Homeಕರ್ನಾಟಕಬಸ್‌ನಿಲ್ದಾಣಗಳಲ್ಲಿ ಜಾಹೀರಾತು: ಬಿಜೆಪಿ ಪರ ಚುನಾವಣಾ ಆಯೋಗಕ್ಕೆ ಮೃದು ಧೋರಣೆ ಏಕೆ?; ಕಾಂಗ್ರೆಸ್‌ ಪ್ರಶ್ನೆ

ಬಸ್‌ನಿಲ್ದಾಣಗಳಲ್ಲಿ ಜಾಹೀರಾತು: ಬಿಜೆಪಿ ಪರ ಚುನಾವಣಾ ಆಯೋಗಕ್ಕೆ ಮೃದು ಧೋರಣೆ ಏಕೆ?; ಕಾಂಗ್ರೆಸ್‌ ಪ್ರಶ್ನೆ

- Advertisement -
- Advertisement -

ರಾಜ್ಯವಿಧಾನಸಭಾ ಚುನಾವಣೆ ಹಿನ್ನೆಲೆ 24ಗಂಟೆಗೂ ಮುನ್ನವೇ ತಾತ್ಕಾಲಿಕ ಅನುಮತಿ ಪಡೆದ ಜಾಹೀರಾತುಗಳನ್ನು ತೆರವುಗೊಳಿಸಬೇಕಿತ್ತು, ಆದರೆ ಈವರೆಗೂ ಬಿಜೆಪಿ ಜಾಹಿರಾತು ಇನ್ನೂ ಹಾಗೆಯೇ ಇದೆ. ಬಹುಶಃ ಚುನಾವಣಾಧಿಕಾರಿಗಳಿಗೆ ಬಿಜೆಪಿ ಜಾಹಿರಾತುಗಳಿಗೆ ಕೈ ಹಾಕುವುದಕ್ಕೆ ಭಯ ಇರಬಹುದೇ? ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಪ್ರಶ್ನೆ ಮಾಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್ ಘಟಕ, ”ಚುನಾವಣೆಗೆ 24ಗಂಟೆಗೂ ಮುನ್ನವೇ ತಾತ್ಕಾಲಿಕ ಅನುಮತಿ ಪಡೆದ ಜಾಹೀರಾತುಗಳನ್ನು ತೆರವುಗೊಳಿಸಬೇಕಿತ್ತು, ಆದರೆ ಶಿವಾನಂದ ಸರ್ಕಲ್ ಬಳಿಯ ಬಸ್ ನಿಲ್ದಾಣದಲ್ಲಿನ ಬಿಜೆಪಿ ಜಾಹಿರಾತು ಇನ್ನೂ ಹಾಗೆಯೇ ಇದೆ.. ಬಹುಶಃ ಚುನಾವಣಾಧಿಕಾರಿಗಳಿಗೆ ಬಿಜೆಪಿ ಜಾಹಿರಾತುಗಳಿಗೆ ಕೈ ಹಾಕುವುದಕ್ಕೆ ಅಲರ್ಜಿ ಇರಬಹುದು ಅಥವಾ ಭಯ ಇರಬಹುದೇ?” ಎಂದು ಕೇಳಿದೆ.

ಇದನ್ನೂ ಓದಿ: ”ಭ್ರಷ್ಟಾಚಾರದ ರೇಟ್ ಕಾರ್ಡ್” ಜಾಹೀರಾತು ವಿಚಾರಕ್ಕೆ ನೋಟಿಸ್: ಚುನಾವಣಾ ಆಯೋಗ ಪಕ್ಷಪಾತಿಯಾಗಿದೆ ಎಂದ ಕಾಂಗ್ರೆಸ್‌

”ಡಾ.ರಾಜ್‌ಕುಮಾರ್ ರಸ್ತೆಯಲ್ಲಿನ ಬಸ್ ನಿಲ್ದಾಣದಲ್ಲಿ ಬಿಜೆಪಿ ಜಾಹಿರಾತು ಇನ್ನೂ ರಾರಾಜಿಸುತ್ತಿದೆ. ಇದು ನಿಯಮ ಉಲ್ಲಂಘನೆಯಲ್ಲವೇ? ಚುನಾವಣಾ ಆಯೋಗಕ್ಕೆ ಬಿಜೆಪಿಯ ಪರ ಏಕೆ ಮೃದು ಧೋರಣೆ? ಹಲವು ವಿಷಯಗಳಲ್ಲಿ ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಿರುವುದು ಈಗಾಗಲೇ ಜನರ ಗಮನಕ್ಕೆ ಬಂದಿದೆ. ನಿರ್ದಾಕ್ಷಿಣ್ಯವಾಗಿ ಬಿಜೆಪಿ ವಿರುದ್ಧ ಕ್ರಮ ಜರುಗಿಸಿ ಜನರ ವಿಶ್ವಾಸ ಉಳಿಸಿಕೊಳ್ಳಬೇಕು” ಎಂದು ಕರ್ನಾಟಕ ಚುನಾವಣಾ ಆಯೋಗದ ಅಧಿಕಾರಿಗಳಿಗೆ ಕಾಂಗ್ರೆಸ್ ಹೇಳಿದೆ.

ಚುನಾವಣಾ ಆಯೋಗ ಪಕ್ಷಪಾತಿಯಾಗಿದೆ: ಕಾಂಗ್ರೆಸ್ ಆರೋಪ

‘ಭ್ರಷ್ಟಾಚಾರದ ರೇಟ್ ಕಾರ್ಡ’ ಜಾಹೀರಾತುಗಳಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಕರ್ನಾಟಕದ ಕಾಂಗ್ರೆಸ್ ಘಟಕಕ್ಕೆ ನೋಟಿಸ್ ನೀಡಿತ್ತು. ಇದಕ್ಕೆ ಪ್ರತಿಕ್ರಿಸಿದ್ದ ಕಾಂಗ್ರೆಸ್‌, ”ಚುನಾವಣಾ ಆಯೋಗವು ಪಕ್ಷಪಾತಿಯಾಗಿದೆ” ಎಂದು ಆರೋಪಿಸಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಬಿಜೆಪಿ ನಾಯಕರು ಚುನಾವಣಾ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿರುವ ಬಗ್ಗೆ ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದರೂ, ಚುನಾವಣಾ ಆಯೋಗ ಮಾತ್ರ ಯಾವುದೇ ನೋಟಿಸ್ ನೀಡಿಲ್ಲ ಎಂದು ಪಿಟಿಐ ವರದಿ ಮಾಡಿದೆ.

”ಕಾಂಗ್ರೆಸ್ ಪಕ್ಷವು ಚುನಾವಣಾ ಆಯೋಗದಿಂದ ಅನ್ಯಾಯ ಮತ್ತು ಅಸಮಾನ ವರ್ತನೆಗೆ ಒಳಗಾಗುತ್ತಿದೆ ಎಂಬುದು ಸ್ಪಷ್ಟವಾಗಿದೆ” ಎಂದು ಪಕ್ಷ ಹೇಳಿದೆ.

”ಚುನಾವಣಾ ಮಾನದಂಡಗಳನ್ನು ಕೇವಲ ಪ್ರತಿಪಕ್ಷಗಳಿಗೆ ಮಾತ್ರ ಮೀಸಲಿಟ್ಟಂತೆ ತೋರುತ್ತಿದೆ. ಸಣ್ಣದೊಂದು ತಪ್ಪಾದರೂ ತಮ್ಮನ್ನು ವಿವರಣೆ ಕೇಳಲು ಕರೆಸಿದ್ದಾರೆ” ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

ರಾಜಕೀಯ ಜಾಹೀರಾತಿಗೆ ಪುರಾವೆಗಳನ್ನು ಒದಗಿಸಲು ಚುನಾವಣಾ ಆಯೋಗವು ರಾಷ್ಟ್ರೀಯ ಪಕ್ಷವನ್ನು ಕರೆಸಿರುವುದು ಇದೇ ಮೊದಲು ಎಂದು ಕಾಂಗ್ರೆಸ್ ಹೇಳಿದೆ.

”ಚುನಾವಣಾ ಆಯೋಗವು ಆ ಆರೋಪಗಳ ತನಿಖೆ ನಡೆಸಲು ಹೇಳಬಹುದಿತ್ತು ಆ ಅಧಿಕಾರ ಆಯೋಗಕ್ಕೆ ಇದೆ. ಏಕೆಂದರೆ ಆ ಆರೋಪಗಳಿಗೆ ಪುರಾವೆಗಳು ಸಾರ್ವಜನಿಕ ಡೊಮೇನ್‌ನಲ್ಲಿ ಲಭ್ಯವಿವೆ. ಆದರೆ ಚುನಾವಣಾ ಆಯೋಗವು ಆ ಭ್ರಷ್ಟಾಚಾರದ ಮೇಲೆ ಬೆಳಕು ಚೆಲ್ಲುವ ಪಕ್ಷವನ್ನು ಗುರಿಯಾಗಿಸಲು ತನ್ನ ಅಧಿಕಾರ ಬಳಸಿಕೊಂಡಿದೆ” ಎಂದು ಕಾಂಗ್ರೆಸ್ ಆರೋಪಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...

ಕೇರಳ: 2026 ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ; ಹಾಲಿ ಸಂಸದರು, ಲೈಂಗಿಕ ಪ್ರಕರಣದ ಆರೋಪಿಗಳಿಗಿಲ್ಲ ಸ್ಥಾನ

ತಿರುವನಂತಪುರಂ: ಬಹಳ ದಿನಗಳ ನಂತರ, ಏಪ್ರಿಲ್ 9 ರಂದು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಕೇರಳದ ಉಳಿದ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.  ಕಣ್ಣೂರು ಕಾರ್ಪೊರೇಷನ್‌ನ ಮಾಜಿ ಮೇಯರ್ ಟಿ.ಒ. ಮೋಹನನ್ ಅವರನ್ನು ಕಣ್ಣೂರಿನಲ್ಲಿ...

‘ನೀವು ಶಂಕಿತ’ : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

ಇತ್ತೀಚೆಗೆ ಹಿಂದುತ್ವವಾದಿಗಳ ದಾಳಿಯಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿ ಶ್ಲಾಘನೆಗೆ ಪಾತ್ರರಾದ ಮುಹಮ್ಮದ್ ದೀಪಕ್ (ದೀಪಕ್ ಕುಮಾರ್) ಅವರನ್ನು ಉತ್ತರಾಖಂಡ ಹೈಕೋರ್ಟ್ ಗುರುವಾರ (ಮಾ.19) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು barandbench.com ವರದಿ...

ಎಂಟು ವರ್ಷ ಜೈಲಿನಲ್ಲಿ ಕಳೆದ ಬಳಿಕ ಯುಎಪಿಎ ಅಡಿ ಬಂಧಿತ ಇಬ್ಬರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದ ನಂತರ, ದೆಹಲಿ ನ್ಯಾಯಾಲಯವು ಗುರುವಾರ (ಮಾರ್ಚ್ 19, 2026) ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲ್ಪಟ್ಟ ಇಬ್ಬರು ವ್ಯಕ್ತಿಗಳನ್ನು ಖುಲಾಸೆಗೊಳಿಸಿದೆ...

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...