Homeಕರ್ನಾಟಕಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾಗಿ ವಿವೇಕ್ ಸುಬ್ಬಾ ರೆಡ್ಡಿ ಮರು ಆಯ್ಕೆ

ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾಗಿ ವಿವೇಕ್ ಸುಬ್ಬಾ ರೆಡ್ಡಿ ಮರು ಆಯ್ಕೆ

- Advertisement -
- Advertisement -

ಹಿರಿಯ ವಕೀಲ ವಿವೇಕ್ ಸುಬ್ಬಾ ರೆಡ್ಡಿ ಅವರು ಬೆಂಗಳೂರು ವಕೀಲರ ಸಂಘದ (ಎಎಬಿ) ಅಧ್ಯಕ್ಷರಾಗಿ ಸತತ ಎರಡನೇ ಬಾರಿಗೆ ಮರು ಆಯ್ಕೆಯಾಗಿದ್ದಾರೆ. ಅವರು ದಾಖಲೆಯ 6,820 ಮತಗಳನ್ನು ಪಡೆಯುವ ಮೂಲಕ ಚುನಾವಣೆಯಲ್ಲಿ ಗೆದ್ದಿದ್ದಾರೆ ಎಂದು ಬಾರ್ ಆಂಡ್ ಬೆಂಚ್‌ ವರದಿ ಮಾಡಿದೆ.

ಸುಬ್ಬಾ ರೆಡ್ಡಿ ಅವರ ಹತ್ತಿರದ ಎದುರಾಳಿ, ಎಎಬಿ ಮಾಜಿ ಅಧ್ಯಕ್ಷ ರಂಗನಾಥ್ ಎಪಿ ಅವರು 4,518 ಮತಗಳನ್ನು ಪಡೆದರು. ಕಣದಲ್ಲಿದ್ದ ಇತರ ಅಭ್ಯರ್ಥಿಗಳಲ್ಲಿ ರಾಜಣ್ಣ ಆರ್ (1,473 ಮತಗಳು), ನಂಜಪ್ಪ ಕಾಳೇಗೌಡ (123 ಮತಗಳು), ರವಿ ಟಿ ಜಿ (378 ಮತಗಳು) ಮತ್ತು ರಾಜಶೇಖರ ಟಿಎ (90 ಮತಗಳು) ಪಡೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಕೀಲರಾದ ಗಿರೀಶ್ ಕುಮಾರ್ ಸಿಎಸ್ ಅವರು ತಮ್ಮ ಹತ್ತಿರದ ಎದುರಾಳಿ ಸಿಆರ್ ಗೌಡ ಅವರನ್ನು 3,128 ಮತಗಳನ್ನು ಗಳಿಸಿ ಸೋಲಿಸುವ ಮೂಲಕ 5,060 ಮತಗಳೊಂದಿಗೆ ಎಎಬಿಯ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.

ಇತರ ಅಭ್ಯರ್ಥಿಗಳಾದ ವೇದಮೂರ್ತಿ ಎ. ಸಂತೋಷ್ ಟಿಸಿ, ಸುವರ್ಣ ಆರ್ ಮತ್ತು ವೆಂಕಟ ರೆಡ್ಡಿ ಕ್ರಮವಾಗಿ 2,806, 1,542, 421 ಮತ್ತು 237 ಮತಗಳನ್ನು ಪಡೆದಿದ್ದಾರೆ.

ಪ್ರವೀಣ್ ಗೌಡ ಎಚ್.ವಿ. ಅವರು 4,854 ಮತಗಳೊಂದಿಗೆ ಎಎಬಿಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಗೆದ್ದರೆ, ಅವರ ಪ್ರತಿಸ್ಪರ್ಧಿಗಳಾದ ಹರೀಶ ಎಂ.ಟಿ 3,728 ಮತಗಳನ್ನು ಪಡೆದರು. ಇದೇ ಸ್ಥಾನಕ್ಕೆ ಸ್ಪರ್ಧಿಸಿದ್ದ ಶಿವಮೂರ್ತಿ (2,321 ಮತಗಳು), ಅಕ್ಕಿ ಮಂಜುನಾಥ್ ಗೌಡ (2,188 ಮತಗಳು) ಮತ್ತು ಚಂದ್ರಶೇಖರ್ ಎಂ.ಎಚ್. 124 ಮತಗಳನ್ನು ಪಡೆದಿದ್ದಾರೆ.

ಸಂಘದ ಖಜಾಂಚಿ ಸ್ಥಾನವು ಮಹಿಳೆಯರಿಗೆ ಮೀಸಲಾಗಿದ್ದು, ಈ ಹುದ್ದೆಗೆ ತೀವ್ರ ಪೈಪೋಟಿಯ ನಂತರ ಶ್ವೇತಾ ರವಿಶಂಕರ್ ಅವರು 2,950 ಮತಗಳೊಂದಿಗೆ ಸಂಘದ ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ. ಅವರ ಹತ್ತಿರದ ಎದುರಾಳಿ ಗೀತಾ ರಾಜ್ 1,860 ಮತಗಳನ್ನು ಪಡೆದರು.

ಖಜಾಂಚಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಮಮತಾ ಕೆ.ವಿ (1,760 ಮತಗಳು), ಶೈಲಜಾ ಕೆ (1,267 ಮತಗಳು), ಹೇಮಲತಾ ವಿ (1,142 ಮತಗಳು), ಮೀನಾಕ್ಷಿ ಕೆ (636 ಮತಗಳು), ಮಂಜುಳಾ ಎಲ್ (534 ಮತಗಳು), ಮಂಜುಳಾ ಪಿ (500 ಮತಗಳು), ಸಂಧ್ಯಾ ಜಮದಗ್ನಿ (497 ಮತಗಳು), ಅನಿತಾ (497 ಮತಗಳು), ಅನಿತಾ (495 ಮತಗಳು), ವಹೀದಾ ಎಂಎಂ (357 ಮತಗಳು), ಮಂಜುಳಮ್ಮ ಎಂ (274 ಮತಗಳು), ಸುಧಾ ಜಿ (253 ಮತಗಳು), ಸುಧಾ ಎಸ್ (215 ಮತಗಳು) ಮತ್ತು ರುಖಿಯಾಬಿ (196 ಮತಗಳು) ಪಡೆದಿದ್ದಾರೆ.

ಇದನ್ನೂಓದಿ:  ಮುಂದಿನ ಅವಧಿಗೂ ಸಿದ್ದರಾಮಯ್ಯ ಅವರೇ ಸಿಎಂ ಆದರೆ ತಪ್ಪೇನಿಲ್ಲ: ಸಚಿವ ಶಿವಾನಂದ ಪಾಟೀಲ್

ಮುಂದಿನ ಅವಧಿಗೂ ಸಿದ್ದರಾಮಯ್ಯ ಅವರೇ ಸಿಎಂ ಆದರೆ ತಪ್ಪೇನಿಲ್ಲ: ಸಚಿವ ಶಿವಾನಂದ ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...