Homeಅಂಕಣಗಳುಗೌರಿ ಕಾರ್ನರ್: “ಪಾಪ ಇದು ಬಯಲು ಸೀಮೇದು ನೋಡ್ರಿ ಹೆಂಗೆ ಗಾಬರಿಯಾಗಿದೆ”

ಗೌರಿ ಕಾರ್ನರ್: “ಪಾಪ ಇದು ಬಯಲು ಸೀಮೇದು ನೋಡ್ರಿ ಹೆಂಗೆ ಗಾಬರಿಯಾಗಿದೆ”

- Advertisement -
- Advertisement -

ಗೌರಿ ಮೇಡಂ ಜೊತೆಗಿನ ನನ್ನ ಒಡನಾಟಕ್ಕೆ ಈ ವರ್ಷಕ್ಕೆ 20 ತುಂಬುತ್ತದೆ. ಅದರಲ್ಲಿ ಅವರು ಜೊತೆಗಿಲ್ಲದೇ ಕಳೆದ 3 ವರ್ಷಗಳನ್ನೂ ಸೇರಿಸಿದ್ದೇನೆ, ಏಕೆಂದರೆ ಅವರ ಸಾವಿನ ನಂತರ ಅವರ ವಿಚಾರ, ಆಶಯ, ಗುರಿ ಅವನ್ನು ಮುಟ್ಟಬಹುದಾದ ದಾರಿ ಇವುಗಳೊಂದಿಗೆ ಹಿಂದೆಂದಿಗಿಂತಲೂ ಹೆಚ್ಚು ಬೆಸೆದುಕೊಂಡಿದ್ದೇನೆ. ಇಂಥದೇ ವಿಚಾರಗಳಿಂದ ಕೂಡಿದ ಒಂದಿಡೀ ಉತ್ಸಾಹಿ ತಂಡದೊಂದಿಗೆ ಗುರುತಿಸಿಕೊಂಡಾಗಿನಿಂದ ಜೀವನ ಹೆಚ್ಚು ಪ್ರಸ್ತುತವೆನಿಸುತ್ತದೆ.

ಗೌರಿ ಮೇಡಂ, ಪತ್ರಕರ್ತೆಯಿಂದ ಆಕ್ಟಿವಿಸ್ಟ್ ಆಗಿ ಬೆಳೆದ ಅವರ ಪ್ರಯಾಣದ ಎಲ್ಲ ಹಂತದಲ್ಲಿ ಅವರ ಜೊತೆ ಇದ್ದು ಅವರು ಆ ಬೆಳವಣಿಗೆಯ ಆಳ-ಅಗಲ ಅರ್ಥವಾಗುವಷ್ಟರಲ್ಲಿ ಅವರನ್ನು ಕಳೆದುಕೊಂಡಾಗ, ನನ್ನದೇ ವ್ಯಕ್ತಿತ್ವದ ಒಂದು ಭಾಗ ಕಿತ್ತುಹೋದಂತಾಯ್ತು.

ನಾನು ಲಂಕೇಶ್ ಪತ್ರಿಕೆ ಆಫೀಸ್ ಪಕ್ಕದಲ್ಲಿಯೇ ಇದ್ದ ಬಿಎಂಎಸ್ ಕಾನೂನು ಕಾಲೇಜಿನಲ್ಲಿ ಓದುತ್ತಿದ್ದಾಗ ನನ್ನ ಸ್ನೇಹಿತರೊಬ್ಬರು ‘ಲಂಕೇಶ್’ ಸತ್ತ ಸುದ್ದಿ ಹೇಳಿದರು. ಬೆಂಗಳೂರಿಗೆ ಬಂದಾಗಿನಿಂದ ದಿನಾಲು ಲಂಕೇಶ್ ಪತ್ರಿಕೆ ಆಫೀಸ್ ನೋಡುತ್ತಿದ್ದೆನಾದರೂ ಒಳಗೆ ಹೋಗಿರಲಿಲ್ಲ. ಆದರೆ ಲಂಕೇಶ್ ಸಾವು, ಪತ್ರಿಕೆಯ ಭವಿಷ್ಯ ಇವುಗಳ ಬಗ್ಗೆ ಸ್ನೇಹಿತರೊಂದಿಗೆ ಮಾತಾಡುವಾಗ ತಡೆಯಲಾಗದೆ ಒಂದು ದಿನ ಕಾರಣವಿಲ್ಲದೇ ‘ಲಂಕೇಶ್ ಪತ್ರಿಕೆ’ ಆಫೀಸಿಗೆ ಹೋದೆ. ಪತ್ರಿಕೆ ಆಫೀಸಿನ ಮೆಟ್ಟಿಲುಗಳೇರಿದಾಗ ಎದುರಿಗೇ ಇರುವ ಒಂದು ಸಣ್ಣ ರೂಮಿನಲ್ಲಿ ಗೌರಿ ಹಣೆಗೆ ಕೈಹಚ್ಚಿ ಕುಳಿತಿದ್ದರು. ಒಳಗೆ ಹೋಗಿ ನನ್ನ ಪರಿಚಯ ಮಾಡಿಕೊಂಡೆ. ಅಂದಿನ ನನ್ನ ಸಣಕಲ ದೇಹ, ಶಾರ್ಟ್ ಹೇರ್‍ಕಟ್ ನೋಡಿ ಅವರಿಗೆ ಅದೇನನ್ನಿಸಿತೋ “ಕೂಡು ಮರಿ” ಅಂದರು. ನಂತರ ನನ್ನೂರು, ಕಾಲೇಜು ಎಲ್ಲದರ ಬಗ್ಗೆ ಮಾತಾಡಿದರು. ಆಗ ನಾನು ಕಾಲೇಜಲ್ಲಿದ್ದಾಗಲೇ ಬೆಳಗಿನ ಹೊತ್ತು “ಸಂಜೆವಾಣಿ” ಪತ್ರಿಕೆಯಲ್ಲಿ ಉಪ ಸಂಪಾದಕಳಾಗಿ ಕೆಲಸ ಮಾಡುತ್ತಿದ್ದೆ ಮತ್ತು ಕೆಲವು ಸಣ್ಣ ಕಥೆ, ಲೇಖನ ಎಲ್ಲಾ ಬರೆದಿದ್ದೆ. ನನ್ನ ಬ್ಯಾಗಿನಲ್ಲಿ ಕೆಲವೊಂದನ್ನು ಅಂದು ತೋರಿಸಿದೆ. ಅವರು ಒಂದುಕ್ಷಣ ಬಹಳ ಖುಷಿ ಪಟ್ಟು ಒಳಗಡೆ ಇದ್ದ ಚಂದ್ರೇಗೌಡರನ್ನ ಕರೆದು ತೋರಿಸಿದರು. ಗೌಡರೂ ಓದಿ ‘ಚಂದ ಬರಿದೀಯವ್ವಾ’ ಅಂದಾಗ ಗೌರಿ “ಇದನ್ನ ನೋಡಿದರೆ ಹೈಸ್ಕೂಲ್ ಹುಡುಗಿ ಹಂಗ ಕಾಣ್ತದ ಅಂತ ನಕ್ಕು” ನಮ್ಮೂರ ಕಡೆ ಪ್ರೀತಿಯಿಂದ ಚಿಕ್ಕವರನ್ನು ಅದು ಇದು ಅಂತ ಕರೀತಾರ ಬೇಜಾರ ಮಾಡ್ಕೋ ಬ್ಯಾಡರಿ ಅಂದರು. ಅವತ್ತಿನ ನಮ್ಮ ಮೊದಲ ಭೇಟಿ ಸುಮಾರು ಒಂದೂವರೆ ಗಂಟೆ ನಡೆಯಿತು. ಒಂದೆರಡು ಸಣ್ಣಕತೆ ಬರೆದುಕೊಂಡು ಬಾ ಎಂದು ಗೌರಿ ಹೇಳಿದಾಗ ಅತೀ ಸಂಭ್ರಮದಿಂದ ಅಲ್ಲಿಂದ ಬಂದಿದ್ದೆ. ಅದ್ಯಾವತ್ತೂ ಮೊದಲ ಭೇಟಿ ಅನಿಸಲೇ ಇಲ್ಲ. ಅಷ್ಟೊಂದು ಆತ್ಮೀಯತೆ, ಸ್ನೇಹ ಅವರಲ್ಲಿತ್ತು.

ಅಂದಿನಿಂದ ಶುರುವಾದ ಗೌರಿ ಜೊತೆಗಿನ ಒಡನಾಟ ನಿರಂತರವಾಗಿದೆ. ಇಂಗ್ಲಿಷ್ ಜರ್ನಲಿಸಂದಿಂದ ಕನ್ನಡಕ್ಕೆ ಒಗ್ಗಿಕೊಳ್ಳುವಲ್ಲಿ ಅವರು ಪಡುತ್ತಿದ್ದ ಪ್ರಯತ್ನಕ್ಕೆ, ಪತ್ರಿಕೆ ನಿರ್ವಹಿಸಲು ಹಣಕಾಸಿಗಾಗಿ ಗೌರಿ ಪಡುತ್ತಿದ್ದ ಕಷ್ಟ ನೋಡಿದ ಮೇಲೂ, ನಾವೊಂದಿಷ್ಟು ಜನ ಪತ್ರಿಕೆ ಮಾಡುವ ಸಾಹಸಕ್ಕೆ ಕೈಹಾಕಿ ಮೇಡಂ ಸಲಹೆ ಕೇಳಲು ಆಫೀಸಿಗೆ ಹೋಗಿ ಹಗುರಾಗಿ ಬೈಸಿಕೊಂಡು ಬಂದಿದ್ದೆವು. “ನನ್ನಪ್ಪನ ಹೆಸರು ಇದ್ದೂ, ರೆಡಿಮೇಡ್ ಆಫೀಸೂ ಇದ್ದು ನಾನೇ ಒದ್ದಾಡ್ತಾ ಇದ್ದಿನಿ, ಈಗ ತಾನೆ ಡಿಗ್ರಿ ಮುಗಿಸೀರಿ ನಿಮಗ್ಯಾಕೆ ಈ ಉಸಾಬರಿ” ಅಂದರೂ ಕೇಳುವ ವಯಸ್ಸಲ್ಲವಲ್ಲ. ಸ್ನೇಹಿತನ ಪತ್ರಿಕೆಯ ಹುಮ್ಮಸ್ಸಿಗೆ ನಾವೆಲ್ಲ ಭರವಸೆಯ ಮಳೆ ಸುರಿಸಿ ಹಂಗೂಹಿಂಗೂ ಒಂದುವರ್ಷ ಬಹಳ ಚೆನ್ನಾಗಿ ಪತ್ರಿಕೆ ನಡೆಸಿ, ಹಣಕಾಸಿನಲ್ಲಿ ಕೈಸುಟ್ಟ ಮೇಲೆ ಅದನ್ನು ನಿಲ್ಲಿಸಿ, ನಿಯತ್ತಿನಿಂದ ವೃತ್ತಿ ಜೀವನ ಶುರುಮಾಡಿಕೊಂಡಿವಿ. ಗೌರಿ ಮೇಡಂ ಜೊತೆ ಪ್ರತಿಯೊಂದು ಧರಣಿ, ಸತ್ಯಾಗ್ರಹ, ಎಲ್ಲ ಕಡೆ ಹೋಗುವುದು ಮಾತ್ರ ಹಾಗೇ ಮುಂದುವರೆದು ಅವರ ಲಂಕೇಶ್ ಪತ್ರಿಕೆ ಪ್ರಯಾಣ ಮುಗಿದು “ಗೌರಿ ಲಂಕೇಶ್” ಶುರುವಾದಾಗ ಉದ್ಘಾಟನಾ ಸಮಾರಂಭದಲ್ಲಿ ನಮ್ಮದೇ ಪತ್ರಿಕೆ ಶುರುವಾದಂಥ ಸಂಭ್ರಮದಲ್ಲಿ ಓಡಾಡಿದ್ದೆವು. ಅಲ್ಲಿಂದ ಮುಂದಿನ ಪ್ರಯಾಣ ಮಾತ್ರ ಬಹಳ ಜವಾಬ್ದಾರಿಯಿಂದ ಕೂಡಿದ್ದಾಗಿತ್ತು.

ಕೋಮು ಸೌಹಾರ್ದ, ಅಲ್ಪಸಂಖ್ಯಾತ ಮತ್ತು ಲೈಂಗಿಕ ಶೋಷಿತರ ಹಕ್ಕುಗಳು, ಬಲಪಂಥ ವಿರೋಧ ಹೀಗೆ ಹಲವು ಹೋರಾಟಗಳಲ್ಲಿ ಭಾಗಿಯಾಗಿ, ಗೌರಿ ಅವರಲ್ಲಿ ಒಬ್ಬರಾಗಿ ಬೆರೆಯುತ್ತಾ ಹೋದೆವು. ಎಲ್ಲ ದಮನಿತರು ಒಂದೇ ಸೂತ್ರದಲ್ಲಿ ಸೇರಿಕೊಂಡವರು ಎಂಬ ಸೂಕ್ಷ್ಮ ಅಂಶವನ್ನು ಅರಿತಿದ್ದ ಗೌರಿ ಆ ಸೂತ್ರಗಳಲ್ಲಿ ಹಾದು ಹೊಕ್ಕರು. ಟೌನ್‍ಹಾಲ್ ಮೆಟ್ಟಿಲಮೇಲೆ ಕೂಡುವಷ್ಟೇ ಸಹಜವಾಗಿ ಕಂಡ ಹಳ್ಳಿಹಳ್ಳಿಗೆ ಹೋಗಿ ಬಂದರು. ಶೃಂಗೇರಿಯಲ್ಲೊಮ್ಮೆ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಹೋದಾಗ ಮಳೆಗಾಲದ ಮಲೆನಾಡನ್ನು ನೋಡಿ ನನಗೆ ವಿಚಿತ್ರವಾದ ಅನುಭವ. ಒಂದು ಕಡೆ ಜೀಪ್ ನಿಲ್ಲಿಸಿ ಗುಡ್ಡದಲ್ಲಿ ಹೋಗುವಾಗ ಗೌರಿ ಮೇಡಂ ಮತ್ತು ಇತರರ ಮಾತುಗಳನ್ನೇ ಕೇಳುತ್ತಾ ಹೋದ ಅನುಭವ ಮಾತ್ರ ಮರೆಯಲು ಸಾಧ್ಯವಿಲ್ಲ. ವಾಪಸ್ಸು ಬಂದು ನಿಂತಾಗ ಗೌರಿ ಮೇಡಂ ತಮಗೆ ಅಂಟಿಕೊಂಡು ರಕ್ತ ಹೀರುತ್ತಿದ್ದ ಜಿಗಣೆಗಳನ್ನು ಕಿತ್ತಲು ಹೇಳಿದಾಗ ನನ್ನ ಕೈ ನಡುಗುತಿತ್ತು. ಕಿತ್ತಿದಾಗ ಹರಿದ ರಕ್ತ ನೋಡಿ ಹೌಹಾರಿದ್ದೆ. ಗೌರಿ ನಕ್ಕು ಎಲ್ಲರಿಗೂ ಹೇಳಿದ್ದರು “ಪಾಪ ಇದು ಬಯಲು ಸೀಮೇದು ನೋಡ್ರಿ ಹೆಂಗೆ ಗಾಬರಿಯಾಗಿದೆ” ಅಂತ.

ಜರ್ನಲಿಸ್ಟ್ ಗೌರಿ ಆಕ್ಟಿವಿಸ್ಟ್ ಆಗುವಷ್ಟರಲ್ಲಿ ಅವರ ಜೊತೆ ನಾನೂ ವಿದ್ಯಾರ್ಥಿ ದೆಸೆಯಿಂದ ಬೆಳೆದು ವಕೀಲಳಾಗಿ ಮುಂದೆ ಅವರದೇ ಪತ್ರಿಕೆಯಲ್ಲಿ ಅಂಕಣಕಾರಳಾಗಿ, ಕಾನೂನು ವಿಷಯಗಳಲ್ಲಿ ಅವರಿಗೆ ಆಗಾಗ ಸಲಹೆ ನೀಡುತ್ತ, ಅದೇ ಸಲುಗೆಯಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಅವರಿಗೆ ಕಾಮೆಂಟ್, ಟ್ರೋಲ್ ಮಾಡಿದವರಿಗೆ ಪ್ರತಿಕ್ರಿಯಿಸಿದಾಗ ಬೈಯುತ್ತಿದ್ದೆ. ಅದೊಂದು ನೆನಪುಗಳ ಸರಮಾಲೆ.

ಗೌರಿಯನ್ನು ಕೊಂದು ಅವರ ವಿಚಾರಗಳನ್ನು ನಾಶ ಮಾಡುತ್ತೇವೆ ಎಂದುಕೊಂಡವರಿಗೆ ಇಂದು ಆ ಹೆಸರಿನ ಹಿಂದೆ ಇರುವ ಸಮಾನ ಮನಸ್ಕರ ದಂಡು ನೋಡಿ ಗಾಬರಿ ಆಗಬೇಕು. ಗೌರಿ ಮುಗಿದಿಲ್ಲ, ಅವರಿನ್ನೂ ಬೆಳೆಯುತ್ತಾರೆ, ನಾವೂ ಬೆಳೆಯುತ್ತೇವೆ. ಜೊತೆಜೊತೆಯಾಗಿ.


ಇದನ್ನೂ ಓದಿ: ಗೌರಿ ಕಾರ್ನರ್: ಗೌರಿ ಲಂಕೇಶರ ಮೇಲೆ ಮತ್ತೆ ನೀಚಮಟ್ಟದ ದಾಳಿ- ನಾವು ಪ್ರತಿಕ್ರಿಯೆ ನೀಡುವುದು ಸರಿಯೇ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...