Homeಚಳವಳಿಕರ್ನಾಟಕದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಕಾಯಿದೆ ಜಾರಿಯಿಂದ ಜನರ ಜೀವನೋಪಾಯಕ್ಕೆ ಧಕ್ಕೆ, ಗೂಂಡಾಗಿರಿ ಹೆಚ್ಚಳ: ಅಧ್ಯಯನ...

ಕರ್ನಾಟಕದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಕಾಯಿದೆ ಜಾರಿಯಿಂದ ಜನರ ಜೀವನೋಪಾಯಕ್ಕೆ ಧಕ್ಕೆ, ಗೂಂಡಾಗಿರಿ ಹೆಚ್ಚಳ: ಅಧ್ಯಯನ ವರದಿ

ಕಾಯ್ದೆಯು ಪೊಲೀಸರಿಗೆ ಮತ್ತು ಸ್ವಘೋಷಿತ ಗೋ ರಕ್ಷಕರಿಗೆ ಅನಿಯಮಿತ ಅಧಿಕಾರ ನೀಡಿದ್ದು, ನಿತ್ಯ ಕಿರುಕುಳ ಮತ್ತು ಹಣದ ಸುಲಿಗೆ ನಡೆಯುತ್ತಿದೆ. ನಾಲ್ಕು ತಿಂಗಳಲ್ಲಿ 29 FIR ದಾಖಲಿಸಲಾಗಿದೆ.

- Advertisement -
- Advertisement -

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯಿದೆ 2020 ರ ಜಾರಿಯಿಂದ ಜನರ ಜೀವನೋಪಾಯವನ್ನು ಅಪರಾಧೀಕರಿಸುವ ಪ್ರಕ್ರಿಯೆಗಳು ಆರಂಭವಾಗಿದ್ದು, ಗೂಂಡಾಗಿರಿಯನ್ನು ಕಾನೂನುಬದ್ಧಗೊಳಿಸಲಾಗುತ್ತಿದೆ. ಇದರಿಂದ ರೈತರು, ಮಾಂಸದ ವ್ಯಾಪಾರಿಗಳು ಸೇರಿದಂತೆ ಬಡವರ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿದೆ ಎಂದು ಆಹಾರ ನಮ್ಮ ಹಕ್ಕು ಒಕ್ಕೂಟದ ಅಧ್ಯಯನ ವರದಿ ತಿಳಿಸಿದೆ.

ಆಹಾರ ನಮ್ಮ ಹಕ್ಕು ಒಕ್ಕೂಟವು ವೈದ್ಯರಾದ ಡಾ. ಸಿಲ್ವಿಯಾ ಕರ್ಪಗಂ ಮತ್ತು ಸಂಶೋಧಕರಾದ ಸಿದ್ಧಾರ್ಥ್ ಕೆ ಜೋಶಿಯವರ ನೇತೃತ್ವದಲ್ಲಿ ಈ ಕಾಯ್ದೆ ಜಾರಿಯಿಂದಾಗಿರುವ ಪರಿಣಾಮಗಳ ಕುರಿತು ಅಧ್ಯಯನ ನಡೆಸಿದೆ. ಜಾನುವಾರು ವ್ಯಾಪಾರಿಗಳು, ಮಾಂಸದ ವ್ಯಾಪಾರಿಗಳು, ಮಾರಾಟಗಾರರು ಮತ್ತು ಗ್ರಾಹಕರ ಮೇಲೆ ಜಾನುವಾರು ಹತ್ಯೆ ನಿಷೇಧವು ತೀವ್ರ ಪರಿಣಾಮ ಬೀರಿದ್ದು, ಈ ಕಾಯ್ದೆಯು ಕರ್ನಾಟಕದ ಜಾನುವಾರು, ಚರ್ಮ ಮತ್ತು ಮಾಂಸದ ಆರ್ಥಿಕತೆಗೆ ಬಲವಾದ ಹೊಡೆತ ನೀಡಿದೆ ಎಂದು ಅಭಿಪ್ರಾಯಪಟ್ಟಿದೆ.

ಕರ್ನಾಟಕ ರಾಜ್ಯ ರೈತ ಸಂಘ, ದನದ ಮಾಂಸ ವ್ಯಾಪಾರಿಗಳ ಸಂಘ, ಜಮಾತೆ ಇಸ್ಲಾಮಿ, ಕರ್ನಾಟಕ ಅಲ್ಪಸಂಖ್ಯಾತರ ಹಕ್ಕುಗಳ ವೇದಿಕೆ, ದಲಿತ ಸಂಘರ್ಷ ಸಮಿತಿ (ಭೀಮವಾದ), ಚರ್ಮ ಘಟಕಗಳು, ಕಸಾಯಿಖಾನೆಗಳು, ಹೋಟಲ್ ಮಾಲೀಕರು, ಜಾನುವಾರು ಮಾರುಕಟ್ಟೆ ಅಧಿಕಾರಿಗಳು ಮತ್ತು ವ್ಯಾಪಾರಿಗಳು ಹಾಗೂ ಗ್ರಾಹಕರರನ್ನು ಸಂದರ್ಶಿಸಿ ಈ ವರದಿ ತಯಾರಿಸಲಾಗಿದೆ.

ಹಳೆಯ 1964 ಕಾಯಿದೆಯಿಂದ ಈಗಾಗಲೇ ನಿಷೇಧಿಸಲ್ಪಟ್ಟಿರುವ ಆಕಳು ಜೊತೆಗೆ ಎಲ್ಲ ವಯಸ್ಸಿನ ಗೂಳಿ, ಎತ್ತು ಹಾಗು ಹದಿಮೂರು ವರ್ಷದೊಳಗಿನ ಎಮ್ಮೆ ಮತ್ತು ಕೋಣಗಳ ಹತ್ಯೆವನ್ನು ನಿಷೇಧಿಸುವ ಕಾಯ್ದೆಯನ್ನು ಬಿಜೆಪಿ ಸರ್ಕಾರವು 2021 ರಲ್ಲಿ ತಂದಿತು.

ರೈತರು ಹಾಲು, ಗೊಬ್ಬರ, ಸಾಗಣೆ ಉದ್ದೇಶಗಳಿಗಾಗಿ ಜಾನುವಾರುಗಳನ್ನು ಸಾಕುತ್ತಾರೆ ಮತ್ತು ಈ ಜಾನುವಾರುಗಳು ಅನುತ್ಪಾದಕವಾದಾಗ ಅವುಗಳನ್ನು ಮಾರಿ ಬೇರೆಯವನ್ನು ಖರೀದಿಸುತ್ತಾರೆ. ರಾಜ್ಯದಲ್ಲಿ “ಅನುತ್ಪಾದಕ ಜಾನುವಾರು” ಗಳಿಂದ ಮಾಂಸ, ಗೊರಸು, ಚರ್ಮ, ಮೂಳೆಗಳು, ರಕ್ತ, ಟ್ಯಾಲೋ ಮತ್ತು ಇತರ ಉತ್ಪನ್ನಗಳ ದೊಡ್ಡ ವ್ಯಾಪಾರವೂ ಇದೆ. 2018-19ರಲ್ಲಿ ಕರ್ನಾಟಕದಲ್ಲಿ ಜಾನುವಾರು ಉತ್ಪನ್ನಗಳ ಒಟ್ಟು ಅಂದಾಜು ಮೌಲ್ಯ ರೂ. 49834.6 ಕೋಟಿಗಳು ಇತ್ತು. ಆದರೆ ಕಾಯ್ದೆ ಜಾರಿಯಿಂದ ಇದರಲ್ಲಿ ಬಹುತೇಕ ಕುಸಿತ ಕಂಡಿದೆ. ಕಾಯ್ದೆಯು ಪೊಲೀಸರಿಗೆ ಮತ್ತು ಸ್ವಯಂ ನೇಮಕಗೊಂಡ ಗೋ ರಕ್ಷಕರಿಗೆ ಅನಿಯಮಿತ ಅಧಿಕಾರವನ್ನು ನೀಡಿದ್ದು, ನಿತ್ಯ ಕಿರುಕುಳ ಮತ್ತು ಹಣ ಸುಲಿಗೆ ನಡೆಯುತ್ತಿದೆ. ಕಾಯ್ದೆಯ ಅನುಷ್ಠಾನವಾದ ನಾಲ್ಕು ತಿಂಗಳೊಳಗೆ 29 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ; ಅವುಗಳಲ್ಲಿ ಹೆಚ್ಚಿನವು ದಕ್ಷಿಣ ಕನ್ನಡ ಮತ್ತು ಮೈಸೂರಿನಲ್ಲಿವೆ ಎಂದು ವರದಿ ಹೇಳಿದೆ.

ಜಾನುವಾರು ವ್ಯಾಪಾರವನ್ನು ಅವಲಂಬಿಸಿರುವ ಇಡೀ ಆರ್ಥಿಕ ಮೌಲ್ಯ ಸರಪಳಿಯಲ್ಲಿ, ಟ್ಯಾಲೋ ವ್ಯಾಪಾರಿಗಳು, ಕ್ಲೀನರ್‌ಗಳು, ಲೋಡರ್‌ಗಳು, ಟೆಂಪೋ ಡ್ರೈವರ್‌ಗಳು, ಅಂಗಡಿ ಕೆಲಸಗಾರರು, ಬೀದಿ ವ್ಯಾಪಾರಿಗಳು, ಹೋಟೆಲ್ ಮಾಲೀಕರು ಮತ್ತು ಕಸಾಯಿಖಾನೆಗಳಲ್ಲಿ ಕೆಲಸ ಮಾಡುವವರು ಕೆಲಸ ಕಳೆದುಕೊಂಡಿದ್ದಾರೆ ಮತ್ತು ಇವರಿಗೆ ಮೂಲ ಜೀವನೋಪಾಯಕ್ಕೂ ಸರಕಾರದಿಂದ ಯಾವುದೇ ರೀತಿಯ ಬೆಂಬಲ ಸಿಕ್ಕಿಲ್ಲ ವರದಿ ತಿಳಿಸಿದೆ.

ಬೆಂಗಳೂರಿನ ದೇವರಜೀವನಹಳ್ಳಿಯ ಚರ್ಮ ಸಂಸ್ಕರಣ ಘಟಕ ಮುಚ್ಚಿಹೋಗಿರುವುದು

2018-19ರಲ್ಲಿ ಕರ್ನಾಟಕದಲ್ಲಿ ಉತ್ಪಾದನೆಯಾಗುವ ದನ ಮತ್ತು ಎಮ್ಮೆ ಮಾಂಸದ ಅಂದಾಜು ಮಾರುಕಟ್ಟೆ ಮೌಲ್ಯ ಕ್ರಮವಾಗಿ 270.6 ಕೋಟಿ ಮತ್ತು 185.5 ಕೋಟಿ ಇತ್ತು. ಅದೇ ರೀತಿ 2018-19 ರಲ್ಲಿ ಕರ್ನಾಟಕದಲ್ಲಿ ಉತ್ಪಾದಿಸಲಾದ ದನ ಮತ್ತು ಎಮ್ಮೆಗಳ ಚರ್ಮದ ಅಂದಾಜು ಮೌಲ್ಯವನ್ನು 8.26 ಮತ್ತು 4.84 ಕೋಟಿ ಎಂದು ಅಂದಾಜಿಸಲಾಗಿದೆ. ಚರ್ಮೋದ್ಯಮದ ಅತ್ಯಂತ ಕೀಳು ಉದ್ಯೋಗದಲ್ಲಿ ತೊಡಗಿರುವ ಹೆಚ್ಚಿನ ಜನರು ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ ಮತ್ತು ಈ ಕಾಯಿದೆಯಿಂದಾಗಿ ತೀವ್ರ ಸಂಕಷ್ಟವನ್ನು ಅನುಭವಿಸಿದ್ದಾರೆ. ಚರ್ಮಗಳ ಪೂರೈಕೆಯು ಕಡಿಮೆಯಾಗಿದೆ; ಇದರಿಂದಾಗಿ ಉದ್ಯಮವನ್ನು ಅವಲಂಬಿಸಿಕೊಂಡಿದ್ದವರ ಜೀವನೋಪಾಯದ ಮೇಲೆ ಗಣನೀಯವಾಗಿ ಪರಿಣಾಮ ಬೀರಿದೆ. ಸ್ಪಷ್ಟವಾಗಿ, ‘ಮೇಲ್ಜಾತಿ’ ಹಿಂದೂಗಳ ನಂಬಿಕೆಗಳಿಗಾಗಿ, ರಾಜ್ಯದ ಅಂಚಿನಲ್ಲಿರುವ ಸಮುದಾಯಗಳ ಮೇಲೆ ದೊಡ್ಡ ಹೊರೆ ಹಾಕಲಾಗುತ್ತಿದೆ. ದಲಿತ ಸಮುದಾಯವನ್ನು ಆರ್ಥಿಕವಾಗಿ ಮೇಲಕ್ಕೆತ್ತಲು ಚರ್ಮದ ವ್ಯಾಪಾರವನ್ನು ಆಧುನೀಕರಿಸಲು ಮೂಲಸೌಕರ್ಯ ಮತ್ತು ಯಂತ್ರೋಪಕರಣಗಳಲ್ಲಿ ಹೂಡಿಕೆ ಮಾಡುವ ಬದಲು, ಈಗಿರುವ ಜೀವನೋಪಾಯವನ್ನು ಸಹ ಕಸಿದುಕೊಳ್ಳಲಾಗುತ್ತಿದೆ; ಇದು ಒಂದು ರೀತಿಯ ಜಾತಿ ತಾರತಮ್ಯವಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಕಾಯ್ದೆಯಿಂದ ಒಂದೇ ಗುಂಪಿಗೆ ಲಾಭ

ಸಂದರ್ಶಿಸಿದ ಹೆಚ್ಚಿನ ಜನರು ಜಾನುವಾರು ಹತ್ಯೆ ನಿಷೇಧದಿಂದ ಪ್ರಯೋಜನ ಪಡೆಯುತ್ತಿರುವವರು ದೊಡ್ಡ ದನದ ಮಾಂಸ ರಫ್ತು ಕಂಪನಿಗಳು ಎಂದು ಒಕ್ಕೊರಲಲ್ಲಿ ಹೇಳುತ್ತಾರೆ. ಅವರು ಕೆಲವೊಮ್ಮೆ ತಮ್ಮ ಸಂಸ್ಥೆಗಳಿಗೆ ಮುಸ್ಲಿಂ ಹೆಸರುಗಳನ್ನು ಬಳಸುತ್ತಾರೆ. ಸತೀಶ್ ಸಬರ್ವಾಲ್ ಅವರ ಕಂಪನಿಯ ಹೆಸರು ಅಲ್ ಕಬೀರ್ ಎಕ್ಸ್‌ಪೋರ್ಟ್ಸ್ ಎಂದಾಗಿದೆ. ಅದೇ ರೀತಿ ಸುನಿಲ್ ಕಪೂರ್ ಒಡೆತನದ ಅರೇಬಿಯನ್ ಎಕ್ಸ್‌ಪೋರ್ಟ್ಸ್, ಸುನಿಲ್ ಸೂದ್ ಒಡೆತನದ ಅಲ್ ನೂರ್ ಎಕ್ಸ್‌ಪೋರ್ಟ್ಸ್ ಎಂಬ ಹೆಸರುಗಳಿವೆ ಎಂದು ವರದಿ ಹೇಳಿದೆ.

15% (ಅಥವಾ 18 ಕೋಟಿ) ಭಾರತೀಯರು, ಇದರಲ್ಲಿ ದಲಿತರು, ಮುಸ್ಲಿಮರು, ಕ್ರಿಶ್ಚಿಯನ್ನರು, ಇತರ ಹಿಂದುಳಿದ ಜಾತಿಗಳು ಮತ್ತು ಆದಿವಾಸಿಗಳು ದನಮಾಂಸವನ್ನು ಸೇವಿಸುತ್ತಾರೆ. ದನಮಾಂಸವು ಅಗ್ಗದ ಪೌಷ್ಟಿಕಾಂಶದ ದಟ್ಟವಾದ ಆಹಾರಗಳಲ್ಲಿ ಒಂದಾಗಿದೆ. 100 ಗ್ರಾಂ ಲೀನ್ ದನಮಾಂಸವು ದೈನಂದಿನ ಪ್ರೋಟೀನ್ ಅಗತ್ಯದ 54% ಅನ್ನು ಒದಗಿಸುತ್ತದೆ ಮತ್ತು ದನಮಾಂಸದಲ್ಲಿ ಲಭ್ಯವಿರುವ ಪೋಷಕಾಂಶಗಳು ಅರಗಬಲ್ಲವಾಗುತ್ತದೆ ಮತ್ತು ಚೆನ್ನಾಗಿ ಹೀರಲ್ಪಡುತ್ತವೆ. ಬೆಂಗಳೂರಿನಲ್ಲಿ ಒಂದು ಕೆಜಿ ಬೀಫ್‌ ಬೆಲೆ 250 ರೂ ಇತ್ತು. ಕಾಯ್ದೆ ಜಾರಿಯಾದ ನಂತರ 300ರಿಂದ 350ರವರೆಗೆ ತಲುಪಿದೆ. ಅದೇ ರೀತಿಯ ಕರ್ನಾಟಕದ ಇತರ ಜಿಲ್ಲೆಗಳಲ್ಲಿ 150-200 ರೂ ಇದ್ದ ಬೀಫ್ ಬೆಲೆಯು 250-275 ರೂ ವರೆಗೆ ತಲುಪಿದೆ. ಇದು ಗ್ರಾಹಕರ ಮೇಲೆ ಹೊರೆ ಬಿದ್ದಿದೆ ಎಂದು ವರದಿ ಹೇಳಿದೆ.

ಮಾಂಸದಂಗಡಿ

ಕೀಳು ಮಟ್ಟದ ಚಿಂತನೆಯಿಂದ ರೂಪುಗೊಂಡಿರುವ ಈ ಕಾಯಿದೆಯಿಂದ ಜೀವನೋಪಾಯ, ಪೋಷಣೆ ಮತ್ತು ಮಾನಸಿಕ ಆರೋಗ್ಯದ ಮೇಲೆ ಉಂಟಾಗುವ ಅಗಾಧವಾದ ಹಾನಿಯನ್ನು ಅರಿತುಕೊಂಡು ಜನರಿಂದ ಜನರಿಗಾಗಿ ರಚನೆಗೊಂಡಿರುವ ಸರ್ಕಾರವು ಈ ಕಾಯಿದೆಯನ್ನು ಅದರ ಪ್ರಸ್ತುತ ಸ್ವರೂಪದಲ್ಲಿ ಹಿಂಪಡೆಯಬೇಕು. ಜಾನುವಾರು ವ್ಯವಹಾರದಲ್ಲಿ ತೊಡಗಿರುವ ಯಾವುದೇ ವ್ಯಕ್ತಿ ಅಥವಾ ಸಮುದಾಯವು ಅವರ ಔದ್ಯೋಗಿಕ, ಸಾಂಸ್ಕೃತಿಕ ಅಥವಾ ಪೌಷ್ಟಿಕಾಂಶದ ಆಯ್ಕೆಗಳಿಗಾಗಿ ಕಿರುಕುಳ, ಬೆದರಿಕೆ ಅಥವಾ ಕೀಳ್ಬಳಕೆಗೆ ಒಳಗಾಗುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು. ಈ ಕಾಯಿದೆಯಿಂದಾಗಿ ತೊಂದರೆಗೊಳಗಾದ ಕರ್ನಾಟಕದ ನಾಗರಿಕರಿಗೆ ನ್ಯಾಯದ ಹಿತದೃಷ್ಟಿಯಿಂದ ಆದಷ್ಟು ಬೇಗ ಪರಿಹಾರ ನೀಡಬೇಕು. ದನಗಳ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಅಪರಾಧೀಕರಣಗೊಳಿಸಬೇಕೆ ವಿನಃ ಜನರ ಜೀವನೋಪಾಯ ಮತ್ತು ಆಹಾರದ ಆಯ್ಕೆಗಳನ್ನಲ್ಲ ಎಂದು ವರದಿಯು ಒತ್ತಾಯಿಸಿದೆ.

ಪೂರ್ತಿ ವರದಿ ಓದಲು ಇಲ್ಲಿ ಕ್ಲಿಕ್ ಮಾಡಿ


ಇದನ್ನೂ ಓದಿ: ಬಡಪಾಯಿ ಎಮ್ಮೆಗಳಿಗೂ ಥ್ಯಾಂಕ್ಸ್ ಹೇಳೋಣ ಬನ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...