Homeಮುಖಪುಟಅಡ್ವಾಣಿ-ಜೋಶಿ ಇಬ್ಬರನ್ನೂ ರಾಮ ಮಂದಿರ ಉದ್ಘಾಟನೆಗೆ ಆಹ್ವಾನಿಸಲಾಗಿದೆ: ವಿಎಚ್‌ಪಿ ಸ್ಪಷ್ಟನೆ

ಅಡ್ವಾಣಿ-ಜೋಶಿ ಇಬ್ಬರನ್ನೂ ರಾಮ ಮಂದಿರ ಉದ್ಘಾಟನೆಗೆ ಆಹ್ವಾನಿಸಲಾಗಿದೆ: ವಿಎಚ್‌ಪಿ ಸ್ಪಷ್ಟನೆ

- Advertisement -
- Advertisement -

2024ರ ಜನವರಿಯಲ್ಲಿ ನಡೆಯುವ ಅಯೋಧ್ಯೆ ರಾಮ ಮಂದಿರದ ಉದ್ಘಾಟನೆಗೆ ರಾಮಮಂದಿರ ಟ್ರಸ್ಟ್ ಸಿದ್ಧತೆ ಮಾಡಿಕೊಂಡಿದ್ದು, ದೇಶದ ಹಲವು ಗಣ್ಯರಿಗೆ ಆಹ್ವಾನ ನೀಡುತ್ತಿದೆ. ಆದರೆ, ವಿವಾದಿತ ರಾಮಜನ್ಮ ಭೂಮಿ ಸಲುವಾಗಿ ದೇಶದಾದ್ಯಂತ ರಥಯಾತ್ರೆ ನಡೆಸಿದ ಬಿಜೆಪಿ ಹಿರಿಯರಾದ ಲಾಲ್ ಕೃಷ್ಣ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರನ್ನು ಉದ್ಘಾಟನೆಗೆ ಬರದಂತೆ ಸೂಚನೆ ನೀಡಲಾಗಿದ ಎಂಬ ಸುದ್ದಿ ಇಂದು ಭಾರಿ ಸದ್ದು ಮಾಡಿತ್ತು.

‘ಇಬ್ಬರೂ ನಾಯಕರಿಗೆ ವಯಸ್ಸಾಗಿರುವ ಕಾರಣಕ್ಕೆ ಹಾಗೂ ಜನವರಿಯಲ್ಲಿ ಇಲ್ಲಿ ಕೊರೆಯುವ ಚಳಿಯಿರುವ ಕಾರಣಕ್ಕೆ ಬರದಂತೆ ವಿನಂತಿಸಲಾಗಿದೆ’ ಎಂದು ರಾಮ ಮಂದಿರ ಟ್ರಸ್ಟ್ ಮಾಧ್ಯಮಗಳಿಗೆ ತಿಳಿಸಿದ ಬೆನ್ನಲ್ಲೇ ವಿಶ್ವ ಹಿಂದೂ ಪರಿಷತ್ ಸ್ಪಷ್ಟನೆ ನೀಡಿದೆ.

ಅಡ್ವಾಣಿಯವರಿಗೆ ಈಗ 96 ವರ್ಷವಾಗಿದ್ದು, ಜೋಶಿ ಅವರಿಗೆ 89 ವರ್ಷಗಳನ್ನು ಪೂರೈಸಿದ್ದಾರೆ. ಇವರಿಬ್ಬರೂ 80ರ ದಶಕದಲ್ಲಿ ದೇಶದಾದ್ಯಂತ ರಾಮ ಜನ್ಮಭೂಮಿ ಚಳವಳಿಯನ್ನು ಮುಂದೆ ನಿಂತು ಮುನ್ನಡೆಸಿದವರು. 1990ರಲ್ಲಿ ಅಡ್ವಾಣಿಯವರು ರಾಮಜನ್ಮ ಭೂಮಿ ಚಳವಳಿಗೆ ಬೆಂಬಲ ಪಡೆಯಲು ಗುಜರಾತ್‌ನ ಸೋಮನಾಥದಿಂದ ಉತ್ತರ ಪ್ರದೇಶದ ಅಯೋಧ್ಯೆ ವರೆಗೆ ವಿವಾದಾತ್ಮಕ ‘ರಥಯಾತ್ರೆ’ ನಡೆಸಿದರು. ಈ ಯಾತ್ರೆಯು ಉತ್ತರ ಭಾರತದ ಹಲವಾರು ನಗರಗಳಲ್ಲಿ ಕೋಮುಗಲಭೆಗೆ ಕಾರಣವಾಯಿತು. ಎರಡು ವರ್ಷಗಳ ನಂತರ, ಡಿಸೆಂಬರ್ 6, 1992 ರಂದು ಅಯೋಧ್ಯೆಯ ಬಾಬರಿ ಮಸೀದಿಯನ್ನು ಧ್ವಂಸಗೊಳಿಸಿದಾಗ, ಈ ಇಬ್ಬರೂ ಜನ ಸಂಘದ ನಾಯಕರು ಸ್ಥಳದಲ್ಲಿಯೇ ಇದ್ದರು.

ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ರಾಮಮಂದಿರ ಚಳವಳಿಯ ಮುಂಚೂಣಿ ನಾಯಕರಾದ ಅಡ್ವಾಣಿ ಮತ್ತು ಜೋಶಿ ಅವರನ್ನು ಆಹ್ವಾನಿಸಲಾಗಿದೆ ಎಂದು ವಿಎಚ್‌ಪಿಯ ಅಂತರರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಹೇಳಿದ್ದಾರೆ. ‘ನಾವು ರಾಮ ಜನ್ಮ ಭೂಮಿ ಹೋರಾಟದ ಬಗ್ಗೆ ಮಾತನಾಡಿದ್ದೇವೆ. ಇಬ್ಬರೂ ಹಿರಿಯರು ಕಾರ್ಯಕ್ರಮಕ್ಕೆ ಬರಲು ತಮ್ಮ ಕೈಲಾದಷ್ಟು ಪ್ರಯತ್ನಿಸುವುದಾಗಿ ಹೇಳಿದ್ದಾರೆ’ ಎಂದು ಕುಮಾರ್ ಹೇಳಿದ್ದಾರೆ. ವಿಎಚ್‌ಪಿಯು ಬಿಜೆಪಿಯ ಸೈದ್ಧಾಂತಿಕ ಪೋಷಕ ಗುಂಪುಗಳಾದ ಸಂಘ ಪರಿವಾರದ ಒಂದು ಭಾಗವಾಗಿದೆ.

ರಾಮಮಂದಿರ ಪ್ರಾಣ ಪ್ರತಿಷ್ಟಾಪನೆ ಕಾರ್ಯಕ್ರಮದಿಂದ ಇಬ್ಬರನ್ನು ದೂರವಿಡಲು ತಿಳಿಸಲಾಗಿದೆ ಎಂದು ರಾಮ ಮಂದಿರ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ಹೇಳಿಕೆಯ ನಂತರ ವಿಎಚ್‌ಪಿ ಸ್ಪಷ್ಟನೆ ನೀಡಿದೆ. ‘ಇಬ್ಬರೂ ನಮ್ಮ ಕುಟುಂಬದ ಹಿರಿಯರು ಮತ್ತು ಅವರ ವಯಸ್ಸನ್ನು ಪರಿಗಣಿಸಿ, ಅವರನ್ನು ಬರದಂತೆ ವಿನಂತಿಸಲಾಯಿತು, ಅದನ್ನು ಇಬ್ಬರೂ ಒಪ್ಪಿಕೊಂಡರು’ ಎಂದು ರೈ ನಿನ್ನೆ ಸುದ್ದಿಗಾರರಿಗೆ ತಿಳಿಸಿದರು,
ಈ ಟೀಕೆಗಳು ಭಾರಿ ವಿವಾದಕ್ಕೆ ಕಾರಣವಾಗಿದ್ದು, ಒಂದು ಹಂತದಲ್ಲಿ ಬಿಜೆಪಿ ನಾಯಕತ್ವವು ಪಕ್ಷವನ್ನು ಮುನ್ನಡೆಸಿದ ಹಿರಿಯ ನಾಯಕರನ್ನು ನಿರ್ಲಕ್ಷಿಸುವ ಮೂಲಕ ಅವಮಾನಿಸಿದೆ ಎಂದು ಹಲವರು ಆರೋಪಿಸಿದ್ದಾರೆ.

‘ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳುವ ಈ ಭವ್ಯ ಸಮಾರಂಭಕ್ಕೆ ಆರು ಪ್ರಾಚೀನ ಶಾಲೆಗಳ ಆಚಾರ್ಯರು, ಸುಮಾರು 4,000 ಸಂತರು ಮತ್ತು 2,200 ಇತರೆ ಅತಿಥಿಗಳನ್ನು ಆಹ್ವಾನಿಸಲಾಗಿದೆ ಎಂದು ರೈ ನಿನ್ನೆ ಹೇಳಿದ್ದರು. ಅತಿಥಿಗಳು ಕಾಶಿ ವಿಶ್ವನಾಥ ಮತ್ತು ವೈಷ್ಣೋದೇವಿಯಂತಹ ಪ್ರಮುಖ ದೇವಾಲಯಗಳ ಮುಖ್ಯಸ್ಥರನ್ನು ಒಳಗೊಂಡಿರುತ್ತದೆ ಎಂದು ಅವರು ಹೇಳಿದರು.

ಇದನ್ನೂ ಓದಿ; ಗಂಡ ಬಲಾತ್ಕರಿಸಿದರೂ ಅತ್ಯಾಚಾರವೇ: ಗುಜರಾತ್‌ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...