Homeಚಳವಳಿಕರ್ನಾಟಕದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಕಾಯಿದೆ ಜಾರಿಯಿಂದ ಜನರ ಜೀವನೋಪಾಯಕ್ಕೆ ಧಕ್ಕೆ, ಗೂಂಡಾಗಿರಿ ಹೆಚ್ಚಳ: ಅಧ್ಯಯನ...

ಕರ್ನಾಟಕದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಕಾಯಿದೆ ಜಾರಿಯಿಂದ ಜನರ ಜೀವನೋಪಾಯಕ್ಕೆ ಧಕ್ಕೆ, ಗೂಂಡಾಗಿರಿ ಹೆಚ್ಚಳ: ಅಧ್ಯಯನ ವರದಿ

ಕಾಯ್ದೆಯು ಪೊಲೀಸರಿಗೆ ಮತ್ತು ಸ್ವಘೋಷಿತ ಗೋ ರಕ್ಷಕರಿಗೆ ಅನಿಯಮಿತ ಅಧಿಕಾರ ನೀಡಿದ್ದು, ನಿತ್ಯ ಕಿರುಕುಳ ಮತ್ತು ಹಣದ ಸುಲಿಗೆ ನಡೆಯುತ್ತಿದೆ. ನಾಲ್ಕು ತಿಂಗಳಲ್ಲಿ 29 FIR ದಾಖಲಿಸಲಾಗಿದೆ.

- Advertisement -
- Advertisement -

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯಿದೆ 2020 ರ ಜಾರಿಯಿಂದ ಜನರ ಜೀವನೋಪಾಯವನ್ನು ಅಪರಾಧೀಕರಿಸುವ ಪ್ರಕ್ರಿಯೆಗಳು ಆರಂಭವಾಗಿದ್ದು, ಗೂಂಡಾಗಿರಿಯನ್ನು ಕಾನೂನುಬದ್ಧಗೊಳಿಸಲಾಗುತ್ತಿದೆ. ಇದರಿಂದ ರೈತರು, ಮಾಂಸದ ವ್ಯಾಪಾರಿಗಳು ಸೇರಿದಂತೆ ಬಡವರ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿದೆ ಎಂದು ಆಹಾರ ನಮ್ಮ ಹಕ್ಕು ಒಕ್ಕೂಟದ ಅಧ್ಯಯನ ವರದಿ ತಿಳಿಸಿದೆ.

ಆಹಾರ ನಮ್ಮ ಹಕ್ಕು ಒಕ್ಕೂಟವು ವೈದ್ಯರಾದ ಡಾ. ಸಿಲ್ವಿಯಾ ಕರ್ಪಗಂ ಮತ್ತು ಸಂಶೋಧಕರಾದ ಸಿದ್ಧಾರ್ಥ್ ಕೆ ಜೋಶಿಯವರ ನೇತೃತ್ವದಲ್ಲಿ ಈ ಕಾಯ್ದೆ ಜಾರಿಯಿಂದಾಗಿರುವ ಪರಿಣಾಮಗಳ ಕುರಿತು ಅಧ್ಯಯನ ನಡೆಸಿದೆ. ಜಾನುವಾರು ವ್ಯಾಪಾರಿಗಳು, ಮಾಂಸದ ವ್ಯಾಪಾರಿಗಳು, ಮಾರಾಟಗಾರರು ಮತ್ತು ಗ್ರಾಹಕರ ಮೇಲೆ ಜಾನುವಾರು ಹತ್ಯೆ ನಿಷೇಧವು ತೀವ್ರ ಪರಿಣಾಮ ಬೀರಿದ್ದು, ಈ ಕಾಯ್ದೆಯು ಕರ್ನಾಟಕದ ಜಾನುವಾರು, ಚರ್ಮ ಮತ್ತು ಮಾಂಸದ ಆರ್ಥಿಕತೆಗೆ ಬಲವಾದ ಹೊಡೆತ ನೀಡಿದೆ ಎಂದು ಅಭಿಪ್ರಾಯಪಟ್ಟಿದೆ.

ಕರ್ನಾಟಕ ರಾಜ್ಯ ರೈತ ಸಂಘ, ದನದ ಮಾಂಸ ವ್ಯಾಪಾರಿಗಳ ಸಂಘ, ಜಮಾತೆ ಇಸ್ಲಾಮಿ, ಕರ್ನಾಟಕ ಅಲ್ಪಸಂಖ್ಯಾತರ ಹಕ್ಕುಗಳ ವೇದಿಕೆ, ದಲಿತ ಸಂಘರ್ಷ ಸಮಿತಿ (ಭೀಮವಾದ), ಚರ್ಮ ಘಟಕಗಳು, ಕಸಾಯಿಖಾನೆಗಳು, ಹೋಟಲ್ ಮಾಲೀಕರು, ಜಾನುವಾರು ಮಾರುಕಟ್ಟೆ ಅಧಿಕಾರಿಗಳು ಮತ್ತು ವ್ಯಾಪಾರಿಗಳು ಹಾಗೂ ಗ್ರಾಹಕರರನ್ನು ಸಂದರ್ಶಿಸಿ ಈ ವರದಿ ತಯಾರಿಸಲಾಗಿದೆ.

ಹಳೆಯ 1964 ಕಾಯಿದೆಯಿಂದ ಈಗಾಗಲೇ ನಿಷೇಧಿಸಲ್ಪಟ್ಟಿರುವ ಆಕಳು ಜೊತೆಗೆ ಎಲ್ಲ ವಯಸ್ಸಿನ ಗೂಳಿ, ಎತ್ತು ಹಾಗು ಹದಿಮೂರು ವರ್ಷದೊಳಗಿನ ಎಮ್ಮೆ ಮತ್ತು ಕೋಣಗಳ ಹತ್ಯೆವನ್ನು ನಿಷೇಧಿಸುವ ಕಾಯ್ದೆಯನ್ನು ಬಿಜೆಪಿ ಸರ್ಕಾರವು 2021 ರಲ್ಲಿ ತಂದಿತು.

ರೈತರು ಹಾಲು, ಗೊಬ್ಬರ, ಸಾಗಣೆ ಉದ್ದೇಶಗಳಿಗಾಗಿ ಜಾನುವಾರುಗಳನ್ನು ಸಾಕುತ್ತಾರೆ ಮತ್ತು ಈ ಜಾನುವಾರುಗಳು ಅನುತ್ಪಾದಕವಾದಾಗ ಅವುಗಳನ್ನು ಮಾರಿ ಬೇರೆಯವನ್ನು ಖರೀದಿಸುತ್ತಾರೆ. ರಾಜ್ಯದಲ್ಲಿ “ಅನುತ್ಪಾದಕ ಜಾನುವಾರು” ಗಳಿಂದ ಮಾಂಸ, ಗೊರಸು, ಚರ್ಮ, ಮೂಳೆಗಳು, ರಕ್ತ, ಟ್ಯಾಲೋ ಮತ್ತು ಇತರ ಉತ್ಪನ್ನಗಳ ದೊಡ್ಡ ವ್ಯಾಪಾರವೂ ಇದೆ. 2018-19ರಲ್ಲಿ ಕರ್ನಾಟಕದಲ್ಲಿ ಜಾನುವಾರು ಉತ್ಪನ್ನಗಳ ಒಟ್ಟು ಅಂದಾಜು ಮೌಲ್ಯ ರೂ. 49834.6 ಕೋಟಿಗಳು ಇತ್ತು. ಆದರೆ ಕಾಯ್ದೆ ಜಾರಿಯಿಂದ ಇದರಲ್ಲಿ ಬಹುತೇಕ ಕುಸಿತ ಕಂಡಿದೆ. ಕಾಯ್ದೆಯು ಪೊಲೀಸರಿಗೆ ಮತ್ತು ಸ್ವಯಂ ನೇಮಕಗೊಂಡ ಗೋ ರಕ್ಷಕರಿಗೆ ಅನಿಯಮಿತ ಅಧಿಕಾರವನ್ನು ನೀಡಿದ್ದು, ನಿತ್ಯ ಕಿರುಕುಳ ಮತ್ತು ಹಣ ಸುಲಿಗೆ ನಡೆಯುತ್ತಿದೆ. ಕಾಯ್ದೆಯ ಅನುಷ್ಠಾನವಾದ ನಾಲ್ಕು ತಿಂಗಳೊಳಗೆ 29 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ; ಅವುಗಳಲ್ಲಿ ಹೆಚ್ಚಿನವು ದಕ್ಷಿಣ ಕನ್ನಡ ಮತ್ತು ಮೈಸೂರಿನಲ್ಲಿವೆ ಎಂದು ವರದಿ ಹೇಳಿದೆ.

ಜಾನುವಾರು ವ್ಯಾಪಾರವನ್ನು ಅವಲಂಬಿಸಿರುವ ಇಡೀ ಆರ್ಥಿಕ ಮೌಲ್ಯ ಸರಪಳಿಯಲ್ಲಿ, ಟ್ಯಾಲೋ ವ್ಯಾಪಾರಿಗಳು, ಕ್ಲೀನರ್‌ಗಳು, ಲೋಡರ್‌ಗಳು, ಟೆಂಪೋ ಡ್ರೈವರ್‌ಗಳು, ಅಂಗಡಿ ಕೆಲಸಗಾರರು, ಬೀದಿ ವ್ಯಾಪಾರಿಗಳು, ಹೋಟೆಲ್ ಮಾಲೀಕರು ಮತ್ತು ಕಸಾಯಿಖಾನೆಗಳಲ್ಲಿ ಕೆಲಸ ಮಾಡುವವರು ಕೆಲಸ ಕಳೆದುಕೊಂಡಿದ್ದಾರೆ ಮತ್ತು ಇವರಿಗೆ ಮೂಲ ಜೀವನೋಪಾಯಕ್ಕೂ ಸರಕಾರದಿಂದ ಯಾವುದೇ ರೀತಿಯ ಬೆಂಬಲ ಸಿಕ್ಕಿಲ್ಲ ವರದಿ ತಿಳಿಸಿದೆ.

ಬೆಂಗಳೂರಿನ ದೇವರಜೀವನಹಳ್ಳಿಯ ಚರ್ಮ ಸಂಸ್ಕರಣ ಘಟಕ ಮುಚ್ಚಿಹೋಗಿರುವುದು

2018-19ರಲ್ಲಿ ಕರ್ನಾಟಕದಲ್ಲಿ ಉತ್ಪಾದನೆಯಾಗುವ ದನ ಮತ್ತು ಎಮ್ಮೆ ಮಾಂಸದ ಅಂದಾಜು ಮಾರುಕಟ್ಟೆ ಮೌಲ್ಯ ಕ್ರಮವಾಗಿ 270.6 ಕೋಟಿ ಮತ್ತು 185.5 ಕೋಟಿ ಇತ್ತು. ಅದೇ ರೀತಿ 2018-19 ರಲ್ಲಿ ಕರ್ನಾಟಕದಲ್ಲಿ ಉತ್ಪಾದಿಸಲಾದ ದನ ಮತ್ತು ಎಮ್ಮೆಗಳ ಚರ್ಮದ ಅಂದಾಜು ಮೌಲ್ಯವನ್ನು 8.26 ಮತ್ತು 4.84 ಕೋಟಿ ಎಂದು ಅಂದಾಜಿಸಲಾಗಿದೆ. ಚರ್ಮೋದ್ಯಮದ ಅತ್ಯಂತ ಕೀಳು ಉದ್ಯೋಗದಲ್ಲಿ ತೊಡಗಿರುವ ಹೆಚ್ಚಿನ ಜನರು ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ ಮತ್ತು ಈ ಕಾಯಿದೆಯಿಂದಾಗಿ ತೀವ್ರ ಸಂಕಷ್ಟವನ್ನು ಅನುಭವಿಸಿದ್ದಾರೆ. ಚರ್ಮಗಳ ಪೂರೈಕೆಯು ಕಡಿಮೆಯಾಗಿದೆ; ಇದರಿಂದಾಗಿ ಉದ್ಯಮವನ್ನು ಅವಲಂಬಿಸಿಕೊಂಡಿದ್ದವರ ಜೀವನೋಪಾಯದ ಮೇಲೆ ಗಣನೀಯವಾಗಿ ಪರಿಣಾಮ ಬೀರಿದೆ. ಸ್ಪಷ್ಟವಾಗಿ, ‘ಮೇಲ್ಜಾತಿ’ ಹಿಂದೂಗಳ ನಂಬಿಕೆಗಳಿಗಾಗಿ, ರಾಜ್ಯದ ಅಂಚಿನಲ್ಲಿರುವ ಸಮುದಾಯಗಳ ಮೇಲೆ ದೊಡ್ಡ ಹೊರೆ ಹಾಕಲಾಗುತ್ತಿದೆ. ದಲಿತ ಸಮುದಾಯವನ್ನು ಆರ್ಥಿಕವಾಗಿ ಮೇಲಕ್ಕೆತ್ತಲು ಚರ್ಮದ ವ್ಯಾಪಾರವನ್ನು ಆಧುನೀಕರಿಸಲು ಮೂಲಸೌಕರ್ಯ ಮತ್ತು ಯಂತ್ರೋಪಕರಣಗಳಲ್ಲಿ ಹೂಡಿಕೆ ಮಾಡುವ ಬದಲು, ಈಗಿರುವ ಜೀವನೋಪಾಯವನ್ನು ಸಹ ಕಸಿದುಕೊಳ್ಳಲಾಗುತ್ತಿದೆ; ಇದು ಒಂದು ರೀತಿಯ ಜಾತಿ ತಾರತಮ್ಯವಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಕಾಯ್ದೆಯಿಂದ ಒಂದೇ ಗುಂಪಿಗೆ ಲಾಭ

ಸಂದರ್ಶಿಸಿದ ಹೆಚ್ಚಿನ ಜನರು ಜಾನುವಾರು ಹತ್ಯೆ ನಿಷೇಧದಿಂದ ಪ್ರಯೋಜನ ಪಡೆಯುತ್ತಿರುವವರು ದೊಡ್ಡ ದನದ ಮಾಂಸ ರಫ್ತು ಕಂಪನಿಗಳು ಎಂದು ಒಕ್ಕೊರಲಲ್ಲಿ ಹೇಳುತ್ತಾರೆ. ಅವರು ಕೆಲವೊಮ್ಮೆ ತಮ್ಮ ಸಂಸ್ಥೆಗಳಿಗೆ ಮುಸ್ಲಿಂ ಹೆಸರುಗಳನ್ನು ಬಳಸುತ್ತಾರೆ. ಸತೀಶ್ ಸಬರ್ವಾಲ್ ಅವರ ಕಂಪನಿಯ ಹೆಸರು ಅಲ್ ಕಬೀರ್ ಎಕ್ಸ್‌ಪೋರ್ಟ್ಸ್ ಎಂದಾಗಿದೆ. ಅದೇ ರೀತಿ ಸುನಿಲ್ ಕಪೂರ್ ಒಡೆತನದ ಅರೇಬಿಯನ್ ಎಕ್ಸ್‌ಪೋರ್ಟ್ಸ್, ಸುನಿಲ್ ಸೂದ್ ಒಡೆತನದ ಅಲ್ ನೂರ್ ಎಕ್ಸ್‌ಪೋರ್ಟ್ಸ್ ಎಂಬ ಹೆಸರುಗಳಿವೆ ಎಂದು ವರದಿ ಹೇಳಿದೆ.

15% (ಅಥವಾ 18 ಕೋಟಿ) ಭಾರತೀಯರು, ಇದರಲ್ಲಿ ದಲಿತರು, ಮುಸ್ಲಿಮರು, ಕ್ರಿಶ್ಚಿಯನ್ನರು, ಇತರ ಹಿಂದುಳಿದ ಜಾತಿಗಳು ಮತ್ತು ಆದಿವಾಸಿಗಳು ದನಮಾಂಸವನ್ನು ಸೇವಿಸುತ್ತಾರೆ. ದನಮಾಂಸವು ಅಗ್ಗದ ಪೌಷ್ಟಿಕಾಂಶದ ದಟ್ಟವಾದ ಆಹಾರಗಳಲ್ಲಿ ಒಂದಾಗಿದೆ. 100 ಗ್ರಾಂ ಲೀನ್ ದನಮಾಂಸವು ದೈನಂದಿನ ಪ್ರೋಟೀನ್ ಅಗತ್ಯದ 54% ಅನ್ನು ಒದಗಿಸುತ್ತದೆ ಮತ್ತು ದನಮಾಂಸದಲ್ಲಿ ಲಭ್ಯವಿರುವ ಪೋಷಕಾಂಶಗಳು ಅರಗಬಲ್ಲವಾಗುತ್ತದೆ ಮತ್ತು ಚೆನ್ನಾಗಿ ಹೀರಲ್ಪಡುತ್ತವೆ. ಬೆಂಗಳೂರಿನಲ್ಲಿ ಒಂದು ಕೆಜಿ ಬೀಫ್‌ ಬೆಲೆ 250 ರೂ ಇತ್ತು. ಕಾಯ್ದೆ ಜಾರಿಯಾದ ನಂತರ 300ರಿಂದ 350ರವರೆಗೆ ತಲುಪಿದೆ. ಅದೇ ರೀತಿಯ ಕರ್ನಾಟಕದ ಇತರ ಜಿಲ್ಲೆಗಳಲ್ಲಿ 150-200 ರೂ ಇದ್ದ ಬೀಫ್ ಬೆಲೆಯು 250-275 ರೂ ವರೆಗೆ ತಲುಪಿದೆ. ಇದು ಗ್ರಾಹಕರ ಮೇಲೆ ಹೊರೆ ಬಿದ್ದಿದೆ ಎಂದು ವರದಿ ಹೇಳಿದೆ.

ಮಾಂಸದಂಗಡಿ

ಕೀಳು ಮಟ್ಟದ ಚಿಂತನೆಯಿಂದ ರೂಪುಗೊಂಡಿರುವ ಈ ಕಾಯಿದೆಯಿಂದ ಜೀವನೋಪಾಯ, ಪೋಷಣೆ ಮತ್ತು ಮಾನಸಿಕ ಆರೋಗ್ಯದ ಮೇಲೆ ಉಂಟಾಗುವ ಅಗಾಧವಾದ ಹಾನಿಯನ್ನು ಅರಿತುಕೊಂಡು ಜನರಿಂದ ಜನರಿಗಾಗಿ ರಚನೆಗೊಂಡಿರುವ ಸರ್ಕಾರವು ಈ ಕಾಯಿದೆಯನ್ನು ಅದರ ಪ್ರಸ್ತುತ ಸ್ವರೂಪದಲ್ಲಿ ಹಿಂಪಡೆಯಬೇಕು. ಜಾನುವಾರು ವ್ಯವಹಾರದಲ್ಲಿ ತೊಡಗಿರುವ ಯಾವುದೇ ವ್ಯಕ್ತಿ ಅಥವಾ ಸಮುದಾಯವು ಅವರ ಔದ್ಯೋಗಿಕ, ಸಾಂಸ್ಕೃತಿಕ ಅಥವಾ ಪೌಷ್ಟಿಕಾಂಶದ ಆಯ್ಕೆಗಳಿಗಾಗಿ ಕಿರುಕುಳ, ಬೆದರಿಕೆ ಅಥವಾ ಕೀಳ್ಬಳಕೆಗೆ ಒಳಗಾಗುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು. ಈ ಕಾಯಿದೆಯಿಂದಾಗಿ ತೊಂದರೆಗೊಳಗಾದ ಕರ್ನಾಟಕದ ನಾಗರಿಕರಿಗೆ ನ್ಯಾಯದ ಹಿತದೃಷ್ಟಿಯಿಂದ ಆದಷ್ಟು ಬೇಗ ಪರಿಹಾರ ನೀಡಬೇಕು. ದನಗಳ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಅಪರಾಧೀಕರಣಗೊಳಿಸಬೇಕೆ ವಿನಃ ಜನರ ಜೀವನೋಪಾಯ ಮತ್ತು ಆಹಾರದ ಆಯ್ಕೆಗಳನ್ನಲ್ಲ ಎಂದು ವರದಿಯು ಒತ್ತಾಯಿಸಿದೆ.

ಪೂರ್ತಿ ವರದಿ ಓದಲು ಇಲ್ಲಿ ಕ್ಲಿಕ್ ಮಾಡಿ


ಇದನ್ನೂ ಓದಿ: ಬಡಪಾಯಿ ಎಮ್ಮೆಗಳಿಗೂ ಥ್ಯಾಂಕ್ಸ್ ಹೇಳೋಣ ಬನ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...