Homeಕರೋನಾ ತಲ್ಲಣಗಾಳಿಯಲ್ಲಿ 10 ಮೀಟರ್‌ ದೂರ ಸಾಗುತ್ತದೆ ಕೊರೊನಾ ವೈರಸ್ ಸಣ್ಣ ಕಣಗಳು- ಕೇಂದ್ರ ಸರ್ಕಾರ

ಗಾಳಿಯಲ್ಲಿ 10 ಮೀಟರ್‌ ದೂರ ಸಾಗುತ್ತದೆ ಕೊರೊನಾ ವೈರಸ್ ಸಣ್ಣ ಕಣಗಳು- ಕೇಂದ್ರ ಸರ್ಕಾರ

- Advertisement -
- Advertisement -

ಕೊರೊನಾ ಸೋಂಕಿತ ವ್ಯಕ್ತಿ ಸೀನಿದಾಗ, ಉಸಿರು ಬಿಟ್ಟಾಗ ಅಥವಾ ಕೆಮ್ಮಿದಾಗ ಬಾಯಿ ಮತ್ತು ಮೂಗಿನಿಂದ ಹೊರ ಹೊಮ್ಮುವ ಹನಿಗಳು ಎರಡು ಮೀಟರ್‌ ದೂರದವರೆಗೆ ಬೀಳುತ್ತವೆ. ಆ ಹನಿಗಳ ಸಣ್ಣ ಕಣಗಳು (ಏರೋಸಾಲ್) 10 ಮೀಟರ್ ದೂರದವರೆಗೆ ಗಾಳಿಯಲ್ಲಿ ಸಾಗಬಹುದು ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ಮಾಹಿತಿಯೊಂದಿಗೆ ಕೋವಿಡ್ ವಿರುದ್ಧ ಹೋರಾಡುವ, ಅನುಸರಿಸಲು ಸುಲಭವಾದ ಮಾರ್ಗಸೂಚಿಗಳನ್ನು ಹಂಚಿಕೊಂಡಿದೆ. ಇದರಲ್ಲಿ ಡಬಲ್ ಮಾಸ್ಕ್ ಬಳಸುವುದು, ದೈಹಿಕ ಅಂತರ ಮತ್ತು ಉತ್ತಮ ಗಾಳಿ, ಸ್ವಚ್ಛತೆ ಇರುವ ಸ್ಥಳಗಳಲ್ಲಿ ಇರುವುದನ್ನು ಅನುಸರಿಸಲು ಹೇಳಿದೆ.

“ಸರಿಯಾದ ಗಾಳಿ, ಸ್ವಚ್ಛತೆ ಇರುವ ವಾತಾವರಣದಲ್ಲಿ ಕೊರೊನಾ ವೈರಸ್ ವ್ಯಕ್ತಿಯಿಂದ ವ್ಯಕ್ತಿಗೆ ಹರಡುವ ಅಪಾಯ ಕಡಿಮೆ ಇದೆ. ತೆರೆದಿರುವ ಕಿಟಕಿಗಳು ಮತ್ತು ಬಾಗಿಲುಗಳು, ಫ್ಯಾನ್ ಮೂಲಕ ಹೆಚ್ಚಿನ ಗಾಳಿ ಒಳ-ಹೊರಗೆ ಹೋಗುವುದರಿಂದ ವೈರಸ್ ಹರಡುವ ಸಾಧ್ಯತೆ ಕಡಿಮೆ ಇದೆ” ಎಂದು ಕೇಂದ್ರ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಕೆ ವಿಜಯರಾಘವನ್ ಅವರ ಕಚೇರಿ ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಮನೆಯಲ್ಲೇ ಕೊರೊನಾ ಟೆಸ್ಟ್ ಮಾಡಿಕೊಳ್ಳಲು ಅನುಮತಿ- ಯಾರು ಬಳಸಬಹುದು ಎಂಬ ಮಾಹಿತಿ ಇಲ್ಲಿದೆ

ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲು ಜನರನ್ನು ಒತ್ತಾಯಿಸಿರುವ ಸರ್ಕಾರ, ಸೋಂಕಿತ ವ್ಯಕ್ತಿ ಕೆಮ್ಮಿದಾಗ, ಸೀನಿದಾಗ ಎರಡು ಮೀಟರ್ ಒಳಗೆ ಹನಿಗಳು ಬೀಳುತ್ತಿದ್ದರೆ, ಸಣ್ಣ ಏರೋಸಾಲ್ ಕಣಗಳು 10 ಮೀಟರ್‌ವರೆಗೆ ಗಾಳಿಯಲ್ಲಿ ಸಾಗುತ್ತವೆ ಎಂದು ಹೇಳಿದೆ.

 

ಸೋಂಕಿತ ವ್ಯಕ್ತಿಗೆ ರೋಗ ಲಕ್ಷಣಗಳು ಇಲ್ಲದಿದ್ದರೂ ಸೋಂಕು ಹರಡಬಹುದು. ಮುಖ್ಯವಾಗಿ ಬಾಯಿಯಿಂದ ಹೊರ ಹೊಮ್ಮುವ ಲಾಲಾರಸ ಮತ್ತು ಮೂಗಿನಿಂದ ಬೀಳುವ ಹನಿಗಳು ವೈರಸ್ ಹರಡುವಿಕೆಯ ಪ್ರಾಥಮಿಕ ವಿಧಾನವಾಗಿದೆ.

ಜನರು ಡಬಲ್ ಲೇಯರ್ ಮಾಸ್ಕ್ ಅಥವಾ ಎನ್ 95 ಮಾಸ್ಕ್ ಧರಿಸಬೇಕು, ಅದು ಗರಿಷ್ಠ ರಕ್ಷಣೆ ನೀಡುತ್ತದೆ ಎಂದು ಹೊಸ ಮಾರ್ಗಸೂಚಿಗಳು ತಿಳಿಸಿವೆ. ಡಬಲ್ ಮಾಸ್ಕ್‌ಗಾಗಿ, ಶಸ್ತ್ರಚಿಕಿತ್ಸೆಯ ಮಾಸ್ಕ್‌ ಧರಿಸಿ, ನಂತರ ಅದರ ಮೇಲೆ ಮತ್ತೊಂದು ಬಿಗಿಯಾದ ಬಟ್ಟೆಯ ಮಾಸ್ಕ್‌ ಧರಿಸಿ.  ಶಸ್ತ್ರಚಿಕಿತ್ಸೆಯ ಮಾಸ್ಕ್‌ ಇಲ್ಲದವರು ಎರಡು ಹತ್ತಿಯ ಮಾಸ್ಕ್‌ಗಳನ್ನು ಒಟ್ಟಿಗೆ ಧರಿಸಬಹುದು ಎಂದು ಸಲಹೆ ನೀಡಿದ್ದಾರೆ.

ಗ್ರಾಮೀಣ ಪ್ರದೇಶಗಳಿಗೆ ಪ್ರವೇಶಿಸುವ ಜನರು ಮೊದಲು ರ್‍ಯಾಪಿಡ್ ಆಂಟಿಜೆನ್ ಪರೀಕ್ಷೆಯನ್ನು ಕೈಗೊಳ್ಳಬೇಕು. ಆಶಾ/ ಅಂಗನವಾಡಿ / ಆರೋಗ್ಯ ಕಾರ್ಯಕರ್ತರಿಗೆ ರ್‍ಯಾಪಿಡ್ ಆಂಟಿಜೆನ್ ಪರೀಕ್ಷೆ ನಡೆಸಲು ತರಬೇತಿ ನೀಡಬೇಕು.

ಈ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಹಾಕಿದ್ದರೂ ಸಹ ಪ್ರಮಾಣೀಕೃತ ಎನ್ 95 ಮಾಸ್ಕ್‌ಗಳನ್ನು ನೀಡಬೇಕು. ಕಾರ್ಯಕರ್ತರಿಗೂ ಸೋಂಕಿತ ವ್ಯಕ್ತಿಯನ್ನು ಮೇಲ್ವಿಚಾರಣೆ ಮಾಡಲು ಆಕ್ಸಿಮೀಟರ್‌ಗಳನ್ನು ಒದಗಿಸಬೇಕು ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಯುಪಿ: ಸೋಂಕಿತ ರೋಗಿಯ ನಿರ್ಲಕ್ಷ್ಯದ ಬಗ್ಗೆ ಪತ್ರಕರ್ತರಿಗೆ ಮಾಹಿತಿ; ಗ್ರಾಮಸ್ಥನ ಮೇಲೆ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...