Homeಕರೋನಾ ತಲ್ಲಣಗಾಳಿಯಲ್ಲಿ 10 ಮೀಟರ್‌ ದೂರ ಸಾಗುತ್ತದೆ ಕೊರೊನಾ ವೈರಸ್ ಸಣ್ಣ ಕಣಗಳು- ಕೇಂದ್ರ ಸರ್ಕಾರ

ಗಾಳಿಯಲ್ಲಿ 10 ಮೀಟರ್‌ ದೂರ ಸಾಗುತ್ತದೆ ಕೊರೊನಾ ವೈರಸ್ ಸಣ್ಣ ಕಣಗಳು- ಕೇಂದ್ರ ಸರ್ಕಾರ

- Advertisement -
- Advertisement -

ಕೊರೊನಾ ಸೋಂಕಿತ ವ್ಯಕ್ತಿ ಸೀನಿದಾಗ, ಉಸಿರು ಬಿಟ್ಟಾಗ ಅಥವಾ ಕೆಮ್ಮಿದಾಗ ಬಾಯಿ ಮತ್ತು ಮೂಗಿನಿಂದ ಹೊರ ಹೊಮ್ಮುವ ಹನಿಗಳು ಎರಡು ಮೀಟರ್‌ ದೂರದವರೆಗೆ ಬೀಳುತ್ತವೆ. ಆ ಹನಿಗಳ ಸಣ್ಣ ಕಣಗಳು (ಏರೋಸಾಲ್) 10 ಮೀಟರ್ ದೂರದವರೆಗೆ ಗಾಳಿಯಲ್ಲಿ ಸಾಗಬಹುದು ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ಮಾಹಿತಿಯೊಂದಿಗೆ ಕೋವಿಡ್ ವಿರುದ್ಧ ಹೋರಾಡುವ, ಅನುಸರಿಸಲು ಸುಲಭವಾದ ಮಾರ್ಗಸೂಚಿಗಳನ್ನು ಹಂಚಿಕೊಂಡಿದೆ. ಇದರಲ್ಲಿ ಡಬಲ್ ಮಾಸ್ಕ್ ಬಳಸುವುದು, ದೈಹಿಕ ಅಂತರ ಮತ್ತು ಉತ್ತಮ ಗಾಳಿ, ಸ್ವಚ್ಛತೆ ಇರುವ ಸ್ಥಳಗಳಲ್ಲಿ ಇರುವುದನ್ನು ಅನುಸರಿಸಲು ಹೇಳಿದೆ.

“ಸರಿಯಾದ ಗಾಳಿ, ಸ್ವಚ್ಛತೆ ಇರುವ ವಾತಾವರಣದಲ್ಲಿ ಕೊರೊನಾ ವೈರಸ್ ವ್ಯಕ್ತಿಯಿಂದ ವ್ಯಕ್ತಿಗೆ ಹರಡುವ ಅಪಾಯ ಕಡಿಮೆ ಇದೆ. ತೆರೆದಿರುವ ಕಿಟಕಿಗಳು ಮತ್ತು ಬಾಗಿಲುಗಳು, ಫ್ಯಾನ್ ಮೂಲಕ ಹೆಚ್ಚಿನ ಗಾಳಿ ಒಳ-ಹೊರಗೆ ಹೋಗುವುದರಿಂದ ವೈರಸ್ ಹರಡುವ ಸಾಧ್ಯತೆ ಕಡಿಮೆ ಇದೆ” ಎಂದು ಕೇಂದ್ರ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಕೆ ವಿಜಯರಾಘವನ್ ಅವರ ಕಚೇರಿ ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಮನೆಯಲ್ಲೇ ಕೊರೊನಾ ಟೆಸ್ಟ್ ಮಾಡಿಕೊಳ್ಳಲು ಅನುಮತಿ- ಯಾರು ಬಳಸಬಹುದು ಎಂಬ ಮಾಹಿತಿ ಇಲ್ಲಿದೆ

ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲು ಜನರನ್ನು ಒತ್ತಾಯಿಸಿರುವ ಸರ್ಕಾರ, ಸೋಂಕಿತ ವ್ಯಕ್ತಿ ಕೆಮ್ಮಿದಾಗ, ಸೀನಿದಾಗ ಎರಡು ಮೀಟರ್ ಒಳಗೆ ಹನಿಗಳು ಬೀಳುತ್ತಿದ್ದರೆ, ಸಣ್ಣ ಏರೋಸಾಲ್ ಕಣಗಳು 10 ಮೀಟರ್‌ವರೆಗೆ ಗಾಳಿಯಲ್ಲಿ ಸಾಗುತ್ತವೆ ಎಂದು ಹೇಳಿದೆ.

 

ಸೋಂಕಿತ ವ್ಯಕ್ತಿಗೆ ರೋಗ ಲಕ್ಷಣಗಳು ಇಲ್ಲದಿದ್ದರೂ ಸೋಂಕು ಹರಡಬಹುದು. ಮುಖ್ಯವಾಗಿ ಬಾಯಿಯಿಂದ ಹೊರ ಹೊಮ್ಮುವ ಲಾಲಾರಸ ಮತ್ತು ಮೂಗಿನಿಂದ ಬೀಳುವ ಹನಿಗಳು ವೈರಸ್ ಹರಡುವಿಕೆಯ ಪ್ರಾಥಮಿಕ ವಿಧಾನವಾಗಿದೆ.

ಜನರು ಡಬಲ್ ಲೇಯರ್ ಮಾಸ್ಕ್ ಅಥವಾ ಎನ್ 95 ಮಾಸ್ಕ್ ಧರಿಸಬೇಕು, ಅದು ಗರಿಷ್ಠ ರಕ್ಷಣೆ ನೀಡುತ್ತದೆ ಎಂದು ಹೊಸ ಮಾರ್ಗಸೂಚಿಗಳು ತಿಳಿಸಿವೆ. ಡಬಲ್ ಮಾಸ್ಕ್‌ಗಾಗಿ, ಶಸ್ತ್ರಚಿಕಿತ್ಸೆಯ ಮಾಸ್ಕ್‌ ಧರಿಸಿ, ನಂತರ ಅದರ ಮೇಲೆ ಮತ್ತೊಂದು ಬಿಗಿಯಾದ ಬಟ್ಟೆಯ ಮಾಸ್ಕ್‌ ಧರಿಸಿ.  ಶಸ್ತ್ರಚಿಕಿತ್ಸೆಯ ಮಾಸ್ಕ್‌ ಇಲ್ಲದವರು ಎರಡು ಹತ್ತಿಯ ಮಾಸ್ಕ್‌ಗಳನ್ನು ಒಟ್ಟಿಗೆ ಧರಿಸಬಹುದು ಎಂದು ಸಲಹೆ ನೀಡಿದ್ದಾರೆ.

ಗ್ರಾಮೀಣ ಪ್ರದೇಶಗಳಿಗೆ ಪ್ರವೇಶಿಸುವ ಜನರು ಮೊದಲು ರ್‍ಯಾಪಿಡ್ ಆಂಟಿಜೆನ್ ಪರೀಕ್ಷೆಯನ್ನು ಕೈಗೊಳ್ಳಬೇಕು. ಆಶಾ/ ಅಂಗನವಾಡಿ / ಆರೋಗ್ಯ ಕಾರ್ಯಕರ್ತರಿಗೆ ರ್‍ಯಾಪಿಡ್ ಆಂಟಿಜೆನ್ ಪರೀಕ್ಷೆ ನಡೆಸಲು ತರಬೇತಿ ನೀಡಬೇಕು.

ಈ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಹಾಕಿದ್ದರೂ ಸಹ ಪ್ರಮಾಣೀಕೃತ ಎನ್ 95 ಮಾಸ್ಕ್‌ಗಳನ್ನು ನೀಡಬೇಕು. ಕಾರ್ಯಕರ್ತರಿಗೂ ಸೋಂಕಿತ ವ್ಯಕ್ತಿಯನ್ನು ಮೇಲ್ವಿಚಾರಣೆ ಮಾಡಲು ಆಕ್ಸಿಮೀಟರ್‌ಗಳನ್ನು ಒದಗಿಸಬೇಕು ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಯುಪಿ: ಸೋಂಕಿತ ರೋಗಿಯ ನಿರ್ಲಕ್ಷ್ಯದ ಬಗ್ಗೆ ಪತ್ರಕರ್ತರಿಗೆ ಮಾಹಿತಿ; ಗ್ರಾಮಸ್ಥನ ಮೇಲೆ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...