Homeರಾಜಕೀಯಅಪಾಯಕಾರಿ ಆಟಕ್ಕೆ ಕೈಹಾಕಿದರೂ, ಬಿಜೆಪಿಯೊಳಗೆ ಅಜ್ಞಾತರಾಗುತ್ತಾ ಬಂದರು ಈ ಕುಮಾರ

ಅಪಾಯಕಾರಿ ಆಟಕ್ಕೆ ಕೈಹಾಕಿದರೂ, ಬಿಜೆಪಿಯೊಳಗೆ ಅಜ್ಞಾತರಾಗುತ್ತಾ ಬಂದರು ಈ ಕುಮಾರ

- Advertisement -
- Advertisement -

ಇತ್ತಿÃಚಿನ ವರ್ಷಗಳಲ್ಲಿ, ಕರ್ನಾಟಕದ ಮುಖ್ಮಮಂತ್ರಿ ಆಗಬೇಕೆಂಬ ಮಹಾತ್ವಾಕಾಂಕ್ಷೆ ಈಡೇರುವುದು ಅಸಾಧ್ಯ ಎಂಬ ಸತ್ಯ ಅರಿತಿದ್ದ ಅಡ್ವಾಣಿಯವರ ಶಿಷ್ಯ ಅನಂತಕುಮಾರ ವಿಧಿವಶರಾಗಿದ್ದಾರೆ. ಕೇಂದ್ರ ಸಚಿವರಾಗಿದ್ದು ಅದ್ವಾನಿಯವರಂತೆ ಅನಂತ್ ಕೂಡ ಮೋದಿ ಟೀಮ್‌ನಿಂದ ದೂರವೇ ಇಟ್ಟಲ್ಪಟ್ಟಿದ್ದರು.
ಹುಬ್ಬಳ್ಳಿಯಲ್ಲಿ ರಾಜಕೀಯ ದೀಕ್ಷೆ ಪಡೆದ ಅಂತಕುಮಾರ, ತೆಲುಗು ಮನೆಭಾಷೆಯಾಗಿರುವ ಮೂಲ್ಕನಾಡು ಬ್ರಾಹ್ಮಣ ಸಮುದಾಯಕ್ಕೆ ಸೇರಿದವರು. ಹುಬ್ಬಳ್ಳಿಯಲ್ಲಿ ಪ್ರಚಂಡ ಭಾಷಣಗಳಿಗೆ ಹೆಸರಾಗಿದ್ದ ಜನಸಂಘದ ಜಗನ್ನಾಥರಾವ್ ಜೋಶಿ ಪ್ರಭಾವಕ್ಕೆ ಒಳಗಾಗಿ ಅನಂತಕುಮಾರ, ಪ್ರಹ್ಲಾದ್ ಜೋಶಿ ಸಂಘ ಪರಿವಾರದ ಅಂಗಸಂಸ್ಥೆ ಎಬಿವಿಪಿ ಸೇರಿದ್ದರು. ರೈಲ್ವೆ ನೌಕರರಾಗಿದ್ದ ಇವರಿಬ್ಬರ ತಂದೆಯಂದಿರು ಹುಬ್ಬಳ್ಳಿಯ ರೈಲ್ವೆÃ ಕ್ವಾರ್ಟರ್ಸ್ನಲ್ಲಿ ತಮ್ಮ ಮಧ್ಯಮ ವರ್ಗದ ಕುಟುಂಬಗಳನ್ನು ಸಾಗಿಸುತ್ತಿದ್ದರು.
ಮೊದಲಿಂದಲೂ ವೈದಿಕಶಾಹಿಯ ‘ಶ್ರೆÃಷ್ಠತೆ’ಯ ಆರಾಧಕರಾಗಿದ್ದ ಅನಂತಕುಮಾರ ಕುಟುಂಬ 80ರ ದಶಕದಾರಂಭದಲ್ಲಿ ಬಿಜೆಪಿಯೊಂದಿಗೆ ಗುರುತಿಸಿಕೊಂಡಿತ್ತು. ಅನಂತ್ ತಾಯಿ ಗಿರಿಜಾ ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಸದಸ್ಯರೂ ಆಗಿದ್ದರು.
80ರ ದಶಕದ ಆರಂಭದ ವರ್ಷಗಳಲ್ಲಿ ಎಬಿವಿಪಿ ಕಾರ್ಯಕ್ರಮಗಳ ಸುದ್ದಿಗಳನ್ನು ಪತ್ರಿಕಾ ಕಚೇರಿಗಳಿಗೆ ತಲುಪಿಸುತ್ತಿದ್ದ ಅನಂತಕುಮಾರ್ ಪತ್ರಕರ್ತರೊಂದಿಗೆ ಆತ್ಮಿÃಯರಾಗಿದ್ದರು. ಆಗಿನ್ನೂ ಅವರಿಗೆ ಉಗ್ರ ಹಿಂದೂತ್ವದ ನಶೆ ತಗುಲಿರಲಿಲ್ಲ. ವಿದ್ಯಾರ್ಥಿ ಸಂಘಟನೆಯಷ್ಟನ್ನೆÃ ತಲೆಗೆ ಹಚ್ಚಿಕೊಂಡಿದ್ದ ಅವರು ಎಬಿವಿಪಿಯೇತರ ಕಾರ್ಯಕ್ರಮಗಳಿಗೂ ಹಾಜರಾಗುವ ಉದಾರಮನಸ್ಕರಾಗಿದ್ದರು. ಹೀಗಾಗಿಯೇ 1982ರಲ್ಲಿ ಬಂಡಾಯ ಸಾಹಿತ್ಯ ಸಂಘಟನೆಯ ಹುಬ್ಬಳ್ಳಿ ಘಟಕ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅನಂತಕುಮಾರ್ ಸಭಿಕರಾಗಿ ಭಾಗವಹಿಸಿದ್ದರು. ಆ ಸಭೆಯ ಆಕರ್ಷಣೆಯಾಗಿದ್ದ ಪಿ.ಲಂಕೇಶರ ಭಾಷಣವನ್ನು ತನ್ಮಯತೆಯಿಂದ ಆಲಿಸಿದ್ದರು. ರೈಲ್ವೆ ಕ್ವಾರ್ಟರ್ಸ್ನಲ್ಲಿದ್ದ ಕಾರಣಕ್ಕೆÃನೋ ಎಡಪಂಥಿಯ ಕಾರ್ಮಿಕ ನಾಯಕರ ಬಗ್ಗೆ ಗೌರವ ಹೊಂದಿದ್ದರು.
ಇದು ಅಲ್ಪಕಾಲದ ಕತೆಯಷ್ಟೆÃ. ಮುಂದೆ ಅವರು ಎಬಿವಿಪಿಯ ರಾಜ್ಯ ಕಾರ್ಯದರ್ಶಿಯಾಗಿ, 1985ರ ಹೊತ್ತಿಗೆ ರಾಷ್ಟç ಕಾರ್ಯದರ್ಶಿಯಾಗಿ ಹಿಂದುತ್ವ ರಾಷ್ಟಿçÃಯತೆಯ ಪ್ರತಿಪಾದನೆಯ ಕಾಲಾಳುಗಳ ಗುಂಪಿಗೆ ಸೇರಿದರು. 80ರ ದಶಕದ ಅಂತ್ಯದಲ್ಲಿ ಆರೆಸ್ಸೆಸ್ ಅವರನ್ನು ಬಿಜೆಪಿಗೆ ಡೆಪ್ಯೂಟ್ ಮಾಡಿ, ಯಡಿಯೂರಪ್ಪ ನಂತರದ ನಾಯಕನ್ನಾಗಿ ಬೆಳೆಸಲು ಆರಂಭಿಸಿತು.
ಮುಂದೆ ಅವರು ಬೆಂಗಳೂರು ದಕ್ಷಿಣದ ಸಂಸದರಾದರು. ಅಲ್ಲಿನ ಬಹುಸಂಖ್ಯಾತ ಬ್ರಾಹ್ಮಣರು ಅನಂತರ ಕಾಯಂ ಮತಬ್ಯಾಂಕ್ ಆದರು. ಕಾಂಗ್ರೆಸ್-ಜೆಡಿಎಸ್‌ಗಳ ದುರ್ಬಲ ಅಭ್ಯರ್ಥಿಗಳು, ಅವರ ನಡುವಿನ ಮತ ಹಂಚಿಕೆಯೂ ಅನಂತರ ಸತತ ಗೆಲುವಿಗೆ ಸಹಕರಿಸಿತು. ವೆಂಕಯ್ಯನಾಯ್ಡು, ಪಿಇಎಸ್ ದೊರೆಸ್ವಾಮಿ ಕಾರಣದಿಂದ ತೆಲುಗರ ಮತಗಳು ದಕ್ಕುತ್ತ ಬಂದವು. ಕೇಂದ್ರ ಸರ್ಕಾರಿ ನೌಕರರೂ ಅನಂತ್‌ರ ಪರವೇ ಇದ್ದರು.
ಕರ್ನಾಟಕದ ಸಿಎಂ ಆಗಬೇಕೆಂದು ಬಯಸಿದ್ದ ಅನಂತರಿಗೆ ಅಂತಹ ಪೂರಕ ವಾತಾವರಣವೂ ಲಭ್ಯವಾಗಲಿಲ್ಲ. ದೆಹಲಿಯ ಅಧಿಕಾರ ರಾಜಕಾರಣಕ್ಕೆ ಸೀಮಿತರಾದ ಅವರು ಬೆಂಗಳೂರಿನ ಕಾಸ್ಮೊಪಾಲ್ಟಿಯನ್ ರಾಜಕಾರಣಿಯಾದರಷ್ಟೆÃ. ನರೇಂದ್ರ ಮೋದಿ ಪ್ರಧಾನಮಂತ್ರಿಯಾದ ನಂತರ, ಅದ್ವಾನಿ ಬಳಗಲ್ಲಿದ್ದ ಅನಂತ್‌ಗೆ ಪ್ರಾಧಾನ್ಯತೆ ಸಿಗಲಿಲ್ಲ. ಆರ್‌ಎಸ್‌ಎಸ್ ಕಾರಣದಿಂದ ರಾಸಾಯನಿಕ ಗೊಬ್ಬರ ಖಾತೆಯ ಸಚಿವರಾದರಷ್ಟೆÃ.
ಲಿಂಗಾಯತ ಯಡಿಯೂರಪ್ಪ ಮಾಸ್ ಲೀಡರ್ ಕೂಡ ಆಗಿದ್ದರಿಂದ, ಕನ್ನಡಿಗರ ತಳಮಟ್ಟದ ಸಂಪರ್ಕವೇ ಇಲ್ಲದಿದ್ದ ಬ್ರಾಹ್ಮಣ ಅನಂತಕುಮಾರರಿಗೆ ಸಿಎಂ ಪಟ್ಟ ಮರೀಚಿಕೆಯೇ ಆಯಿತು. ಆರ್‌ಎಸ್‌ಎಸ್ ಪ್ರಭಾವವಷ್ಟನ್ನೆÃ ನೆಚ್ಚಿಕೊಂಡು ಸಿಎಂ ಹುದ್ದೆಯ ಕನಸು ಕಂಡಿದ್ದು ಅನಂತರ ಸ್ವಯಂಕೃತಾಪರಾಧವಾಗಿತ್ತು.
ಸೈದ್ಧಾಂತಿಕವಾಗಿ ಅನಂತಕುಮಾರ ಹೆಗಡೆಯಂತೆಯೇ ಇದ್ದ ಅವರು, ಹೆಗಡೆಯಂತೆ ಬಾಹ್ಯವಾಗಿ ಅದನ್ನು ಕ್ಷÄಲ್ಲಕ ಭಾಷೆಯಲ್ಲಿ ಬಳಸಲಿಲ್ಲ. ರಾಜ್ಯಕ್ಕೆ ಅನಂತರ ಕೊಡುಗೆ ಏನೆಂದು ನೋಡಿದರೆ ಹೇಳಿಕೊಳ್ಳುವಂತದ್ದೆÃನೂ ಇಲ್ಲ. ಭೌಗೋಳಿಕ ಮತ್ತು ಆಡಳಿತಾತ್ಮಕ ಕಾರಣದಿಂದ ಸಹಜವಾಗಿ ಹುಬ್ಬಳ್ಳಿಗೆ ಮಂಜೂರಾಗಿದ್ದ ನೈರುತ್ಯವಲಯ ಕಚೇರಿ ಕೈಜಾರದಂತೆ ಅನಂತ್ ಶ್ರಮಿಸಿದರು. ಆಗಿನ ಪ್ರಧಾನಿ ವಾಜಪೇಯಿ ಇದಕ್ಕೆ ನೆರವಾದರು.
ಉಳಿದಂತೆ ತಮಗೆ ರಾಜಕೀಯ ದೀಕ್ಷೆ ನೀಡಿದ ಹುಬ್ಬಳ್ಳಿ ಭಾಗವನ್ನು ಅವರು ನಿರ್ಲಕ್ಷಿಸುತ್ತಲೇ ಬಂದರು. ಈದ್ಗಾ ಮೈದಾನದಲ್ಲಿ ಉಮಾಭಾರತಿ ಧ್ವಜ ಹಾರಿಸಲು ಬಂದಾಗಷ್ಟೆÃ ಅವರು ಗಳಿಗೆ ಹೊತ್ತು ಇಲ್ಲಿ ಕ್ರಿಯಾಶೀಲರಾಗಿದ್ದರು. ಈ ಭಾಗದ ಜೀವನ್ಮರಣದ ಹೋರಾಟ ಎನಿಸಿದ ಮಹದಾಯಿ ಹೋರಾಟವನ್ನೂ ಅವರು ನಿರ್ಲಕ್ಷಿಸಿದರು. ನರಗುಂದದ ಹೋರಾಟ ವೇದಿಕೆಯ ಮೇಲೆ ಔಪಚಾರಿಕವಾಗಿಯಾದರೂ ಕಾಣಿಸಿಕೊಳ್ಳುವಷ್ಟು ನೈತಿಕತೆಯನ್ನು ಅವರು ಕಳೆÀದುಕೊಂಡಿದ್ದರು.
ಮಹದಾಯಿ ನೀರಿಗಾಗಿ ಸರ್ವಪಕ್ಷ ನಿಯೋಗ ಪ್ರಧಾನಿ ಭೇಟಿಯಾದಾಗ ಅನಂತ್ ಮೌನವಾಗಿದ್ದರು. ಪ್ರಧಾನಿ ಕಚೇರಿಯ ಸರ್ವಾಡಳಿತದಿಂದ ಬಹುಪಾಲು ಕೇಂದ್ರ ಸಚಿವರಂತೆ ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾಗಿದ್ದರು.
ಬಾಬಾ ಬುಡನ್‌ಗಿರಿ ವಿವಾದ ರಾಜ್ಯವ್ಯಾಪಿಯಾದರೆ ಸಿಎಂ ಆಗಬಹುದು ಎಂದು ಲೆಕ್ಕಿಸಿದ್ದ ಅವರು, ‘ಬಾಬಾಬುಡನ್‌ಗಿರಿಯನ್ನು ಕರ್ನಾಟಕದ ಅಂiÉÆÃಧ್ಯೆಯನ್ನಾಗಿ ಮಾಡುತ್ತೆÃವೆ’ ಎಂಬ ಅಪಾಯಕಾರಿ ಆಟಕ್ಕೂ ಕೈ ಹಾಕಿದ್ದರು. ಕೋಮು ಸೌಹಾರ್ದ ವೇದಿಕೆಯ ಹೋರಾಟದಿಂದ ಮೂಡಿದ ಜನಜಾಗೃತಿಯ ಎದುರು ನಿಲ್ಲದೇ ಹೋದರು.
ಅನಂತ್ ನಿಧನ ಎಂಬ ಸುದ್ದಿಯನ್ನು ಕೇಳಿದ ಕ್ಷಣದಲ್ಲಿ ಈ ಭಾಗದ ಜನಸಾಮಾನ್ಯರಿರಲಿ, ಹೊಸ ತಲೆಮಾರಿನ ಬಿಜೆಪಿ ಭಕ್ತರ ಕಣ್ಣಮುಂದೆ ಬಂದಿದ್ದು ಅನಂತಕುಮಾರ್ ಹೆಗಡೆಯ ಚಿತ್ರವೇ ಹೊರತು ಅನಂತಕುಮಾರರದ್ದಲ್ಲ ಎಂಬ ವಿದ್ಯಮಾನ, ಬಿಜೆಪಿಯಲ್ಲೆÃ ಅನಂತಕುಮಾರ್ ಅಜ್ಞಾತರಾಗಿದ್ದರು ಎಂಬುದಕ್ಕೆ ಸಂಕೇತದಂತಿದೆ. ಅದು ಮೋದಿ ಬಿಜೆಪಿಯ ಪರಿಸ್ಥಿತಿ ಕೂಡ ಆಗಿದೆ!

– ಪಿ.ಕೆ. ಮಲ್ಲನಗೌಡರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...