟಕದ ಸಿಎಂ ಆಗಬೇಕೆಂದು ಬಯಸಿದ್ದ ಅನಂತರಿಗೆ ಅಂತಹ ಪೂರಕ ವಾತಾವರಣವೂ ಲಭ್ಯವಾಗಲಿಲ್ಲ. ದೆಹಲಿಯ ಅಧಿಕಾರ ರಾಜಕಾರಣಕ್ಕೆ ಸೀಮಿತರಾದ ಅವರು ಬೆಂಗಳೂರಿನ ಕಾಸ್ಮೊಪಾಲ್ಟಿಯನ್ ರಾಜಕಾರಣಿಯಾದರಷ್ಟೆÃ. ನರೇಂದ್ರ ಮೋದಿ ಪ್ರಧಾನಮಂತ್ರಿಯಾದ ನಂತರ, ಅದ್ವಾನಿ ಬಳಗಲ್ಲಿದ್ದ ಅನಂತ್‌ಗೆ ಪ್ರಾಧಾನ್ಯತೆ ಸಿಗಲಿಲ್ಲ. ಆರ್‌ಎಸ್‌ಎಸ್ ಕಾರಣದಿಂದ ರಾಸಾಯನಿಕ ಗೊಬ್ಬರ ಖಾತೆಯ ಸಚಿವರಾದರಷ್ಟೆÃ.
ಲಿಂಗಾಯತ ಯಡಿಯೂರಪ್ಪ ಮಾಸ್ ಲೀಡರ್ ಕೂಡ ಆಗಿದ್ದರಿಂದ, ಕನ್ನಡಿಗರ ತಳಮಟ್ಟದ ಸಂಪರ್ಕವೇ ಇಲ್ಲದಿದ್ದ ಬ್ರಾಹ್ಮಣ ಅನಂತಕುಮಾರರಿಗೆ ಸಿಎಂ ಪಟ್ಟ ಮರೀಚಿಕೆಯೇ ಆಯಿತು. ಆರ್‌ಎಸ್‌ಎಸ್ ಪ್ರಭಾವವಷ್ಟನ್ನೆÃ ನೆಚ್ಚಿಕೊಂಡು ಸಿಎಂ ಹುದ್ದೆಯ ಕನಸು ಕಂಡಿದ್ದು ಅನಂತರ ಸ್ವಯಂಕೃತಾಪರಾಧವಾಗಿತ್ತು.
ಸೈದ್ಧಾಂತಿಕವಾಗಿ ಅನಂತಕುಮಾರ ಹೆಗಡೆಯಂತೆಯೇ ಇದ್ದ ಅವರು, ಹೆಗಡೆಯಂತೆ ಬಾಹ್ಯವಾಗಿ ಅದನ್ನು ಕ್ಷÄಲ್ಲಕ ಭಾಷೆಯಲ್ಲಿ ಬಳಸಲಿಲ್ಲ. ರಾಜ್ಯಕ್ಕೆ ಅನಂತರ ಕೊಡುಗೆ ಏನೆಂದು ನೋಡಿದರೆ ಹೇಳಿಕೊಳ್ಳುವಂತದ್ದೆÃನೂ ಇಲ್ಲ. ಭೌಗೋಳಿಕ ಮತ್ತು ಆಡಳಿತಾತ್ಮಕ ಕಾರಣದಿಂದ ಸಹಜವಾಗಿ ಹುಬ್ಬಳ್ಳಿಗೆ ಮಂಜೂರಾಗಿದ್ದ ನೈರುತ್ಯವಲಯ ಕಚೇರಿ ಕೈಜಾರದಂತೆ ಅನಂತ್ ಶ್ರಮಿಸಿದರು. ಆಗಿನ ಪ್ರಧಾನಿ ವಾಜಪೇಯಿ ಇದಕ್ಕೆ ನೆರವಾದರು.
ಉಳಿದಂತೆ ತಮಗೆ ರಾಜಕೀಯ ದೀಕ್ಷೆ ನೀಡಿದ ಹುಬ್ಬಳ್ಳಿ ಭಾಗವನ್ನು ಅವರು ನಿರ್ಲಕ್ಷಿಸುತ್ತಲೇ ಬಂದರು. ಈದ್ಗಾ ಮೈದಾನದಲ್ಲಿ ಉಮಾಭಾರತಿ ಧ್ವಜ ಹಾರಿಸಲು ಬಂದಾಗಷ್ಟೆÃ ಅವರು ಗಳಿಗೆ ಹೊತ್ತು ಇಲ್ಲಿ ಕ್ರಿಯಾಶೀಲರಾಗಿದ್ದರು. ಈ ಭಾಗದ ಜೀವನ್ಮರಣದ ಹೋರಾಟ ಎನಿಸಿದ ಮಹದಾಯಿ ಹೋರಾಟವನ್ನೂ ಅವರು ನಿರ್ಲಕ್ಷಿಸಿದರು. ನರಗುಂದದ ಹೋರಾಟ ವೇದಿಕೆಯ ಮೇಲೆ ಔಪಚಾರಿಕವಾಗಿಯಾದರೂ ಕಾಣಿಸಿಕೊಳ್ಳುವಷ್ಟು ನೈತಿಕತೆಯನ್ನು ಅವರು ಕಳೆÀದುಕೊಂಡಿದ್ದರು.
ಮಹದಾಯಿ ನೀರಿಗಾಗಿ ಸರ್ವಪಕ್ಷ ನಿಯೋಗ ಪ್ರಧಾನಿ ಭೇಟಿಯಾದಾಗ ಅನಂತ್ ಮೌನವಾಗಿದ್ದರು. ಪ್ರಧಾನಿ ಕಚೇರಿಯ ಸರ್ವಾಡಳಿತದಿಂದ ಬಹುಪಾಲು ಕೇಂದ್ರ ಸಚಿವರಂತೆ ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾಗಿದ್ದರು.
ಬಾಬಾ ಬುಡನ್‌ಗಿರಿ ವಿವಾದ ರಾಜ್ಯವ್ಯಾಪಿಯಾದರೆ ಸಿಎಂ ಆಗಬಹುದು ಎಂದು ಲೆಕ್ಕಿಸಿದ್ದ ಅವರು, ‘ಬಾಬಾಬುಡನ್‌ಗಿರಿಯನ್ನು ಕರ್ನಾಟಕದ ಅಂiÉÆÃಧ್ಯೆಯನ್ನಾಗಿ ಮಾಡುತ್ತೆÃವೆ’ ಎಂಬ ಅಪಾಯಕಾರಿ ಆಟಕ್ಕೂ ಕೈ ಹಾಕಿದ್ದರು. ಕೋಮು ಸೌಹಾರ್ದ ವೇದಿಕೆಯ ಹೋರಾಟದಿಂದ ಮೂಡಿದ ಜನಜಾಗೃತಿಯ ಎದುರು ನಿಲ್ಲದೇ ಹೋದರು.
ಅನಂತ್ ನಿಧನ ಎಂಬ ಸುದ್ದಿಯನ್ನು ಕೇಳಿದ ಕ್ಷಣದಲ್ಲಿ ಈ ಭಾಗದ ಜನಸಾಮಾನ್ಯರಿರಲಿ, ಹೊಸ ತಲೆಮಾರಿನ ಬಿಜೆಪಿ ಭಕ್ತರ ಕಣ್ಣಮುಂದೆ ಬಂದಿದ್ದು ಅನಂತಕುಮಾರ್ ಹೆಗಡೆಯ ಚಿತ್ರವೇ ಹೊರತು ಅನಂತಕುಮಾರರದ್ದಲ್ಲ ಎಂಬ ವಿದ್ಯಮಾನ, ಬಿಜೆಪಿಯಲ್ಲೆÃ ಅನಂತಕುಮಾರ್ ಅಜ್ಞಾತರಾಗಿದ್ದರು ಎಂಬುದಕ್ಕೆ ಸಂಕೇತದಂತಿದೆ. ಅದು ಮೋದಿ ಬಿಜೆಪಿಯ ಪರಿಸ್ಥಿತಿ ಕೂಡ ಆಗಿದೆ!

– ಪಿ.ಕೆ. ಮಲ್ಲನಗೌಡರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ಚನ್ನರಾಯಪಟ್ಟಣ ರೈತರಿಗೆ ಅಂತಿಮ ವಿಜಯ; ​ಬೆಂಬಲಕ್ಕೆ ನಿಂತವರಿಗೆ ಧನ್ಯವಾದ ತಿಳಿಸಿದ ‘ಹೋರಾಟ ಸಮಿತಿ’

​ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಭೂ ಹೋರಾಟ ಕೊನೆಗೂ ಸುಖಾಂತ್ಯವಾಗಿದೆ. ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಜೊತೆಗೆ ರಾಜ್ಯದ ಹತ್ತಾರು ಜನಪರ ಸಂಘಟನೆಗಳು ನಡೆಸಿದ ಸುದೀರ್ಘ ಹೋರಾಟ...

ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಬಗ್ಗೆ ತುಟಿ ಬಿಚ್ಚದ ಸರ್ಕಾರ; ‘ಬೆಳಗಾವಿ ಚಲೋ’ ಹೋರಾಟಕ್ಕೆ ಕರೆ

ಗುರುವಾರ (ಡಿ.4) ನಡೆದ ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಮೀಸಲಾತಿ ಬಗ್ಗೆ ತುಟಿ ಬಿಚ್ಚದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತವಾಗಿದ್ದು, 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ' 'ಬೆಳಗಾವಿ ಚಲೋ'...

ಅಖಂಡ ಕರ್ನಾಟಕದ ಪ್ರದೇಶಗಳನ್ನು ಸಾಂಸ್ಕೃತಿಕವಾಗಿ ವಿಲೀನಗೊಳಿಸಲು ಇದು ಸಕಾಲ: ಡಾ.ಪುರುಷೋತ್ತಮ ಬಿಳಿಮಲೆ

ಕರ್ನಾಟಕ ಮತ್ತು ನೆರೆ ರಾಜ್ಯಗಳ ಅಚ್ಚ ಕನ್ನಡ ಪ್ರದೇಶಗಳ ನಡುವಿನ ಭೌತಿಕ ಗಡಿಗಳು ಇದ್ದಂತೆ ಇದ್ದರೂ ಸಾಂಸ್ಕೃತಿಕವಾಗಿ ಹೇರಲಾಗುತ್ತಿರುವ ಗಡಿಗಳನ್ನು ಅಪ್ರಸ್ತುತವಾಗಿಸುವುದು ಸಾಧ್ಯವಿದೆ. ಇಂತಹ ಪ್ರದೇಶಗಳೊಂದಿಗೆ ಕರ್ನಾಟಕದ ಭಾವನಾತ್ಮಕ ಸಂಬಂಧದ ವಿಸ್ತರಣೆಗೆ ಇದು...

ಅರುಂಧತಿ ರಾಯ್ ಅವರ ಪುಸ್ತಕದ ಮುಖಪುಟ ವಿರೋಧಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಖ್ಯಾತ ಲೇಖಕಿ ಅರುಂಧತಿ ರಾಯ್ ಅವರ 'ಮದರ್ ಮೇರಿ ಕಮ್ಸ್ ಟು ಮಿ' ಪುಸ್ತಕದ ಮುಖಪುಟ ಚಿತ್ರದ ಪ್ರಸಾರದ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಸುಪ್ರಿಂ ಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ. ಏಕೆಂದರೆ, ಲೇಖಕರು ಧೂಮಪಾನವನ್ನು...

ರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ ಮುಕ್ತ ಪತ್ರ

ರೋಹಿಂಗ್ಯಾಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನೀಡಿದ್ದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು ಸೂರ್ಯಕಾಂತ್ ಅವರಿಗೆ ಮುಕ್ತ ಪತ್ರ ಬರೆದಿದ್ದಾರೆ.  ಕಿರುಕುಳದಿಂದ ಪಲಾಯನ ಮಾಡಿದ...

ಛತ್ತೀಸ್‌ಗಢ: ‘ಎಸ್‌ಇಸಿಎಲ್‌ ಅಮೇರಾ’ ಕಲ್ಲಿದ್ದಲು ಗಣಿ ವಿಸ್ತರಣೆ ವಿರೋಧಿಸಿ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ

ಛತ್ತೀಸ್‌ಗಢದ ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ನ (ಎಸ್‌ಇಸಿಎಲ್‌) ಅಮೇರಾ ಕಲ್ಲಿದ್ದಲು ಗಣಿಗಾರಿಕೆ ವಿಸ್ತರಣೆ ವಿರೋಧಿಸಿ ಡಿ.3 ರಂದು ಅಂಬಿಕಾಪುರದ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರ ಮೇಲೆ ಗ್ರಾಮಸ್ಥರು...

ಗಂಟೆಗಟ್ಟಲೆ ಇಂಡಿಗೋ ವಿಮಾನ ವಿಳಂಬ: ‘ನನ್ನ ಮಗಳಿಗೆ ಸ್ಯಾನಿಟರಿ ಪ್ಯಾಡ್‌ ಕೊಡಿ..’ ಎಂದು ಬೇಡಿಕೊಂಡ ತಂದೆ

ದೇಶಾದ್ಯಂತ ಇಂಡಿಗೋ ಪ್ರಯಾಣಿಕರು ಭಾರಿ ಅನಾನುಕೂಲತೆಯನ್ನು ಎದುರಿಸುತ್ತಿದ್ದಾರೆ. ಏಕೆಂದರೆ, ವಿಮಾನಯಾನ ಸಂಸ್ಥೆಯ ವಿಳಂಬ ಮತ್ತು ರದ್ದತಿ ನಿರ್ಧಾರವು ಸತತ ನಾಲ್ಕನೇ ದಿನವೂ (ಡಿ. 5) ಮುಂದುವರೆದಿದೆ. ಅವ್ಯವಸ್ಥೆಯ ನಡುವೆಯೇ, ವಿಮಾನ ನಿಲ್ದಾಣದಿಂದ ಬಂದ...

ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ: ಪುಟಿನ್‌ ಜೊತೆಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಮೋದಿ ಹೇಳಿಕೆ

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ. ಶಾಂತಿಯ ಪರವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಎರಡು ದಿನಗಳ ಭೇಟಿಗೆಂದು ಭಾರತಕ್ಕೆ ಆಗಮಿಸಿದ್ದು,...

ಮನೆ ಕಟ್ಟಲು, ವಾಹನ ಖರೀದಿಸಲು ಇದು ಸುಸಮಯ: ರೆಪೊ ದರ ಕಡಿತಗೊಳಿಸಿದ ಆರ್.ಬಿ.ಐ

ಡಿಸೆಂಬರ್ 05, ಶುಕ್ರವಾರದಂದು ನಡೆದ ಹಣಕಾಸು ನೀತಿ ಸಭೆಯಲ್ಲಿ (MPC) ಭಾರತೀಯ ರಿಸರ್ವ್ ಬ್ಯಾಂಕ್ (RBI) ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದೆ. ಇಂದಿನ ಕಡಿತದ ನಂತರ, ಕೇಂದ್ರ ಬ್ಯಾಂಕ್ ಈ...

ಉತ್ತರ ಪ್ರದೇಶ| ದಲಿತ ಯುವಕನ ಮೇಲೆ ಹಲ್ಲೆ; ಬಂದೂಕು ತೋರಿಸಿ ವಿವಸ್ತ್ರಗೊಳಿಸಿದ ಗುಂಪು

ಸಿಗರೇಟ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಗುಂಪೊಂದು ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿದೆ. ಗುಂಪು ದಲಿತ ಯುವಕನನ್ನು ಚಪ್ಪಲಿಯಿಂದ ಹೊಡೆದು, ಮುಷ್ಟಿ, ಕಾಲು ಮತ್ತು...