ಬೆಂಗಳೂರು: ಏರೋ ಇಂಡಿಯಾ ಪ್ರದರ್ಶನದ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಪಾಲಿಕೆ ಶನಿವಾರ ಜನವರಿ 23ರಿಂದ ಫೆಬ್ರವರಿ 17 ರವರೆಗೆ ಮಾಂಸದ ಅಂಗಡಿಗಳು, ಮಾಂಸಾಹಾರಿ ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳನ್ನು ಮುಚ್ಚುವಂತೆ ಆದೇಶಿಸಿದೆ.
ಏರೋ ಇಂಡಿಯಾದ 15ನೇ ಆವೃತ್ತಿಯು ಫೆಬ್ರವರಿ 10ರಿಂದ 14 ರವರೆಗೆ ಬೆಂಗಳೂರಿನ ಹೊರವಲಯದಲ್ಲಿರುವ ಯಲಹಂಕದಲ್ಲಿ ನಡೆಯಲಿದೆ.
ಯಲಹಂಕ ವಾಯುಪಡೆ ನಿಲ್ದಾಣದಿಂದ 13 ಕಿ.ಮೀ ವ್ಯಾಪ್ತಿಯಲ್ಲಿ ಮಾಂಸಾಹಾರಿ ಭಕ್ಷ್ಯಗಳನ್ನು ಬಡಿಸುವುದು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತನ್ನ ಸಾರ್ವಜನಿಕ ಪ್ರಕಟಣೆಯಲ್ಲಿ ತಿಳಿಸಿದೆ.
ಬಿಬಿಎಂಪಿ ಅಧಿಕಾರಿಗಳ ಪ್ರಕಾರ, ಸಾರ್ವಜನಿಕ ಸ್ಥಳಗಳಲ್ಲಿ ಹಾಕಲಾದ ಮಾಂಸಾಹಾರಿ ಆಹಾರವು ಅನೇಕ ಸ್ಕ್ಯಾವೆಂಜರ್ ಪಕ್ಷಿಗಳನ್ನು, ವಿಶೇಷವಾಗಿ ಹದ್ದುಗಳನ್ನು ಆಕರ್ಷಿಸುತ್ತದೆ, ಇದು ಗಾಳಿಯಲ್ಲಿ ಅಪಘಾತಗಳಿಗೆ ಕಾರಣವಾಗಬಹುದು.
“ಏರೋ ಇಂಡಿಯಾ-2025 ಪ್ರದರ್ಶನವು ಯಲಹಂಕ ವಾಯುಪಡೆ ನಿಲ್ದಾಣದಲ್ಲಿ ಫೆಬ್ರವರಿ 10ರಿಂದ ಫೆ.14ರ ವರೆಗೆ ನಡೆಯಲಿದೆ ಎಂದು ತಿಳಿಸಲಾಗಿದೆ. ಈ ಕಾರಣದಿಂದಾಗಿ, ಜನವರಿ 23ರಿಂದ ಫೆಬ್ರವರಿ 17ರವರೆಗೆ ಯಲಹಂಕ ವಾಯುಪಡೆ ನಿಲ್ದಾಣದ 13 ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲಾ ಮಾಂಸ/ಕೋಳಿ/ಮೀನು ಅಂಗಡಿಗಳನ್ನು ಮುಚ್ಚುವುದು ಮತ್ತು ಮಾಂಸಾಹಾರಿ ಭಕ್ಷ್ಯಗಳನ್ನು ಬಡಿಸುವುದು/ಮಾರಾಟ ಮಾಡುವುದನ್ನು ನಿಷೇಧಿಸುವುದು ಸಾರ್ವಜನಿಕರಿಗೆ ಮತ್ತು ಮಾಂಸಾಹಾರಿ ಹೋಟೆಲ್ಗಳು/ರೆಸ್ಟೋರೆಂಟ್ಗಳ ಮಾಲೀಕರಿಗೆ ಗಮನಕ್ಕೆ ತರಲಾಗಿದೆ” ಎಂದು ನಾಗರಿಕ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.
ಆದೇಶದ ಯಾವುದೇ ಉಲ್ಲಂಘನೆಯು ಬಿಬಿಎಂಪಿ ಕಾಯ್ದೆ-2020 ಮತ್ತು ಭಾರತೀಯ ವಿಮಾನ ನಿಯಮಗಳು 1937ರ ನಿಯಮ 91ರ ಅಡಿಯಲ್ಲಿ ಶಿಕ್ಷೆಗೆ ಗುರಿಯಾಗುತ್ತದೆ ಎಂದು ಅದು ಹೇಳಿದೆ.
ಏರೋ ಇಂಡಿಯಾ ‘ರಕ್ಷಣಾ ಸಚಿವರ ಸಮಾವೇಶ, ಸಿಇಒಗಳ ದುಂಡುಮೇಜಿನ ಸಭೆ ಮತ್ತು ಭಾರತ ಮಂಟಪ ಮತ್ತು ಏರೋಸ್ಪೇಸ್ ಕಂಪನಿಗಳ ವ್ಯಾಪಾರ ಮೇಳವನ್ನು ಒಳಗೊಂಡ ದೊಡ್ಡ ಪ್ರದರ್ಶನವನ್ನು ಒಳಗೊಂಡಿರುತ್ತದೆ. ಏರೋ ಇಂಡಿಯಾ, ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರದಲ್ಲಿ ವಿಶ್ವದ ಪ್ರಮುಖ ಕೈಗಾರಿಕೆಗಳ ಪ್ರದರ್ಶಕರನ್ನು ಆಕರ್ಷಿಸುತ್ತದೆ.
ಇದು ಉದ್ಯಮದಾರರಿಗೆ ತಮ್ಮ ಸಾಮರ್ಥ್ಯಗಳು, ಉತ್ಪನ್ನಗಳು ಮತ್ತು ಸೇವೆಗಳನ್ನು ಉದ್ದೇಶಿತ ಪ್ರೇಕ್ಷಕರಿಗೆ ಪ್ರದರ್ಶಿಸಲು ಒಂದು ಅನನ್ಯ ಅವಕಾಶವನ್ನು ಒದಗಿಸುತ್ತದೆ. ಈ ದ್ವೈವಾರ್ಷಿಕ ಕಾರ್ಯಕ್ರಮವು ಉದ್ಯಮದ ನಾಯಕರಿಗೆ ಏರೋಸ್ಪೇಸ್ ಮತ್ತು ರಕ್ಷಣಾ ಕೈಗಾರಿಕೆಗಳ ಭವಿಷ್ಯವನ್ನುರೂಪಿಸಲು ಒಂದು ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ.
ಏರೋ ಇಂಡಿಯಾ ಈಗಾಗಲೇ 1996ರಿಂದ ಬೆಂಗಳೂರಿನಲ್ಲಿ ಆಯೋಜಿಸಲಾದ 14 ಯಶಸ್ವಿ ಆವೃತ್ತಿಗಳೊಂದಿಗೆ ಪ್ರಮುಖ ಏರೋಸ್ಪೇಸ್ ಪ್ರದರ್ಶನವಾಗಿ ಜಾಗತಿಕವಾಗಿ ತನ್ನ ಸ್ಥಾನವನ್ನು ಪಡೆದುಕೊಂಡಿದೆ.
ಮುಸ್ಲಿಂ ವಿರೋಧಿ ಹೇಳಿಕೆ: ಯಾದವ್ ವಿರುದ್ಧ ದೂರು ದಾಖಲಿಸಲು 13 ಹಿರಿಯ ವಕೀಲರ ಒತ್ತಾಯ


