Homeಮುಖಪುಟಅಡ್ವಾಣಿ-ಜೋಶಿ ಇಬ್ಬರನ್ನೂ ರಾಮ ಮಂದಿರ ಉದ್ಘಾಟನೆಗೆ ಆಹ್ವಾನಿಸಲಾಗಿದೆ: ವಿಎಚ್‌ಪಿ ಸ್ಪಷ್ಟನೆ

ಅಡ್ವಾಣಿ-ಜೋಶಿ ಇಬ್ಬರನ್ನೂ ರಾಮ ಮಂದಿರ ಉದ್ಘಾಟನೆಗೆ ಆಹ್ವಾನಿಸಲಾಗಿದೆ: ವಿಎಚ್‌ಪಿ ಸ್ಪಷ್ಟನೆ

- Advertisement -
- Advertisement -

2024ರ ಜನವರಿಯಲ್ಲಿ ನಡೆಯುವ ಅಯೋಧ್ಯೆ ರಾಮ ಮಂದಿರದ ಉದ್ಘಾಟನೆಗೆ ರಾಮಮಂದಿರ ಟ್ರಸ್ಟ್ ಸಿದ್ಧತೆ ಮಾಡಿಕೊಂಡಿದ್ದು, ದೇಶದ ಹಲವು ಗಣ್ಯರಿಗೆ ಆಹ್ವಾನ ನೀಡುತ್ತಿದೆ. ಆದರೆ, ವಿವಾದಿತ ರಾಮಜನ್ಮ ಭೂಮಿ ಸಲುವಾಗಿ ದೇಶದಾದ್ಯಂತ ರಥಯಾತ್ರೆ ನಡೆಸಿದ ಬಿಜೆಪಿ ಹಿರಿಯರಾದ ಲಾಲ್ ಕೃಷ್ಣ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರನ್ನು ಉದ್ಘಾಟನೆಗೆ ಬರದಂತೆ ಸೂಚನೆ ನೀಡಲಾಗಿದ ಎಂಬ ಸುದ್ದಿ ಇಂದು ಭಾರಿ ಸದ್ದು ಮಾಡಿತ್ತು.

‘ಇಬ್ಬರೂ ನಾಯಕರಿಗೆ ವಯಸ್ಸಾಗಿರುವ ಕಾರಣಕ್ಕೆ ಹಾಗೂ ಜನವರಿಯಲ್ಲಿ ಇಲ್ಲಿ ಕೊರೆಯುವ ಚಳಿಯಿರುವ ಕಾರಣಕ್ಕೆ ಬರದಂತೆ ವಿನಂತಿಸಲಾಗಿದೆ’ ಎಂದು ರಾಮ ಮಂದಿರ ಟ್ರಸ್ಟ್ ಮಾಧ್ಯಮಗಳಿಗೆ ತಿಳಿಸಿದ ಬೆನ್ನಲ್ಲೇ ವಿಶ್ವ ಹಿಂದೂ ಪರಿಷತ್ ಸ್ಪಷ್ಟನೆ ನೀಡಿದೆ.

ಅಡ್ವಾಣಿಯವರಿಗೆ ಈಗ 96 ವರ್ಷವಾಗಿದ್ದು, ಜೋಶಿ ಅವರಿಗೆ 89 ವರ್ಷಗಳನ್ನು ಪೂರೈಸಿದ್ದಾರೆ. ಇವರಿಬ್ಬರೂ 80ರ ದಶಕದಲ್ಲಿ ದೇಶದಾದ್ಯಂತ ರಾಮ ಜನ್ಮಭೂಮಿ ಚಳವಳಿಯನ್ನು ಮುಂದೆ ನಿಂತು ಮುನ್ನಡೆಸಿದವರು. 1990ರಲ್ಲಿ ಅಡ್ವಾಣಿಯವರು ರಾಮಜನ್ಮ ಭೂಮಿ ಚಳವಳಿಗೆ ಬೆಂಬಲ ಪಡೆಯಲು ಗುಜರಾತ್‌ನ ಸೋಮನಾಥದಿಂದ ಉತ್ತರ ಪ್ರದೇಶದ ಅಯೋಧ್ಯೆ ವರೆಗೆ ವಿವಾದಾತ್ಮಕ ‘ರಥಯಾತ್ರೆ’ ನಡೆಸಿದರು. ಈ ಯಾತ್ರೆಯು ಉತ್ತರ ಭಾರತದ ಹಲವಾರು ನಗರಗಳಲ್ಲಿ ಕೋಮುಗಲಭೆಗೆ ಕಾರಣವಾಯಿತು. ಎರಡು ವರ್ಷಗಳ ನಂತರ, ಡಿಸೆಂಬರ್ 6, 1992 ರಂದು ಅಯೋಧ್ಯೆಯ ಬಾಬರಿ ಮಸೀದಿಯನ್ನು ಧ್ವಂಸಗೊಳಿಸಿದಾಗ, ಈ ಇಬ್ಬರೂ ಜನ ಸಂಘದ ನಾಯಕರು ಸ್ಥಳದಲ್ಲಿಯೇ ಇದ್ದರು.

ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ರಾಮಮಂದಿರ ಚಳವಳಿಯ ಮುಂಚೂಣಿ ನಾಯಕರಾದ ಅಡ್ವಾಣಿ ಮತ್ತು ಜೋಶಿ ಅವರನ್ನು ಆಹ್ವಾನಿಸಲಾಗಿದೆ ಎಂದು ವಿಎಚ್‌ಪಿಯ ಅಂತರರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಹೇಳಿದ್ದಾರೆ. ‘ನಾವು ರಾಮ ಜನ್ಮ ಭೂಮಿ ಹೋರಾಟದ ಬಗ್ಗೆ ಮಾತನಾಡಿದ್ದೇವೆ. ಇಬ್ಬರೂ ಹಿರಿಯರು ಕಾರ್ಯಕ್ರಮಕ್ಕೆ ಬರಲು ತಮ್ಮ ಕೈಲಾದಷ್ಟು ಪ್ರಯತ್ನಿಸುವುದಾಗಿ ಹೇಳಿದ್ದಾರೆ’ ಎಂದು ಕುಮಾರ್ ಹೇಳಿದ್ದಾರೆ. ವಿಎಚ್‌ಪಿಯು ಬಿಜೆಪಿಯ ಸೈದ್ಧಾಂತಿಕ ಪೋಷಕ ಗುಂಪುಗಳಾದ ಸಂಘ ಪರಿವಾರದ ಒಂದು ಭಾಗವಾಗಿದೆ.

ರಾಮಮಂದಿರ ಪ್ರಾಣ ಪ್ರತಿಷ್ಟಾಪನೆ ಕಾರ್ಯಕ್ರಮದಿಂದ ಇಬ್ಬರನ್ನು ದೂರವಿಡಲು ತಿಳಿಸಲಾಗಿದೆ ಎಂದು ರಾಮ ಮಂದಿರ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ಹೇಳಿಕೆಯ ನಂತರ ವಿಎಚ್‌ಪಿ ಸ್ಪಷ್ಟನೆ ನೀಡಿದೆ. ‘ಇಬ್ಬರೂ ನಮ್ಮ ಕುಟುಂಬದ ಹಿರಿಯರು ಮತ್ತು ಅವರ ವಯಸ್ಸನ್ನು ಪರಿಗಣಿಸಿ, ಅವರನ್ನು ಬರದಂತೆ ವಿನಂತಿಸಲಾಯಿತು, ಅದನ್ನು ಇಬ್ಬರೂ ಒಪ್ಪಿಕೊಂಡರು’ ಎಂದು ರೈ ನಿನ್ನೆ ಸುದ್ದಿಗಾರರಿಗೆ ತಿಳಿಸಿದರು,
ಈ ಟೀಕೆಗಳು ಭಾರಿ ವಿವಾದಕ್ಕೆ ಕಾರಣವಾಗಿದ್ದು, ಒಂದು ಹಂತದಲ್ಲಿ ಬಿಜೆಪಿ ನಾಯಕತ್ವವು ಪಕ್ಷವನ್ನು ಮುನ್ನಡೆಸಿದ ಹಿರಿಯ ನಾಯಕರನ್ನು ನಿರ್ಲಕ್ಷಿಸುವ ಮೂಲಕ ಅವಮಾನಿಸಿದೆ ಎಂದು ಹಲವರು ಆರೋಪಿಸಿದ್ದಾರೆ.

‘ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳುವ ಈ ಭವ್ಯ ಸಮಾರಂಭಕ್ಕೆ ಆರು ಪ್ರಾಚೀನ ಶಾಲೆಗಳ ಆಚಾರ್ಯರು, ಸುಮಾರು 4,000 ಸಂತರು ಮತ್ತು 2,200 ಇತರೆ ಅತಿಥಿಗಳನ್ನು ಆಹ್ವಾನಿಸಲಾಗಿದೆ ಎಂದು ರೈ ನಿನ್ನೆ ಹೇಳಿದ್ದರು. ಅತಿಥಿಗಳು ಕಾಶಿ ವಿಶ್ವನಾಥ ಮತ್ತು ವೈಷ್ಣೋದೇವಿಯಂತಹ ಪ್ರಮುಖ ದೇವಾಲಯಗಳ ಮುಖ್ಯಸ್ಥರನ್ನು ಒಳಗೊಂಡಿರುತ್ತದೆ ಎಂದು ಅವರು ಹೇಳಿದರು.

ಇದನ್ನೂ ಓದಿ; ಗಂಡ ಬಲಾತ್ಕರಿಸಿದರೂ ಅತ್ಯಾಚಾರವೇ: ಗುಜರಾತ್‌ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...