Homeರಾಜಕೀಯಅಪಾಯಕಾರಿ ಆಟಕ್ಕೆ ಕೈಹಾಕಿದರೂ, ಬಿಜೆಪಿಯೊಳಗೆ ಅಜ್ಞಾತರಾಗುತ್ತಾ ಬಂದರು ಈ ಕುಮಾರ

ಅಪಾಯಕಾರಿ ಆಟಕ್ಕೆ ಕೈಹಾಕಿದರೂ, ಬಿಜೆಪಿಯೊಳಗೆ ಅಜ್ಞಾತರಾಗುತ್ತಾ ಬಂದರು ಈ ಕುಮಾರ

- Advertisement -
- Advertisement -

ಇತ್ತಿÃಚಿನ ವರ್ಷಗಳಲ್ಲಿ, ಕರ್ನಾಟಕದ ಮುಖ್ಮಮಂತ್ರಿ ಆಗಬೇಕೆಂಬ ಮಹಾತ್ವಾಕಾಂಕ್ಷೆ ಈಡೇರುವುದು ಅಸಾಧ್ಯ ಎಂಬ ಸತ್ಯ ಅರಿತಿದ್ದ ಅಡ್ವಾಣಿಯವರ ಶಿಷ್ಯ ಅನಂತಕುಮಾರ ವಿಧಿವಶರಾಗಿದ್ದಾರೆ. ಕೇಂದ್ರ ಸಚಿವರಾಗಿದ್ದು ಅದ್ವಾನಿಯವರಂತೆ ಅನಂತ್ ಕೂಡ ಮೋದಿ ಟೀಮ್‌ನಿಂದ ದೂರವೇ ಇಟ್ಟಲ್ಪಟ್ಟಿದ್ದರು.
ಹುಬ್ಬಳ್ಳಿಯಲ್ಲಿ ರಾಜಕೀಯ ದೀಕ್ಷೆ ಪಡೆದ ಅಂತಕುಮಾರ, ತೆಲುಗು ಮನೆಭಾಷೆಯಾಗಿರುವ ಮೂಲ್ಕನಾಡು ಬ್ರಾಹ್ಮಣ ಸಮುದಾಯಕ್ಕೆ ಸೇರಿದವರು. ಹುಬ್ಬಳ್ಳಿಯಲ್ಲಿ ಪ್ರಚಂಡ ಭಾಷಣಗಳಿಗೆ ಹೆಸರಾಗಿದ್ದ ಜನಸಂಘದ ಜಗನ್ನಾಥರಾವ್ ಜೋಶಿ ಪ್ರಭಾವಕ್ಕೆ ಒಳಗಾಗಿ ಅನಂತಕುಮಾರ, ಪ್ರಹ್ಲಾದ್ ಜೋಶಿ ಸಂಘ ಪರಿವಾರದ ಅಂಗಸಂಸ್ಥೆ ಎಬಿವಿಪಿ ಸೇರಿದ್ದರು. ರೈಲ್ವೆ ನೌಕರರಾಗಿದ್ದ ಇವರಿಬ್ಬರ ತಂದೆಯಂದಿರು ಹುಬ್ಬಳ್ಳಿಯ ರೈಲ್ವೆÃ ಕ್ವಾರ್ಟರ್ಸ್ನಲ್ಲಿ ತಮ್ಮ ಮಧ್ಯಮ ವರ್ಗದ ಕುಟುಂಬಗಳನ್ನು ಸಾಗಿಸುತ್ತಿದ್ದರು.
ಮೊದಲಿಂದಲೂ ವೈದಿಕಶಾಹಿಯ ‘ಶ್ರೆÃಷ್ಠತೆ’ಯ ಆರಾಧಕರಾಗಿದ್ದ ಅನಂತಕುಮಾರ ಕುಟುಂಬ 80ರ ದಶಕದಾರಂಭದಲ್ಲಿ ಬಿಜೆಪಿಯೊಂದಿಗೆ ಗುರುತಿಸಿಕೊಂಡಿತ್ತು. ಅನಂತ್ ತಾಯಿ ಗಿರಿಜಾ ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಸದಸ್ಯರೂ ಆಗಿದ್ದರು.
80ರ ದಶಕದ ಆರಂಭದ ವರ್ಷಗಳಲ್ಲಿ ಎಬಿವಿಪಿ ಕಾರ್ಯಕ್ರಮಗಳ ಸುದ್ದಿಗಳನ್ನು ಪತ್ರಿಕಾ ಕಚೇರಿಗಳಿಗೆ ತಲುಪಿಸುತ್ತಿದ್ದ ಅನಂತಕುಮಾರ್ ಪತ್ರಕರ್ತರೊಂದಿಗೆ ಆತ್ಮಿÃಯರಾಗಿದ್ದರು. ಆಗಿನ್ನೂ ಅವರಿಗೆ ಉಗ್ರ ಹಿಂದೂತ್ವದ ನಶೆ ತಗುಲಿರಲಿಲ್ಲ. ವಿದ್ಯಾರ್ಥಿ ಸಂಘಟನೆಯಷ್ಟನ್ನೆÃ ತಲೆಗೆ ಹಚ್ಚಿಕೊಂಡಿದ್ದ ಅವರು ಎಬಿವಿಪಿಯೇತರ ಕಾರ್ಯಕ್ರಮಗಳಿಗೂ ಹಾಜರಾಗುವ ಉದಾರಮನಸ್ಕರಾಗಿದ್ದರು. ಹೀಗಾಗಿಯೇ 1982ರಲ್ಲಿ ಬಂಡಾಯ ಸಾಹಿತ್ಯ ಸಂಘಟನೆಯ ಹುಬ್ಬಳ್ಳಿ ಘಟಕ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅನಂತಕುಮಾರ್ ಸಭಿಕರಾಗಿ ಭಾಗವಹಿಸಿದ್ದರು. ಆ ಸಭೆಯ ಆಕರ್ಷಣೆಯಾಗಿದ್ದ ಪಿ.ಲಂಕೇಶರ ಭಾಷಣವನ್ನು ತನ್ಮಯತೆಯಿಂದ ಆಲಿಸಿದ್ದರು. ರೈಲ್ವೆ ಕ್ವಾರ್ಟರ್ಸ್ನಲ್ಲಿದ್ದ ಕಾರಣಕ್ಕೆÃನೋ ಎಡಪಂಥಿಯ ಕಾರ್ಮಿಕ ನಾಯಕರ ಬಗ್ಗೆ ಗೌರವ ಹೊಂದಿದ್ದರು.
ಇದು ಅಲ್ಪಕಾಲದ ಕತೆಯಷ್ಟೆÃ. ಮುಂದೆ ಅವರು ಎಬಿವಿಪಿಯ ರಾಜ್ಯ ಕಾರ್ಯದರ್ಶಿಯಾಗಿ, 1985ರ ಹೊತ್ತಿಗೆ ರಾಷ್ಟç ಕಾರ್ಯದರ್ಶಿಯಾಗಿ ಹಿಂದುತ್ವ ರಾಷ್ಟಿçÃಯತೆಯ ಪ್ರತಿಪಾದನೆಯ ಕಾಲಾಳುಗಳ ಗುಂಪಿಗೆ ಸೇರಿದರು. 80ರ ದಶಕದ ಅಂತ್ಯದಲ್ಲಿ ಆರೆಸ್ಸೆಸ್ ಅವರನ್ನು ಬಿಜೆಪಿಗೆ ಡೆಪ್ಯೂಟ್ ಮಾಡಿ, ಯಡಿಯೂರಪ್ಪ ನಂತರದ ನಾಯಕನ್ನಾಗಿ ಬೆಳೆಸಲು ಆರಂಭಿಸಿತು.
ಮುಂದೆ ಅವರು ಬೆಂಗಳೂರು ದಕ್ಷಿಣದ ಸಂಸದರಾದರು. ಅಲ್ಲಿನ ಬಹುಸಂಖ್ಯಾತ ಬ್ರಾಹ್ಮಣರು ಅನಂತರ ಕಾಯಂ ಮತಬ್ಯಾಂಕ್ ಆದರು. ಕಾಂಗ್ರೆಸ್-ಜೆಡಿಎಸ್‌ಗಳ ದುರ್ಬಲ ಅಭ್ಯರ್ಥಿಗಳು, ಅವರ ನಡುವಿನ ಮತ ಹಂಚಿಕೆಯೂ ಅನಂತರ ಸತತ ಗೆಲುವಿಗೆ ಸಹಕರಿಸಿತು. ವೆಂಕಯ್ಯನಾಯ್ಡು, ಪಿಇಎಸ್ ದೊರೆಸ್ವಾಮಿ ಕಾರಣದಿಂದ ತೆಲುಗರ ಮತಗಳು ದಕ್ಕುತ್ತ ಬಂದವು. ಕೇಂದ್ರ ಸರ್ಕಾರಿ ನೌಕರರೂ ಅನಂತ್‌ರ ಪರವೇ ಇದ್ದರು.
ಕರ್ನಾಟಕದ ಸಿಎಂ ಆಗಬೇಕೆಂದು ಬಯಸಿದ್ದ ಅನಂತರಿಗೆ ಅಂತಹ ಪೂರಕ ವಾತಾವರಣವೂ ಲಭ್ಯವಾಗಲಿಲ್ಲ. ದೆಹಲಿಯ ಅಧಿಕಾರ ರಾಜಕಾರಣಕ್ಕೆ ಸೀಮಿತರಾದ ಅವರು ಬೆಂಗಳೂರಿನ ಕಾಸ್ಮೊಪಾಲ್ಟಿಯನ್ ರಾಜಕಾರಣಿಯಾದರಷ್ಟೆÃ. ನರೇಂದ್ರ ಮೋದಿ ಪ್ರಧಾನಮಂತ್ರಿಯಾದ ನಂತರ, ಅದ್ವಾನಿ ಬಳಗಲ್ಲಿದ್ದ ಅನಂತ್‌ಗೆ ಪ್ರಾಧಾನ್ಯತೆ ಸಿಗಲಿಲ್ಲ. ಆರ್‌ಎಸ್‌ಎಸ್ ಕಾರಣದಿಂದ ರಾಸಾಯನಿಕ ಗೊಬ್ಬರ ಖಾತೆಯ ಸಚಿವರಾದರಷ್ಟೆÃ.
ಲಿಂಗಾಯತ ಯಡಿಯೂರಪ್ಪ ಮಾಸ್ ಲೀಡರ್ ಕೂಡ ಆಗಿದ್ದರಿಂದ, ಕನ್ನಡಿಗರ ತಳಮಟ್ಟದ ಸಂಪರ್ಕವೇ ಇಲ್ಲದಿದ್ದ ಬ್ರಾಹ್ಮಣ ಅನಂತಕುಮಾರರಿಗೆ ಸಿಎಂ ಪಟ್ಟ ಮರೀಚಿಕೆಯೇ ಆಯಿತು. ಆರ್‌ಎಸ್‌ಎಸ್ ಪ್ರಭಾವವಷ್ಟನ್ನೆÃ ನೆಚ್ಚಿಕೊಂಡು ಸಿಎಂ ಹುದ್ದೆಯ ಕನಸು ಕಂಡಿದ್ದು ಅನಂತರ ಸ್ವಯಂಕೃತಾಪರಾಧವಾಗಿತ್ತು.
ಸೈದ್ಧಾಂತಿಕವಾಗಿ ಅನಂತಕುಮಾರ ಹೆಗಡೆಯಂತೆಯೇ ಇದ್ದ ಅವರು, ಹೆಗಡೆಯಂತೆ ಬಾಹ್ಯವಾಗಿ ಅದನ್ನು ಕ್ಷÄಲ್ಲಕ ಭಾಷೆಯಲ್ಲಿ ಬಳಸಲಿಲ್ಲ. ರಾಜ್ಯಕ್ಕೆ ಅನಂತರ ಕೊಡುಗೆ ಏನೆಂದು ನೋಡಿದರೆ ಹೇಳಿಕೊಳ್ಳುವಂತದ್ದೆÃನೂ ಇಲ್ಲ. ಭೌಗೋಳಿಕ ಮತ್ತು ಆಡಳಿತಾತ್ಮಕ ಕಾರಣದಿಂದ ಸಹಜವಾಗಿ ಹುಬ್ಬಳ್ಳಿಗೆ ಮಂಜೂರಾಗಿದ್ದ ನೈರುತ್ಯವಲಯ ಕಚೇರಿ ಕೈಜಾರದಂತೆ ಅನಂತ್ ಶ್ರಮಿಸಿದರು. ಆಗಿನ ಪ್ರಧಾನಿ ವಾಜಪೇಯಿ ಇದಕ್ಕೆ ನೆರವಾದರು.
ಉಳಿದಂತೆ ತಮಗೆ ರಾಜಕೀಯ ದೀಕ್ಷೆ ನೀಡಿದ ಹುಬ್ಬಳ್ಳಿ ಭಾಗವನ್ನು ಅವರು ನಿರ್ಲಕ್ಷಿಸುತ್ತಲೇ ಬಂದರು. ಈದ್ಗಾ ಮೈದಾನದಲ್ಲಿ ಉಮಾಭಾರತಿ ಧ್ವಜ ಹಾರಿಸಲು ಬಂದಾಗಷ್ಟೆÃ ಅವರು ಗಳಿಗೆ ಹೊತ್ತು ಇಲ್ಲಿ ಕ್ರಿಯಾಶೀಲರಾಗಿದ್ದರು. ಈ ಭಾಗದ ಜೀವನ್ಮರಣದ ಹೋರಾಟ ಎನಿಸಿದ ಮಹದಾಯಿ ಹೋರಾಟವನ್ನೂ ಅವರು ನಿರ್ಲಕ್ಷಿಸಿದರು. ನರಗುಂದದ ಹೋರಾಟ ವೇದಿಕೆಯ ಮೇಲೆ ಔಪಚಾರಿಕವಾಗಿಯಾದರೂ ಕಾಣಿಸಿಕೊಳ್ಳುವಷ್ಟು ನೈತಿಕತೆಯನ್ನು ಅವರು ಕಳೆÀದುಕೊಂಡಿದ್ದರು.
ಮಹದಾಯಿ ನೀರಿಗಾಗಿ ಸರ್ವಪಕ್ಷ ನಿಯೋಗ ಪ್ರಧಾನಿ ಭೇಟಿಯಾದಾಗ ಅನಂತ್ ಮೌನವಾಗಿದ್ದರು. ಪ್ರಧಾನಿ ಕಚೇರಿಯ ಸರ್ವಾಡಳಿತದಿಂದ ಬಹುಪಾಲು ಕೇಂದ್ರ ಸಚಿವರಂತೆ ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾಗಿದ್ದರು.
ಬಾಬಾ ಬುಡನ್‌ಗಿರಿ ವಿವಾದ ರಾಜ್ಯವ್ಯಾಪಿಯಾದರೆ ಸಿಎಂ ಆಗಬಹುದು ಎಂದು ಲೆಕ್ಕಿಸಿದ್ದ ಅವರು, ‘ಬಾಬಾಬುಡನ್‌ಗಿರಿಯನ್ನು ಕರ್ನಾಟಕದ ಅಂiÉÆÃಧ್ಯೆಯನ್ನಾಗಿ ಮಾಡುತ್ತೆÃವೆ’ ಎಂಬ ಅಪಾಯಕಾರಿ ಆಟಕ್ಕೂ ಕೈ ಹಾಕಿದ್ದರು. ಕೋಮು ಸೌಹಾರ್ದ ವೇದಿಕೆಯ ಹೋರಾಟದಿಂದ ಮೂಡಿದ ಜನಜಾಗೃತಿಯ ಎದುರು ನಿಲ್ಲದೇ ಹೋದರು.
ಅನಂತ್ ನಿಧನ ಎಂಬ ಸುದ್ದಿಯನ್ನು ಕೇಳಿದ ಕ್ಷಣದಲ್ಲಿ ಈ ಭಾಗದ ಜನಸಾಮಾನ್ಯರಿರಲಿ, ಹೊಸ ತಲೆಮಾರಿನ ಬಿಜೆಪಿ ಭಕ್ತರ ಕಣ್ಣಮುಂದೆ ಬಂದಿದ್ದು ಅನಂತಕುಮಾರ್ ಹೆಗಡೆಯ ಚಿತ್ರವೇ ಹೊರತು ಅನಂತಕುಮಾರರದ್ದಲ್ಲ ಎಂಬ ವಿದ್ಯಮಾನ, ಬಿಜೆಪಿಯಲ್ಲೆÃ ಅನಂತಕುಮಾರ್ ಅಜ್ಞಾತರಾಗಿದ್ದರು ಎಂಬುದಕ್ಕೆ ಸಂಕೇತದಂತಿದೆ. ಅದು ಮೋದಿ ಬಿಜೆಪಿಯ ಪರಿಸ್ಥಿತಿ ಕೂಡ ಆಗಿದೆ!

– ಪಿ.ಕೆ. ಮಲ್ಲನಗೌಡರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...