Homeಕರ್ನಾಟಕಏರೋ ಇಂಡಿಯಾ ವೈಮಾನಿಕ ಪ್ರದರ್ಶನ; ಮಾಂಸ ಮಾರಾಟ ನಿಷೇಧಕ್ಕೆ ಹೋಟೆಲ್‌ಗಳ ಸಂಘ ವಿರೋಧ

ಏರೋ ಇಂಡಿಯಾ ವೈಮಾನಿಕ ಪ್ರದರ್ಶನ; ಮಾಂಸ ಮಾರಾಟ ನಿಷೇಧಕ್ಕೆ ಹೋಟೆಲ್‌ಗಳ ಸಂಘ ವಿರೋಧ

- Advertisement -
- Advertisement -

ವೈಮಾನಿಕ ಪ್ರದರ್ಶನ ಪ್ರಯುಕ್ತ ಮಾಂಸ ಮಾರಾಟ ನಿಷೇಧ ಹೊರಡಿಸುವುದಕ್ಕೆ ಬೆಂಗಳೂರಿನ ಹೋಟೆಲ್ ಉದ್ಯಮದಿಂದ ವಿರೋಧ ವ್ಯಕ್ತವಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯಲಹಂಕ ವಲಯದಿಂದ ಆದೇಶ ಹೊರಡಿಸಲಾಗಿದ್ದು, ವಾಯುಪಡೆ ನಿಲ್ದಾಣದ 13 ಕಿಲೋಮೀಟರ್ ವ್ಯಾಪ್ತಿಯಲ್ಲಿ ಮಾಂಸ ಮಾರಾಟದ ಮೇಲೆ 26 ದಿನಗಳ ನಿಷೇಧ ಹೇರಿದೆ. ಪ್ರತಿಷ್ಠಿತ ಏರೋ ಇಂಡಿಯಾ ಪ್ರದರ್ಶನಕ್ಕೂ ಮುನ್ನ ಜನವರಿ 23 ರಿಂದ ಫೆಬ್ರವರಿ 17 ರವರೆಗೆ ಈ ನಿಷೇಧ ಜಾರಿಯಲ್ಲಿರುತ್ತದೆ.

ಯಲಹಂಕ ವಲಯದ ಜಂಟಿ ಆಯುಕ್ತರು ಜನವರಿ 17 ರಂದು ಸಾರ್ವಜನಿಕ ಸೂಚನೆಯ ಮೂಲಕ ಹೊರಡಿಸಿದ ಬಿಬಿಎಂಪಿಯ ನಿರ್ದೇಶನವು, ವಿಮಾನ ಹಾರಾಟ ಅಭ್ಯಾಸ ಅವಧಿಗಳು ಮತ್ತು ಫೆಬ್ರವರಿ 10 ರಿಂದ 14 ರವರೆಗೆ ನಿಗದಿಯಾಗಿದ್ದ ಮುಖ್ಯ ಕಾರ್ಯಕ್ರಮದ ಸಮಯದಲ್ಲಿ ಪಕ್ಷಿ ಡಿಕ್ಕಿ ಹೊಡೆಯುವುದನ್ನು ತಡೆಯುವ ಗುರಿಯನ್ನು ಹೊಂದಿದೆ. ಉಲ್ಲಂಘನೆಗಳಿಗೆ ಬಿಬಿಎಂಪಿ ಕಾಯ್ದೆ 2020 ಮತ್ತು ಭಾರತೀಯ ವಿಮಾನ ನಿಯಮಗಳು 1937 (ನಿಯಮ 91) ಎರಡರ ಅಡಿಯಲ್ಲಿ ದಂಡ ವಿಧಿಸಲಾಗುವುದು ಎಂದು ಬಿಬಿಎಂಪಿ ಎಚ್ಚರಿಸಿದೆ.

ಆದರೆ, ಬೆಂಗಳೂರು ಹೋಟೆಲ್‌ಗಳ ಸಂಘವು ಸುಮಾರು ಒಂದು ತಿಂಗಳ ಕಾಲ ವಿಧಿಸಿರುವ ನಿಷೇಧವನ್ನು ‘ಅವೈಜ್ಞಾನಿಕ’ ಎಂದು ಕರೆದಿದೆ. ಇದು ಸ್ಥಳೀಯ ವ್ಯವಹಾರಗಳ ಮೇಲೆ ವಿನಾಶಕಾರಿ ಪರಿಣಾಮ ಬೀರಬಹುದು ಎಂದು ಹೇಳಿದೆ.

ಜನವರಿ 20ರಂದು ಈ ಬಗ್ಗೆ ಬಿಬಿಎಂಪಿಗೆ ಪತ್ರ ಬರೆದಿದ್ದು, ಮಾಂಸ ಮಾರಾಟ ನಿಷೇಧವು ಈ ಪ್ರದೇಶದ ಸಣ್ಣ ಮತ್ತು ಮಧ್ಯಮ ಗಾತ್ರದ ರೆಸ್ಟೋರೆಂಟ್‌ಗಳು, ಬಾರ್‌ಗಳು, ಪಬ್‌ಗಳು ಮತ್ತು ಐಷಾರಾಮಿ ಹೋಟೆಲ್‌ಗಳು ಸೇರಿದಂತೆ 5,000 ಕ್ಕೂ ಹೆಚ್ಚು ಸಂಸ್ಥೆಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಸಂಘವು ಒತ್ತಿ ಹೇಳಿದೆ.

ನಿಷೇಧದ ಹಿಂದಿನ ತರ್ಕವನ್ನು ಪ್ರಶ್ನಿಸುವ ಹಲವಾರು ಅಂಶಗಳನ್ನು ಸಂಘವು ಎತ್ತಿದೆ. ಹೋಟೆಲ್‌ಗಳು ಈಗಾಗಲೇ ಸರಿಯಾದ ದೈನಂದಿನ ಕಸ ವಿಲೇವಾರಿ ವ್ಯವಸ್ಥೆಯನ್ನು ಹೊಂದಿದ್ದು, ಪಕ್ಷಿಗಳನ್ನು ಆಕರ್ಷಿಸಬಹುದಾದ ಆಹಾರ ತ್ಯಾಜ್ಯ ಸಂಗ್ರಹವಾಗುವುದನ್ನು ಪರಿಣಾಮಕಾರಿಯಾಗಿ ತಡೆಯುತ್ತದೆ ಎಂದು ಅವರು ವಾದಿಸುತ್ತಾರೆ. ಕಾರ್ಯಕ್ರಮದ ಸಮಯದಲ್ಲಿಯೇ ವಾಯುಪಡೆ ನಿಲ್ದಾಣದೊಳಗೆ ಮಾಂಸ ಭಕ್ಷ್ಯಗಳನ್ನು ಬಡಿಸುವ ನಿರೀಕ್ಷೆಯಿರುವ ವಿಪರ್ಯಾಸವನ್ನೂ ಅವರು ಗಮನಸೆಳೆದರು.

“ಈ ನಿರ್ಧಾರ ಅಪ್ರಾಯೋಗಿಕ ಮತ್ತು ಅನಗತ್ಯ. ಈ ಅವಧಿಯಲ್ಲಿ ಮದುವೆಗಳು, ಕಾರ್ಯಕ್ರಮಗಳು ಮತ್ತು ವ್ಯಾಪಾರ ಸಭೆಗಳನ್ನು ನಿಗದಿಪಡಿಸಲಾಗಿದೆ. ನಿಷೇಧವು ಆತಿಥ್ಯ ವಲಯಕ್ಕೆ ಗಮನಾರ್ಹ ನಷ್ಟವನ್ನುಂಟು ಮಾಡುತ್ತದೆ” ಎಂದು ಸಂಘವು ತಮ್ಮ ಪತ್ರದಲ್ಲಿ ತಿಳಿಸಿದೆ.

ಏರೋ ಇಂಡಿಯಾ ಪ್ರದರ್ಶನವು ವಾಯುಯಾನ ತಂತ್ರಜ್ಞಾನಗಳ ಜೊತೆಗೆ ಮಿಲಿಟರಿ ಮತ್ತು ನಾಗರಿಕ ವಿಮಾನಗಳನ್ನು ಪ್ರದರ್ಶಿಸಲು ಹೆಸರುವಾಸಿಯಾಗಿದೆ.

ಇದನ್ನೂ ಓದಿ; ಬೆಂಗಳೂರಿನಲ್ಲಿ ಏರೋ ಇಂಡಿಯಾ ಪ್ರದರ್ಶನ: 13 ಕಿ.ಮೀ ವ್ಯಾಪ್ತಿಯಲ್ಲಿ ಮಾಂಸದ ಅಂಗಡಿಗಳ ನಿಷೇಧ;  ಯಾಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...