Homeಅಂಕಣಗಳುಗೌರಿ ಕಾರ್ನರ್: “ಪಾಪ ಇದು ಬಯಲು ಸೀಮೇದು ನೋಡ್ರಿ ಹೆಂಗೆ ಗಾಬರಿಯಾಗಿದೆ”

ಗೌರಿ ಕಾರ್ನರ್: “ಪಾಪ ಇದು ಬಯಲು ಸೀಮೇದು ನೋಡ್ರಿ ಹೆಂಗೆ ಗಾಬರಿಯಾಗಿದೆ”

- Advertisement -
- Advertisement -

ಗೌರಿ ಮೇಡಂ ಜೊತೆಗಿನ ನನ್ನ ಒಡನಾಟಕ್ಕೆ ಈ ವರ್ಷಕ್ಕೆ 20 ತುಂಬುತ್ತದೆ. ಅದರಲ್ಲಿ ಅವರು ಜೊತೆಗಿಲ್ಲದೇ ಕಳೆದ 3 ವರ್ಷಗಳನ್ನೂ ಸೇರಿಸಿದ್ದೇನೆ, ಏಕೆಂದರೆ ಅವರ ಸಾವಿನ ನಂತರ ಅವರ ವಿಚಾರ, ಆಶಯ, ಗುರಿ ಅವನ್ನು ಮುಟ್ಟಬಹುದಾದ ದಾರಿ ಇವುಗಳೊಂದಿಗೆ ಹಿಂದೆಂದಿಗಿಂತಲೂ ಹೆಚ್ಚು ಬೆಸೆದುಕೊಂಡಿದ್ದೇನೆ. ಇಂಥದೇ ವಿಚಾರಗಳಿಂದ ಕೂಡಿದ ಒಂದಿಡೀ ಉತ್ಸಾಹಿ ತಂಡದೊಂದಿಗೆ ಗುರುತಿಸಿಕೊಂಡಾಗಿನಿಂದ ಜೀವನ ಹೆಚ್ಚು ಪ್ರಸ್ತುತವೆನಿಸುತ್ತದೆ.

ಗೌರಿ ಮೇಡಂ, ಪತ್ರಕರ್ತೆಯಿಂದ ಆಕ್ಟಿವಿಸ್ಟ್ ಆಗಿ ಬೆಳೆದ ಅವರ ಪ್ರಯಾಣದ ಎಲ್ಲ ಹಂತದಲ್ಲಿ ಅವರ ಜೊತೆ ಇದ್ದು ಅವರು ಆ ಬೆಳವಣಿಗೆಯ ಆಳ-ಅಗಲ ಅರ್ಥವಾಗುವಷ್ಟರಲ್ಲಿ ಅವರನ್ನು ಕಳೆದುಕೊಂಡಾಗ, ನನ್ನದೇ ವ್ಯಕ್ತಿತ್ವದ ಒಂದು ಭಾಗ ಕಿತ್ತುಹೋದಂತಾಯ್ತು.

ನಾನು ಲಂಕೇಶ್ ಪತ್ರಿಕೆ ಆಫೀಸ್ ಪಕ್ಕದಲ್ಲಿಯೇ ಇದ್ದ ಬಿಎಂಎಸ್ ಕಾನೂನು ಕಾಲೇಜಿನಲ್ಲಿ ಓದುತ್ತಿದ್ದಾಗ ನನ್ನ ಸ್ನೇಹಿತರೊಬ್ಬರು ‘ಲಂಕೇಶ್’ ಸತ್ತ ಸುದ್ದಿ ಹೇಳಿದರು. ಬೆಂಗಳೂರಿಗೆ ಬಂದಾಗಿನಿಂದ ದಿನಾಲು ಲಂಕೇಶ್ ಪತ್ರಿಕೆ ಆಫೀಸ್ ನೋಡುತ್ತಿದ್ದೆನಾದರೂ ಒಳಗೆ ಹೋಗಿರಲಿಲ್ಲ. ಆದರೆ ಲಂಕೇಶ್ ಸಾವು, ಪತ್ರಿಕೆಯ ಭವಿಷ್ಯ ಇವುಗಳ ಬಗ್ಗೆ ಸ್ನೇಹಿತರೊಂದಿಗೆ ಮಾತಾಡುವಾಗ ತಡೆಯಲಾಗದೆ ಒಂದು ದಿನ ಕಾರಣವಿಲ್ಲದೇ ‘ಲಂಕೇಶ್ ಪತ್ರಿಕೆ’ ಆಫೀಸಿಗೆ ಹೋದೆ. ಪತ್ರಿಕೆ ಆಫೀಸಿನ ಮೆಟ್ಟಿಲುಗಳೇರಿದಾಗ ಎದುರಿಗೇ ಇರುವ ಒಂದು ಸಣ್ಣ ರೂಮಿನಲ್ಲಿ ಗೌರಿ ಹಣೆಗೆ ಕೈಹಚ್ಚಿ ಕುಳಿತಿದ್ದರು. ಒಳಗೆ ಹೋಗಿ ನನ್ನ ಪರಿಚಯ ಮಾಡಿಕೊಂಡೆ. ಅಂದಿನ ನನ್ನ ಸಣಕಲ ದೇಹ, ಶಾರ್ಟ್ ಹೇರ್‍ಕಟ್ ನೋಡಿ ಅವರಿಗೆ ಅದೇನನ್ನಿಸಿತೋ “ಕೂಡು ಮರಿ” ಅಂದರು. ನಂತರ ನನ್ನೂರು, ಕಾಲೇಜು ಎಲ್ಲದರ ಬಗ್ಗೆ ಮಾತಾಡಿದರು. ಆಗ ನಾನು ಕಾಲೇಜಲ್ಲಿದ್ದಾಗಲೇ ಬೆಳಗಿನ ಹೊತ್ತು “ಸಂಜೆವಾಣಿ” ಪತ್ರಿಕೆಯಲ್ಲಿ ಉಪ ಸಂಪಾದಕಳಾಗಿ ಕೆಲಸ ಮಾಡುತ್ತಿದ್ದೆ ಮತ್ತು ಕೆಲವು ಸಣ್ಣ ಕಥೆ, ಲೇಖನ ಎಲ್ಲಾ ಬರೆದಿದ್ದೆ. ನನ್ನ ಬ್ಯಾಗಿನಲ್ಲಿ ಕೆಲವೊಂದನ್ನು ಅಂದು ತೋರಿಸಿದೆ. ಅವರು ಒಂದುಕ್ಷಣ ಬಹಳ ಖುಷಿ ಪಟ್ಟು ಒಳಗಡೆ ಇದ್ದ ಚಂದ್ರೇಗೌಡರನ್ನ ಕರೆದು ತೋರಿಸಿದರು. ಗೌಡರೂ ಓದಿ ‘ಚಂದ ಬರಿದೀಯವ್ವಾ’ ಅಂದಾಗ ಗೌರಿ “ಇದನ್ನ ನೋಡಿದರೆ ಹೈಸ್ಕೂಲ್ ಹುಡುಗಿ ಹಂಗ ಕಾಣ್ತದ ಅಂತ ನಕ್ಕು” ನಮ್ಮೂರ ಕಡೆ ಪ್ರೀತಿಯಿಂದ ಚಿಕ್ಕವರನ್ನು ಅದು ಇದು ಅಂತ ಕರೀತಾರ ಬೇಜಾರ ಮಾಡ್ಕೋ ಬ್ಯಾಡರಿ ಅಂದರು. ಅವತ್ತಿನ ನಮ್ಮ ಮೊದಲ ಭೇಟಿ ಸುಮಾರು ಒಂದೂವರೆ ಗಂಟೆ ನಡೆಯಿತು. ಒಂದೆರಡು ಸಣ್ಣಕತೆ ಬರೆದುಕೊಂಡು ಬಾ ಎಂದು ಗೌರಿ ಹೇಳಿದಾಗ ಅತೀ ಸಂಭ್ರಮದಿಂದ ಅಲ್ಲಿಂದ ಬಂದಿದ್ದೆ. ಅದ್ಯಾವತ್ತೂ ಮೊದಲ ಭೇಟಿ ಅನಿಸಲೇ ಇಲ್ಲ. ಅಷ್ಟೊಂದು ಆತ್ಮೀಯತೆ, ಸ್ನೇಹ ಅವರಲ್ಲಿತ್ತು.

ಅಂದಿನಿಂದ ಶುರುವಾದ ಗೌರಿ ಜೊತೆಗಿನ ಒಡನಾಟ ನಿರಂತರವಾಗಿದೆ. ಇಂಗ್ಲಿಷ್ ಜರ್ನಲಿಸಂದಿಂದ ಕನ್ನಡಕ್ಕೆ ಒಗ್ಗಿಕೊಳ್ಳುವಲ್ಲಿ ಅವರು ಪಡುತ್ತಿದ್ದ ಪ್ರಯತ್ನಕ್ಕೆ, ಪತ್ರಿಕೆ ನಿರ್ವಹಿಸಲು ಹಣಕಾಸಿಗಾಗಿ ಗೌರಿ ಪಡುತ್ತಿದ್ದ ಕಷ್ಟ ನೋಡಿದ ಮೇಲೂ, ನಾವೊಂದಿಷ್ಟು ಜನ ಪತ್ರಿಕೆ ಮಾಡುವ ಸಾಹಸಕ್ಕೆ ಕೈಹಾಕಿ ಮೇಡಂ ಸಲಹೆ ಕೇಳಲು ಆಫೀಸಿಗೆ ಹೋಗಿ ಹಗುರಾಗಿ ಬೈಸಿಕೊಂಡು ಬಂದಿದ್ದೆವು. “ನನ್ನಪ್ಪನ ಹೆಸರು ಇದ್ದೂ, ರೆಡಿಮೇಡ್ ಆಫೀಸೂ ಇದ್ದು ನಾನೇ ಒದ್ದಾಡ್ತಾ ಇದ್ದಿನಿ, ಈಗ ತಾನೆ ಡಿಗ್ರಿ ಮುಗಿಸೀರಿ ನಿಮಗ್ಯಾಕೆ ಈ ಉಸಾಬರಿ” ಅಂದರೂ ಕೇಳುವ ವಯಸ್ಸಲ್ಲವಲ್ಲ. ಸ್ನೇಹಿತನ ಪತ್ರಿಕೆಯ ಹುಮ್ಮಸ್ಸಿಗೆ ನಾವೆಲ್ಲ ಭರವಸೆಯ ಮಳೆ ಸುರಿಸಿ ಹಂಗೂಹಿಂಗೂ ಒಂದುವರ್ಷ ಬಹಳ ಚೆನ್ನಾಗಿ ಪತ್ರಿಕೆ ನಡೆಸಿ, ಹಣಕಾಸಿನಲ್ಲಿ ಕೈಸುಟ್ಟ ಮೇಲೆ ಅದನ್ನು ನಿಲ್ಲಿಸಿ, ನಿಯತ್ತಿನಿಂದ ವೃತ್ತಿ ಜೀವನ ಶುರುಮಾಡಿಕೊಂಡಿವಿ. ಗೌರಿ ಮೇಡಂ ಜೊತೆ ಪ್ರತಿಯೊಂದು ಧರಣಿ, ಸತ್ಯಾಗ್ರಹ, ಎಲ್ಲ ಕಡೆ ಹೋಗುವುದು ಮಾತ್ರ ಹಾಗೇ ಮುಂದುವರೆದು ಅವರ ಲಂಕೇಶ್ ಪತ್ರಿಕೆ ಪ್ರಯಾಣ ಮುಗಿದು “ಗೌರಿ ಲಂಕೇಶ್” ಶುರುವಾದಾಗ ಉದ್ಘಾಟನಾ ಸಮಾರಂಭದಲ್ಲಿ ನಮ್ಮದೇ ಪತ್ರಿಕೆ ಶುರುವಾದಂಥ ಸಂಭ್ರಮದಲ್ಲಿ ಓಡಾಡಿದ್ದೆವು. ಅಲ್ಲಿಂದ ಮುಂದಿನ ಪ್ರಯಾಣ ಮಾತ್ರ ಬಹಳ ಜವಾಬ್ದಾರಿಯಿಂದ ಕೂಡಿದ್ದಾಗಿತ್ತು.

ಕೋಮು ಸೌಹಾರ್ದ, ಅಲ್ಪಸಂಖ್ಯಾತ ಮತ್ತು ಲೈಂಗಿಕ ಶೋಷಿತರ ಹಕ್ಕುಗಳು, ಬಲಪಂಥ ವಿರೋಧ ಹೀಗೆ ಹಲವು ಹೋರಾಟಗಳಲ್ಲಿ ಭಾಗಿಯಾಗಿ, ಗೌರಿ ಅವರಲ್ಲಿ ಒಬ್ಬರಾಗಿ ಬೆರೆಯುತ್ತಾ ಹೋದೆವು. ಎಲ್ಲ ದಮನಿತರು ಒಂದೇ ಸೂತ್ರದಲ್ಲಿ ಸೇರಿಕೊಂಡವರು ಎಂಬ ಸೂಕ್ಷ್ಮ ಅಂಶವನ್ನು ಅರಿತಿದ್ದ ಗೌರಿ ಆ ಸೂತ್ರಗಳಲ್ಲಿ ಹಾದು ಹೊಕ್ಕರು. ಟೌನ್‍ಹಾಲ್ ಮೆಟ್ಟಿಲಮೇಲೆ ಕೂಡುವಷ್ಟೇ ಸಹಜವಾಗಿ ಕಂಡ ಹಳ್ಳಿಹಳ್ಳಿಗೆ ಹೋಗಿ ಬಂದರು. ಶೃಂಗೇರಿಯಲ್ಲೊಮ್ಮೆ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಹೋದಾಗ ಮಳೆಗಾಲದ ಮಲೆನಾಡನ್ನು ನೋಡಿ ನನಗೆ ವಿಚಿತ್ರವಾದ ಅನುಭವ. ಒಂದು ಕಡೆ ಜೀಪ್ ನಿಲ್ಲಿಸಿ ಗುಡ್ಡದಲ್ಲಿ ಹೋಗುವಾಗ ಗೌರಿ ಮೇಡಂ ಮತ್ತು ಇತರರ ಮಾತುಗಳನ್ನೇ ಕೇಳುತ್ತಾ ಹೋದ ಅನುಭವ ಮಾತ್ರ ಮರೆಯಲು ಸಾಧ್ಯವಿಲ್ಲ. ವಾಪಸ್ಸು ಬಂದು ನಿಂತಾಗ ಗೌರಿ ಮೇಡಂ ತಮಗೆ ಅಂಟಿಕೊಂಡು ರಕ್ತ ಹೀರುತ್ತಿದ್ದ ಜಿಗಣೆಗಳನ್ನು ಕಿತ್ತಲು ಹೇಳಿದಾಗ ನನ್ನ ಕೈ ನಡುಗುತಿತ್ತು. ಕಿತ್ತಿದಾಗ ಹರಿದ ರಕ್ತ ನೋಡಿ ಹೌಹಾರಿದ್ದೆ. ಗೌರಿ ನಕ್ಕು ಎಲ್ಲರಿಗೂ ಹೇಳಿದ್ದರು “ಪಾಪ ಇದು ಬಯಲು ಸೀಮೇದು ನೋಡ್ರಿ ಹೆಂಗೆ ಗಾಬರಿಯಾಗಿದೆ” ಅಂತ.

ಜರ್ನಲಿಸ್ಟ್ ಗೌರಿ ಆಕ್ಟಿವಿಸ್ಟ್ ಆಗುವಷ್ಟರಲ್ಲಿ ಅವರ ಜೊತೆ ನಾನೂ ವಿದ್ಯಾರ್ಥಿ ದೆಸೆಯಿಂದ ಬೆಳೆದು ವಕೀಲಳಾಗಿ ಮುಂದೆ ಅವರದೇ ಪತ್ರಿಕೆಯಲ್ಲಿ ಅಂಕಣಕಾರಳಾಗಿ, ಕಾನೂನು ವಿಷಯಗಳಲ್ಲಿ ಅವರಿಗೆ ಆಗಾಗ ಸಲಹೆ ನೀಡುತ್ತ, ಅದೇ ಸಲುಗೆಯಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಅವರಿಗೆ ಕಾಮೆಂಟ್, ಟ್ರೋಲ್ ಮಾಡಿದವರಿಗೆ ಪ್ರತಿಕ್ರಿಯಿಸಿದಾಗ ಬೈಯುತ್ತಿದ್ದೆ. ಅದೊಂದು ನೆನಪುಗಳ ಸರಮಾಲೆ.

ಗೌರಿಯನ್ನು ಕೊಂದು ಅವರ ವಿಚಾರಗಳನ್ನು ನಾಶ ಮಾಡುತ್ತೇವೆ ಎಂದುಕೊಂಡವರಿಗೆ ಇಂದು ಆ ಹೆಸರಿನ ಹಿಂದೆ ಇರುವ ಸಮಾನ ಮನಸ್ಕರ ದಂಡು ನೋಡಿ ಗಾಬರಿ ಆಗಬೇಕು. ಗೌರಿ ಮುಗಿದಿಲ್ಲ, ಅವರಿನ್ನೂ ಬೆಳೆಯುತ್ತಾರೆ, ನಾವೂ ಬೆಳೆಯುತ್ತೇವೆ. ಜೊತೆಜೊತೆಯಾಗಿ.


ಇದನ್ನೂ ಓದಿ: ಗೌರಿ ಕಾರ್ನರ್: ಗೌರಿ ಲಂಕೇಶರ ಮೇಲೆ ಮತ್ತೆ ನೀಚಮಟ್ಟದ ದಾಳಿ- ನಾವು ಪ್ರತಿಕ್ರಿಯೆ ನೀಡುವುದು ಸರಿಯೇ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...