Homeಮುಖಪುಟಅಡ್ವಾಣಿ-ಜೋಶಿ ಇಬ್ಬರನ್ನೂ ರಾಮ ಮಂದಿರ ಉದ್ಘಾಟನೆಗೆ ಆಹ್ವಾನಿಸಲಾಗಿದೆ: ವಿಎಚ್‌ಪಿ ಸ್ಪಷ್ಟನೆ

ಅಡ್ವಾಣಿ-ಜೋಶಿ ಇಬ್ಬರನ್ನೂ ರಾಮ ಮಂದಿರ ಉದ್ಘಾಟನೆಗೆ ಆಹ್ವಾನಿಸಲಾಗಿದೆ: ವಿಎಚ್‌ಪಿ ಸ್ಪಷ್ಟನೆ

- Advertisement -
- Advertisement -

2024ರ ಜನವರಿಯಲ್ಲಿ ನಡೆಯುವ ಅಯೋಧ್ಯೆ ರಾಮ ಮಂದಿರದ ಉದ್ಘಾಟನೆಗೆ ರಾಮಮಂದಿರ ಟ್ರಸ್ಟ್ ಸಿದ್ಧತೆ ಮಾಡಿಕೊಂಡಿದ್ದು, ದೇಶದ ಹಲವು ಗಣ್ಯರಿಗೆ ಆಹ್ವಾನ ನೀಡುತ್ತಿದೆ. ಆದರೆ, ವಿವಾದಿತ ರಾಮಜನ್ಮ ಭೂಮಿ ಸಲುವಾಗಿ ದೇಶದಾದ್ಯಂತ ರಥಯಾತ್ರೆ ನಡೆಸಿದ ಬಿಜೆಪಿ ಹಿರಿಯರಾದ ಲಾಲ್ ಕೃಷ್ಣ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರನ್ನು ಉದ್ಘಾಟನೆಗೆ ಬರದಂತೆ ಸೂಚನೆ ನೀಡಲಾಗಿದ ಎಂಬ ಸುದ್ದಿ ಇಂದು ಭಾರಿ ಸದ್ದು ಮಾಡಿತ್ತು.

‘ಇಬ್ಬರೂ ನಾಯಕರಿಗೆ ವಯಸ್ಸಾಗಿರುವ ಕಾರಣಕ್ಕೆ ಹಾಗೂ ಜನವರಿಯಲ್ಲಿ ಇಲ್ಲಿ ಕೊರೆಯುವ ಚಳಿಯಿರುವ ಕಾರಣಕ್ಕೆ ಬರದಂತೆ ವಿನಂತಿಸಲಾಗಿದೆ’ ಎಂದು ರಾಮ ಮಂದಿರ ಟ್ರಸ್ಟ್ ಮಾಧ್ಯಮಗಳಿಗೆ ತಿಳಿಸಿದ ಬೆನ್ನಲ್ಲೇ ವಿಶ್ವ ಹಿಂದೂ ಪರಿಷತ್ ಸ್ಪಷ್ಟನೆ ನೀಡಿದೆ.

ಅಡ್ವಾಣಿಯವರಿಗೆ ಈಗ 96 ವರ್ಷವಾಗಿದ್ದು, ಜೋಶಿ ಅವರಿಗೆ 89 ವರ್ಷಗಳನ್ನು ಪೂರೈಸಿದ್ದಾರೆ. ಇವರಿಬ್ಬರೂ 80ರ ದಶಕದಲ್ಲಿ ದೇಶದಾದ್ಯಂತ ರಾಮ ಜನ್ಮಭೂಮಿ ಚಳವಳಿಯನ್ನು ಮುಂದೆ ನಿಂತು ಮುನ್ನಡೆಸಿದವರು. 1990ರಲ್ಲಿ ಅಡ್ವಾಣಿಯವರು ರಾಮಜನ್ಮ ಭೂಮಿ ಚಳವಳಿಗೆ ಬೆಂಬಲ ಪಡೆಯಲು ಗುಜರಾತ್‌ನ ಸೋಮನಾಥದಿಂದ ಉತ್ತರ ಪ್ರದೇಶದ ಅಯೋಧ್ಯೆ ವರೆಗೆ ವಿವಾದಾತ್ಮಕ ‘ರಥಯಾತ್ರೆ’ ನಡೆಸಿದರು. ಈ ಯಾತ್ರೆಯು ಉತ್ತರ ಭಾರತದ ಹಲವಾರು ನಗರಗಳಲ್ಲಿ ಕೋಮುಗಲಭೆಗೆ ಕಾರಣವಾಯಿತು. ಎರಡು ವರ್ಷಗಳ ನಂತರ, ಡಿಸೆಂಬರ್ 6, 1992 ರಂದು ಅಯೋಧ್ಯೆಯ ಬಾಬರಿ ಮಸೀದಿಯನ್ನು ಧ್ವಂಸಗೊಳಿಸಿದಾಗ, ಈ ಇಬ್ಬರೂ ಜನ ಸಂಘದ ನಾಯಕರು ಸ್ಥಳದಲ್ಲಿಯೇ ಇದ್ದರು.

ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ರಾಮಮಂದಿರ ಚಳವಳಿಯ ಮುಂಚೂಣಿ ನಾಯಕರಾದ ಅಡ್ವಾಣಿ ಮತ್ತು ಜೋಶಿ ಅವರನ್ನು ಆಹ್ವಾನಿಸಲಾಗಿದೆ ಎಂದು ವಿಎಚ್‌ಪಿಯ ಅಂತರರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಹೇಳಿದ್ದಾರೆ. ‘ನಾವು ರಾಮ ಜನ್ಮ ಭೂಮಿ ಹೋರಾಟದ ಬಗ್ಗೆ ಮಾತನಾಡಿದ್ದೇವೆ. ಇಬ್ಬರೂ ಹಿರಿಯರು ಕಾರ್ಯಕ್ರಮಕ್ಕೆ ಬರಲು ತಮ್ಮ ಕೈಲಾದಷ್ಟು ಪ್ರಯತ್ನಿಸುವುದಾಗಿ ಹೇಳಿದ್ದಾರೆ’ ಎಂದು ಕುಮಾರ್ ಹೇಳಿದ್ದಾರೆ. ವಿಎಚ್‌ಪಿಯು ಬಿಜೆಪಿಯ ಸೈದ್ಧಾಂತಿಕ ಪೋಷಕ ಗುಂಪುಗಳಾದ ಸಂಘ ಪರಿವಾರದ ಒಂದು ಭಾಗವಾಗಿದೆ.

ರಾಮಮಂದಿರ ಪ್ರಾಣ ಪ್ರತಿಷ್ಟಾಪನೆ ಕಾರ್ಯಕ್ರಮದಿಂದ ಇಬ್ಬರನ್ನು ದೂರವಿಡಲು ತಿಳಿಸಲಾಗಿದೆ ಎಂದು ರಾಮ ಮಂದಿರ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ಹೇಳಿಕೆಯ ನಂತರ ವಿಎಚ್‌ಪಿ ಸ್ಪಷ್ಟನೆ ನೀಡಿದೆ. ‘ಇಬ್ಬರೂ ನಮ್ಮ ಕುಟುಂಬದ ಹಿರಿಯರು ಮತ್ತು ಅವರ ವಯಸ್ಸನ್ನು ಪರಿಗಣಿಸಿ, ಅವರನ್ನು ಬರದಂತೆ ವಿನಂತಿಸಲಾಯಿತು, ಅದನ್ನು ಇಬ್ಬರೂ ಒಪ್ಪಿಕೊಂಡರು’ ಎಂದು ರೈ ನಿನ್ನೆ ಸುದ್ದಿಗಾರರಿಗೆ ತಿಳಿಸಿದರು,
ಈ ಟೀಕೆಗಳು ಭಾರಿ ವಿವಾದಕ್ಕೆ ಕಾರಣವಾಗಿದ್ದು, ಒಂದು ಹಂತದಲ್ಲಿ ಬಿಜೆಪಿ ನಾಯಕತ್ವವು ಪಕ್ಷವನ್ನು ಮುನ್ನಡೆಸಿದ ಹಿರಿಯ ನಾಯಕರನ್ನು ನಿರ್ಲಕ್ಷಿಸುವ ಮೂಲಕ ಅವಮಾನಿಸಿದೆ ಎಂದು ಹಲವರು ಆರೋಪಿಸಿದ್ದಾರೆ.

‘ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳುವ ಈ ಭವ್ಯ ಸಮಾರಂಭಕ್ಕೆ ಆರು ಪ್ರಾಚೀನ ಶಾಲೆಗಳ ಆಚಾರ್ಯರು, ಸುಮಾರು 4,000 ಸಂತರು ಮತ್ತು 2,200 ಇತರೆ ಅತಿಥಿಗಳನ್ನು ಆಹ್ವಾನಿಸಲಾಗಿದೆ ಎಂದು ರೈ ನಿನ್ನೆ ಹೇಳಿದ್ದರು. ಅತಿಥಿಗಳು ಕಾಶಿ ವಿಶ್ವನಾಥ ಮತ್ತು ವೈಷ್ಣೋದೇವಿಯಂತಹ ಪ್ರಮುಖ ದೇವಾಲಯಗಳ ಮುಖ್ಯಸ್ಥರನ್ನು ಒಳಗೊಂಡಿರುತ್ತದೆ ಎಂದು ಅವರು ಹೇಳಿದರು.

ಇದನ್ನೂ ಓದಿ; ಗಂಡ ಬಲಾತ್ಕರಿಸಿದರೂ ಅತ್ಯಾಚಾರವೇ: ಗುಜರಾತ್‌ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...