Homeಮುಖಪುಟಅಫಿಡವಿಟ್‌ ಸೋರಿಕೆ ವಿಚಾರ: ಕೇಂದ್ರ ಸರ್ಕಾರಕ್ಕೆ ಮಹುವಾ ಮೊಯಿತ್ರಾ ತರಾಟೆ

ಅಫಿಡವಿಟ್‌ ಸೋರಿಕೆ ವಿಚಾರ: ಕೇಂದ್ರ ಸರ್ಕಾರಕ್ಕೆ ಮಹುವಾ ಮೊಯಿತ್ರಾ ತರಾಟೆ

- Advertisement -
- Advertisement -

ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರು ಉದ್ಯಮಿ ದರ್ಶನ್ ಹಿರಾನಂದಾನಿ ಅವರ ಅಫಿಡವಿಟ್‌ ಸೋರಿಕೆ ವಿಚಾರವಾಗಿ ಕೇಂದ್ರ ಸರ್ಕಾರವನ್ನು ತರಾಟೆ ತೆಗೆದುಕೊಂಡಿದ್ದಾರೆ.

ಈ ಬಗ್ಗೆ ಎಕ್ಸಾನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ”ನೈತಿಕ ಸಮಿತಿಯ ಅಧ್ಯಕ್ಷರು ಮಾಧ್ಯಮಗಳೊಂದಿಗೆ ಬಹಿರಂಗವಾಗಿ ಮಾತನಾಡುತ್ತಾರೆ. ದಯವಿಟ್ಟು ಕೆಳಗಿನ ಲೋಕಸಭೆಯ ನಿಯಮಗಳನ್ನು ನೋಡಿ. “ಅಫಿಡವಿಟ್” ಮಾಧ್ಯಮಗಳಿಗೆ ಹೇಗೆ ಸಿಗುತ್ತದೆ? ಇದು ಹೇಗೆ ಸೋರಿಕೆಯಾಗಿದೆ ಎಂಬ ಬಗ್ಗೆ ಅಧ್ಯಕ್ಷರು ಮೊದಲು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

”ಬಿಜೆಪಿ ಏಕೈಕ ಅಜೆಂಡಾ ಎಂದರೆ, ಅದಾನಿಯ ವಿಚಾರದಲ್ಲಿ ನನ್ನ ಬಾಯಿ ಮುಚ್ಚಿಸಲು ನನ್ನನ್ನು ಲೋಕಸಭೆಯಿಂದಲೇ ಹೊರಹಾಕುವುದಾಗಿದೆ” ಎಂದು ಕಿಡಿಕಾರಿದ್ದಾರೆ.

”ಸಿಬಿಐ ಮತ್ತು ನೈತಿಕ ಸಮಿತಿ (ಇದು ಬಿಜೆಪಿ ಸದಸ್ಯರ ಸಂಪೂರ್ಣ ಬಹುಮತವನ್ನು ಹೊಂದಿರುವ ಸಮಿತಿ)  ನನ್ನನ್ನು ಕರೆದರೆ ಮತ್ತು ನನ್ನನ್ನು ಪ್ರಶ್ನಿಸಿದರೆ ನಾನು ಸ್ವಾಗತಿಸುತ್ತೇನೆ. ಅದಾನಿ ನಿರ್ದೇಶನದ ಮಾಧ್ಯಮ ಸರ್ಕಸ್ ವಿಚಾರಣೆಗೆ ಅಥವಾ ಬಿಜೆಪಿ ಟ್ರೋಲ್‌ಗಳಿಗೆ ಉತ್ತರಿಸಲು ನನಗೆ ಸಮಯ ಅಥವಾ ಆಸಕ್ತಿ ಇಲ್ಲ.
ನಾನು ನಾಡಿಯಾದಲ್ಲಿ ದುರ್ಗಾ ಪೂಜೆಯನ್ನು ಆನಂದಿಸುತ್ತಿದ್ದೇನೆ. ಶುಭೋ ಷಷ್ಠಿ” ಎಂದಿದ್ದಾರೆ.

ಉದ್ಯಮಿ ದರ್ಶನ್ ಹಿರಾನಂದಾನಿ ಅವರ ಅಫಿಡವಿಟ್‌ ಸೋರಿಕೆ ವಿಚಾರವಾಗಿ ಬಿಜೆಪಿ ಸಂಸದ ವಿರುದ್ಧ ಹರಿಹಾಯ್ದ ಮಹುವಾ ಮೊಯಿತ್ರಾ ಅವರು, ”ತಮ್ಮ PA ಗಳು ಮತ್ತು ಸಂಶೋಧಕರು/ಇಂಟರ್ನ್‌ಗಳು/ಸಿಬ್ಬಂದಿಗಳ ID ಗಳನ್ನು ಪರಿಕ್ಷಿಸಿದರೆ ಅವರು ಯಾವ ಸ್ಥಳದಲ್ಲಿ ಇದ್ದಾರೆ ಎಂಬುದನ್ನು ತೋರಿಸಬಹುದು. ದಯವಿಟ್ಟು ಸಾರ್ವಜನಿಕವಾಗಿ ಸಂಸದರ ಎಲ್ಲಾ ವಿವರಗಳನ್ನು ಬಿಡುಗಡೆ ಮಾಡಲು NICಗೆ ವಿನಂತಿಸುತ್ತೇನೆ. ಸೋರಿಕೆಗಾಗಿ ನಕಲಿ ಪದವಿ ವಾಲಾವನ್ನು ಬಳಸಬೇಡಿ, ಇದೀಗ ಇದನ್ನು ಸಾರ್ವಜನಿಕಗೊಳಿಸಿ” ಎಂದು ಹೇಳಿದ್ದಾರೆ.

ಹೆಸರಿಸದ ವಿದೇಶಿ ಬಂಡವಾಳ ಹೂಡಿಕೆಯನ್ನು ಅದಾನಿ ಷೇರುಗಳಲ್ಲಿದೆ, ಅದರ ಮೂಲವನ್ನು ಸೆಬಿಯು ಕಂಡುಹಿಡಿಯಲಿಲ್ಲ ಮತ್ತು ಮುಂಬೈ ವಿಮಾನ ನಿಲ್ದಾಣವನ್ನು ಖರೀದಿಸಲು ಅದಾನಿ ಗೃಹ ವ್ಯವಹಾರಗಳ ಸಚಿವಾಲಯd ಅನುಮತಿಯನ್ನು ಪಡೆಯುತ್ತಾರೆ.

”ಕ್ಷಮಿಸಿ ಮಿಸ್ಟರ್ ಅದಾನಿ, ಪ್ರತಿಯಾಗಿ ನಾನು ಸುಮ್ಮನಿರಲು ಆರು ತಿಂಗಳವರೆಗೆ ನಿಮ್ಮೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತಿಲ್ಲ. ಹೌದು, ನಾನು ಎರಡನೇ ಒಪ್ಪಂದವನ್ನು ತೆಗೆದುಕೊಳ್ಳುತ್ತಿಲ್ಲ, ಏಕೆಂದರೆ ನನಗೆ ನಿಮ್ಮ ಮೇಲೆ ದಾಳಿ ಮಾಡಲು ಈಗ ಅವಕಾಶವಿದೆ, ಆದರೆ PMಗೆ ಆ ಅವಕಾಶ ಇಲ್ಲ” ಎಂದು ಕುಟುಕಿದ್ದಾರೆ.

”ಅದಾನಿ ಪ್ರಶ್ನೆ ಮಾಡದಿರಲು ಹಣ ನೀಡುತ್ತಿದ್ದರು, ಈಗ ಅವರು ಪ್ರಶ್ನೆಗಳಿಗೆ ನಕಲಿ ನಗದು ನೀಡುತ್ತಿದ್ದಾರೆ” ಎಂದು ಹೇಳಿದ್ದಾರೆ.

”ಸಿಬಿಐ ದಾಳಿ ನಡೆಯಲಿರುವ ಬಗ್ಗೆ ಕೂಡ ಸಂದೇಶ ಬಂದಿದೆ. ನಾನು ದುರ್ಗಾ ಪೂಜೆಯಲ್ಲಿ ನಿರತನಾಗಿದ್ದೇನೆ. ಮನೆಗೆ ಬಂದು ನನ್ನ ಜೋಡಿ ಶೂಗಳನ್ನು ಎಣಿಸಲು ನಾನು ಸಿಬಿಐ ಅನ್ನು ಆಹ್ವಾನಿಸುತ್ತೇನೆ. ಆದರೆ ಮೊದಲು ದಯವಿಟ್ಟು ಅದಾನಿ ಭಾರತೀಯರಿಂದ ಕದ್ದ ₹13,000 ಕೋಟಿ ಕಲ್ಲಿದ್ದಲು ಹಣಕ್ಕೆ ಎಫ್‌ಐಆರ್ ದಾಖಲಿಸಿ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...