Homeಮುಖಪುಟದ್ವೇಷಕಾರುವ ಚಾನೆಲ್‌ಗಳಿಗೆ ಜಾಹೀರಾತು ನಿಷೇಧ; ಬಜಾಜ್ & ಪಾರ್ಲೆಯನ್ನು ಶ್ಲಾಘಿಸಿದ ಬಾಲಿವುಡ್

ದ್ವೇಷಕಾರುವ ಚಾನೆಲ್‌ಗಳಿಗೆ ಜಾಹೀರಾತು ನಿಷೇಧ; ಬಜಾಜ್ & ಪಾರ್ಲೆಯನ್ನು ಶ್ಲಾಘಿಸಿದ ಬಾಲಿವುಡ್

- Advertisement -
- Advertisement -

ದ್ವೇಷಕಾರುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ ಎಂದು ದೇಶದ ಬೃಹತ್ ಬ್ರಾಂಡ್‌ಗಳಾದ ಪಾರ್ಲೆ ಮತ್ತು ಬಜಾಜ್ ತೆಗೆದುಕೊಂಡಿರುವ ನಿರ್ಧಾರಕ್ಕೆ ಬಾಲಿವುಡ್ ಸೆಲೆಬ್ರಿಟಿಗಳಾದ ನಟಿ ಸ್ವರ ಭಾಸ್ಕರ್ ಮತ್ತು ಕೊಂಕಣ ಸೇನ್ ಶರ್ಮಾ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ನೈತಿಕತೆಯ ನಿಲುವನ್ನು ತೆಗೆದುಕೊಂಡಿದ್ದಕ್ಕಾಗಿ ಎರಡೂ ಬ್ರಾಂಡ್‌ಗಳನ್ನು ಅವರು ಶ್ಲಾಘಿಸಿದ್ದಾರೆ.

ಇಂಡಿಯನ್ ಸಿವಿಲ್ ಲಿಬರ್ಟೀಸ್ ಯೂನಿಯನ್ ಟ್ವೀಟನ್ನು ರೀಟ್ವೀಟ್ ಮಾಡಿರುವ ನಟಿ ಸ್ವರ ಭಾಸ್ಕರ್‌ “ಯಯೀಈಈಈಈಈಈಈ ಪಾರ್ಲೆಗೆ ಚೀರ್‍ಸ್‌‌” ಎಂದು ಬರೆದಿದ್ದಾರೆ. ಮೂಲ ಟ್ವೀಟ್‌ನಲ್ಲಿ IUCL, “ದ್ವೇಷ ಹರಡುವ ವಿಷಯವನ್ನು ಪ್ರಸಾರ ಮಾಡುವ ಸುದ್ದಿ ಚಾನೆಲ್‌ಗಳಲ್ಲಿ ಜಾಹೀರಾತು ನೀಡದಿರಲು ಪಾರ್ಲೆ ಉತ್ಪನ್ನಗಳು ನಿರ್ಧರಿಸಿದೆ. ಬೇರೆ ಕಂಪನಿಗಳು ಕೂಡಾ ಬಜಾಜ್ ಮತ್ತು ಪಾರ್ಲೆಯೊಂದಿಗೆ ಕೈಜೋಡಿಸಲಿ” ಎಂದು ಹೇಳಿದೆ.

ಇದನ್ನೂ ಓದಿ: ವಿಷಕಾರುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ಪಾರ್ಲೆ-ಜಿ ನಿರ್ಧಾರಕ್ಕೆ ನೆಟ್ಟಿಗರ ಮೆಚ್ಚುಗೆ

ನಟಿ ಕೊಂಕಣ ಸೇನಶರ್ಮಾ, “ಒಳ್ಳೆದು ಮಾಡಿದ್ದೀರಿ ಬಜಾಜ್ ಮತ್ತು ಪಾರ್ಲೇ” ಎಂದು ಹೇಳಿದ್ದಾರೆ.

ದ್ವೇಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ ಎಂದು ಯುವ ಉದ್ಯಮಿ ರಾಜೀವ್‌ ಬಜಾಜ್ ಘೋಷಿಸಿದ ಬೆನ್ನಲ್ಲೆ, ವಿಷಕಾರುವ ಚಾನೆಲ್‌ಗಳಿಗೆ ನಾವು ಜಾಹೀರಾತು ನೀಡುವುದಿಲ್ಲ ಎಂದು ಖ್ಯಾತ ಬಿಸ್ಕೆಟ್ ಕಂಪನಿ ಪಾರ್ಲೆ-ಜಿಯ ಹಿರಿಯ ಅಧಿಕಾರಿ ಕೃಷ್ಣರಾವ್ ಬುದ್ಧ ತಿಳಿಸಿದ್ದರು.

ರಾಜೀವ್ ಬಜಾಜ್ ಸಿಎನ್‌ಬಿಸಿ ಟಿವಿ18 ಜೊತೆ ನಡೆಸಿದ ಸಂಭಾಷಣೆಯಲ್ಲಿ “ನಮ್ಮ ಕಂಪನಿಯು ಮೂರು ಚಾನೆಲ್‌ಗಳನ್ನು ಕಪ್ಪು ಪಟ್ಟಿಗೆ ಸೇರಿಸಿ, ಜಾಹೀರಾತು ನಿಷೇಧಿಸಿದ್ದೇವೆ. ದ್ವೇಷದ ಮೂಲಗಳೆನ್ನುವ ಯಾವುದರೊಂದಿಗೂ ನಾವು ಸಂಬಂಧ ಹೊಂದುವುದಿಲ್ಲ..” ಎಂದು ಘೋಷಿಸಿದ್ದರು.

ಮಿಂಟ್ ಪತ್ರಿಕೆಯೊಂದಿಗೆ ಮಾತನಾಡಿದ ಪಾರ್ಲೆ-ಜಿಯ ಹಿರಿಯ ಅಧಿಕಾರಿ ಕೃಷ್ಣರಾವ್ ಬುದ್ಧ “ದ್ವೇಷವನ್ನು ಹರಡುವ ಟಿವಿ ಚಾನೆಲ್‌ಗಳಿಗೆ ಜಾಹೀರಾತು ನಿಯಂತ್ರಿಸುವುದರ ಕುರಿತು ಯೋಚಿಸುತ್ತಿದ್ದೇವೆ. ಇತರೆ ಉದ್ಯಮಗಳು ಸಹ ಈ ರೀತಿ ಮಾಡಿದರೆ, ಅಂತಹ ಟಿವಿ ಚಾನೆಲ್‌ಗಳಿಗೆ ಇದೊಂದು ಸ್ಪಷ್ಟ ಸಂದೇಶವಾದ್ದರಿಂದ ಅವರು ಅನಿವಾರ್ಯವಾಗಿ ತಮ್ಮ ವರ್ತನೆಯನ್ನು ಬದಲಿಸಿಕೊಳ್ಳುತ್ತಾರೆ” ಎಂದಿದ್ದಾರೆ.


 

ಇದನ್ನೂ ಓದಿ: ವಿಷಕಾರುವ, ದ್ವೇಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ರಾಜೀವ್‌ ಬಜಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...