ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿಯೇ ಬೆಂಗಳೂರಿನ ವಕೀಲರ ವೇದಿಕೆಯೂ ರೈತರಿಗೆ ಬೆಂಬಲ ಸೂಚಿಸಿದೆ.
ದೆಹಲಿಯ ಐತಿಹಾಸಿಕ ರೈತಾಂದೋಲನವನ್ನು ಬೆಂಬಲಿಸಿ, ಜನವಿರೋಧಿ, ರೈತ ವಿರೋಧಿ ಕಾಯ್ದೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಹಿಂಪಡೆಯಬೇಕೆಂದು ಒತ್ತಾಯಿಸಿರುವ ಬೆಂಗಳೂರಿನ ಸಮಾನ ಮನಸ್ಕ ವಕೀಲರ ವೇದಿಕೆಯು, ನಗರದ ಸಿವಿಲ್ ಕೋರ್ಟ್ ಆವರಣದಿಂದ ಹೈಕೋರ್ಟ್ ವರೆಗೆ ‘ವಕೀಲರ ನಡಿಗೆ ರೈತರ ಕಡೆಗೆ’ ಎಂಬ ಮೆರವಣಿಗೆ ಮತ್ತು ಮಾನವ ಸರಪಳಿಯನ್ನು ನಡೆಸಿತು.
ಬೆಂಗಳೂರಿನ ವಕೀಲರ ಸಂಘದ ಅಧ್ಯಕ್ಷ ರಂಗನಾಥ್, ಪೊನ್ನಯ್ಯ, ಬಾಲನ್, ಶಂಕರಪ್ಪ, ಹರೀಂದ್ರ, ಶ್ರೀನಿವಾಸ್ ಅವರ ನೇತೃತ್ವದಲ್ಲಿ ‘ವಕೀಲರ ನಡಿಗೆ ರೈತರ ಕಡೆಗೆ’ ಕಾರ್ಯಕ್ರಮ ನಡೆಯಿತು.
ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ದೇಶದಾದ್ಯಂತ ಇರುವ ಲಕ್ಷಾಂತರ ರೈತರು 80 ದಿನಗಳಿಂದ ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಇದುವರೆಗೂ 11 ಸುತ್ತಿನ ಮಾತುಕತೆಗಳು ನಡೆದಿದ್ದು, ಅವುಗಳೆಲ್ಲವೂ ವಿಫಲವಾಗಿವೆ.
ಇದನ್ನೂ ಓದಿ: ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ವಿವರ