Homeಮುಖಪುಟಗ್ಯಾರಂಟಿ ಯೋಜನೆ ಕುರಿತು ಜಾಹೀರಾತು : ಮಹಾರಾಷ್ಟ್ರ ಬಿಜೆಪಿಗೆ ಕ್ರಮದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆ ಕುರಿತು ಜಾಹೀರಾತು : ಮಹಾರಾಷ್ಟ್ರ ಬಿಜೆಪಿಗೆ ಕ್ರಮದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮಹಾರಾಷ್ಟ್ರ ಬಿಜೆಪಿಗೆ ಕ್ರಮದ ಎಚ್ಚರಿಕೆ ನೀಡಿದ ಸಿಎಂ

- Advertisement -
- Advertisement -

‘ವಾದಾ ಕಿಯಾ ದೋಖಾ ದಿಯಾ’ ಎಂದು ಕರ್ನಾಟಕ, ತೆಲಂಗಾಣ ಮತ್ತು ಹಿಮಾಚಲ ಪ್ರದೇಶದ ಕಾಂಗ್ರೆಸ್‌ ಸರ್ಕಾರಗಳ ಗ್ಯಾರಂಟಿ ಯೋಜನೆ ಬಗ್ಗೆ ಪತ್ರಿಕೆಯಲ್ಲಿ ಜಾಹೀರಾತು ನೀಡಿದ ಮಹಾರಾಷ್ಟ್ರ ಬಿಜೆಪಿ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಆಕ್ರೋಶ ಹೊರ ಹಾಕಿದ ಸಿಎಂ, “ಸುಳ್ಳೇ ಬಿಜೆಪಿಯ ಮನೆ ದೇವರು’ ಎಂದು ನಾವು ಹೇಳುತ್ತಿರುವುದು ಸುಳ್ಳಲ್ಲ. ಮಹಾರಾಷ್ಟ್ರದ ಬಿಜೆಪಿ ನಮ್ಮ ಯಶಸ್ವಿ ಗ್ಯಾರಂಟಿ ಯೋಜನೆಯಾಗಿರುವ ಗೃಹಲಕ್ಷ್ಮಿ ಬಗ್ಗೆ ಒಂದು ಅಪ್ಪಟ ಸುಳ್ಳನ್ನು ಮಾಧ್ಯಮಗಳಲ್ಲಿ ಜಾಹೀರಾತು ಮೂಲಕ ಪ್ರಕಟಿಸಿ, ಸಿಕ್ಕಿ ಹಾಕಿಕೊಂಡಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಭರವಸೆ ನೀಡಿದಂತೆ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರದೆ ಮೋಸ ಮಾಡಿದೆ ಎನ್ನುವುದು ಬಿಜೆಪಿ ಆರೋಪ. ಪ್ರಧಾನಿ ಮೋದಿಯವರೇ, ಇದೇನು ನಮಗೆ ಆಶ್ಚರ್ಯ ಉಂಟುಮಾಡಿಲ್ಲ. ಮನೆ ಒಡೆಯನ ಬುದ್ದಿ ಮನೆಯವರಿಗೆಲ್ಲ ಬಂದಿದೆ. ಹೋದಲ್ಲಿ ಬಂದಲ್ಲಿ ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಸುಳ್ಳುಗಳನ್ನು ಉದುರಿಸುವ ನಿಮ್ಮಿಂದಲೇ ಪ್ರೇರಣೆ ಪಡೆದು ಮಹಾರಾಷ್ಟ್ರ ಬಿಜೆಪಿ ಇಷ್ಟೊಂದು ನಿರ್ಲಜ್ಜತನದಿಂದ ಈ ಹಸಿಸುಳ್ಳನ್ನು ಪ್ರಕಟಿಸಿದೆ ಎನ್ನುವುದು ನಿಸ್ಸಂಶಯ” ಎಂದು ಬರೆದುಕೊಂಡಿದ್ದಾರೆ.

“ಗೃಹಲಕ್ಷ್ಮಿ ಯೋಜನೆಯಡಿ 2023ರ ಆಗಸ್ಟ್ ತಿಂಗಳಿನಿಂದ ಈವರೆಗೆ 1.22 ಕೋಟಿ ಮನೆಯೊಡತಿಯರ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿ ಸಂದಾಯವಾಗುತ್ತಿದೆ. ಈ ರೀತಿ ಒಟ್ಟು 30,285 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ. ಅನುಮಾನ ಇದ್ದವರು ಈ 1.22 ಕೋಟಿ ಮನೆ ಒಡತಿಯರನ್ನೇ ಕೇಳಿ ಪರಾಂಬರಿಸಿಕೊಳ್ಳಿ” ಎಂದಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿಯವರೇ, ಇದು ನಿಮ್ಮ ಸುಳ್ಳಿನಿಂದಲೇ ಪ್ರೇರಣೆ ಪಡೆದು ಹೇಳಿರುವ ಸುಳ್ಳಾಗಿರುವ ಕಾರಣ ದಯವಿಟ್ಟು ನಮ್ಮ ಗ್ಯಾರಂಟಿ ಯೋಜನೆ ಬಗ್ಗೆ ಮಹಾರಾಷ್ಟ್ರ ಬಿಜೆಪಿ ಹೇಳಿರುವ ಸುಳ್ಳಿಗಾಗಿ ದೇಶದ ಜನತೆಯ ಕ್ಷಮೆ ಯಾಚಿಸಿ, ಸತ್ಯಸಂಗತಿಯನ್ನು ಸಾರ್ವಜನಿಕರಿಗೆ ತಿಳಿಸಬೇಕೆಂದು ಎಂದು ಆಗ್ರಹಿಸುತ್ತೇನೆ” ಎಂದು ಹೇಳಿದ್ದಾರೆ.

“ಮಹಾರಾಷ್ಟ್ರ ಬಿಜೆಪಿ ತಾನು ಪ್ರಕಟಿಸಿರುವ ಸುಳ್ಳಿನ ಜಾಹೀರಾತಿನಷ್ಟೇ ಗಾತ್ರದ ಜಾಹೀರಾತಿನಲ್ಲಿ ಸತ್ಯ ಸಂಗತಿಯನ್ನು ತಿಳಿಸಿ ಅಲ್ಲಿನ ಎಲ್ಲ ಮಾಧ್ಯಮಗಳಲ್ಲಿ ಪ್ರಕಟಿಸುವಂತೆ ನೋಡಿಕೊಳ್ಳಬೇಕು. ಇದಕ್ಕೆ ತಪ್ಪಿದ್ದಲ್ಲಿ ನಮ್ಮ ಸರ್ಕಾರ ಮುಂದಿನ ಕ್ರಮದ ಬಗ್ಗೆ ಯೋಚನೆ ಮಾಡಲಿದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ರೈತನ ಆತ್ಮಹತ್ಯೆ ಬಗ್ಗೆ ಸುಳ್ಳು ಸುದ್ದಿ ಹಂಚಿಕೆ : ಸಂಸದ ತೇಜಸ್ವಿ ಸೂರ್ಯ, ನ್ಯೂಸ್ ಪೋರ್ಟಲ್‌ಗಳ ಸಂಪಾದಕರ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...