Homeಕರೋನಾ ತಲ್ಲಣಗಾಳಿಯಲ್ಲಿ 10 ಮೀಟರ್‌ ದೂರ ಸಾಗುತ್ತದೆ ಕೊರೊನಾ ವೈರಸ್ ಸಣ್ಣ ಕಣಗಳು- ಕೇಂದ್ರ ಸರ್ಕಾರ

ಗಾಳಿಯಲ್ಲಿ 10 ಮೀಟರ್‌ ದೂರ ಸಾಗುತ್ತದೆ ಕೊರೊನಾ ವೈರಸ್ ಸಣ್ಣ ಕಣಗಳು- ಕೇಂದ್ರ ಸರ್ಕಾರ

- Advertisement -
- Advertisement -

ಕೊರೊನಾ ಸೋಂಕಿತ ವ್ಯಕ್ತಿ ಸೀನಿದಾಗ, ಉಸಿರು ಬಿಟ್ಟಾಗ ಅಥವಾ ಕೆಮ್ಮಿದಾಗ ಬಾಯಿ ಮತ್ತು ಮೂಗಿನಿಂದ ಹೊರ ಹೊಮ್ಮುವ ಹನಿಗಳು ಎರಡು ಮೀಟರ್‌ ದೂರದವರೆಗೆ ಬೀಳುತ್ತವೆ. ಆ ಹನಿಗಳ ಸಣ್ಣ ಕಣಗಳು (ಏರೋಸಾಲ್) 10 ಮೀಟರ್ ದೂರದವರೆಗೆ ಗಾಳಿಯಲ್ಲಿ ಸಾಗಬಹುದು ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ಮಾಹಿತಿಯೊಂದಿಗೆ ಕೋವಿಡ್ ವಿರುದ್ಧ ಹೋರಾಡುವ, ಅನುಸರಿಸಲು ಸುಲಭವಾದ ಮಾರ್ಗಸೂಚಿಗಳನ್ನು ಹಂಚಿಕೊಂಡಿದೆ. ಇದರಲ್ಲಿ ಡಬಲ್ ಮಾಸ್ಕ್ ಬಳಸುವುದು, ದೈಹಿಕ ಅಂತರ ಮತ್ತು ಉತ್ತಮ ಗಾಳಿ, ಸ್ವಚ್ಛತೆ ಇರುವ ಸ್ಥಳಗಳಲ್ಲಿ ಇರುವುದನ್ನು ಅನುಸರಿಸಲು ಹೇಳಿದೆ.

“ಸರಿಯಾದ ಗಾಳಿ, ಸ್ವಚ್ಛತೆ ಇರುವ ವಾತಾವರಣದಲ್ಲಿ ಕೊರೊನಾ ವೈರಸ್ ವ್ಯಕ್ತಿಯಿಂದ ವ್ಯಕ್ತಿಗೆ ಹರಡುವ ಅಪಾಯ ಕಡಿಮೆ ಇದೆ. ತೆರೆದಿರುವ ಕಿಟಕಿಗಳು ಮತ್ತು ಬಾಗಿಲುಗಳು, ಫ್ಯಾನ್ ಮೂಲಕ ಹೆಚ್ಚಿನ ಗಾಳಿ ಒಳ-ಹೊರಗೆ ಹೋಗುವುದರಿಂದ ವೈರಸ್ ಹರಡುವ ಸಾಧ್ಯತೆ ಕಡಿಮೆ ಇದೆ” ಎಂದು ಕೇಂದ್ರ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಕೆ ವಿಜಯರಾಘವನ್ ಅವರ ಕಚೇರಿ ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಮನೆಯಲ್ಲೇ ಕೊರೊನಾ ಟೆಸ್ಟ್ ಮಾಡಿಕೊಳ್ಳಲು ಅನುಮತಿ- ಯಾರು ಬಳಸಬಹುದು ಎಂಬ ಮಾಹಿತಿ ಇಲ್ಲಿದೆ

ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲು ಜನರನ್ನು ಒತ್ತಾಯಿಸಿರುವ ಸರ್ಕಾರ, ಸೋಂಕಿತ ವ್ಯಕ್ತಿ ಕೆಮ್ಮಿದಾಗ, ಸೀನಿದಾಗ ಎರಡು ಮೀಟರ್ ಒಳಗೆ ಹನಿಗಳು ಬೀಳುತ್ತಿದ್ದರೆ, ಸಣ್ಣ ಏರೋಸಾಲ್ ಕಣಗಳು 10 ಮೀಟರ್‌ವರೆಗೆ ಗಾಳಿಯಲ್ಲಿ ಸಾಗುತ್ತವೆ ಎಂದು ಹೇಳಿದೆ.

 

ಸೋಂಕಿತ ವ್ಯಕ್ತಿಗೆ ರೋಗ ಲಕ್ಷಣಗಳು ಇಲ್ಲದಿದ್ದರೂ ಸೋಂಕು ಹರಡಬಹುದು. ಮುಖ್ಯವಾಗಿ ಬಾಯಿಯಿಂದ ಹೊರ ಹೊಮ್ಮುವ ಲಾಲಾರಸ ಮತ್ತು ಮೂಗಿನಿಂದ ಬೀಳುವ ಹನಿಗಳು ವೈರಸ್ ಹರಡುವಿಕೆಯ ಪ್ರಾಥಮಿಕ ವಿಧಾನವಾಗಿದೆ.

ಜನರು ಡಬಲ್ ಲೇಯರ್ ಮಾಸ್ಕ್ ಅಥವಾ ಎನ್ 95 ಮಾಸ್ಕ್ ಧರಿಸಬೇಕು, ಅದು ಗರಿಷ್ಠ ರಕ್ಷಣೆ ನೀಡುತ್ತದೆ ಎಂದು ಹೊಸ ಮಾರ್ಗಸೂಚಿಗಳು ತಿಳಿಸಿವೆ. ಡಬಲ್ ಮಾಸ್ಕ್‌ಗಾಗಿ, ಶಸ್ತ್ರಚಿಕಿತ್ಸೆಯ ಮಾಸ್ಕ್‌ ಧರಿಸಿ, ನಂತರ ಅದರ ಮೇಲೆ ಮತ್ತೊಂದು ಬಿಗಿಯಾದ ಬಟ್ಟೆಯ ಮಾಸ್ಕ್‌ ಧರಿಸಿ.  ಶಸ್ತ್ರಚಿಕಿತ್ಸೆಯ ಮಾಸ್ಕ್‌ ಇಲ್ಲದವರು ಎರಡು ಹತ್ತಿಯ ಮಾಸ್ಕ್‌ಗಳನ್ನು ಒಟ್ಟಿಗೆ ಧರಿಸಬಹುದು ಎಂದು ಸಲಹೆ ನೀಡಿದ್ದಾರೆ.

ಗ್ರಾಮೀಣ ಪ್ರದೇಶಗಳಿಗೆ ಪ್ರವೇಶಿಸುವ ಜನರು ಮೊದಲು ರ್‍ಯಾಪಿಡ್ ಆಂಟಿಜೆನ್ ಪರೀಕ್ಷೆಯನ್ನು ಕೈಗೊಳ್ಳಬೇಕು. ಆಶಾ/ ಅಂಗನವಾಡಿ / ಆರೋಗ್ಯ ಕಾರ್ಯಕರ್ತರಿಗೆ ರ್‍ಯಾಪಿಡ್ ಆಂಟಿಜೆನ್ ಪರೀಕ್ಷೆ ನಡೆಸಲು ತರಬೇತಿ ನೀಡಬೇಕು.

ಈ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಹಾಕಿದ್ದರೂ ಸಹ ಪ್ರಮಾಣೀಕೃತ ಎನ್ 95 ಮಾಸ್ಕ್‌ಗಳನ್ನು ನೀಡಬೇಕು. ಕಾರ್ಯಕರ್ತರಿಗೂ ಸೋಂಕಿತ ವ್ಯಕ್ತಿಯನ್ನು ಮೇಲ್ವಿಚಾರಣೆ ಮಾಡಲು ಆಕ್ಸಿಮೀಟರ್‌ಗಳನ್ನು ಒದಗಿಸಬೇಕು ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಯುಪಿ: ಸೋಂಕಿತ ರೋಗಿಯ ನಿರ್ಲಕ್ಷ್ಯದ ಬಗ್ಗೆ ಪತ್ರಕರ್ತರಿಗೆ ಮಾಹಿತಿ; ಗ್ರಾಮಸ್ಥನ ಮೇಲೆ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...