Homeಅಂಕಣಗಳುಗೌರಿ ಕಾರ್ನರ್: “ಪಾಪ ಇದು ಬಯಲು ಸೀಮೇದು ನೋಡ್ರಿ ಹೆಂಗೆ ಗಾಬರಿಯಾಗಿದೆ”

ಗೌರಿ ಕಾರ್ನರ್: “ಪಾಪ ಇದು ಬಯಲು ಸೀಮೇದು ನೋಡ್ರಿ ಹೆಂಗೆ ಗಾಬರಿಯಾಗಿದೆ”

- Advertisement -
- Advertisement -

ಗೌರಿ ಮೇಡಂ ಜೊತೆಗಿನ ನನ್ನ ಒಡನಾಟಕ್ಕೆ ಈ ವರ್ಷಕ್ಕೆ 20 ತುಂಬುತ್ತದೆ. ಅದರಲ್ಲಿ ಅವರು ಜೊತೆಗಿಲ್ಲದೇ ಕಳೆದ 3 ವರ್ಷಗಳನ್ನೂ ಸೇರಿಸಿದ್ದೇನೆ, ಏಕೆಂದರೆ ಅವರ ಸಾವಿನ ನಂತರ ಅವರ ವಿಚಾರ, ಆಶಯ, ಗುರಿ ಅವನ್ನು ಮುಟ್ಟಬಹುದಾದ ದಾರಿ ಇವುಗಳೊಂದಿಗೆ ಹಿಂದೆಂದಿಗಿಂತಲೂ ಹೆಚ್ಚು ಬೆಸೆದುಕೊಂಡಿದ್ದೇನೆ. ಇಂಥದೇ ವಿಚಾರಗಳಿಂದ ಕೂಡಿದ ಒಂದಿಡೀ ಉತ್ಸಾಹಿ ತಂಡದೊಂದಿಗೆ ಗುರುತಿಸಿಕೊಂಡಾಗಿನಿಂದ ಜೀವನ ಹೆಚ್ಚು ಪ್ರಸ್ತುತವೆನಿಸುತ್ತದೆ.

ಗೌರಿ ಮೇಡಂ, ಪತ್ರಕರ್ತೆಯಿಂದ ಆಕ್ಟಿವಿಸ್ಟ್ ಆಗಿ ಬೆಳೆದ ಅವರ ಪ್ರಯಾಣದ ಎಲ್ಲ ಹಂತದಲ್ಲಿ ಅವರ ಜೊತೆ ಇದ್ದು ಅವರು ಆ ಬೆಳವಣಿಗೆಯ ಆಳ-ಅಗಲ ಅರ್ಥವಾಗುವಷ್ಟರಲ್ಲಿ ಅವರನ್ನು ಕಳೆದುಕೊಂಡಾಗ, ನನ್ನದೇ ವ್ಯಕ್ತಿತ್ವದ ಒಂದು ಭಾಗ ಕಿತ್ತುಹೋದಂತಾಯ್ತು.

ನಾನು ಲಂಕೇಶ್ ಪತ್ರಿಕೆ ಆಫೀಸ್ ಪಕ್ಕದಲ್ಲಿಯೇ ಇದ್ದ ಬಿಎಂಎಸ್ ಕಾನೂನು ಕಾಲೇಜಿನಲ್ಲಿ ಓದುತ್ತಿದ್ದಾಗ ನನ್ನ ಸ್ನೇಹಿತರೊಬ್ಬರು ‘ಲಂಕೇಶ್’ ಸತ್ತ ಸುದ್ದಿ ಹೇಳಿದರು. ಬೆಂಗಳೂರಿಗೆ ಬಂದಾಗಿನಿಂದ ದಿನಾಲು ಲಂಕೇಶ್ ಪತ್ರಿಕೆ ಆಫೀಸ್ ನೋಡುತ್ತಿದ್ದೆನಾದರೂ ಒಳಗೆ ಹೋಗಿರಲಿಲ್ಲ. ಆದರೆ ಲಂಕೇಶ್ ಸಾವು, ಪತ್ರಿಕೆಯ ಭವಿಷ್ಯ ಇವುಗಳ ಬಗ್ಗೆ ಸ್ನೇಹಿತರೊಂದಿಗೆ ಮಾತಾಡುವಾಗ ತಡೆಯಲಾಗದೆ ಒಂದು ದಿನ ಕಾರಣವಿಲ್ಲದೇ ‘ಲಂಕೇಶ್ ಪತ್ರಿಕೆ’ ಆಫೀಸಿಗೆ ಹೋದೆ. ಪತ್ರಿಕೆ ಆಫೀಸಿನ ಮೆಟ್ಟಿಲುಗಳೇರಿದಾಗ ಎದುರಿಗೇ ಇರುವ ಒಂದು ಸಣ್ಣ ರೂಮಿನಲ್ಲಿ ಗೌರಿ ಹಣೆಗೆ ಕೈಹಚ್ಚಿ ಕುಳಿತಿದ್ದರು. ಒಳಗೆ ಹೋಗಿ ನನ್ನ ಪರಿಚಯ ಮಾಡಿಕೊಂಡೆ. ಅಂದಿನ ನನ್ನ ಸಣಕಲ ದೇಹ, ಶಾರ್ಟ್ ಹೇರ್‍ಕಟ್ ನೋಡಿ ಅವರಿಗೆ ಅದೇನನ್ನಿಸಿತೋ “ಕೂಡು ಮರಿ” ಅಂದರು. ನಂತರ ನನ್ನೂರು, ಕಾಲೇಜು ಎಲ್ಲದರ ಬಗ್ಗೆ ಮಾತಾಡಿದರು. ಆಗ ನಾನು ಕಾಲೇಜಲ್ಲಿದ್ದಾಗಲೇ ಬೆಳಗಿನ ಹೊತ್ತು “ಸಂಜೆವಾಣಿ” ಪತ್ರಿಕೆಯಲ್ಲಿ ಉಪ ಸಂಪಾದಕಳಾಗಿ ಕೆಲಸ ಮಾಡುತ್ತಿದ್ದೆ ಮತ್ತು ಕೆಲವು ಸಣ್ಣ ಕಥೆ, ಲೇಖನ ಎಲ್ಲಾ ಬರೆದಿದ್ದೆ. ನನ್ನ ಬ್ಯಾಗಿನಲ್ಲಿ ಕೆಲವೊಂದನ್ನು ಅಂದು ತೋರಿಸಿದೆ. ಅವರು ಒಂದುಕ್ಷಣ ಬಹಳ ಖುಷಿ ಪಟ್ಟು ಒಳಗಡೆ ಇದ್ದ ಚಂದ್ರೇಗೌಡರನ್ನ ಕರೆದು ತೋರಿಸಿದರು. ಗೌಡರೂ ಓದಿ ‘ಚಂದ ಬರಿದೀಯವ್ವಾ’ ಅಂದಾಗ ಗೌರಿ “ಇದನ್ನ ನೋಡಿದರೆ ಹೈಸ್ಕೂಲ್ ಹುಡುಗಿ ಹಂಗ ಕಾಣ್ತದ ಅಂತ ನಕ್ಕು” ನಮ್ಮೂರ ಕಡೆ ಪ್ರೀತಿಯಿಂದ ಚಿಕ್ಕವರನ್ನು ಅದು ಇದು ಅಂತ ಕರೀತಾರ ಬೇಜಾರ ಮಾಡ್ಕೋ ಬ್ಯಾಡರಿ ಅಂದರು. ಅವತ್ತಿನ ನಮ್ಮ ಮೊದಲ ಭೇಟಿ ಸುಮಾರು ಒಂದೂವರೆ ಗಂಟೆ ನಡೆಯಿತು. ಒಂದೆರಡು ಸಣ್ಣಕತೆ ಬರೆದುಕೊಂಡು ಬಾ ಎಂದು ಗೌರಿ ಹೇಳಿದಾಗ ಅತೀ ಸಂಭ್ರಮದಿಂದ ಅಲ್ಲಿಂದ ಬಂದಿದ್ದೆ. ಅದ್ಯಾವತ್ತೂ ಮೊದಲ ಭೇಟಿ ಅನಿಸಲೇ ಇಲ್ಲ. ಅಷ್ಟೊಂದು ಆತ್ಮೀಯತೆ, ಸ್ನೇಹ ಅವರಲ್ಲಿತ್ತು.

ಅಂದಿನಿಂದ ಶುರುವಾದ ಗೌರಿ ಜೊತೆಗಿನ ಒಡನಾಟ ನಿರಂತರವಾಗಿದೆ. ಇಂಗ್ಲಿಷ್ ಜರ್ನಲಿಸಂದಿಂದ ಕನ್ನಡಕ್ಕೆ ಒಗ್ಗಿಕೊಳ್ಳುವಲ್ಲಿ ಅವರು ಪಡುತ್ತಿದ್ದ ಪ್ರಯತ್ನಕ್ಕೆ, ಪತ್ರಿಕೆ ನಿರ್ವಹಿಸಲು ಹಣಕಾಸಿಗಾಗಿ ಗೌರಿ ಪಡುತ್ತಿದ್ದ ಕಷ್ಟ ನೋಡಿದ ಮೇಲೂ, ನಾವೊಂದಿಷ್ಟು ಜನ ಪತ್ರಿಕೆ ಮಾಡುವ ಸಾಹಸಕ್ಕೆ ಕೈಹಾಕಿ ಮೇಡಂ ಸಲಹೆ ಕೇಳಲು ಆಫೀಸಿಗೆ ಹೋಗಿ ಹಗುರಾಗಿ ಬೈಸಿಕೊಂಡು ಬಂದಿದ್ದೆವು. “ನನ್ನಪ್ಪನ ಹೆಸರು ಇದ್ದೂ, ರೆಡಿಮೇಡ್ ಆಫೀಸೂ ಇದ್ದು ನಾನೇ ಒದ್ದಾಡ್ತಾ ಇದ್ದಿನಿ, ಈಗ ತಾನೆ ಡಿಗ್ರಿ ಮುಗಿಸೀರಿ ನಿಮಗ್ಯಾಕೆ ಈ ಉಸಾಬರಿ” ಅಂದರೂ ಕೇಳುವ ವಯಸ್ಸಲ್ಲವಲ್ಲ. ಸ್ನೇಹಿತನ ಪತ್ರಿಕೆಯ ಹುಮ್ಮಸ್ಸಿಗೆ ನಾವೆಲ್ಲ ಭರವಸೆಯ ಮಳೆ ಸುರಿಸಿ ಹಂಗೂಹಿಂಗೂ ಒಂದುವರ್ಷ ಬಹಳ ಚೆನ್ನಾಗಿ ಪತ್ರಿಕೆ ನಡೆಸಿ, ಹಣಕಾಸಿನಲ್ಲಿ ಕೈಸುಟ್ಟ ಮೇಲೆ ಅದನ್ನು ನಿಲ್ಲಿಸಿ, ನಿಯತ್ತಿನಿಂದ ವೃತ್ತಿ ಜೀವನ ಶುರುಮಾಡಿಕೊಂಡಿವಿ. ಗೌರಿ ಮೇಡಂ ಜೊತೆ ಪ್ರತಿಯೊಂದು ಧರಣಿ, ಸತ್ಯಾಗ್ರಹ, ಎಲ್ಲ ಕಡೆ ಹೋಗುವುದು ಮಾತ್ರ ಹಾಗೇ ಮುಂದುವರೆದು ಅವರ ಲಂಕೇಶ್ ಪತ್ರಿಕೆ ಪ್ರಯಾಣ ಮುಗಿದು “ಗೌರಿ ಲಂಕೇಶ್” ಶುರುವಾದಾಗ ಉದ್ಘಾಟನಾ ಸಮಾರಂಭದಲ್ಲಿ ನಮ್ಮದೇ ಪತ್ರಿಕೆ ಶುರುವಾದಂಥ ಸಂಭ್ರಮದಲ್ಲಿ ಓಡಾಡಿದ್ದೆವು. ಅಲ್ಲಿಂದ ಮುಂದಿನ ಪ್ರಯಾಣ ಮಾತ್ರ ಬಹಳ ಜವಾಬ್ದಾರಿಯಿಂದ ಕೂಡಿದ್ದಾಗಿತ್ತು.

ಕೋಮು ಸೌಹಾರ್ದ, ಅಲ್ಪಸಂಖ್ಯಾತ ಮತ್ತು ಲೈಂಗಿಕ ಶೋಷಿತರ ಹಕ್ಕುಗಳು, ಬಲಪಂಥ ವಿರೋಧ ಹೀಗೆ ಹಲವು ಹೋರಾಟಗಳಲ್ಲಿ ಭಾಗಿಯಾಗಿ, ಗೌರಿ ಅವರಲ್ಲಿ ಒಬ್ಬರಾಗಿ ಬೆರೆಯುತ್ತಾ ಹೋದೆವು. ಎಲ್ಲ ದಮನಿತರು ಒಂದೇ ಸೂತ್ರದಲ್ಲಿ ಸೇರಿಕೊಂಡವರು ಎಂಬ ಸೂಕ್ಷ್ಮ ಅಂಶವನ್ನು ಅರಿತಿದ್ದ ಗೌರಿ ಆ ಸೂತ್ರಗಳಲ್ಲಿ ಹಾದು ಹೊಕ್ಕರು. ಟೌನ್‍ಹಾಲ್ ಮೆಟ್ಟಿಲಮೇಲೆ ಕೂಡುವಷ್ಟೇ ಸಹಜವಾಗಿ ಕಂಡ ಹಳ್ಳಿಹಳ್ಳಿಗೆ ಹೋಗಿ ಬಂದರು. ಶೃಂಗೇರಿಯಲ್ಲೊಮ್ಮೆ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಹೋದಾಗ ಮಳೆಗಾಲದ ಮಲೆನಾಡನ್ನು ನೋಡಿ ನನಗೆ ವಿಚಿತ್ರವಾದ ಅನುಭವ. ಒಂದು ಕಡೆ ಜೀಪ್ ನಿಲ್ಲಿಸಿ ಗುಡ್ಡದಲ್ಲಿ ಹೋಗುವಾಗ ಗೌರಿ ಮೇಡಂ ಮತ್ತು ಇತರರ ಮಾತುಗಳನ್ನೇ ಕೇಳುತ್ತಾ ಹೋದ ಅನುಭವ ಮಾತ್ರ ಮರೆಯಲು ಸಾಧ್ಯವಿಲ್ಲ. ವಾಪಸ್ಸು ಬಂದು ನಿಂತಾಗ ಗೌರಿ ಮೇಡಂ ತಮಗೆ ಅಂಟಿಕೊಂಡು ರಕ್ತ ಹೀರುತ್ತಿದ್ದ ಜಿಗಣೆಗಳನ್ನು ಕಿತ್ತಲು ಹೇಳಿದಾಗ ನನ್ನ ಕೈ ನಡುಗುತಿತ್ತು. ಕಿತ್ತಿದಾಗ ಹರಿದ ರಕ್ತ ನೋಡಿ ಹೌಹಾರಿದ್ದೆ. ಗೌರಿ ನಕ್ಕು ಎಲ್ಲರಿಗೂ ಹೇಳಿದ್ದರು “ಪಾಪ ಇದು ಬಯಲು ಸೀಮೇದು ನೋಡ್ರಿ ಹೆಂಗೆ ಗಾಬರಿಯಾಗಿದೆ” ಅಂತ.

ಜರ್ನಲಿಸ್ಟ್ ಗೌರಿ ಆಕ್ಟಿವಿಸ್ಟ್ ಆಗುವಷ್ಟರಲ್ಲಿ ಅವರ ಜೊತೆ ನಾನೂ ವಿದ್ಯಾರ್ಥಿ ದೆಸೆಯಿಂದ ಬೆಳೆದು ವಕೀಲಳಾಗಿ ಮುಂದೆ ಅವರದೇ ಪತ್ರಿಕೆಯಲ್ಲಿ ಅಂಕಣಕಾರಳಾಗಿ, ಕಾನೂನು ವಿಷಯಗಳಲ್ಲಿ ಅವರಿಗೆ ಆಗಾಗ ಸಲಹೆ ನೀಡುತ್ತ, ಅದೇ ಸಲುಗೆಯಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಅವರಿಗೆ ಕಾಮೆಂಟ್, ಟ್ರೋಲ್ ಮಾಡಿದವರಿಗೆ ಪ್ರತಿಕ್ರಿಯಿಸಿದಾಗ ಬೈಯುತ್ತಿದ್ದೆ. ಅದೊಂದು ನೆನಪುಗಳ ಸರಮಾಲೆ.

ಗೌರಿಯನ್ನು ಕೊಂದು ಅವರ ವಿಚಾರಗಳನ್ನು ನಾಶ ಮಾಡುತ್ತೇವೆ ಎಂದುಕೊಂಡವರಿಗೆ ಇಂದು ಆ ಹೆಸರಿನ ಹಿಂದೆ ಇರುವ ಸಮಾನ ಮನಸ್ಕರ ದಂಡು ನೋಡಿ ಗಾಬರಿ ಆಗಬೇಕು. ಗೌರಿ ಮುಗಿದಿಲ್ಲ, ಅವರಿನ್ನೂ ಬೆಳೆಯುತ್ತಾರೆ, ನಾವೂ ಬೆಳೆಯುತ್ತೇವೆ. ಜೊತೆಜೊತೆಯಾಗಿ.


ಇದನ್ನೂ ಓದಿ: ಗೌರಿ ಕಾರ್ನರ್: ಗೌರಿ ಲಂಕೇಶರ ಮೇಲೆ ಮತ್ತೆ ನೀಚಮಟ್ಟದ ದಾಳಿ- ನಾವು ಪ್ರತಿಕ್ರಿಯೆ ನೀಡುವುದು ಸರಿಯೇ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...